Homeಮುಖಪುಟನಕಲಿ ನ್ಯಾಯಾಲಯ ಸೃಷ್ಟಿಸಿ, ಸಿಜೆಐ ರೀತಿ ಸೋಗು ಹಾಕಿ ಉದ್ಯಮಿಗೆ ₹7 ಕೋಟಿ ವಂಚನೆ!

ನಕಲಿ ನ್ಯಾಯಾಲಯ ಸೃಷ್ಟಿಸಿ, ಸಿಜೆಐ ರೀತಿ ಸೋಗು ಹಾಕಿ ಉದ್ಯಮಿಗೆ ₹7 ಕೋಟಿ ವಂಚನೆ!

- Advertisement -
- Advertisement -

ಸೈಬರ್‌ ಅಪರಾಧಿಗಳ ಗುಂಪೊಂದು ನಕಲಿ ವರ್ಚುವಲ್‌ ನ್ಯಾಯಾಲಯ ಸೃಷ್ಟಿಸಿ ಸಿಬಿಐ ಅಧಿಕಾರಿಗಳು ಹಾಗೂ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ್‌ ಅವರಂತೆಯೇ ಸೋಗು ಹಾಕಿ ಜವಳಿ ಉದ್ಯಮಿ ಮತ್ತು ವರ್ಧಮಾನ್ ಸಮೂಹ ಸಂಸ್ಥೆ ಅಧ್ಯಕ್ಷ, ಎಸ್‌ಪಿ ಓಸ್ವಾಲ್ ಅವರಿಗೆ 7 ಕೋಟಿ ರೂಪಾಯಿ ವಂಚಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿದ್ದ ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯೆಲ್‌ ಅವರಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಓಸ್ವಾಲ್ ಅವರು ಶಾಮೀಲಾಗಿದ್ದಾರೆ ಎಂದು ಸಿಬಿಐ ಅಧಿಕಾರಿಗಳ ಸೋಗಿನಲ್ಲಿದ್ದ ವಂಚಕರು ಆರೋಪಿಸಿದ್ದಾರೆ.

ನಕಲಿ ಪಾಸ್‌ಪೋರ್ಟ್‌ ಮತ್ತು ಡೆಬಿಟ್‌ ಕಾರ್ಡ್‌ ಬಳಸಿ ಮಲೇಷ್ಯಾಕ್ಕೆ ಪಾರ್ಸೆಲ್‌ ಕಳಿಸುವುದಕ್ಕಾಗಿ ಓಸ್ವಾಲ್‌ ತಮ್ಮ ಆಧಾರ್‌ ಕಾರ್ಡ್‌ ದುರುಪಯೋಗಪಡಿಸಿಕೊಂಡಿದ್ದಾರೆ ಎಂದೂ ಹೇಳಿ, ನಕಲಿ ಬಂಧನ ವಾರೆಂಟ್‌ಗಳ ಮೂಲಕ ಬೆದರಿಕೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ವಂಚಕರು ವರ್ಚುವಲ್‌ ವಿಧಾನದಲ್ಲಿ ಕರೆ ಮಾಡಿ ಸುಪ್ರೀಂ ಕೋರ್ಟ್‌ ವಿಚಾರಣೆಯನ್ನು ಮರು ಸೃಷ್ಟಿಸಿ ಸಿಜೆಐ  ರೀತಿ ಸೋಗು ಹಾಕಿದ್ದರು. ಅಲ್ಲದೆ ಮುದ್ರೆಯುಳ್ಳ ಸುಪ್ರೀಂ ಕೋರ್ಟ್‌ ಆದೇಶವನ್ನು ಓಸ್ವಾಲ್ ಅವರ ವಾಟ್ಸಾಪ್‌ಗೆ ಕಳುಹಿಸಿ 7 ಕೋಟಿ ರೂಪಾಯಿ ನೀಡುವಂತೆ ಸೂಚಿಸಿದ್ದರು ಎಂದು ವರದಿ ತಿಳಿಸಿದೆ.

“ಸ್ಕೈಪ್‌ ವಿಡಿಯೋ ಕಾನ್ಫರೆನ್ಸ್‌ ಅಪ್ಲಿಕೇಷನ್‌ ಮೂಲಕ ತನ್ನನ್ನು ಸಂಪರ್ಕಿಸಿದ ವಂಚಕರು, ನ್ಯಾ. ಚಂದ್ರಚೂಡ್‌ ಎಂದು ವ್ಯಕ್ತಿಯೊಬ್ಬನನ್ನು ಪರಿಚಯಿಸಿದರು. ಆದರೆ, ಆತನ ಮುಖ ನನಗೆ ಕಾಣುತ್ತಿರಲಿಲ್ಲ. ಬದಲಿಗೆ ಆತ ಮಾತನಾಡುವುದು ಮತ್ತು ಮೇಜಿನ ಮೇಲೆ ಸುತ್ತಿಗೆ ಬಡಿಯುವುದು ಕೇಳಿಸಿತು. ಅವರು ಕೊಟ್ಟ ನಕಲಿ ಲಿಖಿತ ಸುಪ್ರೀಂ ಕೋರ್ಟ್‌ ಆದೇಶ ಎಷ್ಟು ಪರಿಪೂರ್ಣವಾಗಿತ್ತೆಂದರೆ, ಅದು ನಿಜವೆಂದೇ ನಂಬಿ ಹಣ ವರ್ಗಾಯಿಸಿದೆ. ನ್ಯಾ. ಡಿವೈ ಚಂದ್ರಚೂಡ್ ಮತ್ತು ಶ್ರೀಪಾಲ್ ಓಸ್ವಾಲ್ ನಡುವಣ ಪ್ರಕರಣ ಎಂದು ಉಲ್ಲೇಖಿಸಿರುವ ಸುಪ್ರೀಂ ಕೋರ್ಟ್‌ನ ಕೆಲ ನಕಲಿ ದಾಖಲೆಗಳನ್ನು ಕೂಡ ವಂಚಕರು ತನಗೆ ಕಳಿಸಿಕೊಟ್ಟಿದ್ದಾರೆ” ಎಂದು ಓಸ್ವಾಲ್‌ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ತಮ್ಮ ಕಂಪೆನಿಯ ಹಿರಿಯ ಸದಸ್ಯರೊಬ್ಬರು ಪ್ರಕರಣದ ವಿವರಗಳಲ್ಲಿ ತಪ್ಪು ಇರುವುದನ್ನು ತಿಳಿಸಿದಾಗ ಓಸ್ವಾಲ್ ಪೊಲೀಸರನ್ನು ಸಂಪರ್ಕಿಸಿದ್ದಾರೆ ಎಂದು ವರದಿ ವಿವರಿಸಿದೆ.

ಈ ಮಧ್ಯೆ ಘಟನೆ ಕುರಿತಂತೆ ಎಫ್‌ಐಆರ್‌ ದಾಖಲಿಸಿಕೊಂಡಿದ್ದ ಪೊಲೀಸರು ಅಂತಾರಾಜ್ಯ ವಂಚಕರ ಗುಂಪಿನ ಇಬ್ಬರನ್ನು ಬಂಧಿಸಿದ್ದಾರೆ. ವಂಚಿಸಲಾಗಿದ್ದ 5.25 ಕೋಟಿ ರೂಪಾಯಿ ಮೊತ್ತವನ್ನು ಈವರೆಗೆ ಮರಳಿ ಪಡೆದಿರುವ ಅಧಿಕಾರಿಗಳು, ಹಣವನ್ನು ಓಸ್ವಾಲ್ ಅವರ ಬ್ಯಾಂಕ್‌ ಖಾತೆಗೆ ಮರಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಅಸ್ಸಾಂ, ಪಶ್ಚಿಮ ಬಂಗಾಳ ಹಾಗೂ ದೆಹಲಿಯಲ್ಲಿ ವಂಚಕರ ಗ್ಯಾಂಗ್ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿರುವ ಅಧಿಕಾರಿಗಳು, ಇನ್ನೂ ಏಳು ಶಂಕಿತರಿಗಾಗಿ ಶೋಧ ಮುಂದುವರೆಸಿದ್ದಾರೆ.

ಇದನ್ನೂ ಓದಿ : ಪ್ರತಿ ಗರ್ಬಾ ಪೆಂಡಾಲ್ ಪ್ರವೇಶದಲ್ಲಿ ದನದ ಮೂತ್ರ ನೀಡಿ | ಇಂದೋರ್ ಬಿಜೆಪಿ ಅಧ್ಯಕ್ಷನ ವಿಲಕ್ಷಣ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...