Homeಮುಖಪುಟತ್ವರಿತ ಸಾಲ ನೀಡುವ ಆ್ಯಪ್‌ಗಳ ವಂಚನೆ: ಚೀನಿ ಪ್ರಜೆ ಸೇರಿದಂತೆ ಒಟ್ಟು ನಾಲ್ಕು ಜನರ ಬಂಧನ

ತ್ವರಿತ ಸಾಲ ನೀಡುವ ಆ್ಯಪ್‌ಗಳ ವಂಚನೆ: ಚೀನಿ ಪ್ರಜೆ ಸೇರಿದಂತೆ ಒಟ್ಟು ನಾಲ್ಕು ಜನರ ಬಂಧನ

ಆರೋಪಿಗಳು ತಮ್ಮ ಸಾಲ ನೀಡುವ ಅಪ್ಲಿಕೇಷನ್‌ ಅನ್ನು ಸಾಲಗಾರರ ಸಂಪರ್ಕದಲ್ಲಿರುವವರ ಫೋನ್ ಸಂಖ್ಯೆ ಸೇರಿದಂತೆ ಇತರ ಮೊಬೈಲ್ ಮಾಹಿತಿಗಳನ್ನು ಕೂಡಾ ಪಡೆಯುವಂತೆ ಅಭಿವೃದ್ದಿಪಡಿಸಿದ್ದರು.

- Advertisement -
- Advertisement -

ತ್ವರಿತ ಸಾಲ ನೀಡುವ ಆ್ಯಪ್‌ಗಳ ವಂಚನೆ ಪ್ರಕರಣದಲ್ಲಿ ಚೀನಾದ ಪ್ರಜೆ ಸೇರಿದಂತೆ ಒಟ್ಟು ನಾಲ್ಕು ಜನರನ್ನು ತೆಲಂಗಾಣದ ಸೈಬರಾಬಾದ್‌‌ನಲ್ಲಿ ಬಂಧಿಸಲಾಗಿದೆ. ಚೀನಾ ಪ್ರಜೆಯ ನೇತೃತ್ವದಲ್ಲಿ ನಡೆಯುತ್ತಿದ್ದ “ಕ್ಯೂಬೆವೊ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್” (ಸ್ಕೈಲೈನ್) ಎಂಬ ಕಾಲ್ ಸೆಂಟರ್‌ ಮೇಲೆ ಸೈಬರಾಬಾದ್‌ನ ಸೈಬರ್‌ ಅಪರಾಧ ಪೊಲೀಸರು ದಾಳಿ ನಡೆಸಿದ್ದರು.

ಇದರ ಮುಖ್ಯ ಕಚೇರಿ “ಸ್ಕೈಲೈನ್ ಇನ್ನೋವೇಶನ್ಸ್ ಟೆಕ್ನಾಲಜೀಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್” ಎಂಬ ಹೆಸರಿನಲ್ಲಿದ್ದು, ದೆಹಲಿಯಲ್ಲಿದೆ. ಜಿಕ್ಸಿಯಾ ಜಾಂಗ್ ಮತ್ತು ಉಮಾಪತಿ ಅಜಯ್ ಎಂಬವರು ಇದರ ನಿರ್ದೇಶಕರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರ ಮತ್ತು ಆರ್‌ಬಿಐ ನಡುವಿನ ಸಂಘರ್ಷ

ಇವರು ಒಟ್ಟು 11 ರೀತಿಯ ತ್ವರಿತ ಸಾಲಗಳನ್ನು ನೀಡುತ್ತಿದ್ದು, ಭಾರಿ ಮರುಪಾವತಿಯನ್ನು ಪಡೆಯುತ್ತಿದ್ದರು. ಸಾಲ ಪಾವತಿಸದ ಸಾಲಗಾರರಿಗೆ ತಾವು ನಡೆಸುತ್ತಿದ್ದ ಕಾಲ್ ಸೆಂಟರ್‌ಗಳ ಮೂಲಕ ವ್ಯವಸ್ಥಿತವಾಗಿ ನಿಂದನೆ, ಕಿರುಕುಳ, ಬೆದರಿಕೆಗಳನ್ನು ಹಾಕುತ್ತಿದ್ದರು. ಅಲ್ಲದೆ ಸಾಲ ಪಡೆದವರ ಸಂಬಂಧಿಕರು ಮತ್ತು ಕುಟುಂಬ ಸದಸ್ಯರಿಗೆ ನಕಲಿ ಕಾನೂನು ನೋಟಿಸ್ ಕಳುಹಿಸಿ ಸಾಲಗಾರರನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ತಮ್ಮ ಸಾಲ ನೀಡುವ ಅಪ್ಲಿಕೇಷನ್‌ ಅನ್ನು ಸಾಲಗಾರರ ಸಂಪರ್ಕದಲ್ಲಿರುವವರ ಫೋನ್ ಸಂಖ್ಯೆ ಸೇರಿದಂತೆ ಇತರ ಮೊಬೈಲ್ ಮಾಹಿತಿಗಳನ್ನು ಕೂಡಾ ಪಡೆಯುವಂತೆ ಅಭಿವೃದ್ದಿಪಡಿಸಿದ್ದರು. ಅಲ್ಲದೆ ಇದು ಗ್ರಾಹಕರ ಐಡಿ ಪ್ರೂಫ್‌‌, ಪ್ಯಾನ್ ಕಾರ್ಡ್, ಕೆವೈಸಿ ದಾಖಲೆ, ಬ್ಯಾಂಕ್ ಖಾತೆಗಳು ಸೇರಿದಂತೆ ಹಲವು ವಿವರಗಳನ್ನು ಸಂಗ್ರಹಿಸುತ್ತದೆ.

ಇದನ್ನೂ ಓದಿ: ಬ್ರಾಂಡ್ ವಾಷ್ಡ್ ಬಿರಿಯಾನಿ; ಬಿತ್ತದೆ ಬೆಳೆಯದೆ ಕಂಪನಿಗಳಿಗೆ ಏಕಸ್ವಾಮ್ಯ ಹೊಂದಲು ಅವಕಾಶ ಕೊಡುವ ಕೃಷಿ ಕಾನೂನುಗಳು

ಆರೋಪಿಗಳು ಸಾಲಗಾರರಿಂದ ಮರುಪಾವತಿಗಾಗಿ ದೇಶದ ವಿವಿಧ ಭಾಗಗಳಲ್ಲಿ ಇನ್ನೂ ನಾಲ್ಕು ಕಾಲ್ ಸೆಂಟರ್‌ಗಳನ್ನು ಸ್ಥಾಪಿಸಿದ್ದಾರೆ. ಅವುಗಳ ಪಟ್ಟಿ ಹೀಗಿದೆ, ಗೋವಾದಲ್ಲಿ ನೋಂದಾಯಿಸಿದ ಆದರೆ ಗುರ್‌ಗಾಂವ್‌ನಲ್ಲಿರುವ ಟೋಪ್‌ಫನ್ ಟೆಕ್ನೋಲಜಿ ‌ಪ್ರೈ.ಲಿ ಮತ್ತು ಫಾಸ್‌ಮೆಟ್ ಟೆಕ್ನೋಲಜಿ ಪ್ರೈ.ಲಿ, ಹಾಗೂ ಹೈದರಾಬಾದ್‌ನಲ್ಲಿರುವ ಕ್ಯೂಬೆವೊ ಟೆಕ್ನಾಲಜಿ ಪ್ರೈ.ಲಿ ಮತ್ತು ಬೆಸ್ಟ್ ಶೈನ್ ಟೆಕ್ನೋಲಜಿ ಪ್ರೈ.ಲಿ. ಇಷ್ಟೇ ಅಲ್ಲದೆ ದಕ್ಷಿಣ ಭಾರತದಲ್ಲೂ ಇವರಿಗೆ ಕಾಲ್‌ಸೆಂಟರ್‌ಗಳಿವೆ ಎನ್ನಾಗಿದೆ.

ಇತ್ತೀಗಷ್ಟೆ ತ್ವರಿತ ಮತ್ತು ಯಾವುದೆ ಕಿರಿಕಿರಿಯಿಲ್ಲದ ಪ್ರಕ್ರಿಯೆಯ ಮೂಲಕ ಸಾಲ ನೀಡುತ್ತೆವೆಂದು ಭರವಸೆ ನೀಡುವ ಅನಧೀಕೃತ ಡಿಜಿಟಲ್ ಫ್ಲಾಟ್‌ಫಾರ್ಮ್‌ ಅಥವಾ ಮೊಬೈಲ್ ಅಪ್ಲಿಕೇಶನ್‌ಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಹೇಳಿತ್ತು. ಆರ್‌ಬಿಐ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯಲ್ಲಿ ತ್ವರಿತ ಸಾಲ ಪಡೆಯುವ ಪ್ರಕ್ರಿಯೆಯಲ್ಲಿ ಜನರು ಡಿಜಿಟಲ್ ಲೆಂಡಿಂಗ್ ಹಗರಣಕ್ಕೆ ಬಲಿಯಾಗುತ್ತಿದ್ದಾರೆ ಎಂದು ಹೇಳಿತ್ತು.

ಇದನ್ನೂ ಓದಿ: ಸಾಲ ನೀಡುವ ಅನಧೀಕೃತ ಡಿಜಿಟಲ್ ಫ್ಲಾಟ್‌ಫಾರ್ಮ್‌ಗಳ ಬಗ್ಗೆ ಎಚ್ಚರಿಕೆ ನೀಡಿದ ಆರ್‌‌ಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...