Homeಮುಖಪುಟವಂಚನೆ ಪ್ರಕರಣ: ಗುಜರಾತಿ ವಂಚಕ ಕಿರಣ್ ಭಾಯ್ ಪಟೇಲ್‌ ಪತ್ನಿ ಬಂಧನ

ವಂಚನೆ ಪ್ರಕರಣ: ಗುಜರಾತಿ ವಂಚಕ ಕಿರಣ್ ಭಾಯ್ ಪಟೇಲ್‌ ಪತ್ನಿ ಬಂಧನ

- Advertisement -
- Advertisement -

ಪ್ರಧಾನಿ ಕಚೇರಿಯ ಉನ್ನತ ಅಧಿಕಾರಿಯಂತೆ ಪೋಸ್ ನೀಡಿದ ಗುಜರಾತಿ ವಂಚಕ ಕಿರಣ್ ಭಾಯ್ ಪಟೇಲ್ ಅವರ ಪತ್ನಿಯನ್ನು 15 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಮದಾಬಾದ್ ಕ್ರೈಂ ಬ್ರಾಂಚ್ ಮಂಗಳವಾರ ಬಂಧಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಿಜೆಪಿಯ ಮಾಜಿ ಸಚಿವ ಜವಾಹರ್ ಚಾವ್ಡಾ ಅವರ ಸಹೋದರ ಜಗದೀಶ್ ಚಾವ್ಡಾ ಅವರು, ಮಾಲಿನಿ ಪಟೇಲ್ ಮತ್ತು ಅವರ ಪತಿ, ವಂಚಕ ಕಿರಣ್ ಭಾಯ್ ಪಟೇಲ್ ವಿರುದ್ಧ ಮಾರ್ಚ್ 22ರಂದು ಪ್ರಕರಣ ದಾಖಲಿಸಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.

ವಂಚಕ ಕಿರಣ್ ಭಾಯ್ ಪಟೇಲ್ ವಿರುದ್ಧದ ನಾಲ್ಕನೇ ಪ್ರಕರಣ ಇದಾಗಿದೆ. ನಂಬಿಕೆಯ ಉಲ್ಲಂಘನೆ, ವಂಚನೆ ಮತ್ತು ಕ್ರಿಮಿನಲ್ ಪಿತೂರಿಯ ಆರೋಪಗಳನ್ನು ಒಳಗೊಂಡಂತೆ ಅವರ ವಿರುದ್ಧ ಅವರ ತವರು ರಾಜ್ಯ ಗುಜರಾತ್‌ನ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ.

ಆರೋಪಿಗಳಾಗಿರುವ ಮಾಲಿನಿ ಪಟೇಲ್ ಮತ್ತು ಕಿರಣ್ ಭಾಯ್ ಪಟೇಲ್ ಅವರು, ಜಗದೀಶ್ ಚಾವ್ಡಾ ಅವರಿಗೆ ಕಳೆದ ವರ್ಷ ಅಹಮದಾಬಾದ್‌ನ ಶಿಲಾಜ್ ಪ್ರದೇಶದಲ್ಲಿನ ಅವರ ವಸತಿ ಆಸ್ತಿಯನ್ನು ನವೀಕರಿಸುವುದಾಗಿ ಭರವಸೆ ನೀಡಿ ಸುಮಾರು 15 ಕೋಟಿ ರೂಪಾಯಿಗಳನ್ನು ವಂಚಿಸಿದ್ದಾರೆ ಎಂದು ಇತ್ತೀಚಿನ ಎಫ್‌ಐಆರ್‌ನಲ್ಲಿ ತಿಳಿಸಿದೆ.

ಇದನ್ನೂ ಓದಿ: ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ: ಮೇ10ರಂದು ಮತದಾನ, 13ರಂದೇ ಫಲಿತಾಂಶ

ಕಿರಣ್ ಭಾಯ್ ಪಟೇಲ್ ಅವರು, ತಾವು ”ಅದಾನಿಯ ದೊಡ್ಡ ಯೋಜನೆ”ಯೊಂದಿಗೆ ಸಂಪರ್ಕ ಹೊಂದಿರುವ ಪ್ರಧಾನ ಮಂತ್ರಿ ಕಚೇರಿಯ ಕ್ಲಾಸ್ 1 ಅಧಿಕಾರಿ ಎಂದು ಹೇಳುವ ಮೂಲಕ ಚಾವ್ಡಾ ಅವರನ್ನು ವಂಚಿಸಿದ್ದಾರೆ ಎಂದು ಎಫ್ಐಆರ್‌ನಲ್ಲಿ ಸೇರಿಸಲಾಗಿದೆ.

ಇಂಟೀರಿಯರ್ ಡಿಸೈನರ್ ಜೊತೆಗೆ ದಂಪತಿಗಳು ನವೀಕರಣವನ್ನು ಪ್ರಾರಂಭಿಸಿದರು. ನವೀಕರಣದ ಕೆಲಸ ಪ್ರಾರಂಭವಾದಾಗ, ಚಾವ್ಡಾ ತನ್ನ ಸ್ನೇಹಿತನ ಮನೆಯಲ್ಲಿ ಉಳಿದುಕೊಂಡರು. ಈ ವೇಳೆ ಚಾವ್ಡಾ ಅವರಿಂದ ಕಂತು-ಕಂತುಗಳಲ್ಲಿ 35 ಲಕ್ಷ ರೂಪಾಯಿಗಳನ್ನು ಪಡೆದುಕೊಂಡಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಕೆಲ ದಿನಗಳ ಬಳಿಕ ಚಾವ್ಡಾ ಅವರು ತಮ್ಮ ಮನೆಯ ಬಳಿ ಬಂದಾಗ ವಂಚಕ ದಂಪತಿಗಳು ಅವರ ಮನೆ ಆಸ್ತಿಯನ್ನು ತಮ್ಮ ಹೆಸರಿಗೆ ಬದಲಿಸಿದ್ದಾರೆ ಮತ್ತು ಮನೆಯ ಹೊರಗೆ ತಮ್ಮ ನಾಮಫಲಕವನ್ನು ಹಾಕಿದ್ದಾರೆ ಎಂದು ಹೇಳಲಾಗಿದೆ. ಅವರು ಮನೆಯ ನವೀಕರಣವನ್ನು ಪೂರ್ಣಗೊಳಿಸದೆ ಹಣದೊಂದಿಗೆ ಪರಾರಿಯಾಗಿದ್ದಾರೆ ಎಂದು ಚಾವ್ಡಾ ಆರೋಪಿಸಿದ್ದಾರೆ.

ಗುಜರಾತಿ ವಂಚಕ ಕಿರಣ್ ಭಾಯ್ ಪಟೇಲ್ ಮತ್ತು ಅವರ ಪತ್ನಿ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 406 (ಕ್ರಿಮಿನಲ್ ನಂಬಿಕೆಯ ಉಲ್ಲಂಘನೆ), 420 (ವಂಚನೆ ಮತ್ತು ಅಪ್ರಾಮಾಣಿಕವಾಗಿ ಆಸ್ತಿ ವಿತರಣೆ), 170 (ಸಾರ್ವಜನಿಕ ಸೇವಕರನ್ನು ಗುರುತಿಸುವುದು) ಮತ್ತು 120 ಬಿ (ಅಪರಾಧ ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಪರಾಧ ವಿಭಾಗದ ಉಪ ಪೊಲೀಸ್ ಆಯುಕ್ತ ಚೈತನ್ಯ ಮಾಂಡ್ಲಿಕ್ ಅವರು ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿದ್ದು, ”ಮಾಲಿನಿ ಪಟೇಲ್ ಅವರನ್ನು ಮಂಗಳವಾರ ಬಂಧಿಸಿದ್ದೇವೆ” ಎಂದು ತಿಳಿಸಿದರು.

ಕಿರಣ್ ಭಾಯಿ ಪಟೇಲ್ ಅವರನ್ನು ಪ್ರಧಾನಿ ಕಚೇರಿಯಲ್ಲಿ ಕಾರ್ಯತಂತ್ರ ಮತ್ತು ಪ್ರಚಾರಕ್ಕಾಗಿ ಹೆಚ್ಚುವರಿ ನಿರ್ದೇಶಕ ಎಂದು ಸುಳ್ಳು ಹೇಳಿ ಸರ್ಕಾರಿ ಸವಲತ್ತುಗಳನ್ನು ಪಡೆದಿದ್ದ ಕಾರಣಕ್ಕಾಗಿ ಮಾರ್ಚ್ 3ರಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದರು.

ಜಮ್ಮು ಮತ್ತು ಕಾಶ್ಮೀರದ ಪಂಚತಾರಾ ಹೋಟೆಲ್‌ನಲ್ಲಿ ವಾಸ್ತವ್ಯ, ಬುಲೆಟ್ ಪ್ರೂಫ್ ಕಾರು, ಭದ್ರತಾ ಸಿಬ್ಬಂದಿ ಮತ್ತು ಅಧಿಕೃತ ವಸತಿ ಸೇರಿದಂತೆ ಪ್ರಧಾನಿ ಕಚೇರಿಯಿಂದ ಅಧಿಕಾರಿಗಳಿಗೆ ಸಾಮಾನ್ಯವಾಗಿ ನೀಡಲಾಗುವ ಸೌಲಭ್ಯಗಳನ್ನು ಕಿರಣ್ ಭಾಯಿ ಪಟೇಲ್ ಪಡೆದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾರ್ಚ್ 2 ರಂದು ವಂಚನೆ ಮತ್ತು ಫೋರ್ಜರಿ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...