Homeಮುಖಪುಟಉಚಿತ ಕೊರೊನಾ ಲಸಿಕೆ: ಬಿಹಾರದ ನಂತರ ಇದೀಗ ಮಧ್ಯಪ್ರದೇಶ!

ಉಚಿತ ಕೊರೊನಾ ಲಸಿಕೆ: ಬಿಹಾರದ ನಂತರ ಇದೀಗ ಮಧ್ಯಪ್ರದೇಶ!

ಇನ್ನೂ ಬಾರದ ಲಸಿಕೆಯನ್ನು ಉಚಿತವಾಗಿ ಕೊಡುತ್ತೇವೆ ಎನ್ನುತ್ತಿರುವ ಬಿಜೆಪಿ ಸರ್ಕಾರ ಕೊರೊನಾವನ್ನು ತನ್ನ ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಹಲವರು ಖಂಡಿಸಿದ್ದಾರೆ.

- Advertisement -
- Advertisement -

ಬಿಹಾರದಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಉಚಿತ ಕೋವಿಡ್ ಲಸಿಕೆ ನೀಡುವ ಭರವಸೆ ನೀಡಿದ ಕೆಲವು ದಿನಗಳ ನಂತರ, ಮಧ್ಯಪ್ರದೇಶದಲ್ಲಿ ನವೆಂಬರ್ 3 ರಂದು ನಡೆಯಲಿರುವ 28 ವಿಧಾನಸಭಾ ಉಪಚುನಾವಣೆಗಾಗಿ ಅಲ್ಲಿನ ಆಡಳಿತಾರೂಢ ಬಿಜೆಪಿ ಪಕ್ಷವೂ ತನ್ನ ಪ್ರಣಾಳಿಕೆಯಲ್ಲಿ ಉಚಿತ ಕೊರೊನ ಲಸಿಕೆ ನೀಡುವುದಾಗಿ ಘೋಷಿಸಿದೆ.

ಪ್ರತಿಪಕ್ಷ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಇಡೀ ರಾಜ್ಯಕ್ಕೆ 52 ಅಂಶಗಳ ಅಭಿವೃದ್ಧಿ ಯೋಜನೆಯ ಭರವಸೆ ನೀಡಿದೆ.

ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ ವಿವಾದ: ಬಿಹಾರೇತರ ರಾಜ್ಯದವರು ಬಾಂಗ್ಲಾದೇಶದವರೇ- ಶಿವಸೇನೆ ಪ್ರಶ್ನೆ

ಆಡಳಿತಾರೂಢ ಬಿಜೆಪಿಯೂ ಸಹ ಉಪ-ಚುನಾವಣಾ ಪ್ರಣಾಳಿಕೆಯ ಭಾಗವಾಗಿ, ರಾಜ್ಯದಲ್ಲಿ ಉಚಿತ ಕೋವಿಡ್ ಲಸಿಕೆ ಸೇರಿದಂತೆ ಇಡೀ ರಾಜ್ಯಕ್ಕೆ ಕೆಲವು ಸಾಮಾನ್ಯ ಭರವಸೆಗಳನ್ನು ನೀಡಿದೆ.

ಕಾಂಗ್ರೆಸ್ ಪಕ್ಷವು ಸಾಲಮನ್ನಾ ಭರವಸೆಗೆ ಕೌಂಟರ್‌ ಆಗಿ ಬಿಜೆಪಿಯು ಉಚಿತ ಲಸಿಕೆಯ ಪ್ರಸ್ತಾವವನ್ನು ಮುಂದಿಟ್ಟಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ನಮ್ಮ ಜನತೆಗೆ ಉಚಿತ ಕೊರೊನಾ ಲಸಿಕೆ ಕೊಡಿಸುವ ಧಮ್ ಇದೆಯೇ ನಳಿನ್ ಕುಮಾರ್?- ಸಿದ್ದು ಗರಂ

ಬಿಜೆಪಿಯ ಭರವಸೆಯನ್ನು ಪ್ರಶ್ನಿಸಿದ ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ಭೂಪೇಂದ್ರ ಗುಪ್ತಾ, “ಇಡೀ ಜಗತ್ತು ಇನ್ನೂ ಕೊರೊನಾ ವೈರಸ್ ವಿರುದ್ಧ ಪ್ರಬಲವಾದ ಲಸಿಕೆಯನ್ನು ಅಭಿವೃದ್ಧಿಪಡಿಸುವಲ್ಲಿ ಕೆಲಸ ಮಾಡುತ್ತಿರುವಾಗ, ಬಿಜೆಪಿಯು ರಾಜ್ಯದ ಪ್ರತಿಯೊಬ್ಬ ವ್ಯಕ್ತಿಗೂ ಉಚಿತ ಲಸಿಕೆ ನೀಡುವ ಭರವಸೆ ಹೇಗೆ ನೀಡುತ್ತಿದೆ? ಸಿಎಂ ಚೌಹಾನ್ ತಮ್ಮ ಜೂ಼ತ್‌ಕಿ ಸರ್ಕಾರ್ (ಸುಳ್ಳಿನ ಸರ್ಕಾರ) ನಡೆಸುವುದನ್ನು ನಿಲ್ಲಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯ ಪ್ರಣಾಳಿಕೆಯನ್ನು ಅನುಪ್ಪೂರು ಜಿಲ್ಲೆಯಲ್ಲಿ ಸಿಎಂ ಶಿವರಾಜ್ ಸಿಂಗ್ ಚೌಹಾನ್ ಮತ್ತು ಮಾಜಿ ಸಿಎಂ ಉಮಾ ಭಾರತಿ ರೈಸನ್ ಜಿಲ್ಲೆಯ ಸಾಂಚಿ ಕ್ಷೇತ್ರದಲ್ಲಿ ಬಿಡುಗಡೆ ಮಾಡಿದರು.

ಇದನ್ನೂ ಓದಿ: ಇನ್ನೂ ಆವಿಷ್ಕಾರವಾಗದ ಕೊರೊನಾ ಲಸಿಕೆಯನ್ನು ಉಚಿತ ನೀಡುತ್ತೇವೆಂದ BJP!

ಆ ಪ್ರದೇಶಗಳ ಕುಡಿಯುವ ನೀರಿನ ಅಗತ್ಯಗಳನ್ನು ಪರಿಹರಿಸಲು ನರ್ಮದಾ, ಬೆಟ್ವಾ, ಚಂಬಲ್ ಮತ್ತು ಪಾರ್ವತಿಯಿಂದ ನೀರನ್ನು ಈ ನದಿಗಳಿಗೆ ಹತ್ತಿರವಿರುವ ಪ್ರದೇಶಗಳಿಗೆ ಕೊಂಡೊಯ್ಯುವಂತಹ ಮಹತ್ವಾಕಾಂಕ್ಷೆಯ ಯೋಜನೆಗಳಿಗೆ ಇದರಲ್ಲಿ ಭರವಸೆ ನೀಡಲಾಗಿದೆ.

ಬಿಹಾರದಲ್ಲಿ ಎನ್‌ಡಿಎ ಮೈತ್ರಿ ಕೂಟವು ಉಚಿತ ಲಸಿಕೆಯ ಭರವಸೆ ನೀಡಿದ ನಂತರ ತಮಿಳುನಾಡು ಸರ್ಕಾರವೂ ಕೂಡ ಇದೇ ಭರವಸೆಯನ್ನು ನೀಡಿದೆ. ಬಿಜೆಪಿಯ ಈ ಧೋರಣೆಯನ್ನು ಖಂಡಿಸಿ ವಿರೋಧ ಪಕ್ಷಗಳೂ ಸೇರಿದಂತೆ ಅನೇಕರು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ಬಿಜೆಪಿಯು ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ಗೂ ಒಳಗಾಗಿತ್ತು. ಬಿಹಾರೇತರ ರಾಜ್ಯದವರು ಬಾಂಗ್ಲಾದೇಶದವರೇ ಎಂದು ಶಿವಸೇನೆ ಪ್ರಶ್ನೆ ಮಾಡಿತ್ತು. ನಮ್ಮ ಜನತೆಗೆ ಉಚಿತ ಕೊರೊನಾ ಲಸಿಕೆ ಕೊಡಿಸುವ ಧಮ್ ಇದೆಯೇ ನಳಿನ್ ಕುಮಾರ್? ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದರು. ಇನ್ನೂ ಕೆಲವರು ತೀವ್ರವಾಗಿ ಪ್ರತಿಕ್ರಿಯಿಸಿದ್ದು, ಇದು ಬಿಜೆಪಿಯ ಕೊಳಕು ರಾಜಕೀಯ ಎಂದು ಖಂಡಿಸಿದ್ದಾರೆ.

ಇನ್ನೂ ಬಾರದ ಲಸಿಕೆಯನ್ನು ಉಚಿತವಾಗಿ ಕೊಡುತ್ತೇವೆ ಎಂದಿರುವ ಬಿಜೆಪಿ ಸರ್ಕಾರ ಕೊರೊನಾ ಸಾಂಕ್ರಾಮಿಕ ರೋಗವನ್ನು ತನ್ನ ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ. ಇದರಿಂದ ಬಿಜೆಪಿಯ ಸ್ಪಷ್ಟ ಧೋರಣೆ ವ್ಯಕ್ತವಾಗುತ್ತಿದೆ. ಬಿಜೆಪಿಯೇತರ ರಾಜ್ಯಗಳಲ್ಲಿ ಲಸಿಕೆ ಮರೀಚಿಕೆಯಾಗಬಹುದು. ಬೇಜವಾಬ್ದಾರಿಯುತ ಸರ್ಕಾರದ ಈ ನಿಲುವು ಭಾರತದ ಎಷ್ಟು ಸಾಮಾನ್ಯ ಜನರನ್ನು ಬಲಿತೆಗೆದುಕೊಳ್ಳಲಿದೆಯೋ ಎಂಬುದನ್ನು ಕಾದು ನೋಡಬೇಕಿದೆ.


ಇದನ್ನೂ ಓದಿ: ಕೊರೊನಾ ನೆಪ: 10ಸಾವಿರ ಕೋಟಿ ಹಗರಣ- ಎಎಪಿಯ ಪೃಥ್ವಿ ರೆಡ್ಡಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...