HomeUncategorizedಟ್ರಾವೆಲ್ ಏಜೆಂಟ್‌ನಿಂದ ವಂಚನೆ: 22 ವರ್ಷಗಳ ನಂತರ ಪಾಕಿಸ್ತಾನದಿಂದ ಮರಳಿದ ಭಾರತೀಯ ಮಹಿಳೆ

ಟ್ರಾವೆಲ್ ಏಜೆಂಟ್‌ನಿಂದ ವಂಚನೆ: 22 ವರ್ಷಗಳ ನಂತರ ಪಾಕಿಸ್ತಾನದಿಂದ ಮರಳಿದ ಭಾರತೀಯ ಮಹಿಳೆ

- Advertisement -
- Advertisement -

ಲಾಹೋರ್: ಟ್ರಾವೆಲ್ ಏಜೆಂಟ್‌ನಿಂದ ವಂಚನೆಗೊಳಗಾಗಿ ಕಳೆದ 22 ವರ್ಷಗಳಿಂದ ಪಾಕಿಸ್ತಾನದಲ್ಲಿ ನೆಲೆಸಿದ್ದ ಭಾರತೀಯ ಮಹಿಳೆ ಸೋಮವಾರ ಲಾಹೋರ್‌ನ ವಾಘಾ ಗಡಿಯ ಮೂಲಕ ತನ್ನ ತಾಯ್ನಾಡಿಗೆ ಮರಳಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ ಮೂಲದ ಹಮೀದಾ ಬಾನೋ ಅವರು 2002 ರಲ್ಲಿ ಪಾಕಿಸ್ತಾನದಲ್ಲಿರುವ ಹೈದರಾಬಾದ್‌ಗೆ  ಕರೆತರಲಾಗಿತ್ತು.  ಏಜೆಂಟ್ ದುಬೈನಲ್ಲಿ ಕೆಲಸ ಕೊಡಿಸುವ ಭರವಸೆಯೊಂದಿಗೆ ಅವಳನ್ನು ವಂಚಿಸಿ, ದುಬೈ ಬದಲು ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಹೈದರಾಬಾದ್ ಜಿಲ್ಲೆಗೆ ಕರೆತಂದಿದ್ದನು.

ಸೋಮವಾರ ಹಮೀದಾ ಕರಾಚಿಯಿಂದ ವಿಮಾನದ ಮೂಲಕ ಇಲ್ಲಿಗೆ ಬಂದರು ಮತ್ತು ತರುವಾಯ ಅವರು ವಾಘಾ ಗಡಿಯ ಮೂಲಕ ಭಾರತವನ್ನು ಪ್ರವೇಶಿಸಿದರು. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಅವರನ್ನು ಬರಮಾಡಿಕೊಂಡರು ಎಂದು ಸರ್ಕಾರಿ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಬಾನೊ ತನ್ನ ಕುಟುಂಬದೊಂದಿಗೆ ಮತ್ತೆ ಒಂದಾಗಲು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ತಾನು ಭಾರತಕ್ಕೆ ಹಿಂದಿರುಗುವ ಭರವಸೆಯನ್ನು ಕಳೆದುಕೊಂಡಿದ್ದೇನು. ಆದರೆ ಈ ದಿನವನ್ನು ನೋಡಲು ಅದೃಷ್ಟವಂತೆ ಎಂದು ಅವರು ಹೇಳಿದ್ದಾರೆ.

2022 ರಲ್ಲಿ, ಸ್ಥಳೀಯ ಯೂಟ್ಯೂಬರ್ ವಲಿಯುಲ್ಲಾ ಮರೂಫ್ ರ ಜೊತೆ, ಹಮೀದಾ ಬಾನೋ 2002ರಲ್ಲಿ ಭಾರತವನ್ನು ತೊರೆದು ಬಂದ ತನ್ನ ಕಥೆಯನ್ನು ಹೇಳಿಕೊಂಡಿದ್ದರು. ನೇಮಕಾತಿ ಏಜೆಂಟ್ ಯೊಬ್ಬರು ದುಬೈನಲ್ಲಿ ಅಡುಗೆಯ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದರು. ಇದರ ಬದಲಾಗಿ ಅವರನ್ನು ಮೋಸಗೊಳಿಸಿ ಪಾಕಿಸ್ತಾನಕ್ಕೆ ಕರೆ ತರಲಾಗಿತ್ತು. ಮರೂಫ್ ಅವರು  ಭಾರತದಲ್ಲಿನ ಅವರ ಕುಟುಂಬದೊಂದಿಗೆ ಸಂಪರ್ಕ ಸಾಧಿಸಲು ಸಹಾಯ ಮಾಡಿದ್ದರು. ಅವರ ಮಗಳು ಯಾಸ್ಮೀನ್ ಅವರೊಂದಿಗೆ ಫೋನ್ ಮೂಲಕ ಮಾತನಾಡಿದ್ದರು.

ಮರೂಫ್ ಅವರೊಂದಿಗಿನ ಮಾತುಕತೆಯಲ್ಲಿ, ಹಮೀದಾ ಬಾನೊ ಅವರು ಪಾಕಿಸ್ತಾನಕ್ಕೆ ಬರುವ ಮೊದಲು ಭಾರತದಲ್ಲಿ ತನ್ನ ಗಂಡನ ಮರಣದ ನಂತರ ತನ್ನ ನಾಲ್ಕು ಮಕ್ಕಳನ್ನು ಸಲಹುವುದಕ್ಕಾಗಿ ಕೆಲಸವನ್ನು ಹುಡುಕುತ್ತಿದ್ದೆ ಎಂದು ಹೇಳಿದ್ದರು. ಇಲ್ಲಿಗೆ ಬರುವ ಮೊದಲು ದೋಹಾ, ಕತಾರ್, ದುಬೈ ಮತ್ತು ಸೌದಿ ಅರೇಬಿಯಾದಲ್ಲಿ ಯಾವುದೇ ತೊಂದರೆಯಿಲ್ಲದೆ ಅಡುಗೆಯವಳಾಗಿ ಕೆಲಸ ಮಾಡಿದ್ದೆ ಎಂದು ತಿಳಿಸಿದ್ದರು.

ಪಾಕಿಸ್ತಾನದಲ್ಲಿ ತನ್ನ 22 ವರ್ಷಗಳ ವಾಸ್ತವ್ಯದ ಸಮಯದಲ್ಲಿ, ಬಾನೊ ಕರಾಚಿಯ ಪಾಕಿಸ್ತಾನಿ ವ್ಯಕ್ತಿಯನ್ನು ವಿವಾಹವಾಗಿದ್ದರು. ಅವರು ಕೋವಿಡ್ -19 ನಿಂದ ನಿಧನರಾಗಿದ್ದರು. ಅಂದಿನಿಂದ ಅವರು ತನ್ನ ಮಲಮಗನೊಂದಿಗೆ ವಾಸಿಸುತ್ತಿದ್ದಳು.

ಇದನ್ನು ಓದಿ….ಶೋಷಿತ ಸಮುದಾಯಗಳು ಪರಿಣಾಮಕಾರಿ ಹೋರಾಟದ ಮಾರ್ಗ ಕಂಡುಕೊಳ್ಳಬೇಕು: ಪುರುಷೋತ್ತಮ ಬಿಳಿಮಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...