Homeಕರ್ನಾಟಕಮೋದಿ ಕಾರ್ಯಕ್ರಮಕ್ಕೆ ಕಾರ್ಮಿಕರನ್ನು ಕರೆತಂದು ಹಣ ಕೊಡದೆ ವಂಚನೆ; ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು

ಮೋದಿ ಕಾರ್ಯಕ್ರಮಕ್ಕೆ ಕಾರ್ಮಿಕರನ್ನು ಕರೆತಂದು ಹಣ ಕೊಡದೆ ವಂಚನೆ; ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಂಡಿದ್ದ ಕಾರ್ಯಕ್ರಮಕ್ಕೆ ಕೂಲಿ ಕಾರ್ಮಿಕರನ್ನು ಕರೆತಂದು ದುಡ್ಡು ಕೊಡದೆ ವಂಚಿಸಿದ್ದ ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆಯನ್ನು ಉದ್ಘಾಟಿಸಲು ಮೋದಿಯವರು ಆಗಮಿಸಿದ್ದರು. ಆ ವೇಳೆ ಕರೆತಂದಿದ್ದ ಕಾರ್ಮಿಕರಿಗೆ ಬಾಕಿ ಹಣ ಪಾವತಿಸದ ಆರೋಪದ ಮೇಲೆ ಕರ್ನಾಟಕ ಪೊಲೀಸರು ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸ್ಥಳೀಯ ಬಿಜೆಪಿ ಮುಖಂಡ ನಂದೀಶ್ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲೆಯ ಸಿಡ್ಲಘಟ್ಟ ಪೊಲೀಸ್ ಠಾಣೆಯಲ್ಲಿ 40 ಕೂಲಿ ಕಾರ್ಮಿಕರು ದೂರು ನೀಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಆವರಣದಲ್ಲಿರುವ ಪ್ರತಿಮೆಯ ಸ್ಥಳದಲ್ಲಿ ಕೆಲಸ ಮಾಡಲು ಕಾರ್ಮಿಕರನ್ನು ನೇಮಿಸಿಕೊಳ್ಳಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ನಂದೀಶ್ ಪ್ರತಿ ಕಾರ್ಯಕರ್ತನಿಗೆ 500 ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಕಾರ್ಯಕ್ರಮದ ನಂತರ ಕೇವಲ 100 ರೂ. ನೀಡಲಾಗಿದೆ ಎಂಬ ಆರೋಪಗಳ ಕುರಿತು ತನಿಖೆ ನಡೆಯುತ್ತಿದೆ.

ಬಿಜೆಪಿ ವಿರುದ್ಧ ಕಾರ್ಮಿಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಹಣವನ್ನು ನೀಡಬೇಕೆಂದು ಒತ್ತಾಯಿಸಿದ ಅವರು ಘೋಷಣೆಗಳನ್ನು ಕೂಗುತ್ತಿರುವ ದೃಶ್ಯಗಳು ವೈರಲ್ ಆಗಿವೆ.

ಕಾಂಗ್ರೆಸ್ ನಾಯಕರು ಬಿಜೆಪಿಯ ನಡೆಯನ್ನು ಖಂಡಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್‌ನ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಟ್ವೀಟ್ ಮಾಡಿದ್ದು, “ಪ್ರಧಾನಿ ನರೇಂದ್ರಮೋದಿಯವರೇ, ನಿಮ್ಮನ್ನು ಹುರಿದುಂಬಿಸಲೆಂದು ಬಿಜೆಪಿ ನಾಯಕರು ದಿನಕೂಲಿ ಕಾರ್ಮಿಕರಿಗೆ ₹ 500 ನೀಡುವ ಭರವಸೆ ನೀಡಿದ್ದರು. ಆದರೆ ಕೇವಲ ₹ 100 ಪಾವತಿಸಲಾಗಿದೆ. ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸಿದ್ದಾರೆ. ಬಿಜೆಪಿ ಸರ್ಕಾರವು 40% ಸರ್ಕಾರವಾಗಿದೆ. ಆದರೆ ಪಕ್ಷದ ಭ್ರಷ್ಟಾಚಾರವು 80% ಆಗಿದೆಯೇ?” ಎಂದು ಪ್ರಶ್ನಿಸಿದ್ದಾರೆ.

ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ, ನವೆಂಬರ್ 11 ರಂದು ಅನಾವರಣಗೊಳಿಸಿದರು. ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಪಾಳೇಗಾರರಾಗಿದ್ದ ಕೆಂಪೇಗೌಡರು 1537ರಲ್ಲಿ ಬೆಂಗಳೂರನ್ನು ಸ್ಥಾಪಿಸಿದ್ದರು.

ಕೆಂಪೇಗೌಡರು ವಿಶೇಷವಾಗಿ ಹಳೆಯ ಮೈಸೂರು ಮತ್ತು ದಕ್ಷಿಣ ಕರ್ನಾಟಕದ ಇತರ ಭಾಗಗಳಲ್ಲಿ ಪ್ರಬಲವಾಗಿರುವ ಒಕ್ಕಲಿಗ ಸಮುದಾಯದ ಅಸ್ಮಿತೆಯಾಗಿದ್ದಾರೆ. ಜೊತೆಗೆ ನಾಡಪ್ರಭು ಎಂಬ ಬಿರುದಿಗೆ ಪಾತ್ರರಾಗಿರುವ ಕೆಂಪೇಗೌಡರು ಕನ್ನಡಗರ ಪ್ರೀತಿಪಾತ್ರರೂ ಹೌದು.

ಕೆಂಪೇಗೌಡರ ಪ್ರತಿಮೆ ಅನಾವರಣದ ಬಳಿಕ ಹಲವು ಚರ್ಚೆಗಳು ಶುರುವಾಗಿವೆ. ಕಾರ್ಯಕ್ರಮಕ್ಕೆ ಕರೆತಂದಿದ್ದ ಕಾರ್ಮಿಕರಿಗೆ ಹಣ ಪಾವತಿಸಿಲ್ಲ ಎಂಬ ಟೀಕೆ ಒಂದು ಕಡೆಯಾದರೆ, ಮಾಜಿ ಪ್ರಧಾನಿ ದೇವೇಗೌಡರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಜೆಡಿಎಸ್‌ ಆಕ್ರೋಶ ವ್ಯಕ್ತಪಡಿಸುತ್ತಿದೆ.

ಎಚ್‌.ಡಿ.ದೇವೇಗೌಡರನ್ನು ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಆಹ್ವಾನಿಸಿಲ್ಲವೆಂಬ ವಿವಾದಕ್ಕೆ ಸಂಬಂಧಿಸಿದಂತೆ ಜೆಡಿಎಸ್‌- ಬಿಜೆಪಿ ನಡುವೆ ವಾಕ್ಸಮರ ಮುಂದುವರಿದಿದೆ. ಮತ್ತೆ ಸರಣಿ ಟ್ವೀಟ್‌ಗಳ ಮೂಲಕ ಜೆಡಿಎಸ್‌ ಟೀಕಾಪ್ರಹಾರ ನಡೆಸಿದೆ.

“ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿಗಳಾದ ದೇವೇಗೌಡರನ್ನು ಆಹ್ವಾನಿಸದೆ ರಾಜ್ಯ ಸರಕಾರ ಶಿಷ್ಟಾಚಾರ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ. ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ” ಎಂದು ಜೆಡಿಎಸ್‌ ಆಕ್ರೋಶ ಹೊರಹಾಕಿದೆ.

ಇದನ್ನೂ ಓದಿರಿ: ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ: ಬಿಜೆಪಿ ವಿರುದ್ಧ ಜೆಡಿಎಸ್‌ ಟೀಕಾಪ್ರಹಾರ

‘ಸುಳ್‌‌ ಬಿಜೆಪಿ, ಸುಳ್‌ ಸಿಎಂ, ಗೊಬೆಲ್‌ ಬಿಜೆಪಿ’ ಎಂಬ ಹ್ಯಾಷ್‌ಟ್ಯಾಗ್ ಬಳಸಿ ಟ್ವೀಟ್‌ಗಳನ್ನು ಮಾಡಿರುವ ಜೆಡಿಎಸ್‌, “ಬೂಟಾಟಿಕೆ ದಾಸಯ್ಯನಿಗೆ ಮೈಯಲ್ಲಾ ಪಂಗನಾಮʼ ಎನ್ನುವಂತಿದೆ ಬಿಜೆಪಿ ಪರಿಸ್ಥಿತಿ. ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ. ರಕ್ತಪೀಪಾಸುತನ, ನರಹಂತಕ ಮನಃಸ್ಥಿತಿಯೇ ಬಿಜೆಪಿಯ ನೈಜಮುಖ. ಆಪರೇಷನ್‌ ಕಮಲವೇ ಅದರ ಶಿಷ್ಟಾಚಾರ, ಸುಳ್ಳಿನ ಪ್ರಚಾರವೇ ಅದರ ಸಂಸ್ಕಾರ” ಎಂದು ಅಭಿಪ್ರಾಯಪಟ್ಟಿದೆ.

“ಎಚ್.ಡಿ.ದೇವೇಗೌಡರನ್ನು ಜೆಡಿಎಸ್ ಎಂದಿಗೂ ಜಾತಿ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಆದರೆ, ನರೇಂದ್ರಮೋದಿಯವರ ಅರ್ಧದಿನದ ʼಕರ್ನಾಟಕದ ಕಾಟಾಚಾರದ ಭೇಟಿʼ ಏನನ್ನು ಗುರಿ ಮಾಡಿಕೊಂಡಿತ್ತು? ಎನ್ನುವುದನ್ನು ಮಾಧ್ಯಮಗಳೇ ನಿರಂತರವಾಗಿ ವರದಿ ಮಾಡುತ್ತಿರುವುದು ಕಾಣುತ್ತಿಲ್ಲವೇ? ಕಮಲದ ಕಣ್ಣಿಗೆ ಕಾಮಾಲೆ ಎನ್ನುವುದು ಖರೆ” ಎಂದು ಟೀಕಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕೂಲಿಯವರಿಗೂ ಮೋಸ ಮಾಡುಂತಹ ಹೀನಾಯ ಸ್ಥಿತಿಗೆ ಇಳಿದಿದ್ದಾರಲ್ಲ, ಈ ಮನುವಾದಿಗಳು.

  2. ಮೋಸಗಾರರಿಗೆ ಯಾರಾದರೇನು ಕಾರ್ಮಿಕರಾದರೇನು, ಶ್ರೀಮಂತರಾದರೇನು ಅಥವಾ ಭಿಕ್ಷುಕರಾದರೇನು, ಮೋಸ ಮಾಡುವುದೊಂದೇ ಅವರ ಕುಲ ಕಸಬು. ಈ ಬಿಜೆಪಿ ಮೋಸಗಾರರು 40 % ನಿಂದ 80% ಗೆ ತಮ್ಮ ಬೆಲೆ ಹೆಚ್ಚಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...