Homeಕರ್ನಾಟಕಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಿಸಿದ ಪಂಜಾಬ್ ಸರ್ಕಾರ

ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಿಸಿದ ಪಂಜಾಬ್ ಸರ್ಕಾರ

- Advertisement -
- Advertisement -

ಇಂದಿನಿಂದ (ಏಪ್ರಿಲ್ 01) ಪಂಜಾಬ್ ರಾಜ್ಯದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಸಿಗಲಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಘೋಷಿಸಿದ್ದಾರೆ. ಸಂಪುಟ ಸಭೆ ಈ ಯೋಜನೆಗೆ ಬುಧವಾರ ಅನುಮೋದನೆ ನೀಡಿದೆ.

ಪಂಜಾಬ್ ರಾಜ್ಯದ ಮಹಿಳೆಯರು ಮತ್ತು ಯುವತಿಯರನ್ನು ಸಬಲೀಕರಣಗೊಳಿಸುವ ಸರ್ಕಾರದ ಪ್ರಯತ್ನಗಳ ಭಾಗವಾಗಿ ಮುಖ್ಯಮಂತ್ರಿ ಮಾರ್ಚ್ 5 ರಂದು ವಿಧಾನಸಭೆಯಲ್ಲಿ ಉಚಿತ ಪ್ರಯಾಣ ಯೋಜನೆಯನ್ನು ಘೋಷಿಸಿದ್ದರು ಎಂದು ಸರ್ಕಾರದ ಅಧಿಕೃತ ಹೇಳಿಕೆ ತಿಳಿಸಿದೆ.

ಪಂಜಾಬ್ ರಾಜ್ಯದ 1.31 ಕೋಟಿ ಮಹಿಳೆಯರು ಮತ್ತು ಯುವತಿಯರು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ. 2011 ರ ಜನಗಣತಿಯ ಪ್ರಕಾರ, ಪಂಜಾಬ್‌ನಲ್ಲಿ 2.77 ಕೋಟಿ ಜನಸಂಖ್ಯೆ ಇದೆ (ಪುರುಷರು 1,46,39,465 ಮತ್ತು ಮಹಿಳೆಯರು 1,31,03,873).

ಕಳೆದ ಬಾರಿಯ ದೆಹಲಿ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಾರ್ಟಿಯ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಇದೇ ರೀತಿ ಮಹಿಳೆಯರಿಗೆ ಉಚಿತ ಪ್ರಯಣ ಸೇವೆ ನಿಡುವ ಕ್ರಮ ಕೈಗೊಂಡಿದ್ದರು. ಬಸ್ ಮತ್ತು ಮೆಟ್ರೋ ಎರಡರಲ್ಲಿಯೂ ಉಚಿತ ಪ್ರಯಾನ ಎಂದು ಘೋಷಿಸಿದ್ದರು. ಮುಂದಿನ ವರ್ಷದ ಆರಂಭದಲ್ಲಿ ಪಂಜಾಬ್ ರಾಜ್ಯದಲ್ಲಿಯೂ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಈ ಯೋಜನೆಯಡಿ, ಪಂಜಾಬ್‌ನ ಮಹಿಳೆಯರು ಪಂಜಾಬ್ ರಸ್ತೆ ಸಾರಿಗೆ ನಿಗಮ (PRTC), ಪಂಜಾಬ್ ರಸ್ತೆ ಮಾರ್ಗ ಬಸ್‌ಗಳು (PUNBUS) ಮತ್ತು ಸ್ಥಳೀಯ ಸಂಸ್ಥೆಗಳಿಂದ ನಿರ್ವಹಿಸಲ್ಪಡುವ ನಗರ ಬಸ್ ಸೇವೆಗಳನ್ನು ಒಳಗೊಂಡಂತೆ ಸರ್ಕಾರಿ ಸ್ವಾಮ್ಯದ ಬಸ್‌ಗಳಲ್ಲಿ ಉಚಿತ ಬಸ್ ಪ್ರಯಾಣವನ್ನು ಪಡೆಯಬಹುದು.

ಆದರೆ, ಈ ಯೋಜನೆಯು ಸರ್ಕಾರಿ ಸ್ವಾಮ್ಯದ ಎಸಿ ಬಸ್‌ಗಳು, ವೋಲ್ವೋ ಬಸ್‌ಗಳು ಮತ್ತು ಎಚ್‌ವಿಎಸಿ (HVAC) ಬಸ್‌ಗಳಿಗೆ ಅನ್ವಯಿಸುವುದಿಲ್ಲ. ಸೌಲಭ್ಯವನ್ನು ಪಡೆಯಲು ಆಧಾರ್ ಕಾರ್ಡ್, ಮತದಾರರ ಕಾರ್ಡ್ ಅಥವಾ ಪಂಜಾಬ್‌ ನಿವಾಸಿಗಳೆಂದು ಹೇಳುವ ಯಾವುದಾದರೂ ದಾಖಲೆಗಳನ್ನು ನೀಡಬೇಕಾಗುತ್ತದೆ.

ಈ ಯೋಜನೆಯು ಸಾರಿಗೆಯ ದರದಿಂದಾಗಿ ಶಾಲೆ ಬಿಡುವ ಹೆಣ್ಣು ಮಕ್ಕಳನ್ನು ಕಡಿಮೆ ಮಾಡುವುದಲ್ಲದೆ, ಕೆಲಸ ಮಾಡುವ ಮಹಿಳೆಯರಿಗೆ ಅನುಕೂಲವಾಗಲಿದೆ ಎಂದು ಹೇಳಲಾಗಿದೆ. ಕೆಲಸದ ಸ್ಥಳಕ್ಕೆ ಸಾಕಷ್ಟು ದೂರ ಪ್ರಯಾಣಿಸುವ ಮಹಿಳೆಯರಿಗೆ ಯಾವುದೇ ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಸಹಾಯಕವಾಗಲಿದೆ ಎಂದು ಸರ್ಕಾರ ತಿಳಿಸಿದೆ.

ಜೊತೆಗೆ ಈ ಯೋಜನೆಯಿಂದ ರಸ್ತೆಗಳಲ್ಲಿ ಸಂಚರಿಸುವ ವೈಯಕ್ತಿಕ ವಾಹನಗಳ ಸಂಖ್ಯೆ ಕಡಿಮೆಗೊಳ್ಳುತ್ತವೆ. ಇದರಿಂದ ವಾಯುಮಾಲಿನ್ಯ, ಅಪಘಾತಗಳು ಮತ್ತು ವಾಹನ ದಟ್ಟಣೆ ಕಡಿಮೆಯಾಗುತ್ತದೆ ಎಂದು ಕ್ಯಾಬಿನೆಟ್ ಅಭಿಪ್ರಾಯಪಟ್ಟಿದೆ.


ಇದನ್ನೂ ಓದಿ: ಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...