Homeಮುಖಪುಟಉಚಿತ ಬಸ್‌ ಪಾಸ್‌ - ದಿಲ್ಲಿ ಮಹಿಳೆಯರು ದಿಲ್‌ ಖುಷ್‌.. : ಮುಂದಿನ ಕೊಡುಗೆ ವಿದ್ಯಾರ್ಥಿಗಳು...

ಉಚಿತ ಬಸ್‌ ಪಾಸ್‌ – ದಿಲ್ಲಿ ಮಹಿಳೆಯರು ದಿಲ್‌ ಖುಷ್‌.. : ಮುಂದಿನ ಕೊಡುಗೆ ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರಿಕರಿಗೆ…

ಉಚಿತ ಬಸ್ ಪ್ರಯಾಣವು ಮಹಿಳೆಯರಿಗೆ ಸ್ವಾತಂತ್ರ್ಯವನ್ನು ಮತ್ತು ಅವರ ಕನಸುಗಳನ್ನು ಈಡೇರಿಸುವ ಅವಕಾಶವನ್ನು ನೀಡುತ್ತದೆ...

- Advertisement -
- Advertisement -

ನಿನ್ನೆ ತಾನೇ ದಿಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪಾಸ್‌ ನೀಡುವ ಮೂಲಕ ಲಕ್ಷಾಂತರ ಜನರ ಮನಗೆದ್ದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರಿಕರಿಗೂ ಉಚಿತ ಬಸ್‌ ಪಾಸ್‌ ನೀಡಲು ಚಿಂತನೆ ನಡೆಸಿದ್ದಾರೆ.

ಉಚಿತ ಬಸ್‌ ಪ್ರಯಾಣ ಯೋಜನೆ ಜಾರಿಯಾದ 8 ಗಂಟೆಗಳಲ್ಲಿ 2.2 ಲಕ್ಷ ಮಹಿಳೆಯರು ಈ ಯೋಜನೆಯ ಪ್ರಯೋಜನೆ ಪಡೆದಿದ್ದಾರೆ. ಅವರಲ್ಲಿ ಕೆಲವರು ತಮ್ಮದೇ ಮಾತುಗಳನ್ನು ಯೋಜನೆಯ್ನು ಶ್ಲಾಘಿಸಿದ್ದಾರೆ. ಕೆಲವೊಂದು ಇಲ್ಲಿವೆ.

ದೆಹಲಿಯ ಬಸ್ಸುಗಳಲ್ಲಿ ಮಹಿಳೆಯರಿಗೆ ಪ್ರಯಾಣ ಮತ್ರ ಉಚಿತವಲ್ಲ, ಅವರ ಸುರಕ್ಷತೆಯೂ ಖಾತ್ರಿ ಇದೆ. ಹೇಗೆಂದರೆ ಪ್ರಯಾಣಿಕರ ಸುರಕ್ಷತೆ ಖಚಿತಪಡಿಸಿಕೊಳ್ಳಲು ಪ್ರತಿ ಬಸ್‌ಗಳಲ್ಲಿಯೂ ಸಹ ಮಾರ್ಷಲ್‌ಗಳನ್ನು ನಿಯೋಜಿಸಲಾಗಿದೆ ಎಂದು ದೆಹಲಿಯ ಶ್ವೇತ ಗೋಸ್ವಾಮಿಯವರು ಹರ್ಷ ವ್ಯಕ್ತಪಡಿಸಿದ್ದರೆ.

ಎಎಪಿ ದೆಹಲಿಯ ಉಚಿತ ಬಸ್ ಪ್ರಯಾಣದಿಂದ ಜೀವನದ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂದರೆ “24 ವರ್ಷ ವಯಸ್ಸಿನ ವಿನಿತಾ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಾ ತಿಂಗಳಿಗೆ 12 ಸಾವಿರ ರೂ ಸಂಪಾದಿಸುತ್ತಾಳೆ. ಆದರೆ ಅದರಲ್ಲಿ ಎರಡೂವರೆ ಸಾವಿರ ರೂಗಳನ್ನು ಪ್ರಯಾಣಕ್ಕಾಗಿ ಖರ್ಚು ಮಾಡುತ್ತಿದ್ದಳು. ಈಗ ಆ ಹಣ ಉಳಿದಿದ್ದು ಅವಳು ಖುಷಿಯಾಗಿದ್ದಾಳೆ” ಎಂದು  ಸುಕೃತಿ ದ್ವಿವೇದಿ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಮಹಿಳೆಯರಿಂದ ನೇರ ಪ್ರತಿಕ್ರಿಯೆ ಪಡೆಯಲು ನಾನು ಇದೀಗ ಕೆಲವು ಬಸ್‌ಗಳನ್ನು ಹತ್ತಿದ್ದೇನೆ. ವಿದ್ಯಾರ್ಥಿಗಳು, ದುಡಿಯುವ ಮಹಿಳೆಯರು, ಶಾಪಿಂಗ್‌ಗೆ ಹೋಗುವ ಮಹಿಳೆಯರು ಮಾತ್ರವಲ್ಲದೆ, ನಿಯಮಿತವಾಗಿ ಆಸ್ಪತ್ರೆಗೆ ಭೇಟಿ ನೀಡಬೇಕಾದ ಕೆಲವರನ್ನು ನಾನು ಭೇಟಿಯಾದೆ. ಅವರು ಸಹ ಸಂತೋಷವಾಗಿದ್ದಾರೆ ಎಂದು ಅರವಿಂದ್‌ ಕೇಜ್ರಿವಾಲ್‌ ಟ್ವೀಟ್‌ ಮಾಡಿದ್ದಾರೆ.

ಒಟ್ಟು ವರ್ಕ್‌ ಪೋರ್ಸ್‌‌ನಲ್ಲಿ ದಿಲ್ಲಿಯ ಮಹಿಳೆಯರ ಪಾಲು ತೀರಾ ಕಡಿಮೆಯಿದೆ. ಇದಕ್ಕೆ ಸುರಕ್ಷತೆ ಇಲ್ಲದಿರುವುದು ಸಹ ಕಾರಣವಾಗಿದೆ. ಹಾಗಾಗಿ ಮಹಿಳೆಯರಿಗೆ ದೆಹಲಿಯ ಬಸ್‌ ಮತ್ತು ಮೆಟ್ರೊಗಳಲ್ಲಿ ಉಚಿತ ಪ್ರಯಾಣದ ಜೊತೆಗೆ ಸಿಸಿಕ್ಯಾಮರ, ಮಾರ್ಷಲ್‌ಗಳನ್ನಿಟ್ಟು ಸುರಕ್ಷತೆಯನ್ನು ಖಾತ್ರಿಪಡಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಹೆಚ್ಚು ಮಹಿಳೆಯರು ಕೆಲಸಕ್ಕೆ ಮುಂದಾಗುತ್ತಾರೆ ಎಂಬ ವಿಶ್ವಾಸವಿದೆ ಎಂದು ಕೇಜ್ರಿವಾಲ್‌ ನುಡಿದಿದ್ದಾರೆ.

ಈ ಯೋಜನೆಗೆ ಮಹಿಳೆಯರು ತೋರಿದ ಪ್ರತಿಕ್ರಿಯೆಯ ಮುಂದುವರಿಕೆಯಾಗಿ ಹಿರಿಯ ನಾಗರಿಕರು ಮತ್ತು ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಲು ಚರ್ಚೆ ನಡೆಸುತ್ತೇವೆ ಎಂದಿದ್ದಾರೆ.

ತೀವ್ರ ಅಸಮಾನತೆ ಇರುವ ದೇಶದಲ್ಲಿ, ಮಹಿಳೆಯರು ಇನ್ನೂ ಪ್ರತಿ ಸಣ್ಣ ಖರ್ಚಿಗೆ ತಮ್ಮ ತಂದೆ, ಗಂಡ ಮತ್ತು ಪುತ್ರರಿಂದ ಹಣವನ್ನು ತೆಗೆದುಕೊಳ್ಳಬೇಕಾದರೆ, ಉಚಿತ ಬಸ್ ಪ್ರಯಾಣವು ಮಹಿಳೆಯರಿಗೆ ಸ್ವಾತಂತ್ರ್ಯವನ್ನು ನೀಡುತ್ತದೆ ಮತ್ತು ಅವರ ಕನಸುಗಳನ್ನು ಈಡೇರಿಸುವ ಅವಕಾಶವನ್ನು ನೀಡುತ್ತದೆ ಎಂದು ಆಪ್‌ ನಾಯಕಿ ಅತಿಶಿ ಅಭಿಪ್ರಾಯಪಟ್ಟಿದ್ದಾರೆ.

ದೆಹಲಿಯ ಮಹಿಳೆಯರು ಉಚಿತ ಬಸ್ ಪ್ರಯಾಣವನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಇಂದು ಒಟ್ಟು ಟಿಕೆಟ್ ಪಡೆದ ಪ್ರಯಾಣಿಕರಲ್ಲಿ 33% ಉಚಿತ ‘ಪಿಂಕ್ ಪಾಸ್’ ಪಡೆದ ಮಹಿಳೆಯರಾಗಿದ್ದಾರೆ. 1 ನೇ ದಿನದಿಂದಲೇ ಸುಗಮ ಅನುಷ್ಠಾನವನ್ನು ಖಚಿತಪಡಿಸಿದ ಡಿಟಿಸಿ ಮತ್ತು ಕ್ಲಸ್ಟರ್ ಬಸ್ ಸಿಬ್ಬಂದಿಯವರ ಶ್ರಮಕ್ಕೆ ಧನ್ಯವಾದಗಳು ಎಂದು ದೆಹಲಿಯ ಸಾರಿಗೆ ಮಂತ್ರಿ ಕೈಲಾಶ್‌ ಗೆಹ್ಲೋಟ್‌ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...