Homeಮುಖಪುಟತ್ವರಿತ ಸಾಲ ನೀಡುವ ಆ್ಯಪ್‌ಗಳ ವಂಚನೆ: ಚೀನಿ ಪ್ರಜೆ ಸೇರಿದಂತೆ ಒಟ್ಟು ನಾಲ್ಕು ಜನರ ಬಂಧನ

ತ್ವರಿತ ಸಾಲ ನೀಡುವ ಆ್ಯಪ್‌ಗಳ ವಂಚನೆ: ಚೀನಿ ಪ್ರಜೆ ಸೇರಿದಂತೆ ಒಟ್ಟು ನಾಲ್ಕು ಜನರ ಬಂಧನ

ಆರೋಪಿಗಳು ತಮ್ಮ ಸಾಲ ನೀಡುವ ಅಪ್ಲಿಕೇಷನ್‌ ಅನ್ನು ಸಾಲಗಾರರ ಸಂಪರ್ಕದಲ್ಲಿರುವವರ ಫೋನ್ ಸಂಖ್ಯೆ ಸೇರಿದಂತೆ ಇತರ ಮೊಬೈಲ್ ಮಾಹಿತಿಗಳನ್ನು ಕೂಡಾ ಪಡೆಯುವಂತೆ ಅಭಿವೃದ್ದಿಪಡಿಸಿದ್ದರು.

- Advertisement -
- Advertisement -

ತ್ವರಿತ ಸಾಲ ನೀಡುವ ಆ್ಯಪ್‌ಗಳ ವಂಚನೆ ಪ್ರಕರಣದಲ್ಲಿ ಚೀನಾದ ಪ್ರಜೆ ಸೇರಿದಂತೆ ಒಟ್ಟು ನಾಲ್ಕು ಜನರನ್ನು ತೆಲಂಗಾಣದ ಸೈಬರಾಬಾದ್‌‌ನಲ್ಲಿ ಬಂಧಿಸಲಾಗಿದೆ. ಚೀನಾ ಪ್ರಜೆಯ ನೇತೃತ್ವದಲ್ಲಿ ನಡೆಯುತ್ತಿದ್ದ “ಕ್ಯೂಬೆವೊ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್” (ಸ್ಕೈಲೈನ್) ಎಂಬ ಕಾಲ್ ಸೆಂಟರ್‌ ಮೇಲೆ ಸೈಬರಾಬಾದ್‌ನ ಸೈಬರ್‌ ಅಪರಾಧ ಪೊಲೀಸರು ದಾಳಿ ನಡೆಸಿದ್ದರು.

ಇದರ ಮುಖ್ಯ ಕಚೇರಿ “ಸ್ಕೈಲೈನ್ ಇನ್ನೋವೇಶನ್ಸ್ ಟೆಕ್ನಾಲಜೀಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್” ಎಂಬ ಹೆಸರಿನಲ್ಲಿದ್ದು, ದೆಹಲಿಯಲ್ಲಿದೆ. ಜಿಕ್ಸಿಯಾ ಜಾಂಗ್ ಮತ್ತು ಉಮಾಪತಿ ಅಜಯ್ ಎಂಬವರು ಇದರ ನಿರ್ದೇಶಕರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರ ಮತ್ತು ಆರ್‌ಬಿಐ ನಡುವಿನ ಸಂಘರ್ಷ

ಇವರು ಒಟ್ಟು 11 ರೀತಿಯ ತ್ವರಿತ ಸಾಲಗಳನ್ನು ನೀಡುತ್ತಿದ್ದು, ಭಾರಿ ಮರುಪಾವತಿಯನ್ನು ಪಡೆಯುತ್ತಿದ್ದರು. ಸಾಲ ಪಾವತಿಸದ ಸಾಲಗಾರರಿಗೆ ತಾವು ನಡೆಸುತ್ತಿದ್ದ ಕಾಲ್ ಸೆಂಟರ್‌ಗಳ ಮೂಲಕ ವ್ಯವಸ್ಥಿತವಾಗಿ ನಿಂದನೆ, ಕಿರುಕುಳ, ಬೆದರಿಕೆಗಳನ್ನು ಹಾಕುತ್ತಿದ್ದರು. ಅಲ್ಲದೆ ಸಾಲ ಪಡೆದವರ ಸಂಬಂಧಿಕರು ಮತ್ತು ಕುಟುಂಬ ಸದಸ್ಯರಿಗೆ ನಕಲಿ ಕಾನೂನು ನೋಟಿಸ್ ಕಳುಹಿಸಿ ಸಾಲಗಾರರನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ತಮ್ಮ ಸಾಲ ನೀಡುವ ಅಪ್ಲಿಕೇಷನ್‌ ಅನ್ನು ಸಾಲಗಾರರ ಸಂಪರ್ಕದಲ್ಲಿರುವವರ ಫೋನ್ ಸಂಖ್ಯೆ ಸೇರಿದಂತೆ ಇತರ ಮೊಬೈಲ್ ಮಾಹಿತಿಗಳನ್ನು ಕೂಡಾ ಪಡೆಯುವಂತೆ ಅಭಿವೃದ್ದಿಪಡಿಸಿದ್ದರು. ಅಲ್ಲದೆ ಇದು ಗ್ರಾಹಕರ ಐಡಿ ಪ್ರೂಫ್‌‌, ಪ್ಯಾನ್ ಕಾರ್ಡ್, ಕೆವೈಸಿ ದಾಖಲೆ, ಬ್ಯಾಂಕ್ ಖಾತೆಗಳು ಸೇರಿದಂತೆ ಹಲವು ವಿವರಗಳನ್ನು ಸಂಗ್ರಹಿಸುತ್ತದೆ.

ಇದನ್ನೂ ಓದಿ: ಬ್ರಾಂಡ್ ವಾಷ್ಡ್ ಬಿರಿಯಾನಿ; ಬಿತ್ತದೆ ಬೆಳೆಯದೆ ಕಂಪನಿಗಳಿಗೆ ಏಕಸ್ವಾಮ್ಯ ಹೊಂದಲು ಅವಕಾಶ ಕೊಡುವ ಕೃಷಿ ಕಾನೂನುಗಳು

ಆರೋಪಿಗಳು ಸಾಲಗಾರರಿಂದ ಮರುಪಾವತಿಗಾಗಿ ದೇಶದ ವಿವಿಧ ಭಾಗಗಳಲ್ಲಿ ಇನ್ನೂ ನಾಲ್ಕು ಕಾಲ್ ಸೆಂಟರ್‌ಗಳನ್ನು ಸ್ಥಾಪಿಸಿದ್ದಾರೆ. ಅವುಗಳ ಪಟ್ಟಿ ಹೀಗಿದೆ, ಗೋವಾದಲ್ಲಿ ನೋಂದಾಯಿಸಿದ ಆದರೆ ಗುರ್‌ಗಾಂವ್‌ನಲ್ಲಿರುವ ಟೋಪ್‌ಫನ್ ಟೆಕ್ನೋಲಜಿ ‌ಪ್ರೈ.ಲಿ ಮತ್ತು ಫಾಸ್‌ಮೆಟ್ ಟೆಕ್ನೋಲಜಿ ಪ್ರೈ.ಲಿ, ಹಾಗೂ ಹೈದರಾಬಾದ್‌ನಲ್ಲಿರುವ ಕ್ಯೂಬೆವೊ ಟೆಕ್ನಾಲಜಿ ಪ್ರೈ.ಲಿ ಮತ್ತು ಬೆಸ್ಟ್ ಶೈನ್ ಟೆಕ್ನೋಲಜಿ ಪ್ರೈ.ಲಿ. ಇಷ್ಟೇ ಅಲ್ಲದೆ ದಕ್ಷಿಣ ಭಾರತದಲ್ಲೂ ಇವರಿಗೆ ಕಾಲ್‌ಸೆಂಟರ್‌ಗಳಿವೆ ಎನ್ನಾಗಿದೆ.

ಇತ್ತೀಗಷ್ಟೆ ತ್ವರಿತ ಮತ್ತು ಯಾವುದೆ ಕಿರಿಕಿರಿಯಿಲ್ಲದ ಪ್ರಕ್ರಿಯೆಯ ಮೂಲಕ ಸಾಲ ನೀಡುತ್ತೆವೆಂದು ಭರವಸೆ ನೀಡುವ ಅನಧೀಕೃತ ಡಿಜಿಟಲ್ ಫ್ಲಾಟ್‌ಫಾರ್ಮ್‌ ಅಥವಾ ಮೊಬೈಲ್ ಅಪ್ಲಿಕೇಶನ್‌ಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಹೇಳಿತ್ತು. ಆರ್‌ಬಿಐ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯಲ್ಲಿ ತ್ವರಿತ ಸಾಲ ಪಡೆಯುವ ಪ್ರಕ್ರಿಯೆಯಲ್ಲಿ ಜನರು ಡಿಜಿಟಲ್ ಲೆಂಡಿಂಗ್ ಹಗರಣಕ್ಕೆ ಬಲಿಯಾಗುತ್ತಿದ್ದಾರೆ ಎಂದು ಹೇಳಿತ್ತು.

ಇದನ್ನೂ ಓದಿ: ಸಾಲ ನೀಡುವ ಅನಧೀಕೃತ ಡಿಜಿಟಲ್ ಫ್ಲಾಟ್‌ಫಾರ್ಮ್‌ಗಳ ಬಗ್ಗೆ ಎಚ್ಚರಿಕೆ ನೀಡಿದ ಆರ್‌‌ಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...