Homeಮುಖಪುಟಫ್ರೆಡೆರಿಕ್ ಏಂಗೆಲ್ಸ್ ಮತ್ತು ಜರ್ಮನ್ ಸಿದ್ಧಾಂತ ಪುಸ್ತಕಗಳ ಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮ

ಫ್ರೆಡೆರಿಕ್ ಏಂಗೆಲ್ಸ್ ಮತ್ತು ಜರ್ಮನ್ ಸಿದ್ಧಾಂತ ಪುಸ್ತಕಗಳ ಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮ

ಈ ಎರಡು ಕಾರ್ಯಕ್ರಮಗಳು ಜನಶಕ್ತಿ ಮೀಡಿಯಾ (Janashakthi Media) ಫೇಸ್ ಬುಕ್ ಮತ್ತು ಯೂಟ್ಯೂಬ್ ತಾಣಗಳಲ್ಲಿ ಲೈವ್ ಆಗಿ ಪ್ರಸಾರವಾಗಲಿವೆ.

- Advertisement -
- Advertisement -

ಜರ್ಮನ್ ತತ್ವಶಾಸ್ತ್ರಜ್ಞ, ಇತಿಹಾಸಕಾರ, ರಾಜಕೀಯ ಶಾಸ್ತ್ರಜ್ಞ, ಪತ್ರಕರ್ತ ಮತ್ತು ಕ್ರಾಂತಿಕಾರಿ ಸಮಾಜವಾದಿ ಫ್ರೆಡೆರಿಕ್ ಏಂಗೆಲ್ಸ್‌ರವರ ಜನ್ಮ ದ್ವಿಶತಮಾನೋತ್ಸವದ ಅಂಗವಾಗಿ ಅವರ ಫ್ರೆಡೆರಿಕ್ ಏಂಗೆಲ್ಸ್ ಮತ್ತು ಜರ್ಮನ್ ಸಿದ್ಧಾಂತ ಕನ್ನಡ ಪುಸ್ತಕಗಳು ಜುಲೈ 20, 21 ರಂದು ಲೋಕಾರ್ಪಣೆಗೊಳ್ಳಲಿವೆ.

ಮಾರ್ಕ್ಸ್‌ವಾದ ಎಂದು ಕರೆಯಲಾಗುತ್ತಿರುವ ವಿಶಿಷ್ಟ ಲೋಕದೃಷ್ಟಿಯನ್ನು ಬೆಳೆಸುವಲ್ಲಿ ಮಾರ್ಕ್ಸ್‌ರ ಜತೆ ಏಂಗೆಲ್ಸ್ ಅವರ ಪಾತ್ರ ಹೆಚ್ಚು ಕಡಿಮೆ ಸಮಾನವಾಗಿತ್ತು. ಹಾಗಾಗಿ ಏಂಗೆಲ್ಸ್ ಅವರ ಜನ್ಮ ದ್ವಿಶತಮಾನೋತ್ಸವವನ್ನು ಮಾರ್ಕ್ಸ್ ವಾದದ ಲೋಕದೃಷ್ಟಿಯ ಆಧಾರಸ್ತಂಭಗಳು ಎನಿಸಿಕೊಂಡಿರುವ ಅವರ ಪ್ರಮುಖ ಕೃತಿಗಳನ್ನು ಕನ್ನಡದಲ್ಲಿ ಪ್ರಕಟಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲು ನಾಡಿನ ಪ್ರಗತಿಪರ ಪುಸ್ತಕಗಳ ಪ್ರಕಾಶನ ಸಂಸ್ಥೆಗಳಾದ (ಈ ಹಿಂದೆ ಮಾರ್ಕ್ಸ್200–ಕ್ಯಾಪಿಟಲ್ 150 ಯೋಜನೆಯನ್ನು ಸಫಲವಾಗಿ ಪೂರ್ಣಗೊಳಿಸಿದ) ನವಕರ್ನಾಟಕ ಮತ್ತು ಕ್ರಿಯಾ ಮಾಧ್ಯಮಗಳು ಜಂಟಿಯಾಗಿ ಯೋಜಿಸಿವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಹಿರಿಯ ಹೋರಾಟಗಾರರಾದ ಡಾ.ಜಿ.ರಾಮಕೃಷ್ಣರವರು ರಚಿಸಿರುವ ಫ್ರೆಡೆರಿಕ್ ಎಂಗೆಲ್ಸ್ ಪುಸ್ತಕವನ್ನು ಜುಲೈ 20 ರಂದು ಝೂಮ್ ಆನ್‌ಲೈನ್ ಕಾರ್ಯಕ್ರದಲ್ಲಿ ಹಿರಿಯ ಮಾರ್ಕ್ಸ್ ವಾದಿ ವಿದ್ವಾಂಸರಾದ ಪ್ರೊ. ಕೆ.ಕೆ.ತೆಕ್ಕೆಡೆತ್ ರವರು ಬಿಡುಗಡೆಗೊಳಿಸಲಿದ್ದಾರೆ. ಜೊತೆಗೆ  “ವೈಜ್ಞಾನಿಕ ಸಮಾಜವಾದಕ್ಕೆ ಏಂಗೆಲ್ಸ್ ಕೊಡುಗೆ”  ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಅದೇ ರೀತಿಯಲ್ಲಿ ಜುಲೈ 21ರಂದು ಪ್ರೊ.ವಿ.ಎನ್.ಲಕ್ಷ್ಮಿನಾರಾಯಣರವರು ರಚಿಸಿರುವ “ಜರ್ಮನ್ ಸಿದ್ಧಾಂತ’ದ ಪುಸ್ತಕವನ್ನು ಪ್ರೊ.ರಾಜೇಂದ್ರ ಚೆನ್ನಿಯವರು ಬಿಡುಗಡೆಗೊಳಿಸಿ  ‘ಕರ್ನಾಟಕದ ಬೌದ್ಧಿಕ ಪರಂಪರೆ ಮತ್ತು ಸಂಕಥನಗಳಲ್ಲಿ ಭಾವನಾವಾದದ ಪ್ರಭಾವ’ ದ ಕುರಿತು ಸಂವಾದದ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಇದರೊಂದಿಗೆ ಏಂಗೆಲ್ಸ್ 200 ಮಾಲಿಕೆಯಲ್ಲಿ ಮುಂದೆ ಕುಟುಂಬ, ಖಾಸಗಿ ಆಸ್ತಿ ಮತ್ತು ಪ್ರಭುತ್ವದ ಉಗಮ (ಡಾ.ಎಚ್.ಜಿ.ಜಯಲಕ್ಷ್ಮಿ), ಪ್ರಕೃತಿಯ ಗತಿತಾರ್ಕಿಕತೆ (ಸುಬ್ರಮಣ್ಯ ಗುಡ್ಗೆ), ಜರ್ಮನಿಯ ರೈತ ಯುದ್ಧಗಳು (ನಾ. ದಿವಾಕರ್), ಬಂಡವಾಳ ಸಂಪುಟ- 2 (ಪ್ರೊ.ವಿ.ಎನ್.ಲಕ್ಷ್ಮಿನಾರಾಯಣ, ಪಿ.ಎ.ಕುಮಾರ್) ಪುಸ್ತಕಗಳನ್ನು ಕನ್ನಡದಲ್ಲಿ ತರುವುದಾಗಿ ನವಕರ್ನಾಟಕ ಮತ್ತು ಕ್ರಿಯಾ ಮಾಧ್ಯಮಗಳು ಘೋಷಿಸಿವೆ. ರೂ. 1800 ಬೆಲೆಯ 6 ಪುಸ್ತಕಗಳ ಸೆಟ್  ಖರೀದಿಗೆ  ರೂ. 1200 ವಿಶೇಷ ಪ್ರಕಟಣಾ-ಪೂರ್ವ ರಿಯಾಯಿತಿ ಕೂಪನು ಖರೀದಿಸುವ ಮೂಲಕ ಪಡೆಯಬಹುದು.

ಈ ಎರಡು ಕಾರ್ಯಕ್ರಮಗಳು ಜನಶಕ್ತಿ ಮೀಡಿಯಾ (Janashakthi Media) ಫೇಸ್ ಬುಕ್ ಮತ್ತು ಯೂಟ್ಯೂಬ್ ತಾಣಗಳಲ್ಲಿ ಲೈವ್ ಆಗಿ ಪ್ರಸಾರವಾಗಲಿವೆ.


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಆತ್ಮಮರುಕದಾಚೆ ಸಿಡಿಯುವ ಕಾರುಣ್ಯದ ಕಿಡಿಯ ರೂಪಕಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...