Homeಕರ್ನಾಟಕಮೋದಿ ಕಾರ್ಯಕ್ರಮಕ್ಕೆ ಕಾರ್ಮಿಕರನ್ನು ಕರೆತಂದು ಹಣ ಕೊಡದೆ ವಂಚನೆ; ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು

ಮೋದಿ ಕಾರ್ಯಕ್ರಮಕ್ಕೆ ಕಾರ್ಮಿಕರನ್ನು ಕರೆತಂದು ಹಣ ಕೊಡದೆ ವಂಚನೆ; ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಂಡಿದ್ದ ಕಾರ್ಯಕ್ರಮಕ್ಕೆ ಕೂಲಿ ಕಾರ್ಮಿಕರನ್ನು ಕರೆತಂದು ದುಡ್ಡು ಕೊಡದೆ ವಂಚಿಸಿದ್ದ ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆಯನ್ನು ಉದ್ಘಾಟಿಸಲು ಮೋದಿಯವರು ಆಗಮಿಸಿದ್ದರು. ಆ ವೇಳೆ ಕರೆತಂದಿದ್ದ ಕಾರ್ಮಿಕರಿಗೆ ಬಾಕಿ ಹಣ ಪಾವತಿಸದ ಆರೋಪದ ಮೇಲೆ ಕರ್ನಾಟಕ ಪೊಲೀಸರು ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸ್ಥಳೀಯ ಬಿಜೆಪಿ ಮುಖಂಡ ನಂದೀಶ್ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲೆಯ ಸಿಡ್ಲಘಟ್ಟ ಪೊಲೀಸ್ ಠಾಣೆಯಲ್ಲಿ 40 ಕೂಲಿ ಕಾರ್ಮಿಕರು ದೂರು ನೀಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಆವರಣದಲ್ಲಿರುವ ಪ್ರತಿಮೆಯ ಸ್ಥಳದಲ್ಲಿ ಕೆಲಸ ಮಾಡಲು ಕಾರ್ಮಿಕರನ್ನು ನೇಮಿಸಿಕೊಳ್ಳಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ನಂದೀಶ್ ಪ್ರತಿ ಕಾರ್ಯಕರ್ತನಿಗೆ 500 ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಕಾರ್ಯಕ್ರಮದ ನಂತರ ಕೇವಲ 100 ರೂ. ನೀಡಲಾಗಿದೆ ಎಂಬ ಆರೋಪಗಳ ಕುರಿತು ತನಿಖೆ ನಡೆಯುತ್ತಿದೆ.

ಬಿಜೆಪಿ ವಿರುದ್ಧ ಕಾರ್ಮಿಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಹಣವನ್ನು ನೀಡಬೇಕೆಂದು ಒತ್ತಾಯಿಸಿದ ಅವರು ಘೋಷಣೆಗಳನ್ನು ಕೂಗುತ್ತಿರುವ ದೃಶ್ಯಗಳು ವೈರಲ್ ಆಗಿವೆ.

ಕಾಂಗ್ರೆಸ್ ನಾಯಕರು ಬಿಜೆಪಿಯ ನಡೆಯನ್ನು ಖಂಡಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್‌ನ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಟ್ವೀಟ್ ಮಾಡಿದ್ದು, “ಪ್ರಧಾನಿ ನರೇಂದ್ರಮೋದಿಯವರೇ, ನಿಮ್ಮನ್ನು ಹುರಿದುಂಬಿಸಲೆಂದು ಬಿಜೆಪಿ ನಾಯಕರು ದಿನಕೂಲಿ ಕಾರ್ಮಿಕರಿಗೆ ₹ 500 ನೀಡುವ ಭರವಸೆ ನೀಡಿದ್ದರು. ಆದರೆ ಕೇವಲ ₹ 100 ಪಾವತಿಸಲಾಗಿದೆ. ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸಿದ್ದಾರೆ. ಬಿಜೆಪಿ ಸರ್ಕಾರವು 40% ಸರ್ಕಾರವಾಗಿದೆ. ಆದರೆ ಪಕ್ಷದ ಭ್ರಷ್ಟಾಚಾರವು 80% ಆಗಿದೆಯೇ?” ಎಂದು ಪ್ರಶ್ನಿಸಿದ್ದಾರೆ.

ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ, ನವೆಂಬರ್ 11 ರಂದು ಅನಾವರಣಗೊಳಿಸಿದರು. ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಪಾಳೇಗಾರರಾಗಿದ್ದ ಕೆಂಪೇಗೌಡರು 1537ರಲ್ಲಿ ಬೆಂಗಳೂರನ್ನು ಸ್ಥಾಪಿಸಿದ್ದರು.

ಕೆಂಪೇಗೌಡರು ವಿಶೇಷವಾಗಿ ಹಳೆಯ ಮೈಸೂರು ಮತ್ತು ದಕ್ಷಿಣ ಕರ್ನಾಟಕದ ಇತರ ಭಾಗಗಳಲ್ಲಿ ಪ್ರಬಲವಾಗಿರುವ ಒಕ್ಕಲಿಗ ಸಮುದಾಯದ ಅಸ್ಮಿತೆಯಾಗಿದ್ದಾರೆ. ಜೊತೆಗೆ ನಾಡಪ್ರಭು ಎಂಬ ಬಿರುದಿಗೆ ಪಾತ್ರರಾಗಿರುವ ಕೆಂಪೇಗೌಡರು ಕನ್ನಡಗರ ಪ್ರೀತಿಪಾತ್ರರೂ ಹೌದು.

ಕೆಂಪೇಗೌಡರ ಪ್ರತಿಮೆ ಅನಾವರಣದ ಬಳಿಕ ಹಲವು ಚರ್ಚೆಗಳು ಶುರುವಾಗಿವೆ. ಕಾರ್ಯಕ್ರಮಕ್ಕೆ ಕರೆತಂದಿದ್ದ ಕಾರ್ಮಿಕರಿಗೆ ಹಣ ಪಾವತಿಸಿಲ್ಲ ಎಂಬ ಟೀಕೆ ಒಂದು ಕಡೆಯಾದರೆ, ಮಾಜಿ ಪ್ರಧಾನಿ ದೇವೇಗೌಡರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಜೆಡಿಎಸ್‌ ಆಕ್ರೋಶ ವ್ಯಕ್ತಪಡಿಸುತ್ತಿದೆ.

ಎಚ್‌.ಡಿ.ದೇವೇಗೌಡರನ್ನು ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಆಹ್ವಾನಿಸಿಲ್ಲವೆಂಬ ವಿವಾದಕ್ಕೆ ಸಂಬಂಧಿಸಿದಂತೆ ಜೆಡಿಎಸ್‌- ಬಿಜೆಪಿ ನಡುವೆ ವಾಕ್ಸಮರ ಮುಂದುವರಿದಿದೆ. ಮತ್ತೆ ಸರಣಿ ಟ್ವೀಟ್‌ಗಳ ಮೂಲಕ ಜೆಡಿಎಸ್‌ ಟೀಕಾಪ್ರಹಾರ ನಡೆಸಿದೆ.

“ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿಗಳಾದ ದೇವೇಗೌಡರನ್ನು ಆಹ್ವಾನಿಸದೆ ರಾಜ್ಯ ಸರಕಾರ ಶಿಷ್ಟಾಚಾರ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ. ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ” ಎಂದು ಜೆಡಿಎಸ್‌ ಆಕ್ರೋಶ ಹೊರಹಾಕಿದೆ.

ಇದನ್ನೂ ಓದಿರಿ: ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ: ಬಿಜೆಪಿ ವಿರುದ್ಧ ಜೆಡಿಎಸ್‌ ಟೀಕಾಪ್ರಹಾರ

‘ಸುಳ್‌‌ ಬಿಜೆಪಿ, ಸುಳ್‌ ಸಿಎಂ, ಗೊಬೆಲ್‌ ಬಿಜೆಪಿ’ ಎಂಬ ಹ್ಯಾಷ್‌ಟ್ಯಾಗ್ ಬಳಸಿ ಟ್ವೀಟ್‌ಗಳನ್ನು ಮಾಡಿರುವ ಜೆಡಿಎಸ್‌, “ಬೂಟಾಟಿಕೆ ದಾಸಯ್ಯನಿಗೆ ಮೈಯಲ್ಲಾ ಪಂಗನಾಮʼ ಎನ್ನುವಂತಿದೆ ಬಿಜೆಪಿ ಪರಿಸ್ಥಿತಿ. ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ. ರಕ್ತಪೀಪಾಸುತನ, ನರಹಂತಕ ಮನಃಸ್ಥಿತಿಯೇ ಬಿಜೆಪಿಯ ನೈಜಮುಖ. ಆಪರೇಷನ್‌ ಕಮಲವೇ ಅದರ ಶಿಷ್ಟಾಚಾರ, ಸುಳ್ಳಿನ ಪ್ರಚಾರವೇ ಅದರ ಸಂಸ್ಕಾರ” ಎಂದು ಅಭಿಪ್ರಾಯಪಟ್ಟಿದೆ.

“ಎಚ್.ಡಿ.ದೇವೇಗೌಡರನ್ನು ಜೆಡಿಎಸ್ ಎಂದಿಗೂ ಜಾತಿ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಆದರೆ, ನರೇಂದ್ರಮೋದಿಯವರ ಅರ್ಧದಿನದ ʼಕರ್ನಾಟಕದ ಕಾಟಾಚಾರದ ಭೇಟಿʼ ಏನನ್ನು ಗುರಿ ಮಾಡಿಕೊಂಡಿತ್ತು? ಎನ್ನುವುದನ್ನು ಮಾಧ್ಯಮಗಳೇ ನಿರಂತರವಾಗಿ ವರದಿ ಮಾಡುತ್ತಿರುವುದು ಕಾಣುತ್ತಿಲ್ಲವೇ? ಕಮಲದ ಕಣ್ಣಿಗೆ ಕಾಮಾಲೆ ಎನ್ನುವುದು ಖರೆ” ಎಂದು ಟೀಕಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕೂಲಿಯವರಿಗೂ ಮೋಸ ಮಾಡುಂತಹ ಹೀನಾಯ ಸ್ಥಿತಿಗೆ ಇಳಿದಿದ್ದಾರಲ್ಲ, ಈ ಮನುವಾದಿಗಳು.

  2. ಮೋಸಗಾರರಿಗೆ ಯಾರಾದರೇನು ಕಾರ್ಮಿಕರಾದರೇನು, ಶ್ರೀಮಂತರಾದರೇನು ಅಥವಾ ಭಿಕ್ಷುಕರಾದರೇನು, ಮೋಸ ಮಾಡುವುದೊಂದೇ ಅವರ ಕುಲ ಕಸಬು. ಈ ಬಿಜೆಪಿ ಮೋಸಗಾರರು 40 % ನಿಂದ 80% ಗೆ ತಮ್ಮ ಬೆಲೆ ಹೆಚ್ಚಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...