Homeಮುಖಪುಟಫ್ರೆಡೆರಿಕ್ ಏಂಗೆಲ್ಸ್ ಮತ್ತು ಜರ್ಮನ್ ಸಿದ್ಧಾಂತ ಪುಸ್ತಕಗಳ ಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮ

ಫ್ರೆಡೆರಿಕ್ ಏಂಗೆಲ್ಸ್ ಮತ್ತು ಜರ್ಮನ್ ಸಿದ್ಧಾಂತ ಪುಸ್ತಕಗಳ ಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮ

ಈ ಎರಡು ಕಾರ್ಯಕ್ರಮಗಳು ಜನಶಕ್ತಿ ಮೀಡಿಯಾ (Janashakthi Media) ಫೇಸ್ ಬುಕ್ ಮತ್ತು ಯೂಟ್ಯೂಬ್ ತಾಣಗಳಲ್ಲಿ ಲೈವ್ ಆಗಿ ಪ್ರಸಾರವಾಗಲಿವೆ.

- Advertisement -
- Advertisement -

ಜರ್ಮನ್ ತತ್ವಶಾಸ್ತ್ರಜ್ಞ, ಇತಿಹಾಸಕಾರ, ರಾಜಕೀಯ ಶಾಸ್ತ್ರಜ್ಞ, ಪತ್ರಕರ್ತ ಮತ್ತು ಕ್ರಾಂತಿಕಾರಿ ಸಮಾಜವಾದಿ ಫ್ರೆಡೆರಿಕ್ ಏಂಗೆಲ್ಸ್‌ರವರ ಜನ್ಮ ದ್ವಿಶತಮಾನೋತ್ಸವದ ಅಂಗವಾಗಿ ಅವರ ಫ್ರೆಡೆರಿಕ್ ಏಂಗೆಲ್ಸ್ ಮತ್ತು ಜರ್ಮನ್ ಸಿದ್ಧಾಂತ ಕನ್ನಡ ಪುಸ್ತಕಗಳು ಜುಲೈ 20, 21 ರಂದು ಲೋಕಾರ್ಪಣೆಗೊಳ್ಳಲಿವೆ.

ಮಾರ್ಕ್ಸ್‌ವಾದ ಎಂದು ಕರೆಯಲಾಗುತ್ತಿರುವ ವಿಶಿಷ್ಟ ಲೋಕದೃಷ್ಟಿಯನ್ನು ಬೆಳೆಸುವಲ್ಲಿ ಮಾರ್ಕ್ಸ್‌ರ ಜತೆ ಏಂಗೆಲ್ಸ್ ಅವರ ಪಾತ್ರ ಹೆಚ್ಚು ಕಡಿಮೆ ಸಮಾನವಾಗಿತ್ತು. ಹಾಗಾಗಿ ಏಂಗೆಲ್ಸ್ ಅವರ ಜನ್ಮ ದ್ವಿಶತಮಾನೋತ್ಸವವನ್ನು ಮಾರ್ಕ್ಸ್ ವಾದದ ಲೋಕದೃಷ್ಟಿಯ ಆಧಾರಸ್ತಂಭಗಳು ಎನಿಸಿಕೊಂಡಿರುವ ಅವರ ಪ್ರಮುಖ ಕೃತಿಗಳನ್ನು ಕನ್ನಡದಲ್ಲಿ ಪ್ರಕಟಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲು ನಾಡಿನ ಪ್ರಗತಿಪರ ಪುಸ್ತಕಗಳ ಪ್ರಕಾಶನ ಸಂಸ್ಥೆಗಳಾದ (ಈ ಹಿಂದೆ ಮಾರ್ಕ್ಸ್200–ಕ್ಯಾಪಿಟಲ್ 150 ಯೋಜನೆಯನ್ನು ಸಫಲವಾಗಿ ಪೂರ್ಣಗೊಳಿಸಿದ) ನವಕರ್ನಾಟಕ ಮತ್ತು ಕ್ರಿಯಾ ಮಾಧ್ಯಮಗಳು ಜಂಟಿಯಾಗಿ ಯೋಜಿಸಿವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಹಿರಿಯ ಹೋರಾಟಗಾರರಾದ ಡಾ.ಜಿ.ರಾಮಕೃಷ್ಣರವರು ರಚಿಸಿರುವ ಫ್ರೆಡೆರಿಕ್ ಎಂಗೆಲ್ಸ್ ಪುಸ್ತಕವನ್ನು ಜುಲೈ 20 ರಂದು ಝೂಮ್ ಆನ್‌ಲೈನ್ ಕಾರ್ಯಕ್ರದಲ್ಲಿ ಹಿರಿಯ ಮಾರ್ಕ್ಸ್ ವಾದಿ ವಿದ್ವಾಂಸರಾದ ಪ್ರೊ. ಕೆ.ಕೆ.ತೆಕ್ಕೆಡೆತ್ ರವರು ಬಿಡುಗಡೆಗೊಳಿಸಲಿದ್ದಾರೆ. ಜೊತೆಗೆ  “ವೈಜ್ಞಾನಿಕ ಸಮಾಜವಾದಕ್ಕೆ ಏಂಗೆಲ್ಸ್ ಕೊಡುಗೆ”  ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಅದೇ ರೀತಿಯಲ್ಲಿ ಜುಲೈ 21ರಂದು ಪ್ರೊ.ವಿ.ಎನ್.ಲಕ್ಷ್ಮಿನಾರಾಯಣರವರು ರಚಿಸಿರುವ “ಜರ್ಮನ್ ಸಿದ್ಧಾಂತ’ದ ಪುಸ್ತಕವನ್ನು ಪ್ರೊ.ರಾಜೇಂದ್ರ ಚೆನ್ನಿಯವರು ಬಿಡುಗಡೆಗೊಳಿಸಿ  ‘ಕರ್ನಾಟಕದ ಬೌದ್ಧಿಕ ಪರಂಪರೆ ಮತ್ತು ಸಂಕಥನಗಳಲ್ಲಿ ಭಾವನಾವಾದದ ಪ್ರಭಾವ’ ದ ಕುರಿತು ಸಂವಾದದ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಇದರೊಂದಿಗೆ ಏಂಗೆಲ್ಸ್ 200 ಮಾಲಿಕೆಯಲ್ಲಿ ಮುಂದೆ ಕುಟುಂಬ, ಖಾಸಗಿ ಆಸ್ತಿ ಮತ್ತು ಪ್ರಭುತ್ವದ ಉಗಮ (ಡಾ.ಎಚ್.ಜಿ.ಜಯಲಕ್ಷ್ಮಿ), ಪ್ರಕೃತಿಯ ಗತಿತಾರ್ಕಿಕತೆ (ಸುಬ್ರಮಣ್ಯ ಗುಡ್ಗೆ), ಜರ್ಮನಿಯ ರೈತ ಯುದ್ಧಗಳು (ನಾ. ದಿವಾಕರ್), ಬಂಡವಾಳ ಸಂಪುಟ- 2 (ಪ್ರೊ.ವಿ.ಎನ್.ಲಕ್ಷ್ಮಿನಾರಾಯಣ, ಪಿ.ಎ.ಕುಮಾರ್) ಪುಸ್ತಕಗಳನ್ನು ಕನ್ನಡದಲ್ಲಿ ತರುವುದಾಗಿ ನವಕರ್ನಾಟಕ ಮತ್ತು ಕ್ರಿಯಾ ಮಾಧ್ಯಮಗಳು ಘೋಷಿಸಿವೆ. ರೂ. 1800 ಬೆಲೆಯ 6 ಪುಸ್ತಕಗಳ ಸೆಟ್  ಖರೀದಿಗೆ  ರೂ. 1200 ವಿಶೇಷ ಪ್ರಕಟಣಾ-ಪೂರ್ವ ರಿಯಾಯಿತಿ ಕೂಪನು ಖರೀದಿಸುವ ಮೂಲಕ ಪಡೆಯಬಹುದು.

ಈ ಎರಡು ಕಾರ್ಯಕ್ರಮಗಳು ಜನಶಕ್ತಿ ಮೀಡಿಯಾ (Janashakthi Media) ಫೇಸ್ ಬುಕ್ ಮತ್ತು ಯೂಟ್ಯೂಬ್ ತಾಣಗಳಲ್ಲಿ ಲೈವ್ ಆಗಿ ಪ್ರಸಾರವಾಗಲಿವೆ.


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಆತ್ಮಮರುಕದಾಚೆ ಸಿಡಿಯುವ ಕಾರುಣ್ಯದ ಕಿಡಿಯ ರೂಪಕಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...