Homeಮುಖಪುಟಉಚಿತ ಬಸ್‌ ಪಾಸ್‌ - ದಿಲ್ಲಿ ಮಹಿಳೆಯರು ದಿಲ್‌ ಖುಷ್‌.. : ಮುಂದಿನ ಕೊಡುಗೆ ವಿದ್ಯಾರ್ಥಿಗಳು...

ಉಚಿತ ಬಸ್‌ ಪಾಸ್‌ – ದಿಲ್ಲಿ ಮಹಿಳೆಯರು ದಿಲ್‌ ಖುಷ್‌.. : ಮುಂದಿನ ಕೊಡುಗೆ ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರಿಕರಿಗೆ…

ಉಚಿತ ಬಸ್ ಪ್ರಯಾಣವು ಮಹಿಳೆಯರಿಗೆ ಸ್ವಾತಂತ್ರ್ಯವನ್ನು ಮತ್ತು ಅವರ ಕನಸುಗಳನ್ನು ಈಡೇರಿಸುವ ಅವಕಾಶವನ್ನು ನೀಡುತ್ತದೆ...

- Advertisement -
- Advertisement -

ನಿನ್ನೆ ತಾನೇ ದಿಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪಾಸ್‌ ನೀಡುವ ಮೂಲಕ ಲಕ್ಷಾಂತರ ಜನರ ಮನಗೆದ್ದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರಿಕರಿಗೂ ಉಚಿತ ಬಸ್‌ ಪಾಸ್‌ ನೀಡಲು ಚಿಂತನೆ ನಡೆಸಿದ್ದಾರೆ.

ಉಚಿತ ಬಸ್‌ ಪ್ರಯಾಣ ಯೋಜನೆ ಜಾರಿಯಾದ 8 ಗಂಟೆಗಳಲ್ಲಿ 2.2 ಲಕ್ಷ ಮಹಿಳೆಯರು ಈ ಯೋಜನೆಯ ಪ್ರಯೋಜನೆ ಪಡೆದಿದ್ದಾರೆ. ಅವರಲ್ಲಿ ಕೆಲವರು ತಮ್ಮದೇ ಮಾತುಗಳನ್ನು ಯೋಜನೆಯ್ನು ಶ್ಲಾಘಿಸಿದ್ದಾರೆ. ಕೆಲವೊಂದು ಇಲ್ಲಿವೆ.

ದೆಹಲಿಯ ಬಸ್ಸುಗಳಲ್ಲಿ ಮಹಿಳೆಯರಿಗೆ ಪ್ರಯಾಣ ಮತ್ರ ಉಚಿತವಲ್ಲ, ಅವರ ಸುರಕ್ಷತೆಯೂ ಖಾತ್ರಿ ಇದೆ. ಹೇಗೆಂದರೆ ಪ್ರಯಾಣಿಕರ ಸುರಕ್ಷತೆ ಖಚಿತಪಡಿಸಿಕೊಳ್ಳಲು ಪ್ರತಿ ಬಸ್‌ಗಳಲ್ಲಿಯೂ ಸಹ ಮಾರ್ಷಲ್‌ಗಳನ್ನು ನಿಯೋಜಿಸಲಾಗಿದೆ ಎಂದು ದೆಹಲಿಯ ಶ್ವೇತ ಗೋಸ್ವಾಮಿಯವರು ಹರ್ಷ ವ್ಯಕ್ತಪಡಿಸಿದ್ದರೆ.

ಎಎಪಿ ದೆಹಲಿಯ ಉಚಿತ ಬಸ್ ಪ್ರಯಾಣದಿಂದ ಜೀವನದ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂದರೆ “24 ವರ್ಷ ವಯಸ್ಸಿನ ವಿನಿತಾ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಾ ತಿಂಗಳಿಗೆ 12 ಸಾವಿರ ರೂ ಸಂಪಾದಿಸುತ್ತಾಳೆ. ಆದರೆ ಅದರಲ್ಲಿ ಎರಡೂವರೆ ಸಾವಿರ ರೂಗಳನ್ನು ಪ್ರಯಾಣಕ್ಕಾಗಿ ಖರ್ಚು ಮಾಡುತ್ತಿದ್ದಳು. ಈಗ ಆ ಹಣ ಉಳಿದಿದ್ದು ಅವಳು ಖುಷಿಯಾಗಿದ್ದಾಳೆ” ಎಂದು  ಸುಕೃತಿ ದ್ವಿವೇದಿ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಮಹಿಳೆಯರಿಂದ ನೇರ ಪ್ರತಿಕ್ರಿಯೆ ಪಡೆಯಲು ನಾನು ಇದೀಗ ಕೆಲವು ಬಸ್‌ಗಳನ್ನು ಹತ್ತಿದ್ದೇನೆ. ವಿದ್ಯಾರ್ಥಿಗಳು, ದುಡಿಯುವ ಮಹಿಳೆಯರು, ಶಾಪಿಂಗ್‌ಗೆ ಹೋಗುವ ಮಹಿಳೆಯರು ಮಾತ್ರವಲ್ಲದೆ, ನಿಯಮಿತವಾಗಿ ಆಸ್ಪತ್ರೆಗೆ ಭೇಟಿ ನೀಡಬೇಕಾದ ಕೆಲವರನ್ನು ನಾನು ಭೇಟಿಯಾದೆ. ಅವರು ಸಹ ಸಂತೋಷವಾಗಿದ್ದಾರೆ ಎಂದು ಅರವಿಂದ್‌ ಕೇಜ್ರಿವಾಲ್‌ ಟ್ವೀಟ್‌ ಮಾಡಿದ್ದಾರೆ.

ಒಟ್ಟು ವರ್ಕ್‌ ಪೋರ್ಸ್‌‌ನಲ್ಲಿ ದಿಲ್ಲಿಯ ಮಹಿಳೆಯರ ಪಾಲು ತೀರಾ ಕಡಿಮೆಯಿದೆ. ಇದಕ್ಕೆ ಸುರಕ್ಷತೆ ಇಲ್ಲದಿರುವುದು ಸಹ ಕಾರಣವಾಗಿದೆ. ಹಾಗಾಗಿ ಮಹಿಳೆಯರಿಗೆ ದೆಹಲಿಯ ಬಸ್‌ ಮತ್ತು ಮೆಟ್ರೊಗಳಲ್ಲಿ ಉಚಿತ ಪ್ರಯಾಣದ ಜೊತೆಗೆ ಸಿಸಿಕ್ಯಾಮರ, ಮಾರ್ಷಲ್‌ಗಳನ್ನಿಟ್ಟು ಸುರಕ್ಷತೆಯನ್ನು ಖಾತ್ರಿಪಡಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಹೆಚ್ಚು ಮಹಿಳೆಯರು ಕೆಲಸಕ್ಕೆ ಮುಂದಾಗುತ್ತಾರೆ ಎಂಬ ವಿಶ್ವಾಸವಿದೆ ಎಂದು ಕೇಜ್ರಿವಾಲ್‌ ನುಡಿದಿದ್ದಾರೆ.

ಈ ಯೋಜನೆಗೆ ಮಹಿಳೆಯರು ತೋರಿದ ಪ್ರತಿಕ್ರಿಯೆಯ ಮುಂದುವರಿಕೆಯಾಗಿ ಹಿರಿಯ ನಾಗರಿಕರು ಮತ್ತು ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಲು ಚರ್ಚೆ ನಡೆಸುತ್ತೇವೆ ಎಂದಿದ್ದಾರೆ.

ತೀವ್ರ ಅಸಮಾನತೆ ಇರುವ ದೇಶದಲ್ಲಿ, ಮಹಿಳೆಯರು ಇನ್ನೂ ಪ್ರತಿ ಸಣ್ಣ ಖರ್ಚಿಗೆ ತಮ್ಮ ತಂದೆ, ಗಂಡ ಮತ್ತು ಪುತ್ರರಿಂದ ಹಣವನ್ನು ತೆಗೆದುಕೊಳ್ಳಬೇಕಾದರೆ, ಉಚಿತ ಬಸ್ ಪ್ರಯಾಣವು ಮಹಿಳೆಯರಿಗೆ ಸ್ವಾತಂತ್ರ್ಯವನ್ನು ನೀಡುತ್ತದೆ ಮತ್ತು ಅವರ ಕನಸುಗಳನ್ನು ಈಡೇರಿಸುವ ಅವಕಾಶವನ್ನು ನೀಡುತ್ತದೆ ಎಂದು ಆಪ್‌ ನಾಯಕಿ ಅತಿಶಿ ಅಭಿಪ್ರಾಯಪಟ್ಟಿದ್ದಾರೆ.

ದೆಹಲಿಯ ಮಹಿಳೆಯರು ಉಚಿತ ಬಸ್ ಪ್ರಯಾಣವನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಇಂದು ಒಟ್ಟು ಟಿಕೆಟ್ ಪಡೆದ ಪ್ರಯಾಣಿಕರಲ್ಲಿ 33% ಉಚಿತ ‘ಪಿಂಕ್ ಪಾಸ್’ ಪಡೆದ ಮಹಿಳೆಯರಾಗಿದ್ದಾರೆ. 1 ನೇ ದಿನದಿಂದಲೇ ಸುಗಮ ಅನುಷ್ಠಾನವನ್ನು ಖಚಿತಪಡಿಸಿದ ಡಿಟಿಸಿ ಮತ್ತು ಕ್ಲಸ್ಟರ್ ಬಸ್ ಸಿಬ್ಬಂದಿಯವರ ಶ್ರಮಕ್ಕೆ ಧನ್ಯವಾದಗಳು ಎಂದು ದೆಹಲಿಯ ಸಾರಿಗೆ ಮಂತ್ರಿ ಕೈಲಾಶ್‌ ಗೆಹ್ಲೋಟ್‌ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...