Homeಮುಖಪುಟವಂಚನೆ ಪ್ರಕರಣ: ಗುಜರಾತಿ ವಂಚಕ ಕಿರಣ್ ಭಾಯ್ ಪಟೇಲ್‌ ಪತ್ನಿ ಬಂಧನ

ವಂಚನೆ ಪ್ರಕರಣ: ಗುಜರಾತಿ ವಂಚಕ ಕಿರಣ್ ಭಾಯ್ ಪಟೇಲ್‌ ಪತ್ನಿ ಬಂಧನ

- Advertisement -
- Advertisement -

ಪ್ರಧಾನಿ ಕಚೇರಿಯ ಉನ್ನತ ಅಧಿಕಾರಿಯಂತೆ ಪೋಸ್ ನೀಡಿದ ಗುಜರಾತಿ ವಂಚಕ ಕಿರಣ್ ಭಾಯ್ ಪಟೇಲ್ ಅವರ ಪತ್ನಿಯನ್ನು 15 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಮದಾಬಾದ್ ಕ್ರೈಂ ಬ್ರಾಂಚ್ ಮಂಗಳವಾರ ಬಂಧಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಿಜೆಪಿಯ ಮಾಜಿ ಸಚಿವ ಜವಾಹರ್ ಚಾವ್ಡಾ ಅವರ ಸಹೋದರ ಜಗದೀಶ್ ಚಾವ್ಡಾ ಅವರು, ಮಾಲಿನಿ ಪಟೇಲ್ ಮತ್ತು ಅವರ ಪತಿ, ವಂಚಕ ಕಿರಣ್ ಭಾಯ್ ಪಟೇಲ್ ವಿರುದ್ಧ ಮಾರ್ಚ್ 22ರಂದು ಪ್ರಕರಣ ದಾಖಲಿಸಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.

ವಂಚಕ ಕಿರಣ್ ಭಾಯ್ ಪಟೇಲ್ ವಿರುದ್ಧದ ನಾಲ್ಕನೇ ಪ್ರಕರಣ ಇದಾಗಿದೆ. ನಂಬಿಕೆಯ ಉಲ್ಲಂಘನೆ, ವಂಚನೆ ಮತ್ತು ಕ್ರಿಮಿನಲ್ ಪಿತೂರಿಯ ಆರೋಪಗಳನ್ನು ಒಳಗೊಂಡಂತೆ ಅವರ ವಿರುದ್ಧ ಅವರ ತವರು ರಾಜ್ಯ ಗುಜರಾತ್‌ನ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ.

ಆರೋಪಿಗಳಾಗಿರುವ ಮಾಲಿನಿ ಪಟೇಲ್ ಮತ್ತು ಕಿರಣ್ ಭಾಯ್ ಪಟೇಲ್ ಅವರು, ಜಗದೀಶ್ ಚಾವ್ಡಾ ಅವರಿಗೆ ಕಳೆದ ವರ್ಷ ಅಹಮದಾಬಾದ್‌ನ ಶಿಲಾಜ್ ಪ್ರದೇಶದಲ್ಲಿನ ಅವರ ವಸತಿ ಆಸ್ತಿಯನ್ನು ನವೀಕರಿಸುವುದಾಗಿ ಭರವಸೆ ನೀಡಿ ಸುಮಾರು 15 ಕೋಟಿ ರೂಪಾಯಿಗಳನ್ನು ವಂಚಿಸಿದ್ದಾರೆ ಎಂದು ಇತ್ತೀಚಿನ ಎಫ್‌ಐಆರ್‌ನಲ್ಲಿ ತಿಳಿಸಿದೆ.

ಇದನ್ನೂ ಓದಿ: ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ: ಮೇ10ರಂದು ಮತದಾನ, 13ರಂದೇ ಫಲಿತಾಂಶ

ಕಿರಣ್ ಭಾಯ್ ಪಟೇಲ್ ಅವರು, ತಾವು ”ಅದಾನಿಯ ದೊಡ್ಡ ಯೋಜನೆ”ಯೊಂದಿಗೆ ಸಂಪರ್ಕ ಹೊಂದಿರುವ ಪ್ರಧಾನ ಮಂತ್ರಿ ಕಚೇರಿಯ ಕ್ಲಾಸ್ 1 ಅಧಿಕಾರಿ ಎಂದು ಹೇಳುವ ಮೂಲಕ ಚಾವ್ಡಾ ಅವರನ್ನು ವಂಚಿಸಿದ್ದಾರೆ ಎಂದು ಎಫ್ಐಆರ್‌ನಲ್ಲಿ ಸೇರಿಸಲಾಗಿದೆ.

ಇಂಟೀರಿಯರ್ ಡಿಸೈನರ್ ಜೊತೆಗೆ ದಂಪತಿಗಳು ನವೀಕರಣವನ್ನು ಪ್ರಾರಂಭಿಸಿದರು. ನವೀಕರಣದ ಕೆಲಸ ಪ್ರಾರಂಭವಾದಾಗ, ಚಾವ್ಡಾ ತನ್ನ ಸ್ನೇಹಿತನ ಮನೆಯಲ್ಲಿ ಉಳಿದುಕೊಂಡರು. ಈ ವೇಳೆ ಚಾವ್ಡಾ ಅವರಿಂದ ಕಂತು-ಕಂತುಗಳಲ್ಲಿ 35 ಲಕ್ಷ ರೂಪಾಯಿಗಳನ್ನು ಪಡೆದುಕೊಂಡಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಕೆಲ ದಿನಗಳ ಬಳಿಕ ಚಾವ್ಡಾ ಅವರು ತಮ್ಮ ಮನೆಯ ಬಳಿ ಬಂದಾಗ ವಂಚಕ ದಂಪತಿಗಳು ಅವರ ಮನೆ ಆಸ್ತಿಯನ್ನು ತಮ್ಮ ಹೆಸರಿಗೆ ಬದಲಿಸಿದ್ದಾರೆ ಮತ್ತು ಮನೆಯ ಹೊರಗೆ ತಮ್ಮ ನಾಮಫಲಕವನ್ನು ಹಾಕಿದ್ದಾರೆ ಎಂದು ಹೇಳಲಾಗಿದೆ. ಅವರು ಮನೆಯ ನವೀಕರಣವನ್ನು ಪೂರ್ಣಗೊಳಿಸದೆ ಹಣದೊಂದಿಗೆ ಪರಾರಿಯಾಗಿದ್ದಾರೆ ಎಂದು ಚಾವ್ಡಾ ಆರೋಪಿಸಿದ್ದಾರೆ.

ಗುಜರಾತಿ ವಂಚಕ ಕಿರಣ್ ಭಾಯ್ ಪಟೇಲ್ ಮತ್ತು ಅವರ ಪತ್ನಿ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 406 (ಕ್ರಿಮಿನಲ್ ನಂಬಿಕೆಯ ಉಲ್ಲಂಘನೆ), 420 (ವಂಚನೆ ಮತ್ತು ಅಪ್ರಾಮಾಣಿಕವಾಗಿ ಆಸ್ತಿ ವಿತರಣೆ), 170 (ಸಾರ್ವಜನಿಕ ಸೇವಕರನ್ನು ಗುರುತಿಸುವುದು) ಮತ್ತು 120 ಬಿ (ಅಪರಾಧ ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಪರಾಧ ವಿಭಾಗದ ಉಪ ಪೊಲೀಸ್ ಆಯುಕ್ತ ಚೈತನ್ಯ ಮಾಂಡ್ಲಿಕ್ ಅವರು ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿದ್ದು, ”ಮಾಲಿನಿ ಪಟೇಲ್ ಅವರನ್ನು ಮಂಗಳವಾರ ಬಂಧಿಸಿದ್ದೇವೆ” ಎಂದು ತಿಳಿಸಿದರು.

ಕಿರಣ್ ಭಾಯಿ ಪಟೇಲ್ ಅವರನ್ನು ಪ್ರಧಾನಿ ಕಚೇರಿಯಲ್ಲಿ ಕಾರ್ಯತಂತ್ರ ಮತ್ತು ಪ್ರಚಾರಕ್ಕಾಗಿ ಹೆಚ್ಚುವರಿ ನಿರ್ದೇಶಕ ಎಂದು ಸುಳ್ಳು ಹೇಳಿ ಸರ್ಕಾರಿ ಸವಲತ್ತುಗಳನ್ನು ಪಡೆದಿದ್ದ ಕಾರಣಕ್ಕಾಗಿ ಮಾರ್ಚ್ 3ರಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದರು.

ಜಮ್ಮು ಮತ್ತು ಕಾಶ್ಮೀರದ ಪಂಚತಾರಾ ಹೋಟೆಲ್‌ನಲ್ಲಿ ವಾಸ್ತವ್ಯ, ಬುಲೆಟ್ ಪ್ರೂಫ್ ಕಾರು, ಭದ್ರತಾ ಸಿಬ್ಬಂದಿ ಮತ್ತು ಅಧಿಕೃತ ವಸತಿ ಸೇರಿದಂತೆ ಪ್ರಧಾನಿ ಕಚೇರಿಯಿಂದ ಅಧಿಕಾರಿಗಳಿಗೆ ಸಾಮಾನ್ಯವಾಗಿ ನೀಡಲಾಗುವ ಸೌಲಭ್ಯಗಳನ್ನು ಕಿರಣ್ ಭಾಯಿ ಪಟೇಲ್ ಪಡೆದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾರ್ಚ್ 2 ರಂದು ವಂಚನೆ ಮತ್ತು ಫೋರ್ಜರಿ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...