HomeUncategorizedಟ್ರಾವೆಲ್ ಏಜೆಂಟ್‌ನಿಂದ ವಂಚನೆ: 22 ವರ್ಷಗಳ ನಂತರ ಪಾಕಿಸ್ತಾನದಿಂದ ಮರಳಿದ ಭಾರತೀಯ ಮಹಿಳೆ

ಟ್ರಾವೆಲ್ ಏಜೆಂಟ್‌ನಿಂದ ವಂಚನೆ: 22 ವರ್ಷಗಳ ನಂತರ ಪಾಕಿಸ್ತಾನದಿಂದ ಮರಳಿದ ಭಾರತೀಯ ಮಹಿಳೆ

- Advertisement -
- Advertisement -

ಲಾಹೋರ್: ಟ್ರಾವೆಲ್ ಏಜೆಂಟ್‌ನಿಂದ ವಂಚನೆಗೊಳಗಾಗಿ ಕಳೆದ 22 ವರ್ಷಗಳಿಂದ ಪಾಕಿಸ್ತಾನದಲ್ಲಿ ನೆಲೆಸಿದ್ದ ಭಾರತೀಯ ಮಹಿಳೆ ಸೋಮವಾರ ಲಾಹೋರ್‌ನ ವಾಘಾ ಗಡಿಯ ಮೂಲಕ ತನ್ನ ತಾಯ್ನಾಡಿಗೆ ಮರಳಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ ಮೂಲದ ಹಮೀದಾ ಬಾನೋ ಅವರು 2002 ರಲ್ಲಿ ಪಾಕಿಸ್ತಾನದಲ್ಲಿರುವ ಹೈದರಾಬಾದ್‌ಗೆ  ಕರೆತರಲಾಗಿತ್ತು.  ಏಜೆಂಟ್ ದುಬೈನಲ್ಲಿ ಕೆಲಸ ಕೊಡಿಸುವ ಭರವಸೆಯೊಂದಿಗೆ ಅವಳನ್ನು ವಂಚಿಸಿ, ದುಬೈ ಬದಲು ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಹೈದರಾಬಾದ್ ಜಿಲ್ಲೆಗೆ ಕರೆತಂದಿದ್ದನು.

ಸೋಮವಾರ ಹಮೀದಾ ಕರಾಚಿಯಿಂದ ವಿಮಾನದ ಮೂಲಕ ಇಲ್ಲಿಗೆ ಬಂದರು ಮತ್ತು ತರುವಾಯ ಅವರು ವಾಘಾ ಗಡಿಯ ಮೂಲಕ ಭಾರತವನ್ನು ಪ್ರವೇಶಿಸಿದರು. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಅವರನ್ನು ಬರಮಾಡಿಕೊಂಡರು ಎಂದು ಸರ್ಕಾರಿ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಬಾನೊ ತನ್ನ ಕುಟುಂಬದೊಂದಿಗೆ ಮತ್ತೆ ಒಂದಾಗಲು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ತಾನು ಭಾರತಕ್ಕೆ ಹಿಂದಿರುಗುವ ಭರವಸೆಯನ್ನು ಕಳೆದುಕೊಂಡಿದ್ದೇನು. ಆದರೆ ಈ ದಿನವನ್ನು ನೋಡಲು ಅದೃಷ್ಟವಂತೆ ಎಂದು ಅವರು ಹೇಳಿದ್ದಾರೆ.

2022 ರಲ್ಲಿ, ಸ್ಥಳೀಯ ಯೂಟ್ಯೂಬರ್ ವಲಿಯುಲ್ಲಾ ಮರೂಫ್ ರ ಜೊತೆ, ಹಮೀದಾ ಬಾನೋ 2002ರಲ್ಲಿ ಭಾರತವನ್ನು ತೊರೆದು ಬಂದ ತನ್ನ ಕಥೆಯನ್ನು ಹೇಳಿಕೊಂಡಿದ್ದರು. ನೇಮಕಾತಿ ಏಜೆಂಟ್ ಯೊಬ್ಬರು ದುಬೈನಲ್ಲಿ ಅಡುಗೆಯ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದರು. ಇದರ ಬದಲಾಗಿ ಅವರನ್ನು ಮೋಸಗೊಳಿಸಿ ಪಾಕಿಸ್ತಾನಕ್ಕೆ ಕರೆ ತರಲಾಗಿತ್ತು. ಮರೂಫ್ ಅವರು  ಭಾರತದಲ್ಲಿನ ಅವರ ಕುಟುಂಬದೊಂದಿಗೆ ಸಂಪರ್ಕ ಸಾಧಿಸಲು ಸಹಾಯ ಮಾಡಿದ್ದರು. ಅವರ ಮಗಳು ಯಾಸ್ಮೀನ್ ಅವರೊಂದಿಗೆ ಫೋನ್ ಮೂಲಕ ಮಾತನಾಡಿದ್ದರು.

ಮರೂಫ್ ಅವರೊಂದಿಗಿನ ಮಾತುಕತೆಯಲ್ಲಿ, ಹಮೀದಾ ಬಾನೊ ಅವರು ಪಾಕಿಸ್ತಾನಕ್ಕೆ ಬರುವ ಮೊದಲು ಭಾರತದಲ್ಲಿ ತನ್ನ ಗಂಡನ ಮರಣದ ನಂತರ ತನ್ನ ನಾಲ್ಕು ಮಕ್ಕಳನ್ನು ಸಲಹುವುದಕ್ಕಾಗಿ ಕೆಲಸವನ್ನು ಹುಡುಕುತ್ತಿದ್ದೆ ಎಂದು ಹೇಳಿದ್ದರು. ಇಲ್ಲಿಗೆ ಬರುವ ಮೊದಲು ದೋಹಾ, ಕತಾರ್, ದುಬೈ ಮತ್ತು ಸೌದಿ ಅರೇಬಿಯಾದಲ್ಲಿ ಯಾವುದೇ ತೊಂದರೆಯಿಲ್ಲದೆ ಅಡುಗೆಯವಳಾಗಿ ಕೆಲಸ ಮಾಡಿದ್ದೆ ಎಂದು ತಿಳಿಸಿದ್ದರು.

ಪಾಕಿಸ್ತಾನದಲ್ಲಿ ತನ್ನ 22 ವರ್ಷಗಳ ವಾಸ್ತವ್ಯದ ಸಮಯದಲ್ಲಿ, ಬಾನೊ ಕರಾಚಿಯ ಪಾಕಿಸ್ತಾನಿ ವ್ಯಕ್ತಿಯನ್ನು ವಿವಾಹವಾಗಿದ್ದರು. ಅವರು ಕೋವಿಡ್ -19 ನಿಂದ ನಿಧನರಾಗಿದ್ದರು. ಅಂದಿನಿಂದ ಅವರು ತನ್ನ ಮಲಮಗನೊಂದಿಗೆ ವಾಸಿಸುತ್ತಿದ್ದಳು.

ಇದನ್ನು ಓದಿ….ಶೋಷಿತ ಸಮುದಾಯಗಳು ಪರಿಣಾಮಕಾರಿ ಹೋರಾಟದ ಮಾರ್ಗ ಕಂಡುಕೊಳ್ಳಬೇಕು: ಪುರುಷೋತ್ತಮ ಬಿಳಿಮಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...