Homeಮುಖಪುಟನಕಲಿ ನ್ಯಾಯಾಲಯ ಸೃಷ್ಟಿಸಿ, ಸಿಜೆಐ ರೀತಿ ಸೋಗು ಹಾಕಿ ಉದ್ಯಮಿಗೆ ₹7 ಕೋಟಿ ವಂಚನೆ!

ನಕಲಿ ನ್ಯಾಯಾಲಯ ಸೃಷ್ಟಿಸಿ, ಸಿಜೆಐ ರೀತಿ ಸೋಗು ಹಾಕಿ ಉದ್ಯಮಿಗೆ ₹7 ಕೋಟಿ ವಂಚನೆ!

- Advertisement -
- Advertisement -

ಸೈಬರ್‌ ಅಪರಾಧಿಗಳ ಗುಂಪೊಂದು ನಕಲಿ ವರ್ಚುವಲ್‌ ನ್ಯಾಯಾಲಯ ಸೃಷ್ಟಿಸಿ ಸಿಬಿಐ ಅಧಿಕಾರಿಗಳು ಹಾಗೂ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ್‌ ಅವರಂತೆಯೇ ಸೋಗು ಹಾಕಿ ಜವಳಿ ಉದ್ಯಮಿ ಮತ್ತು ವರ್ಧಮಾನ್ ಸಮೂಹ ಸಂಸ್ಥೆ ಅಧ್ಯಕ್ಷ, ಎಸ್‌ಪಿ ಓಸ್ವಾಲ್ ಅವರಿಗೆ 7 ಕೋಟಿ ರೂಪಾಯಿ ವಂಚಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿದ್ದ ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯೆಲ್‌ ಅವರಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಓಸ್ವಾಲ್ ಅವರು ಶಾಮೀಲಾಗಿದ್ದಾರೆ ಎಂದು ಸಿಬಿಐ ಅಧಿಕಾರಿಗಳ ಸೋಗಿನಲ್ಲಿದ್ದ ವಂಚಕರು ಆರೋಪಿಸಿದ್ದಾರೆ.

ನಕಲಿ ಪಾಸ್‌ಪೋರ್ಟ್‌ ಮತ್ತು ಡೆಬಿಟ್‌ ಕಾರ್ಡ್‌ ಬಳಸಿ ಮಲೇಷ್ಯಾಕ್ಕೆ ಪಾರ್ಸೆಲ್‌ ಕಳಿಸುವುದಕ್ಕಾಗಿ ಓಸ್ವಾಲ್‌ ತಮ್ಮ ಆಧಾರ್‌ ಕಾರ್ಡ್‌ ದುರುಪಯೋಗಪಡಿಸಿಕೊಂಡಿದ್ದಾರೆ ಎಂದೂ ಹೇಳಿ, ನಕಲಿ ಬಂಧನ ವಾರೆಂಟ್‌ಗಳ ಮೂಲಕ ಬೆದರಿಕೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ವಂಚಕರು ವರ್ಚುವಲ್‌ ವಿಧಾನದಲ್ಲಿ ಕರೆ ಮಾಡಿ ಸುಪ್ರೀಂ ಕೋರ್ಟ್‌ ವಿಚಾರಣೆಯನ್ನು ಮರು ಸೃಷ್ಟಿಸಿ ಸಿಜೆಐ  ರೀತಿ ಸೋಗು ಹಾಕಿದ್ದರು. ಅಲ್ಲದೆ ಮುದ್ರೆಯುಳ್ಳ ಸುಪ್ರೀಂ ಕೋರ್ಟ್‌ ಆದೇಶವನ್ನು ಓಸ್ವಾಲ್ ಅವರ ವಾಟ್ಸಾಪ್‌ಗೆ ಕಳುಹಿಸಿ 7 ಕೋಟಿ ರೂಪಾಯಿ ನೀಡುವಂತೆ ಸೂಚಿಸಿದ್ದರು ಎಂದು ವರದಿ ತಿಳಿಸಿದೆ.

“ಸ್ಕೈಪ್‌ ವಿಡಿಯೋ ಕಾನ್ಫರೆನ್ಸ್‌ ಅಪ್ಲಿಕೇಷನ್‌ ಮೂಲಕ ತನ್ನನ್ನು ಸಂಪರ್ಕಿಸಿದ ವಂಚಕರು, ನ್ಯಾ. ಚಂದ್ರಚೂಡ್‌ ಎಂದು ವ್ಯಕ್ತಿಯೊಬ್ಬನನ್ನು ಪರಿಚಯಿಸಿದರು. ಆದರೆ, ಆತನ ಮುಖ ನನಗೆ ಕಾಣುತ್ತಿರಲಿಲ್ಲ. ಬದಲಿಗೆ ಆತ ಮಾತನಾಡುವುದು ಮತ್ತು ಮೇಜಿನ ಮೇಲೆ ಸುತ್ತಿಗೆ ಬಡಿಯುವುದು ಕೇಳಿಸಿತು. ಅವರು ಕೊಟ್ಟ ನಕಲಿ ಲಿಖಿತ ಸುಪ್ರೀಂ ಕೋರ್ಟ್‌ ಆದೇಶ ಎಷ್ಟು ಪರಿಪೂರ್ಣವಾಗಿತ್ತೆಂದರೆ, ಅದು ನಿಜವೆಂದೇ ನಂಬಿ ಹಣ ವರ್ಗಾಯಿಸಿದೆ. ನ್ಯಾ. ಡಿವೈ ಚಂದ್ರಚೂಡ್ ಮತ್ತು ಶ್ರೀಪಾಲ್ ಓಸ್ವಾಲ್ ನಡುವಣ ಪ್ರಕರಣ ಎಂದು ಉಲ್ಲೇಖಿಸಿರುವ ಸುಪ್ರೀಂ ಕೋರ್ಟ್‌ನ ಕೆಲ ನಕಲಿ ದಾಖಲೆಗಳನ್ನು ಕೂಡ ವಂಚಕರು ತನಗೆ ಕಳಿಸಿಕೊಟ್ಟಿದ್ದಾರೆ” ಎಂದು ಓಸ್ವಾಲ್‌ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ತಮ್ಮ ಕಂಪೆನಿಯ ಹಿರಿಯ ಸದಸ್ಯರೊಬ್ಬರು ಪ್ರಕರಣದ ವಿವರಗಳಲ್ಲಿ ತಪ್ಪು ಇರುವುದನ್ನು ತಿಳಿಸಿದಾಗ ಓಸ್ವಾಲ್ ಪೊಲೀಸರನ್ನು ಸಂಪರ್ಕಿಸಿದ್ದಾರೆ ಎಂದು ವರದಿ ವಿವರಿಸಿದೆ.

ಈ ಮಧ್ಯೆ ಘಟನೆ ಕುರಿತಂತೆ ಎಫ್‌ಐಆರ್‌ ದಾಖಲಿಸಿಕೊಂಡಿದ್ದ ಪೊಲೀಸರು ಅಂತಾರಾಜ್ಯ ವಂಚಕರ ಗುಂಪಿನ ಇಬ್ಬರನ್ನು ಬಂಧಿಸಿದ್ದಾರೆ. ವಂಚಿಸಲಾಗಿದ್ದ 5.25 ಕೋಟಿ ರೂಪಾಯಿ ಮೊತ್ತವನ್ನು ಈವರೆಗೆ ಮರಳಿ ಪಡೆದಿರುವ ಅಧಿಕಾರಿಗಳು, ಹಣವನ್ನು ಓಸ್ವಾಲ್ ಅವರ ಬ್ಯಾಂಕ್‌ ಖಾತೆಗೆ ಮರಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಅಸ್ಸಾಂ, ಪಶ್ಚಿಮ ಬಂಗಾಳ ಹಾಗೂ ದೆಹಲಿಯಲ್ಲಿ ವಂಚಕರ ಗ್ಯಾಂಗ್ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿರುವ ಅಧಿಕಾರಿಗಳು, ಇನ್ನೂ ಏಳು ಶಂಕಿತರಿಗಾಗಿ ಶೋಧ ಮುಂದುವರೆಸಿದ್ದಾರೆ.

ಇದನ್ನೂ ಓದಿ : ಪ್ರತಿ ಗರ್ಬಾ ಪೆಂಡಾಲ್ ಪ್ರವೇಶದಲ್ಲಿ ದನದ ಮೂತ್ರ ನೀಡಿ | ಇಂದೋರ್ ಬಿಜೆಪಿ ಅಧ್ಯಕ್ಷನ ವಿಲಕ್ಷಣ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...