Homeಕರ್ನಾಟಕಮೋದಿ ಕಾರ್ಯಕ್ರಮಕ್ಕೆ ಕಾರ್ಮಿಕರನ್ನು ಕರೆತಂದು ಹಣ ಕೊಡದೆ ವಂಚನೆ; ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು

ಮೋದಿ ಕಾರ್ಯಕ್ರಮಕ್ಕೆ ಕಾರ್ಮಿಕರನ್ನು ಕರೆತಂದು ಹಣ ಕೊಡದೆ ವಂಚನೆ; ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಂಡಿದ್ದ ಕಾರ್ಯಕ್ರಮಕ್ಕೆ ಕೂಲಿ ಕಾರ್ಮಿಕರನ್ನು ಕರೆತಂದು ದುಡ್ಡು ಕೊಡದೆ ವಂಚಿಸಿದ್ದ ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆಯನ್ನು ಉದ್ಘಾಟಿಸಲು ಮೋದಿಯವರು ಆಗಮಿಸಿದ್ದರು. ಆ ವೇಳೆ ಕರೆತಂದಿದ್ದ ಕಾರ್ಮಿಕರಿಗೆ ಬಾಕಿ ಹಣ ಪಾವತಿಸದ ಆರೋಪದ ಮೇಲೆ ಕರ್ನಾಟಕ ಪೊಲೀಸರು ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸ್ಥಳೀಯ ಬಿಜೆಪಿ ಮುಖಂಡ ನಂದೀಶ್ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲೆಯ ಸಿಡ್ಲಘಟ್ಟ ಪೊಲೀಸ್ ಠಾಣೆಯಲ್ಲಿ 40 ಕೂಲಿ ಕಾರ್ಮಿಕರು ದೂರು ನೀಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಆವರಣದಲ್ಲಿರುವ ಪ್ರತಿಮೆಯ ಸ್ಥಳದಲ್ಲಿ ಕೆಲಸ ಮಾಡಲು ಕಾರ್ಮಿಕರನ್ನು ನೇಮಿಸಿಕೊಳ್ಳಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ನಂದೀಶ್ ಪ್ರತಿ ಕಾರ್ಯಕರ್ತನಿಗೆ 500 ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಕಾರ್ಯಕ್ರಮದ ನಂತರ ಕೇವಲ 100 ರೂ. ನೀಡಲಾಗಿದೆ ಎಂಬ ಆರೋಪಗಳ ಕುರಿತು ತನಿಖೆ ನಡೆಯುತ್ತಿದೆ.

ಬಿಜೆಪಿ ವಿರುದ್ಧ ಕಾರ್ಮಿಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಹಣವನ್ನು ನೀಡಬೇಕೆಂದು ಒತ್ತಾಯಿಸಿದ ಅವರು ಘೋಷಣೆಗಳನ್ನು ಕೂಗುತ್ತಿರುವ ದೃಶ್ಯಗಳು ವೈರಲ್ ಆಗಿವೆ.

ಕಾಂಗ್ರೆಸ್ ನಾಯಕರು ಬಿಜೆಪಿಯ ನಡೆಯನ್ನು ಖಂಡಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್‌ನ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಟ್ವೀಟ್ ಮಾಡಿದ್ದು, “ಪ್ರಧಾನಿ ನರೇಂದ್ರಮೋದಿಯವರೇ, ನಿಮ್ಮನ್ನು ಹುರಿದುಂಬಿಸಲೆಂದು ಬಿಜೆಪಿ ನಾಯಕರು ದಿನಕೂಲಿ ಕಾರ್ಮಿಕರಿಗೆ ₹ 500 ನೀಡುವ ಭರವಸೆ ನೀಡಿದ್ದರು. ಆದರೆ ಕೇವಲ ₹ 100 ಪಾವತಿಸಲಾಗಿದೆ. ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸಿದ್ದಾರೆ. ಬಿಜೆಪಿ ಸರ್ಕಾರವು 40% ಸರ್ಕಾರವಾಗಿದೆ. ಆದರೆ ಪಕ್ಷದ ಭ್ರಷ್ಟಾಚಾರವು 80% ಆಗಿದೆಯೇ?” ಎಂದು ಪ್ರಶ್ನಿಸಿದ್ದಾರೆ.

ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ, ನವೆಂಬರ್ 11 ರಂದು ಅನಾವರಣಗೊಳಿಸಿದರು. ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಪಾಳೇಗಾರರಾಗಿದ್ದ ಕೆಂಪೇಗೌಡರು 1537ರಲ್ಲಿ ಬೆಂಗಳೂರನ್ನು ಸ್ಥಾಪಿಸಿದ್ದರು.

ಕೆಂಪೇಗೌಡರು ವಿಶೇಷವಾಗಿ ಹಳೆಯ ಮೈಸೂರು ಮತ್ತು ದಕ್ಷಿಣ ಕರ್ನಾಟಕದ ಇತರ ಭಾಗಗಳಲ್ಲಿ ಪ್ರಬಲವಾಗಿರುವ ಒಕ್ಕಲಿಗ ಸಮುದಾಯದ ಅಸ್ಮಿತೆಯಾಗಿದ್ದಾರೆ. ಜೊತೆಗೆ ನಾಡಪ್ರಭು ಎಂಬ ಬಿರುದಿಗೆ ಪಾತ್ರರಾಗಿರುವ ಕೆಂಪೇಗೌಡರು ಕನ್ನಡಗರ ಪ್ರೀತಿಪಾತ್ರರೂ ಹೌದು.

ಕೆಂಪೇಗೌಡರ ಪ್ರತಿಮೆ ಅನಾವರಣದ ಬಳಿಕ ಹಲವು ಚರ್ಚೆಗಳು ಶುರುವಾಗಿವೆ. ಕಾರ್ಯಕ್ರಮಕ್ಕೆ ಕರೆತಂದಿದ್ದ ಕಾರ್ಮಿಕರಿಗೆ ಹಣ ಪಾವತಿಸಿಲ್ಲ ಎಂಬ ಟೀಕೆ ಒಂದು ಕಡೆಯಾದರೆ, ಮಾಜಿ ಪ್ರಧಾನಿ ದೇವೇಗೌಡರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಜೆಡಿಎಸ್‌ ಆಕ್ರೋಶ ವ್ಯಕ್ತಪಡಿಸುತ್ತಿದೆ.

ಎಚ್‌.ಡಿ.ದೇವೇಗೌಡರನ್ನು ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಆಹ್ವಾನಿಸಿಲ್ಲವೆಂಬ ವಿವಾದಕ್ಕೆ ಸಂಬಂಧಿಸಿದಂತೆ ಜೆಡಿಎಸ್‌- ಬಿಜೆಪಿ ನಡುವೆ ವಾಕ್ಸಮರ ಮುಂದುವರಿದಿದೆ. ಮತ್ತೆ ಸರಣಿ ಟ್ವೀಟ್‌ಗಳ ಮೂಲಕ ಜೆಡಿಎಸ್‌ ಟೀಕಾಪ್ರಹಾರ ನಡೆಸಿದೆ.

“ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿಗಳಾದ ದೇವೇಗೌಡರನ್ನು ಆಹ್ವಾನಿಸದೆ ರಾಜ್ಯ ಸರಕಾರ ಶಿಷ್ಟಾಚಾರ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ. ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ” ಎಂದು ಜೆಡಿಎಸ್‌ ಆಕ್ರೋಶ ಹೊರಹಾಕಿದೆ.

ಇದನ್ನೂ ಓದಿರಿ: ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ: ಬಿಜೆಪಿ ವಿರುದ್ಧ ಜೆಡಿಎಸ್‌ ಟೀಕಾಪ್ರಹಾರ

‘ಸುಳ್‌‌ ಬಿಜೆಪಿ, ಸುಳ್‌ ಸಿಎಂ, ಗೊಬೆಲ್‌ ಬಿಜೆಪಿ’ ಎಂಬ ಹ್ಯಾಷ್‌ಟ್ಯಾಗ್ ಬಳಸಿ ಟ್ವೀಟ್‌ಗಳನ್ನು ಮಾಡಿರುವ ಜೆಡಿಎಸ್‌, “ಬೂಟಾಟಿಕೆ ದಾಸಯ್ಯನಿಗೆ ಮೈಯಲ್ಲಾ ಪಂಗನಾಮʼ ಎನ್ನುವಂತಿದೆ ಬಿಜೆಪಿ ಪರಿಸ್ಥಿತಿ. ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ. ರಕ್ತಪೀಪಾಸುತನ, ನರಹಂತಕ ಮನಃಸ್ಥಿತಿಯೇ ಬಿಜೆಪಿಯ ನೈಜಮುಖ. ಆಪರೇಷನ್‌ ಕಮಲವೇ ಅದರ ಶಿಷ್ಟಾಚಾರ, ಸುಳ್ಳಿನ ಪ್ರಚಾರವೇ ಅದರ ಸಂಸ್ಕಾರ” ಎಂದು ಅಭಿಪ್ರಾಯಪಟ್ಟಿದೆ.

“ಎಚ್.ಡಿ.ದೇವೇಗೌಡರನ್ನು ಜೆಡಿಎಸ್ ಎಂದಿಗೂ ಜಾತಿ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಆದರೆ, ನರೇಂದ್ರಮೋದಿಯವರ ಅರ್ಧದಿನದ ʼಕರ್ನಾಟಕದ ಕಾಟಾಚಾರದ ಭೇಟಿʼ ಏನನ್ನು ಗುರಿ ಮಾಡಿಕೊಂಡಿತ್ತು? ಎನ್ನುವುದನ್ನು ಮಾಧ್ಯಮಗಳೇ ನಿರಂತರವಾಗಿ ವರದಿ ಮಾಡುತ್ತಿರುವುದು ಕಾಣುತ್ತಿಲ್ಲವೇ? ಕಮಲದ ಕಣ್ಣಿಗೆ ಕಾಮಾಲೆ ಎನ್ನುವುದು ಖರೆ” ಎಂದು ಟೀಕಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕೂಲಿಯವರಿಗೂ ಮೋಸ ಮಾಡುಂತಹ ಹೀನಾಯ ಸ್ಥಿತಿಗೆ ಇಳಿದಿದ್ದಾರಲ್ಲ, ಈ ಮನುವಾದಿಗಳು.

  2. ಮೋಸಗಾರರಿಗೆ ಯಾರಾದರೇನು ಕಾರ್ಮಿಕರಾದರೇನು, ಶ್ರೀಮಂತರಾದರೇನು ಅಥವಾ ಭಿಕ್ಷುಕರಾದರೇನು, ಮೋಸ ಮಾಡುವುದೊಂದೇ ಅವರ ಕುಲ ಕಸಬು. ಈ ಬಿಜೆಪಿ ಮೋಸಗಾರರು 40 % ನಿಂದ 80% ಗೆ ತಮ್ಮ ಬೆಲೆ ಹೆಚ್ಚಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...