Homeಮುಖಪುಟಫ್ರೆಡೆರಿಕ್ ಏಂಗೆಲ್ಸ್ ಮತ್ತು ಜರ್ಮನ್ ಸಿದ್ಧಾಂತ ಪುಸ್ತಕಗಳ ಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮ

ಫ್ರೆಡೆರಿಕ್ ಏಂಗೆಲ್ಸ್ ಮತ್ತು ಜರ್ಮನ್ ಸಿದ್ಧಾಂತ ಪುಸ್ತಕಗಳ ಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮ

ಈ ಎರಡು ಕಾರ್ಯಕ್ರಮಗಳು ಜನಶಕ್ತಿ ಮೀಡಿಯಾ (Janashakthi Media) ಫೇಸ್ ಬುಕ್ ಮತ್ತು ಯೂಟ್ಯೂಬ್ ತಾಣಗಳಲ್ಲಿ ಲೈವ್ ಆಗಿ ಪ್ರಸಾರವಾಗಲಿವೆ.

- Advertisement -
- Advertisement -

ಜರ್ಮನ್ ತತ್ವಶಾಸ್ತ್ರಜ್ಞ, ಇತಿಹಾಸಕಾರ, ರಾಜಕೀಯ ಶಾಸ್ತ್ರಜ್ಞ, ಪತ್ರಕರ್ತ ಮತ್ತು ಕ್ರಾಂತಿಕಾರಿ ಸಮಾಜವಾದಿ ಫ್ರೆಡೆರಿಕ್ ಏಂಗೆಲ್ಸ್‌ರವರ ಜನ್ಮ ದ್ವಿಶತಮಾನೋತ್ಸವದ ಅಂಗವಾಗಿ ಅವರ ಫ್ರೆಡೆರಿಕ್ ಏಂಗೆಲ್ಸ್ ಮತ್ತು ಜರ್ಮನ್ ಸಿದ್ಧಾಂತ ಕನ್ನಡ ಪುಸ್ತಕಗಳು ಜುಲೈ 20, 21 ರಂದು ಲೋಕಾರ್ಪಣೆಗೊಳ್ಳಲಿವೆ.

ಮಾರ್ಕ್ಸ್‌ವಾದ ಎಂದು ಕರೆಯಲಾಗುತ್ತಿರುವ ವಿಶಿಷ್ಟ ಲೋಕದೃಷ್ಟಿಯನ್ನು ಬೆಳೆಸುವಲ್ಲಿ ಮಾರ್ಕ್ಸ್‌ರ ಜತೆ ಏಂಗೆಲ್ಸ್ ಅವರ ಪಾತ್ರ ಹೆಚ್ಚು ಕಡಿಮೆ ಸಮಾನವಾಗಿತ್ತು. ಹಾಗಾಗಿ ಏಂಗೆಲ್ಸ್ ಅವರ ಜನ್ಮ ದ್ವಿಶತಮಾನೋತ್ಸವವನ್ನು ಮಾರ್ಕ್ಸ್ ವಾದದ ಲೋಕದೃಷ್ಟಿಯ ಆಧಾರಸ್ತಂಭಗಳು ಎನಿಸಿಕೊಂಡಿರುವ ಅವರ ಪ್ರಮುಖ ಕೃತಿಗಳನ್ನು ಕನ್ನಡದಲ್ಲಿ ಪ್ರಕಟಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲು ನಾಡಿನ ಪ್ರಗತಿಪರ ಪುಸ್ತಕಗಳ ಪ್ರಕಾಶನ ಸಂಸ್ಥೆಗಳಾದ (ಈ ಹಿಂದೆ ಮಾರ್ಕ್ಸ್200–ಕ್ಯಾಪಿಟಲ್ 150 ಯೋಜನೆಯನ್ನು ಸಫಲವಾಗಿ ಪೂರ್ಣಗೊಳಿಸಿದ) ನವಕರ್ನಾಟಕ ಮತ್ತು ಕ್ರಿಯಾ ಮಾಧ್ಯಮಗಳು ಜಂಟಿಯಾಗಿ ಯೋಜಿಸಿವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಹಿರಿಯ ಹೋರಾಟಗಾರರಾದ ಡಾ.ಜಿ.ರಾಮಕೃಷ್ಣರವರು ರಚಿಸಿರುವ ಫ್ರೆಡೆರಿಕ್ ಎಂಗೆಲ್ಸ್ ಪುಸ್ತಕವನ್ನು ಜುಲೈ 20 ರಂದು ಝೂಮ್ ಆನ್‌ಲೈನ್ ಕಾರ್ಯಕ್ರದಲ್ಲಿ ಹಿರಿಯ ಮಾರ್ಕ್ಸ್ ವಾದಿ ವಿದ್ವಾಂಸರಾದ ಪ್ರೊ. ಕೆ.ಕೆ.ತೆಕ್ಕೆಡೆತ್ ರವರು ಬಿಡುಗಡೆಗೊಳಿಸಲಿದ್ದಾರೆ. ಜೊತೆಗೆ  “ವೈಜ್ಞಾನಿಕ ಸಮಾಜವಾದಕ್ಕೆ ಏಂಗೆಲ್ಸ್ ಕೊಡುಗೆ”  ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಅದೇ ರೀತಿಯಲ್ಲಿ ಜುಲೈ 21ರಂದು ಪ್ರೊ.ವಿ.ಎನ್.ಲಕ್ಷ್ಮಿನಾರಾಯಣರವರು ರಚಿಸಿರುವ “ಜರ್ಮನ್ ಸಿದ್ಧಾಂತ’ದ ಪುಸ್ತಕವನ್ನು ಪ್ರೊ.ರಾಜೇಂದ್ರ ಚೆನ್ನಿಯವರು ಬಿಡುಗಡೆಗೊಳಿಸಿ  ‘ಕರ್ನಾಟಕದ ಬೌದ್ಧಿಕ ಪರಂಪರೆ ಮತ್ತು ಸಂಕಥನಗಳಲ್ಲಿ ಭಾವನಾವಾದದ ಪ್ರಭಾವ’ ದ ಕುರಿತು ಸಂವಾದದ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಇದರೊಂದಿಗೆ ಏಂಗೆಲ್ಸ್ 200 ಮಾಲಿಕೆಯಲ್ಲಿ ಮುಂದೆ ಕುಟುಂಬ, ಖಾಸಗಿ ಆಸ್ತಿ ಮತ್ತು ಪ್ರಭುತ್ವದ ಉಗಮ (ಡಾ.ಎಚ್.ಜಿ.ಜಯಲಕ್ಷ್ಮಿ), ಪ್ರಕೃತಿಯ ಗತಿತಾರ್ಕಿಕತೆ (ಸುಬ್ರಮಣ್ಯ ಗುಡ್ಗೆ), ಜರ್ಮನಿಯ ರೈತ ಯುದ್ಧಗಳು (ನಾ. ದಿವಾಕರ್), ಬಂಡವಾಳ ಸಂಪುಟ- 2 (ಪ್ರೊ.ವಿ.ಎನ್.ಲಕ್ಷ್ಮಿನಾರಾಯಣ, ಪಿ.ಎ.ಕುಮಾರ್) ಪುಸ್ತಕಗಳನ್ನು ಕನ್ನಡದಲ್ಲಿ ತರುವುದಾಗಿ ನವಕರ್ನಾಟಕ ಮತ್ತು ಕ್ರಿಯಾ ಮಾಧ್ಯಮಗಳು ಘೋಷಿಸಿವೆ. ರೂ. 1800 ಬೆಲೆಯ 6 ಪುಸ್ತಕಗಳ ಸೆಟ್  ಖರೀದಿಗೆ  ರೂ. 1200 ವಿಶೇಷ ಪ್ರಕಟಣಾ-ಪೂರ್ವ ರಿಯಾಯಿತಿ ಕೂಪನು ಖರೀದಿಸುವ ಮೂಲಕ ಪಡೆಯಬಹುದು.

ಈ ಎರಡು ಕಾರ್ಯಕ್ರಮಗಳು ಜನಶಕ್ತಿ ಮೀಡಿಯಾ (Janashakthi Media) ಫೇಸ್ ಬುಕ್ ಮತ್ತು ಯೂಟ್ಯೂಬ್ ತಾಣಗಳಲ್ಲಿ ಲೈವ್ ಆಗಿ ಪ್ರಸಾರವಾಗಲಿವೆ.


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಆತ್ಮಮರುಕದಾಚೆ ಸಿಡಿಯುವ ಕಾರುಣ್ಯದ ಕಿಡಿಯ ರೂಪಕಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...