Homeಮುಖಪುಟಉಚಿತ ಬಸ್‌ ಪಾಸ್‌ - ದಿಲ್ಲಿ ಮಹಿಳೆಯರು ದಿಲ್‌ ಖುಷ್‌.. : ಮುಂದಿನ ಕೊಡುಗೆ ವಿದ್ಯಾರ್ಥಿಗಳು...

ಉಚಿತ ಬಸ್‌ ಪಾಸ್‌ – ದಿಲ್ಲಿ ಮಹಿಳೆಯರು ದಿಲ್‌ ಖುಷ್‌.. : ಮುಂದಿನ ಕೊಡುಗೆ ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರಿಕರಿಗೆ…

ಉಚಿತ ಬಸ್ ಪ್ರಯಾಣವು ಮಹಿಳೆಯರಿಗೆ ಸ್ವಾತಂತ್ರ್ಯವನ್ನು ಮತ್ತು ಅವರ ಕನಸುಗಳನ್ನು ಈಡೇರಿಸುವ ಅವಕಾಶವನ್ನು ನೀಡುತ್ತದೆ...

- Advertisement -
- Advertisement -

ನಿನ್ನೆ ತಾನೇ ದಿಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪಾಸ್‌ ನೀಡುವ ಮೂಲಕ ಲಕ್ಷಾಂತರ ಜನರ ಮನಗೆದ್ದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರಿಕರಿಗೂ ಉಚಿತ ಬಸ್‌ ಪಾಸ್‌ ನೀಡಲು ಚಿಂತನೆ ನಡೆಸಿದ್ದಾರೆ.

ಉಚಿತ ಬಸ್‌ ಪ್ರಯಾಣ ಯೋಜನೆ ಜಾರಿಯಾದ 8 ಗಂಟೆಗಳಲ್ಲಿ 2.2 ಲಕ್ಷ ಮಹಿಳೆಯರು ಈ ಯೋಜನೆಯ ಪ್ರಯೋಜನೆ ಪಡೆದಿದ್ದಾರೆ. ಅವರಲ್ಲಿ ಕೆಲವರು ತಮ್ಮದೇ ಮಾತುಗಳನ್ನು ಯೋಜನೆಯ್ನು ಶ್ಲಾಘಿಸಿದ್ದಾರೆ. ಕೆಲವೊಂದು ಇಲ್ಲಿವೆ.

ದೆಹಲಿಯ ಬಸ್ಸುಗಳಲ್ಲಿ ಮಹಿಳೆಯರಿಗೆ ಪ್ರಯಾಣ ಮತ್ರ ಉಚಿತವಲ್ಲ, ಅವರ ಸುರಕ್ಷತೆಯೂ ಖಾತ್ರಿ ಇದೆ. ಹೇಗೆಂದರೆ ಪ್ರಯಾಣಿಕರ ಸುರಕ್ಷತೆ ಖಚಿತಪಡಿಸಿಕೊಳ್ಳಲು ಪ್ರತಿ ಬಸ್‌ಗಳಲ್ಲಿಯೂ ಸಹ ಮಾರ್ಷಲ್‌ಗಳನ್ನು ನಿಯೋಜಿಸಲಾಗಿದೆ ಎಂದು ದೆಹಲಿಯ ಶ್ವೇತ ಗೋಸ್ವಾಮಿಯವರು ಹರ್ಷ ವ್ಯಕ್ತಪಡಿಸಿದ್ದರೆ.

ಎಎಪಿ ದೆಹಲಿಯ ಉಚಿತ ಬಸ್ ಪ್ರಯಾಣದಿಂದ ಜೀವನದ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂದರೆ “24 ವರ್ಷ ವಯಸ್ಸಿನ ವಿನಿತಾ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಾ ತಿಂಗಳಿಗೆ 12 ಸಾವಿರ ರೂ ಸಂಪಾದಿಸುತ್ತಾಳೆ. ಆದರೆ ಅದರಲ್ಲಿ ಎರಡೂವರೆ ಸಾವಿರ ರೂಗಳನ್ನು ಪ್ರಯಾಣಕ್ಕಾಗಿ ಖರ್ಚು ಮಾಡುತ್ತಿದ್ದಳು. ಈಗ ಆ ಹಣ ಉಳಿದಿದ್ದು ಅವಳು ಖುಷಿಯಾಗಿದ್ದಾಳೆ” ಎಂದು  ಸುಕೃತಿ ದ್ವಿವೇದಿ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಮಹಿಳೆಯರಿಂದ ನೇರ ಪ್ರತಿಕ್ರಿಯೆ ಪಡೆಯಲು ನಾನು ಇದೀಗ ಕೆಲವು ಬಸ್‌ಗಳನ್ನು ಹತ್ತಿದ್ದೇನೆ. ವಿದ್ಯಾರ್ಥಿಗಳು, ದುಡಿಯುವ ಮಹಿಳೆಯರು, ಶಾಪಿಂಗ್‌ಗೆ ಹೋಗುವ ಮಹಿಳೆಯರು ಮಾತ್ರವಲ್ಲದೆ, ನಿಯಮಿತವಾಗಿ ಆಸ್ಪತ್ರೆಗೆ ಭೇಟಿ ನೀಡಬೇಕಾದ ಕೆಲವರನ್ನು ನಾನು ಭೇಟಿಯಾದೆ. ಅವರು ಸಹ ಸಂತೋಷವಾಗಿದ್ದಾರೆ ಎಂದು ಅರವಿಂದ್‌ ಕೇಜ್ರಿವಾಲ್‌ ಟ್ವೀಟ್‌ ಮಾಡಿದ್ದಾರೆ.

ಒಟ್ಟು ವರ್ಕ್‌ ಪೋರ್ಸ್‌‌ನಲ್ಲಿ ದಿಲ್ಲಿಯ ಮಹಿಳೆಯರ ಪಾಲು ತೀರಾ ಕಡಿಮೆಯಿದೆ. ಇದಕ್ಕೆ ಸುರಕ್ಷತೆ ಇಲ್ಲದಿರುವುದು ಸಹ ಕಾರಣವಾಗಿದೆ. ಹಾಗಾಗಿ ಮಹಿಳೆಯರಿಗೆ ದೆಹಲಿಯ ಬಸ್‌ ಮತ್ತು ಮೆಟ್ರೊಗಳಲ್ಲಿ ಉಚಿತ ಪ್ರಯಾಣದ ಜೊತೆಗೆ ಸಿಸಿಕ್ಯಾಮರ, ಮಾರ್ಷಲ್‌ಗಳನ್ನಿಟ್ಟು ಸುರಕ್ಷತೆಯನ್ನು ಖಾತ್ರಿಪಡಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಹೆಚ್ಚು ಮಹಿಳೆಯರು ಕೆಲಸಕ್ಕೆ ಮುಂದಾಗುತ್ತಾರೆ ಎಂಬ ವಿಶ್ವಾಸವಿದೆ ಎಂದು ಕೇಜ್ರಿವಾಲ್‌ ನುಡಿದಿದ್ದಾರೆ.

ಈ ಯೋಜನೆಗೆ ಮಹಿಳೆಯರು ತೋರಿದ ಪ್ರತಿಕ್ರಿಯೆಯ ಮುಂದುವರಿಕೆಯಾಗಿ ಹಿರಿಯ ನಾಗರಿಕರು ಮತ್ತು ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಲು ಚರ್ಚೆ ನಡೆಸುತ್ತೇವೆ ಎಂದಿದ್ದಾರೆ.

ತೀವ್ರ ಅಸಮಾನತೆ ಇರುವ ದೇಶದಲ್ಲಿ, ಮಹಿಳೆಯರು ಇನ್ನೂ ಪ್ರತಿ ಸಣ್ಣ ಖರ್ಚಿಗೆ ತಮ್ಮ ತಂದೆ, ಗಂಡ ಮತ್ತು ಪುತ್ರರಿಂದ ಹಣವನ್ನು ತೆಗೆದುಕೊಳ್ಳಬೇಕಾದರೆ, ಉಚಿತ ಬಸ್ ಪ್ರಯಾಣವು ಮಹಿಳೆಯರಿಗೆ ಸ್ವಾತಂತ್ರ್ಯವನ್ನು ನೀಡುತ್ತದೆ ಮತ್ತು ಅವರ ಕನಸುಗಳನ್ನು ಈಡೇರಿಸುವ ಅವಕಾಶವನ್ನು ನೀಡುತ್ತದೆ ಎಂದು ಆಪ್‌ ನಾಯಕಿ ಅತಿಶಿ ಅಭಿಪ್ರಾಯಪಟ್ಟಿದ್ದಾರೆ.

ದೆಹಲಿಯ ಮಹಿಳೆಯರು ಉಚಿತ ಬಸ್ ಪ್ರಯಾಣವನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಇಂದು ಒಟ್ಟು ಟಿಕೆಟ್ ಪಡೆದ ಪ್ರಯಾಣಿಕರಲ್ಲಿ 33% ಉಚಿತ ‘ಪಿಂಕ್ ಪಾಸ್’ ಪಡೆದ ಮಹಿಳೆಯರಾಗಿದ್ದಾರೆ. 1 ನೇ ದಿನದಿಂದಲೇ ಸುಗಮ ಅನುಷ್ಠಾನವನ್ನು ಖಚಿತಪಡಿಸಿದ ಡಿಟಿಸಿ ಮತ್ತು ಕ್ಲಸ್ಟರ್ ಬಸ್ ಸಿಬ್ಬಂದಿಯವರ ಶ್ರಮಕ್ಕೆ ಧನ್ಯವಾದಗಳು ಎಂದು ದೆಹಲಿಯ ಸಾರಿಗೆ ಮಂತ್ರಿ ಕೈಲಾಶ್‌ ಗೆಹ್ಲೋಟ್‌ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....