Homeಮುಖಪುಟತ್ವರಿತ ಸಾಲ ನೀಡುವ ಆ್ಯಪ್‌ಗಳ ವಂಚನೆ: ಚೀನಿ ಪ್ರಜೆ ಸೇರಿದಂತೆ ಒಟ್ಟು ನಾಲ್ಕು ಜನರ ಬಂಧನ

ತ್ವರಿತ ಸಾಲ ನೀಡುವ ಆ್ಯಪ್‌ಗಳ ವಂಚನೆ: ಚೀನಿ ಪ್ರಜೆ ಸೇರಿದಂತೆ ಒಟ್ಟು ನಾಲ್ಕು ಜನರ ಬಂಧನ

ಆರೋಪಿಗಳು ತಮ್ಮ ಸಾಲ ನೀಡುವ ಅಪ್ಲಿಕೇಷನ್‌ ಅನ್ನು ಸಾಲಗಾರರ ಸಂಪರ್ಕದಲ್ಲಿರುವವರ ಫೋನ್ ಸಂಖ್ಯೆ ಸೇರಿದಂತೆ ಇತರ ಮೊಬೈಲ್ ಮಾಹಿತಿಗಳನ್ನು ಕೂಡಾ ಪಡೆಯುವಂತೆ ಅಭಿವೃದ್ದಿಪಡಿಸಿದ್ದರು.

- Advertisement -
- Advertisement -

ತ್ವರಿತ ಸಾಲ ನೀಡುವ ಆ್ಯಪ್‌ಗಳ ವಂಚನೆ ಪ್ರಕರಣದಲ್ಲಿ ಚೀನಾದ ಪ್ರಜೆ ಸೇರಿದಂತೆ ಒಟ್ಟು ನಾಲ್ಕು ಜನರನ್ನು ತೆಲಂಗಾಣದ ಸೈಬರಾಬಾದ್‌‌ನಲ್ಲಿ ಬಂಧಿಸಲಾಗಿದೆ. ಚೀನಾ ಪ್ರಜೆಯ ನೇತೃತ್ವದಲ್ಲಿ ನಡೆಯುತ್ತಿದ್ದ “ಕ್ಯೂಬೆವೊ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್” (ಸ್ಕೈಲೈನ್) ಎಂಬ ಕಾಲ್ ಸೆಂಟರ್‌ ಮೇಲೆ ಸೈಬರಾಬಾದ್‌ನ ಸೈಬರ್‌ ಅಪರಾಧ ಪೊಲೀಸರು ದಾಳಿ ನಡೆಸಿದ್ದರು.

ಇದರ ಮುಖ್ಯ ಕಚೇರಿ “ಸ್ಕೈಲೈನ್ ಇನ್ನೋವೇಶನ್ಸ್ ಟೆಕ್ನಾಲಜೀಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್” ಎಂಬ ಹೆಸರಿನಲ್ಲಿದ್ದು, ದೆಹಲಿಯಲ್ಲಿದೆ. ಜಿಕ್ಸಿಯಾ ಜಾಂಗ್ ಮತ್ತು ಉಮಾಪತಿ ಅಜಯ್ ಎಂಬವರು ಇದರ ನಿರ್ದೇಶಕರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರ ಮತ್ತು ಆರ್‌ಬಿಐ ನಡುವಿನ ಸಂಘರ್ಷ

ಇವರು ಒಟ್ಟು 11 ರೀತಿಯ ತ್ವರಿತ ಸಾಲಗಳನ್ನು ನೀಡುತ್ತಿದ್ದು, ಭಾರಿ ಮರುಪಾವತಿಯನ್ನು ಪಡೆಯುತ್ತಿದ್ದರು. ಸಾಲ ಪಾವತಿಸದ ಸಾಲಗಾರರಿಗೆ ತಾವು ನಡೆಸುತ್ತಿದ್ದ ಕಾಲ್ ಸೆಂಟರ್‌ಗಳ ಮೂಲಕ ವ್ಯವಸ್ಥಿತವಾಗಿ ನಿಂದನೆ, ಕಿರುಕುಳ, ಬೆದರಿಕೆಗಳನ್ನು ಹಾಕುತ್ತಿದ್ದರು. ಅಲ್ಲದೆ ಸಾಲ ಪಡೆದವರ ಸಂಬಂಧಿಕರು ಮತ್ತು ಕುಟುಂಬ ಸದಸ್ಯರಿಗೆ ನಕಲಿ ಕಾನೂನು ನೋಟಿಸ್ ಕಳುಹಿಸಿ ಸಾಲಗಾರರನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ತಮ್ಮ ಸಾಲ ನೀಡುವ ಅಪ್ಲಿಕೇಷನ್‌ ಅನ್ನು ಸಾಲಗಾರರ ಸಂಪರ್ಕದಲ್ಲಿರುವವರ ಫೋನ್ ಸಂಖ್ಯೆ ಸೇರಿದಂತೆ ಇತರ ಮೊಬೈಲ್ ಮಾಹಿತಿಗಳನ್ನು ಕೂಡಾ ಪಡೆಯುವಂತೆ ಅಭಿವೃದ್ದಿಪಡಿಸಿದ್ದರು. ಅಲ್ಲದೆ ಇದು ಗ್ರಾಹಕರ ಐಡಿ ಪ್ರೂಫ್‌‌, ಪ್ಯಾನ್ ಕಾರ್ಡ್, ಕೆವೈಸಿ ದಾಖಲೆ, ಬ್ಯಾಂಕ್ ಖಾತೆಗಳು ಸೇರಿದಂತೆ ಹಲವು ವಿವರಗಳನ್ನು ಸಂಗ್ರಹಿಸುತ್ತದೆ.

ಇದನ್ನೂ ಓದಿ: ಬ್ರಾಂಡ್ ವಾಷ್ಡ್ ಬಿರಿಯಾನಿ; ಬಿತ್ತದೆ ಬೆಳೆಯದೆ ಕಂಪನಿಗಳಿಗೆ ಏಕಸ್ವಾಮ್ಯ ಹೊಂದಲು ಅವಕಾಶ ಕೊಡುವ ಕೃಷಿ ಕಾನೂನುಗಳು

ಆರೋಪಿಗಳು ಸಾಲಗಾರರಿಂದ ಮರುಪಾವತಿಗಾಗಿ ದೇಶದ ವಿವಿಧ ಭಾಗಗಳಲ್ಲಿ ಇನ್ನೂ ನಾಲ್ಕು ಕಾಲ್ ಸೆಂಟರ್‌ಗಳನ್ನು ಸ್ಥಾಪಿಸಿದ್ದಾರೆ. ಅವುಗಳ ಪಟ್ಟಿ ಹೀಗಿದೆ, ಗೋವಾದಲ್ಲಿ ನೋಂದಾಯಿಸಿದ ಆದರೆ ಗುರ್‌ಗಾಂವ್‌ನಲ್ಲಿರುವ ಟೋಪ್‌ಫನ್ ಟೆಕ್ನೋಲಜಿ ‌ಪ್ರೈ.ಲಿ ಮತ್ತು ಫಾಸ್‌ಮೆಟ್ ಟೆಕ್ನೋಲಜಿ ಪ್ರೈ.ಲಿ, ಹಾಗೂ ಹೈದರಾಬಾದ್‌ನಲ್ಲಿರುವ ಕ್ಯೂಬೆವೊ ಟೆಕ್ನಾಲಜಿ ಪ್ರೈ.ಲಿ ಮತ್ತು ಬೆಸ್ಟ್ ಶೈನ್ ಟೆಕ್ನೋಲಜಿ ಪ್ರೈ.ಲಿ. ಇಷ್ಟೇ ಅಲ್ಲದೆ ದಕ್ಷಿಣ ಭಾರತದಲ್ಲೂ ಇವರಿಗೆ ಕಾಲ್‌ಸೆಂಟರ್‌ಗಳಿವೆ ಎನ್ನಾಗಿದೆ.

ಇತ್ತೀಗಷ್ಟೆ ತ್ವರಿತ ಮತ್ತು ಯಾವುದೆ ಕಿರಿಕಿರಿಯಿಲ್ಲದ ಪ್ರಕ್ರಿಯೆಯ ಮೂಲಕ ಸಾಲ ನೀಡುತ್ತೆವೆಂದು ಭರವಸೆ ನೀಡುವ ಅನಧೀಕೃತ ಡಿಜಿಟಲ್ ಫ್ಲಾಟ್‌ಫಾರ್ಮ್‌ ಅಥವಾ ಮೊಬೈಲ್ ಅಪ್ಲಿಕೇಶನ್‌ಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಹೇಳಿತ್ತು. ಆರ್‌ಬಿಐ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯಲ್ಲಿ ತ್ವರಿತ ಸಾಲ ಪಡೆಯುವ ಪ್ರಕ್ರಿಯೆಯಲ್ಲಿ ಜನರು ಡಿಜಿಟಲ್ ಲೆಂಡಿಂಗ್ ಹಗರಣಕ್ಕೆ ಬಲಿಯಾಗುತ್ತಿದ್ದಾರೆ ಎಂದು ಹೇಳಿತ್ತು.

ಇದನ್ನೂ ಓದಿ: ಸಾಲ ನೀಡುವ ಅನಧೀಕೃತ ಡಿಜಿಟಲ್ ಫ್ಲಾಟ್‌ಫಾರ್ಮ್‌ಗಳ ಬಗ್ಗೆ ಎಚ್ಚರಿಕೆ ನೀಡಿದ ಆರ್‌‌ಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...