Homeಮುಖಪುಟನಕಲಿ ನ್ಯಾಯಾಲಯ ಸೃಷ್ಟಿಸಿ, ಸಿಜೆಐ ರೀತಿ ಸೋಗು ಹಾಕಿ ಉದ್ಯಮಿಗೆ ₹7 ಕೋಟಿ ವಂಚನೆ!

ನಕಲಿ ನ್ಯಾಯಾಲಯ ಸೃಷ್ಟಿಸಿ, ಸಿಜೆಐ ರೀತಿ ಸೋಗು ಹಾಕಿ ಉದ್ಯಮಿಗೆ ₹7 ಕೋಟಿ ವಂಚನೆ!

- Advertisement -
- Advertisement -

ಸೈಬರ್‌ ಅಪರಾಧಿಗಳ ಗುಂಪೊಂದು ನಕಲಿ ವರ್ಚುವಲ್‌ ನ್ಯಾಯಾಲಯ ಸೃಷ್ಟಿಸಿ ಸಿಬಿಐ ಅಧಿಕಾರಿಗಳು ಹಾಗೂ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ್‌ ಅವರಂತೆಯೇ ಸೋಗು ಹಾಕಿ ಜವಳಿ ಉದ್ಯಮಿ ಮತ್ತು ವರ್ಧಮಾನ್ ಸಮೂಹ ಸಂಸ್ಥೆ ಅಧ್ಯಕ್ಷ, ಎಸ್‌ಪಿ ಓಸ್ವಾಲ್ ಅವರಿಗೆ 7 ಕೋಟಿ ರೂಪಾಯಿ ವಂಚಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿದ್ದ ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯೆಲ್‌ ಅವರಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಓಸ್ವಾಲ್ ಅವರು ಶಾಮೀಲಾಗಿದ್ದಾರೆ ಎಂದು ಸಿಬಿಐ ಅಧಿಕಾರಿಗಳ ಸೋಗಿನಲ್ಲಿದ್ದ ವಂಚಕರು ಆರೋಪಿಸಿದ್ದಾರೆ.

ನಕಲಿ ಪಾಸ್‌ಪೋರ್ಟ್‌ ಮತ್ತು ಡೆಬಿಟ್‌ ಕಾರ್ಡ್‌ ಬಳಸಿ ಮಲೇಷ್ಯಾಕ್ಕೆ ಪಾರ್ಸೆಲ್‌ ಕಳಿಸುವುದಕ್ಕಾಗಿ ಓಸ್ವಾಲ್‌ ತಮ್ಮ ಆಧಾರ್‌ ಕಾರ್ಡ್‌ ದುರುಪಯೋಗಪಡಿಸಿಕೊಂಡಿದ್ದಾರೆ ಎಂದೂ ಹೇಳಿ, ನಕಲಿ ಬಂಧನ ವಾರೆಂಟ್‌ಗಳ ಮೂಲಕ ಬೆದರಿಕೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ವಂಚಕರು ವರ್ಚುವಲ್‌ ವಿಧಾನದಲ್ಲಿ ಕರೆ ಮಾಡಿ ಸುಪ್ರೀಂ ಕೋರ್ಟ್‌ ವಿಚಾರಣೆಯನ್ನು ಮರು ಸೃಷ್ಟಿಸಿ ಸಿಜೆಐ  ರೀತಿ ಸೋಗು ಹಾಕಿದ್ದರು. ಅಲ್ಲದೆ ಮುದ್ರೆಯುಳ್ಳ ಸುಪ್ರೀಂ ಕೋರ್ಟ್‌ ಆದೇಶವನ್ನು ಓಸ್ವಾಲ್ ಅವರ ವಾಟ್ಸಾಪ್‌ಗೆ ಕಳುಹಿಸಿ 7 ಕೋಟಿ ರೂಪಾಯಿ ನೀಡುವಂತೆ ಸೂಚಿಸಿದ್ದರು ಎಂದು ವರದಿ ತಿಳಿಸಿದೆ.

“ಸ್ಕೈಪ್‌ ವಿಡಿಯೋ ಕಾನ್ಫರೆನ್ಸ್‌ ಅಪ್ಲಿಕೇಷನ್‌ ಮೂಲಕ ತನ್ನನ್ನು ಸಂಪರ್ಕಿಸಿದ ವಂಚಕರು, ನ್ಯಾ. ಚಂದ್ರಚೂಡ್‌ ಎಂದು ವ್ಯಕ್ತಿಯೊಬ್ಬನನ್ನು ಪರಿಚಯಿಸಿದರು. ಆದರೆ, ಆತನ ಮುಖ ನನಗೆ ಕಾಣುತ್ತಿರಲಿಲ್ಲ. ಬದಲಿಗೆ ಆತ ಮಾತನಾಡುವುದು ಮತ್ತು ಮೇಜಿನ ಮೇಲೆ ಸುತ್ತಿಗೆ ಬಡಿಯುವುದು ಕೇಳಿಸಿತು. ಅವರು ಕೊಟ್ಟ ನಕಲಿ ಲಿಖಿತ ಸುಪ್ರೀಂ ಕೋರ್ಟ್‌ ಆದೇಶ ಎಷ್ಟು ಪರಿಪೂರ್ಣವಾಗಿತ್ತೆಂದರೆ, ಅದು ನಿಜವೆಂದೇ ನಂಬಿ ಹಣ ವರ್ಗಾಯಿಸಿದೆ. ನ್ಯಾ. ಡಿವೈ ಚಂದ್ರಚೂಡ್ ಮತ್ತು ಶ್ರೀಪಾಲ್ ಓಸ್ವಾಲ್ ನಡುವಣ ಪ್ರಕರಣ ಎಂದು ಉಲ್ಲೇಖಿಸಿರುವ ಸುಪ್ರೀಂ ಕೋರ್ಟ್‌ನ ಕೆಲ ನಕಲಿ ದಾಖಲೆಗಳನ್ನು ಕೂಡ ವಂಚಕರು ತನಗೆ ಕಳಿಸಿಕೊಟ್ಟಿದ್ದಾರೆ” ಎಂದು ಓಸ್ವಾಲ್‌ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ತಮ್ಮ ಕಂಪೆನಿಯ ಹಿರಿಯ ಸದಸ್ಯರೊಬ್ಬರು ಪ್ರಕರಣದ ವಿವರಗಳಲ್ಲಿ ತಪ್ಪು ಇರುವುದನ್ನು ತಿಳಿಸಿದಾಗ ಓಸ್ವಾಲ್ ಪೊಲೀಸರನ್ನು ಸಂಪರ್ಕಿಸಿದ್ದಾರೆ ಎಂದು ವರದಿ ವಿವರಿಸಿದೆ.

ಈ ಮಧ್ಯೆ ಘಟನೆ ಕುರಿತಂತೆ ಎಫ್‌ಐಆರ್‌ ದಾಖಲಿಸಿಕೊಂಡಿದ್ದ ಪೊಲೀಸರು ಅಂತಾರಾಜ್ಯ ವಂಚಕರ ಗುಂಪಿನ ಇಬ್ಬರನ್ನು ಬಂಧಿಸಿದ್ದಾರೆ. ವಂಚಿಸಲಾಗಿದ್ದ 5.25 ಕೋಟಿ ರೂಪಾಯಿ ಮೊತ್ತವನ್ನು ಈವರೆಗೆ ಮರಳಿ ಪಡೆದಿರುವ ಅಧಿಕಾರಿಗಳು, ಹಣವನ್ನು ಓಸ್ವಾಲ್ ಅವರ ಬ್ಯಾಂಕ್‌ ಖಾತೆಗೆ ಮರಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಅಸ್ಸಾಂ, ಪಶ್ಚಿಮ ಬಂಗಾಳ ಹಾಗೂ ದೆಹಲಿಯಲ್ಲಿ ವಂಚಕರ ಗ್ಯಾಂಗ್ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿರುವ ಅಧಿಕಾರಿಗಳು, ಇನ್ನೂ ಏಳು ಶಂಕಿತರಿಗಾಗಿ ಶೋಧ ಮುಂದುವರೆಸಿದ್ದಾರೆ.

ಇದನ್ನೂ ಓದಿ : ಪ್ರತಿ ಗರ್ಬಾ ಪೆಂಡಾಲ್ ಪ್ರವೇಶದಲ್ಲಿ ದನದ ಮೂತ್ರ ನೀಡಿ | ಇಂದೋರ್ ಬಿಜೆಪಿ ಅಧ್ಯಕ್ಷನ ವಿಲಕ್ಷಣ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...