Homeಮುಖಪುಟಉಚಿತ ಬಸ್‌ ಪಾಸ್‌ - ದಿಲ್ಲಿ ಮಹಿಳೆಯರು ದಿಲ್‌ ಖುಷ್‌.. : ಮುಂದಿನ ಕೊಡುಗೆ ವಿದ್ಯಾರ್ಥಿಗಳು...

ಉಚಿತ ಬಸ್‌ ಪಾಸ್‌ – ದಿಲ್ಲಿ ಮಹಿಳೆಯರು ದಿಲ್‌ ಖುಷ್‌.. : ಮುಂದಿನ ಕೊಡುಗೆ ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರಿಕರಿಗೆ…

ಉಚಿತ ಬಸ್ ಪ್ರಯಾಣವು ಮಹಿಳೆಯರಿಗೆ ಸ್ವಾತಂತ್ರ್ಯವನ್ನು ಮತ್ತು ಅವರ ಕನಸುಗಳನ್ನು ಈಡೇರಿಸುವ ಅವಕಾಶವನ್ನು ನೀಡುತ್ತದೆ...

- Advertisement -
- Advertisement -

ನಿನ್ನೆ ತಾನೇ ದಿಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪಾಸ್‌ ನೀಡುವ ಮೂಲಕ ಲಕ್ಷಾಂತರ ಜನರ ಮನಗೆದ್ದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರಿಕರಿಗೂ ಉಚಿತ ಬಸ್‌ ಪಾಸ್‌ ನೀಡಲು ಚಿಂತನೆ ನಡೆಸಿದ್ದಾರೆ.

ಉಚಿತ ಬಸ್‌ ಪ್ರಯಾಣ ಯೋಜನೆ ಜಾರಿಯಾದ 8 ಗಂಟೆಗಳಲ್ಲಿ 2.2 ಲಕ್ಷ ಮಹಿಳೆಯರು ಈ ಯೋಜನೆಯ ಪ್ರಯೋಜನೆ ಪಡೆದಿದ್ದಾರೆ. ಅವರಲ್ಲಿ ಕೆಲವರು ತಮ್ಮದೇ ಮಾತುಗಳನ್ನು ಯೋಜನೆಯ್ನು ಶ್ಲಾಘಿಸಿದ್ದಾರೆ. ಕೆಲವೊಂದು ಇಲ್ಲಿವೆ.

ದೆಹಲಿಯ ಬಸ್ಸುಗಳಲ್ಲಿ ಮಹಿಳೆಯರಿಗೆ ಪ್ರಯಾಣ ಮತ್ರ ಉಚಿತವಲ್ಲ, ಅವರ ಸುರಕ್ಷತೆಯೂ ಖಾತ್ರಿ ಇದೆ. ಹೇಗೆಂದರೆ ಪ್ರಯಾಣಿಕರ ಸುರಕ್ಷತೆ ಖಚಿತಪಡಿಸಿಕೊಳ್ಳಲು ಪ್ರತಿ ಬಸ್‌ಗಳಲ್ಲಿಯೂ ಸಹ ಮಾರ್ಷಲ್‌ಗಳನ್ನು ನಿಯೋಜಿಸಲಾಗಿದೆ ಎಂದು ದೆಹಲಿಯ ಶ್ವೇತ ಗೋಸ್ವಾಮಿಯವರು ಹರ್ಷ ವ್ಯಕ್ತಪಡಿಸಿದ್ದರೆ.

ಎಎಪಿ ದೆಹಲಿಯ ಉಚಿತ ಬಸ್ ಪ್ರಯಾಣದಿಂದ ಜೀವನದ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂದರೆ “24 ವರ್ಷ ವಯಸ್ಸಿನ ವಿನಿತಾ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಾ ತಿಂಗಳಿಗೆ 12 ಸಾವಿರ ರೂ ಸಂಪಾದಿಸುತ್ತಾಳೆ. ಆದರೆ ಅದರಲ್ಲಿ ಎರಡೂವರೆ ಸಾವಿರ ರೂಗಳನ್ನು ಪ್ರಯಾಣಕ್ಕಾಗಿ ಖರ್ಚು ಮಾಡುತ್ತಿದ್ದಳು. ಈಗ ಆ ಹಣ ಉಳಿದಿದ್ದು ಅವಳು ಖುಷಿಯಾಗಿದ್ದಾಳೆ” ಎಂದು  ಸುಕೃತಿ ದ್ವಿವೇದಿ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಮಹಿಳೆಯರಿಂದ ನೇರ ಪ್ರತಿಕ್ರಿಯೆ ಪಡೆಯಲು ನಾನು ಇದೀಗ ಕೆಲವು ಬಸ್‌ಗಳನ್ನು ಹತ್ತಿದ್ದೇನೆ. ವಿದ್ಯಾರ್ಥಿಗಳು, ದುಡಿಯುವ ಮಹಿಳೆಯರು, ಶಾಪಿಂಗ್‌ಗೆ ಹೋಗುವ ಮಹಿಳೆಯರು ಮಾತ್ರವಲ್ಲದೆ, ನಿಯಮಿತವಾಗಿ ಆಸ್ಪತ್ರೆಗೆ ಭೇಟಿ ನೀಡಬೇಕಾದ ಕೆಲವರನ್ನು ನಾನು ಭೇಟಿಯಾದೆ. ಅವರು ಸಹ ಸಂತೋಷವಾಗಿದ್ದಾರೆ ಎಂದು ಅರವಿಂದ್‌ ಕೇಜ್ರಿವಾಲ್‌ ಟ್ವೀಟ್‌ ಮಾಡಿದ್ದಾರೆ.

ಒಟ್ಟು ವರ್ಕ್‌ ಪೋರ್ಸ್‌‌ನಲ್ಲಿ ದಿಲ್ಲಿಯ ಮಹಿಳೆಯರ ಪಾಲು ತೀರಾ ಕಡಿಮೆಯಿದೆ. ಇದಕ್ಕೆ ಸುರಕ್ಷತೆ ಇಲ್ಲದಿರುವುದು ಸಹ ಕಾರಣವಾಗಿದೆ. ಹಾಗಾಗಿ ಮಹಿಳೆಯರಿಗೆ ದೆಹಲಿಯ ಬಸ್‌ ಮತ್ತು ಮೆಟ್ರೊಗಳಲ್ಲಿ ಉಚಿತ ಪ್ರಯಾಣದ ಜೊತೆಗೆ ಸಿಸಿಕ್ಯಾಮರ, ಮಾರ್ಷಲ್‌ಗಳನ್ನಿಟ್ಟು ಸುರಕ್ಷತೆಯನ್ನು ಖಾತ್ರಿಪಡಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಹೆಚ್ಚು ಮಹಿಳೆಯರು ಕೆಲಸಕ್ಕೆ ಮುಂದಾಗುತ್ತಾರೆ ಎಂಬ ವಿಶ್ವಾಸವಿದೆ ಎಂದು ಕೇಜ್ರಿವಾಲ್‌ ನುಡಿದಿದ್ದಾರೆ.

ಈ ಯೋಜನೆಗೆ ಮಹಿಳೆಯರು ತೋರಿದ ಪ್ರತಿಕ್ರಿಯೆಯ ಮುಂದುವರಿಕೆಯಾಗಿ ಹಿರಿಯ ನಾಗರಿಕರು ಮತ್ತು ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಲು ಚರ್ಚೆ ನಡೆಸುತ್ತೇವೆ ಎಂದಿದ್ದಾರೆ.

ತೀವ್ರ ಅಸಮಾನತೆ ಇರುವ ದೇಶದಲ್ಲಿ, ಮಹಿಳೆಯರು ಇನ್ನೂ ಪ್ರತಿ ಸಣ್ಣ ಖರ್ಚಿಗೆ ತಮ್ಮ ತಂದೆ, ಗಂಡ ಮತ್ತು ಪುತ್ರರಿಂದ ಹಣವನ್ನು ತೆಗೆದುಕೊಳ್ಳಬೇಕಾದರೆ, ಉಚಿತ ಬಸ್ ಪ್ರಯಾಣವು ಮಹಿಳೆಯರಿಗೆ ಸ್ವಾತಂತ್ರ್ಯವನ್ನು ನೀಡುತ್ತದೆ ಮತ್ತು ಅವರ ಕನಸುಗಳನ್ನು ಈಡೇರಿಸುವ ಅವಕಾಶವನ್ನು ನೀಡುತ್ತದೆ ಎಂದು ಆಪ್‌ ನಾಯಕಿ ಅತಿಶಿ ಅಭಿಪ್ರಾಯಪಟ್ಟಿದ್ದಾರೆ.

ದೆಹಲಿಯ ಮಹಿಳೆಯರು ಉಚಿತ ಬಸ್ ಪ್ರಯಾಣವನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಇಂದು ಒಟ್ಟು ಟಿಕೆಟ್ ಪಡೆದ ಪ್ರಯಾಣಿಕರಲ್ಲಿ 33% ಉಚಿತ ‘ಪಿಂಕ್ ಪಾಸ್’ ಪಡೆದ ಮಹಿಳೆಯರಾಗಿದ್ದಾರೆ. 1 ನೇ ದಿನದಿಂದಲೇ ಸುಗಮ ಅನುಷ್ಠಾನವನ್ನು ಖಚಿತಪಡಿಸಿದ ಡಿಟಿಸಿ ಮತ್ತು ಕ್ಲಸ್ಟರ್ ಬಸ್ ಸಿಬ್ಬಂದಿಯವರ ಶ್ರಮಕ್ಕೆ ಧನ್ಯವಾದಗಳು ಎಂದು ದೆಹಲಿಯ ಸಾರಿಗೆ ಮಂತ್ರಿ ಕೈಲಾಶ್‌ ಗೆಹ್ಲೋಟ್‌ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....