Homeಮುಖಪುಟನಕಲಿ ನ್ಯಾಯಾಲಯ ಸೃಷ್ಟಿಸಿ, ಸಿಜೆಐ ರೀತಿ ಸೋಗು ಹಾಕಿ ಉದ್ಯಮಿಗೆ ₹7 ಕೋಟಿ ವಂಚನೆ!

ನಕಲಿ ನ್ಯಾಯಾಲಯ ಸೃಷ್ಟಿಸಿ, ಸಿಜೆಐ ರೀತಿ ಸೋಗು ಹಾಕಿ ಉದ್ಯಮಿಗೆ ₹7 ಕೋಟಿ ವಂಚನೆ!

- Advertisement -
- Advertisement -

ಸೈಬರ್‌ ಅಪರಾಧಿಗಳ ಗುಂಪೊಂದು ನಕಲಿ ವರ್ಚುವಲ್‌ ನ್ಯಾಯಾಲಯ ಸೃಷ್ಟಿಸಿ ಸಿಬಿಐ ಅಧಿಕಾರಿಗಳು ಹಾಗೂ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ್‌ ಅವರಂತೆಯೇ ಸೋಗು ಹಾಕಿ ಜವಳಿ ಉದ್ಯಮಿ ಮತ್ತು ವರ್ಧಮಾನ್ ಸಮೂಹ ಸಂಸ್ಥೆ ಅಧ್ಯಕ್ಷ, ಎಸ್‌ಪಿ ಓಸ್ವಾಲ್ ಅವರಿಗೆ 7 ಕೋಟಿ ರೂಪಾಯಿ ವಂಚಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿದ್ದ ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯೆಲ್‌ ಅವರಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಓಸ್ವಾಲ್ ಅವರು ಶಾಮೀಲಾಗಿದ್ದಾರೆ ಎಂದು ಸಿಬಿಐ ಅಧಿಕಾರಿಗಳ ಸೋಗಿನಲ್ಲಿದ್ದ ವಂಚಕರು ಆರೋಪಿಸಿದ್ದಾರೆ.

ನಕಲಿ ಪಾಸ್‌ಪೋರ್ಟ್‌ ಮತ್ತು ಡೆಬಿಟ್‌ ಕಾರ್ಡ್‌ ಬಳಸಿ ಮಲೇಷ್ಯಾಕ್ಕೆ ಪಾರ್ಸೆಲ್‌ ಕಳಿಸುವುದಕ್ಕಾಗಿ ಓಸ್ವಾಲ್‌ ತಮ್ಮ ಆಧಾರ್‌ ಕಾರ್ಡ್‌ ದುರುಪಯೋಗಪಡಿಸಿಕೊಂಡಿದ್ದಾರೆ ಎಂದೂ ಹೇಳಿ, ನಕಲಿ ಬಂಧನ ವಾರೆಂಟ್‌ಗಳ ಮೂಲಕ ಬೆದರಿಕೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ವಂಚಕರು ವರ್ಚುವಲ್‌ ವಿಧಾನದಲ್ಲಿ ಕರೆ ಮಾಡಿ ಸುಪ್ರೀಂ ಕೋರ್ಟ್‌ ವಿಚಾರಣೆಯನ್ನು ಮರು ಸೃಷ್ಟಿಸಿ ಸಿಜೆಐ  ರೀತಿ ಸೋಗು ಹಾಕಿದ್ದರು. ಅಲ್ಲದೆ ಮುದ್ರೆಯುಳ್ಳ ಸುಪ್ರೀಂ ಕೋರ್ಟ್‌ ಆದೇಶವನ್ನು ಓಸ್ವಾಲ್ ಅವರ ವಾಟ್ಸಾಪ್‌ಗೆ ಕಳುಹಿಸಿ 7 ಕೋಟಿ ರೂಪಾಯಿ ನೀಡುವಂತೆ ಸೂಚಿಸಿದ್ದರು ಎಂದು ವರದಿ ತಿಳಿಸಿದೆ.

“ಸ್ಕೈಪ್‌ ವಿಡಿಯೋ ಕಾನ್ಫರೆನ್ಸ್‌ ಅಪ್ಲಿಕೇಷನ್‌ ಮೂಲಕ ತನ್ನನ್ನು ಸಂಪರ್ಕಿಸಿದ ವಂಚಕರು, ನ್ಯಾ. ಚಂದ್ರಚೂಡ್‌ ಎಂದು ವ್ಯಕ್ತಿಯೊಬ್ಬನನ್ನು ಪರಿಚಯಿಸಿದರು. ಆದರೆ, ಆತನ ಮುಖ ನನಗೆ ಕಾಣುತ್ತಿರಲಿಲ್ಲ. ಬದಲಿಗೆ ಆತ ಮಾತನಾಡುವುದು ಮತ್ತು ಮೇಜಿನ ಮೇಲೆ ಸುತ್ತಿಗೆ ಬಡಿಯುವುದು ಕೇಳಿಸಿತು. ಅವರು ಕೊಟ್ಟ ನಕಲಿ ಲಿಖಿತ ಸುಪ್ರೀಂ ಕೋರ್ಟ್‌ ಆದೇಶ ಎಷ್ಟು ಪರಿಪೂರ್ಣವಾಗಿತ್ತೆಂದರೆ, ಅದು ನಿಜವೆಂದೇ ನಂಬಿ ಹಣ ವರ್ಗಾಯಿಸಿದೆ. ನ್ಯಾ. ಡಿವೈ ಚಂದ್ರಚೂಡ್ ಮತ್ತು ಶ್ರೀಪಾಲ್ ಓಸ್ವಾಲ್ ನಡುವಣ ಪ್ರಕರಣ ಎಂದು ಉಲ್ಲೇಖಿಸಿರುವ ಸುಪ್ರೀಂ ಕೋರ್ಟ್‌ನ ಕೆಲ ನಕಲಿ ದಾಖಲೆಗಳನ್ನು ಕೂಡ ವಂಚಕರು ತನಗೆ ಕಳಿಸಿಕೊಟ್ಟಿದ್ದಾರೆ” ಎಂದು ಓಸ್ವಾಲ್‌ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ತಮ್ಮ ಕಂಪೆನಿಯ ಹಿರಿಯ ಸದಸ್ಯರೊಬ್ಬರು ಪ್ರಕರಣದ ವಿವರಗಳಲ್ಲಿ ತಪ್ಪು ಇರುವುದನ್ನು ತಿಳಿಸಿದಾಗ ಓಸ್ವಾಲ್ ಪೊಲೀಸರನ್ನು ಸಂಪರ್ಕಿಸಿದ್ದಾರೆ ಎಂದು ವರದಿ ವಿವರಿಸಿದೆ.

ಈ ಮಧ್ಯೆ ಘಟನೆ ಕುರಿತಂತೆ ಎಫ್‌ಐಆರ್‌ ದಾಖಲಿಸಿಕೊಂಡಿದ್ದ ಪೊಲೀಸರು ಅಂತಾರಾಜ್ಯ ವಂಚಕರ ಗುಂಪಿನ ಇಬ್ಬರನ್ನು ಬಂಧಿಸಿದ್ದಾರೆ. ವಂಚಿಸಲಾಗಿದ್ದ 5.25 ಕೋಟಿ ರೂಪಾಯಿ ಮೊತ್ತವನ್ನು ಈವರೆಗೆ ಮರಳಿ ಪಡೆದಿರುವ ಅಧಿಕಾರಿಗಳು, ಹಣವನ್ನು ಓಸ್ವಾಲ್ ಅವರ ಬ್ಯಾಂಕ್‌ ಖಾತೆಗೆ ಮರಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಅಸ್ಸಾಂ, ಪಶ್ಚಿಮ ಬಂಗಾಳ ಹಾಗೂ ದೆಹಲಿಯಲ್ಲಿ ವಂಚಕರ ಗ್ಯಾಂಗ್ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿರುವ ಅಧಿಕಾರಿಗಳು, ಇನ್ನೂ ಏಳು ಶಂಕಿತರಿಗಾಗಿ ಶೋಧ ಮುಂದುವರೆಸಿದ್ದಾರೆ.

ಇದನ್ನೂ ಓದಿ : ಪ್ರತಿ ಗರ್ಬಾ ಪೆಂಡಾಲ್ ಪ್ರವೇಶದಲ್ಲಿ ದನದ ಮೂತ್ರ ನೀಡಿ | ಇಂದೋರ್ ಬಿಜೆಪಿ ಅಧ್ಯಕ್ಷನ ವಿಲಕ್ಷಣ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...