Homeಮುಖಪುಟಫ್ರೆಡೆರಿಕ್ ಏಂಗೆಲ್ಸ್ ಮತ್ತು ಜರ್ಮನ್ ಸಿದ್ಧಾಂತ ಪುಸ್ತಕಗಳ ಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮ

ಫ್ರೆಡೆರಿಕ್ ಏಂಗೆಲ್ಸ್ ಮತ್ತು ಜರ್ಮನ್ ಸಿದ್ಧಾಂತ ಪುಸ್ತಕಗಳ ಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮ

ಈ ಎರಡು ಕಾರ್ಯಕ್ರಮಗಳು ಜನಶಕ್ತಿ ಮೀಡಿಯಾ (Janashakthi Media) ಫೇಸ್ ಬುಕ್ ಮತ್ತು ಯೂಟ್ಯೂಬ್ ತಾಣಗಳಲ್ಲಿ ಲೈವ್ ಆಗಿ ಪ್ರಸಾರವಾಗಲಿವೆ.

- Advertisement -
- Advertisement -

ಜರ್ಮನ್ ತತ್ವಶಾಸ್ತ್ರಜ್ಞ, ಇತಿಹಾಸಕಾರ, ರಾಜಕೀಯ ಶಾಸ್ತ್ರಜ್ಞ, ಪತ್ರಕರ್ತ ಮತ್ತು ಕ್ರಾಂತಿಕಾರಿ ಸಮಾಜವಾದಿ ಫ್ರೆಡೆರಿಕ್ ಏಂಗೆಲ್ಸ್‌ರವರ ಜನ್ಮ ದ್ವಿಶತಮಾನೋತ್ಸವದ ಅಂಗವಾಗಿ ಅವರ ಫ್ರೆಡೆರಿಕ್ ಏಂಗೆಲ್ಸ್ ಮತ್ತು ಜರ್ಮನ್ ಸಿದ್ಧಾಂತ ಕನ್ನಡ ಪುಸ್ತಕಗಳು ಜುಲೈ 20, 21 ರಂದು ಲೋಕಾರ್ಪಣೆಗೊಳ್ಳಲಿವೆ.

ಮಾರ್ಕ್ಸ್‌ವಾದ ಎಂದು ಕರೆಯಲಾಗುತ್ತಿರುವ ವಿಶಿಷ್ಟ ಲೋಕದೃಷ್ಟಿಯನ್ನು ಬೆಳೆಸುವಲ್ಲಿ ಮಾರ್ಕ್ಸ್‌ರ ಜತೆ ಏಂಗೆಲ್ಸ್ ಅವರ ಪಾತ್ರ ಹೆಚ್ಚು ಕಡಿಮೆ ಸಮಾನವಾಗಿತ್ತು. ಹಾಗಾಗಿ ಏಂಗೆಲ್ಸ್ ಅವರ ಜನ್ಮ ದ್ವಿಶತಮಾನೋತ್ಸವವನ್ನು ಮಾರ್ಕ್ಸ್ ವಾದದ ಲೋಕದೃಷ್ಟಿಯ ಆಧಾರಸ್ತಂಭಗಳು ಎನಿಸಿಕೊಂಡಿರುವ ಅವರ ಪ್ರಮುಖ ಕೃತಿಗಳನ್ನು ಕನ್ನಡದಲ್ಲಿ ಪ್ರಕಟಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲು ನಾಡಿನ ಪ್ರಗತಿಪರ ಪುಸ್ತಕಗಳ ಪ್ರಕಾಶನ ಸಂಸ್ಥೆಗಳಾದ (ಈ ಹಿಂದೆ ಮಾರ್ಕ್ಸ್200–ಕ್ಯಾಪಿಟಲ್ 150 ಯೋಜನೆಯನ್ನು ಸಫಲವಾಗಿ ಪೂರ್ಣಗೊಳಿಸಿದ) ನವಕರ್ನಾಟಕ ಮತ್ತು ಕ್ರಿಯಾ ಮಾಧ್ಯಮಗಳು ಜಂಟಿಯಾಗಿ ಯೋಜಿಸಿವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಹಿರಿಯ ಹೋರಾಟಗಾರರಾದ ಡಾ.ಜಿ.ರಾಮಕೃಷ್ಣರವರು ರಚಿಸಿರುವ ಫ್ರೆಡೆರಿಕ್ ಎಂಗೆಲ್ಸ್ ಪುಸ್ತಕವನ್ನು ಜುಲೈ 20 ರಂದು ಝೂಮ್ ಆನ್‌ಲೈನ್ ಕಾರ್ಯಕ್ರದಲ್ಲಿ ಹಿರಿಯ ಮಾರ್ಕ್ಸ್ ವಾದಿ ವಿದ್ವಾಂಸರಾದ ಪ್ರೊ. ಕೆ.ಕೆ.ತೆಕ್ಕೆಡೆತ್ ರವರು ಬಿಡುಗಡೆಗೊಳಿಸಲಿದ್ದಾರೆ. ಜೊತೆಗೆ  “ವೈಜ್ಞಾನಿಕ ಸಮಾಜವಾದಕ್ಕೆ ಏಂಗೆಲ್ಸ್ ಕೊಡುಗೆ”  ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಅದೇ ರೀತಿಯಲ್ಲಿ ಜುಲೈ 21ರಂದು ಪ್ರೊ.ವಿ.ಎನ್.ಲಕ್ಷ್ಮಿನಾರಾಯಣರವರು ರಚಿಸಿರುವ “ಜರ್ಮನ್ ಸಿದ್ಧಾಂತ’ದ ಪುಸ್ತಕವನ್ನು ಪ್ರೊ.ರಾಜೇಂದ್ರ ಚೆನ್ನಿಯವರು ಬಿಡುಗಡೆಗೊಳಿಸಿ  ‘ಕರ್ನಾಟಕದ ಬೌದ್ಧಿಕ ಪರಂಪರೆ ಮತ್ತು ಸಂಕಥನಗಳಲ್ಲಿ ಭಾವನಾವಾದದ ಪ್ರಭಾವ’ ದ ಕುರಿತು ಸಂವಾದದ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಇದರೊಂದಿಗೆ ಏಂಗೆಲ್ಸ್ 200 ಮಾಲಿಕೆಯಲ್ಲಿ ಮುಂದೆ ಕುಟುಂಬ, ಖಾಸಗಿ ಆಸ್ತಿ ಮತ್ತು ಪ್ರಭುತ್ವದ ಉಗಮ (ಡಾ.ಎಚ್.ಜಿ.ಜಯಲಕ್ಷ್ಮಿ), ಪ್ರಕೃತಿಯ ಗತಿತಾರ್ಕಿಕತೆ (ಸುಬ್ರಮಣ್ಯ ಗುಡ್ಗೆ), ಜರ್ಮನಿಯ ರೈತ ಯುದ್ಧಗಳು (ನಾ. ದಿವಾಕರ್), ಬಂಡವಾಳ ಸಂಪುಟ- 2 (ಪ್ರೊ.ವಿ.ಎನ್.ಲಕ್ಷ್ಮಿನಾರಾಯಣ, ಪಿ.ಎ.ಕುಮಾರ್) ಪುಸ್ತಕಗಳನ್ನು ಕನ್ನಡದಲ್ಲಿ ತರುವುದಾಗಿ ನವಕರ್ನಾಟಕ ಮತ್ತು ಕ್ರಿಯಾ ಮಾಧ್ಯಮಗಳು ಘೋಷಿಸಿವೆ. ರೂ. 1800 ಬೆಲೆಯ 6 ಪುಸ್ತಕಗಳ ಸೆಟ್  ಖರೀದಿಗೆ  ರೂ. 1200 ವಿಶೇಷ ಪ್ರಕಟಣಾ-ಪೂರ್ವ ರಿಯಾಯಿತಿ ಕೂಪನು ಖರೀದಿಸುವ ಮೂಲಕ ಪಡೆಯಬಹುದು.

ಈ ಎರಡು ಕಾರ್ಯಕ್ರಮಗಳು ಜನಶಕ್ತಿ ಮೀಡಿಯಾ (Janashakthi Media) ಫೇಸ್ ಬುಕ್ ಮತ್ತು ಯೂಟ್ಯೂಬ್ ತಾಣಗಳಲ್ಲಿ ಲೈವ್ ಆಗಿ ಪ್ರಸಾರವಾಗಲಿವೆ.


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಆತ್ಮಮರುಕದಾಚೆ ಸಿಡಿಯುವ ಕಾರುಣ್ಯದ ಕಿಡಿಯ ರೂಪಕಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...