Homeಮುಖಪುಟಫ್ರೆಡೆರಿಕ್ ಏಂಗೆಲ್ಸ್ ಮತ್ತು ಜರ್ಮನ್ ಸಿದ್ಧಾಂತ ಪುಸ್ತಕಗಳ ಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮ

ಫ್ರೆಡೆರಿಕ್ ಏಂಗೆಲ್ಸ್ ಮತ್ತು ಜರ್ಮನ್ ಸಿದ್ಧಾಂತ ಪುಸ್ತಕಗಳ ಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮ

ಈ ಎರಡು ಕಾರ್ಯಕ್ರಮಗಳು ಜನಶಕ್ತಿ ಮೀಡಿಯಾ (Janashakthi Media) ಫೇಸ್ ಬುಕ್ ಮತ್ತು ಯೂಟ್ಯೂಬ್ ತಾಣಗಳಲ್ಲಿ ಲೈವ್ ಆಗಿ ಪ್ರಸಾರವಾಗಲಿವೆ.

- Advertisement -
- Advertisement -

ಜರ್ಮನ್ ತತ್ವಶಾಸ್ತ್ರಜ್ಞ, ಇತಿಹಾಸಕಾರ, ರಾಜಕೀಯ ಶಾಸ್ತ್ರಜ್ಞ, ಪತ್ರಕರ್ತ ಮತ್ತು ಕ್ರಾಂತಿಕಾರಿ ಸಮಾಜವಾದಿ ಫ್ರೆಡೆರಿಕ್ ಏಂಗೆಲ್ಸ್‌ರವರ ಜನ್ಮ ದ್ವಿಶತಮಾನೋತ್ಸವದ ಅಂಗವಾಗಿ ಅವರ ಫ್ರೆಡೆರಿಕ್ ಏಂಗೆಲ್ಸ್ ಮತ್ತು ಜರ್ಮನ್ ಸಿದ್ಧಾಂತ ಕನ್ನಡ ಪುಸ್ತಕಗಳು ಜುಲೈ 20, 21 ರಂದು ಲೋಕಾರ್ಪಣೆಗೊಳ್ಳಲಿವೆ.

ಮಾರ್ಕ್ಸ್‌ವಾದ ಎಂದು ಕರೆಯಲಾಗುತ್ತಿರುವ ವಿಶಿಷ್ಟ ಲೋಕದೃಷ್ಟಿಯನ್ನು ಬೆಳೆಸುವಲ್ಲಿ ಮಾರ್ಕ್ಸ್‌ರ ಜತೆ ಏಂಗೆಲ್ಸ್ ಅವರ ಪಾತ್ರ ಹೆಚ್ಚು ಕಡಿಮೆ ಸಮಾನವಾಗಿತ್ತು. ಹಾಗಾಗಿ ಏಂಗೆಲ್ಸ್ ಅವರ ಜನ್ಮ ದ್ವಿಶತಮಾನೋತ್ಸವವನ್ನು ಮಾರ್ಕ್ಸ್ ವಾದದ ಲೋಕದೃಷ್ಟಿಯ ಆಧಾರಸ್ತಂಭಗಳು ಎನಿಸಿಕೊಂಡಿರುವ ಅವರ ಪ್ರಮುಖ ಕೃತಿಗಳನ್ನು ಕನ್ನಡದಲ್ಲಿ ಪ್ರಕಟಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲು ನಾಡಿನ ಪ್ರಗತಿಪರ ಪುಸ್ತಕಗಳ ಪ್ರಕಾಶನ ಸಂಸ್ಥೆಗಳಾದ (ಈ ಹಿಂದೆ ಮಾರ್ಕ್ಸ್200–ಕ್ಯಾಪಿಟಲ್ 150 ಯೋಜನೆಯನ್ನು ಸಫಲವಾಗಿ ಪೂರ್ಣಗೊಳಿಸಿದ) ನವಕರ್ನಾಟಕ ಮತ್ತು ಕ್ರಿಯಾ ಮಾಧ್ಯಮಗಳು ಜಂಟಿಯಾಗಿ ಯೋಜಿಸಿವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಹಿರಿಯ ಹೋರಾಟಗಾರರಾದ ಡಾ.ಜಿ.ರಾಮಕೃಷ್ಣರವರು ರಚಿಸಿರುವ ಫ್ರೆಡೆರಿಕ್ ಎಂಗೆಲ್ಸ್ ಪುಸ್ತಕವನ್ನು ಜುಲೈ 20 ರಂದು ಝೂಮ್ ಆನ್‌ಲೈನ್ ಕಾರ್ಯಕ್ರದಲ್ಲಿ ಹಿರಿಯ ಮಾರ್ಕ್ಸ್ ವಾದಿ ವಿದ್ವಾಂಸರಾದ ಪ್ರೊ. ಕೆ.ಕೆ.ತೆಕ್ಕೆಡೆತ್ ರವರು ಬಿಡುಗಡೆಗೊಳಿಸಲಿದ್ದಾರೆ. ಜೊತೆಗೆ  “ವೈಜ್ಞಾನಿಕ ಸಮಾಜವಾದಕ್ಕೆ ಏಂಗೆಲ್ಸ್ ಕೊಡುಗೆ”  ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಅದೇ ರೀತಿಯಲ್ಲಿ ಜುಲೈ 21ರಂದು ಪ್ರೊ.ವಿ.ಎನ್.ಲಕ್ಷ್ಮಿನಾರಾಯಣರವರು ರಚಿಸಿರುವ “ಜರ್ಮನ್ ಸಿದ್ಧಾಂತ’ದ ಪುಸ್ತಕವನ್ನು ಪ್ರೊ.ರಾಜೇಂದ್ರ ಚೆನ್ನಿಯವರು ಬಿಡುಗಡೆಗೊಳಿಸಿ  ‘ಕರ್ನಾಟಕದ ಬೌದ್ಧಿಕ ಪರಂಪರೆ ಮತ್ತು ಸಂಕಥನಗಳಲ್ಲಿ ಭಾವನಾವಾದದ ಪ್ರಭಾವ’ ದ ಕುರಿತು ಸಂವಾದದ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಇದರೊಂದಿಗೆ ಏಂಗೆಲ್ಸ್ 200 ಮಾಲಿಕೆಯಲ್ಲಿ ಮುಂದೆ ಕುಟುಂಬ, ಖಾಸಗಿ ಆಸ್ತಿ ಮತ್ತು ಪ್ರಭುತ್ವದ ಉಗಮ (ಡಾ.ಎಚ್.ಜಿ.ಜಯಲಕ್ಷ್ಮಿ), ಪ್ರಕೃತಿಯ ಗತಿತಾರ್ಕಿಕತೆ (ಸುಬ್ರಮಣ್ಯ ಗುಡ್ಗೆ), ಜರ್ಮನಿಯ ರೈತ ಯುದ್ಧಗಳು (ನಾ. ದಿವಾಕರ್), ಬಂಡವಾಳ ಸಂಪುಟ- 2 (ಪ್ರೊ.ವಿ.ಎನ್.ಲಕ್ಷ್ಮಿನಾರಾಯಣ, ಪಿ.ಎ.ಕುಮಾರ್) ಪುಸ್ತಕಗಳನ್ನು ಕನ್ನಡದಲ್ಲಿ ತರುವುದಾಗಿ ನವಕರ್ನಾಟಕ ಮತ್ತು ಕ್ರಿಯಾ ಮಾಧ್ಯಮಗಳು ಘೋಷಿಸಿವೆ. ರೂ. 1800 ಬೆಲೆಯ 6 ಪುಸ್ತಕಗಳ ಸೆಟ್  ಖರೀದಿಗೆ  ರೂ. 1200 ವಿಶೇಷ ಪ್ರಕಟಣಾ-ಪೂರ್ವ ರಿಯಾಯಿತಿ ಕೂಪನು ಖರೀದಿಸುವ ಮೂಲಕ ಪಡೆಯಬಹುದು.

ಈ ಎರಡು ಕಾರ್ಯಕ್ರಮಗಳು ಜನಶಕ್ತಿ ಮೀಡಿಯಾ (Janashakthi Media) ಫೇಸ್ ಬುಕ್ ಮತ್ತು ಯೂಟ್ಯೂಬ್ ತಾಣಗಳಲ್ಲಿ ಲೈವ್ ಆಗಿ ಪ್ರಸಾರವಾಗಲಿವೆ.


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಆತ್ಮಮರುಕದಾಚೆ ಸಿಡಿಯುವ ಕಾರುಣ್ಯದ ಕಿಡಿಯ ರೂಪಕಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...