Homeಮುಖಪುಟಉಚಿತ ಕೊರೊನಾ ಲಸಿಕೆ: ಬಿಹಾರದ ನಂತರ ಇದೀಗ ಮಧ್ಯಪ್ರದೇಶ!

ಉಚಿತ ಕೊರೊನಾ ಲಸಿಕೆ: ಬಿಹಾರದ ನಂತರ ಇದೀಗ ಮಧ್ಯಪ್ರದೇಶ!

ಇನ್ನೂ ಬಾರದ ಲಸಿಕೆಯನ್ನು ಉಚಿತವಾಗಿ ಕೊಡುತ್ತೇವೆ ಎನ್ನುತ್ತಿರುವ ಬಿಜೆಪಿ ಸರ್ಕಾರ ಕೊರೊನಾವನ್ನು ತನ್ನ ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಹಲವರು ಖಂಡಿಸಿದ್ದಾರೆ.

- Advertisement -
- Advertisement -

ಬಿಹಾರದಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಉಚಿತ ಕೋವಿಡ್ ಲಸಿಕೆ ನೀಡುವ ಭರವಸೆ ನೀಡಿದ ಕೆಲವು ದಿನಗಳ ನಂತರ, ಮಧ್ಯಪ್ರದೇಶದಲ್ಲಿ ನವೆಂಬರ್ 3 ರಂದು ನಡೆಯಲಿರುವ 28 ವಿಧಾನಸಭಾ ಉಪಚುನಾವಣೆಗಾಗಿ ಅಲ್ಲಿನ ಆಡಳಿತಾರೂಢ ಬಿಜೆಪಿ ಪಕ್ಷವೂ ತನ್ನ ಪ್ರಣಾಳಿಕೆಯಲ್ಲಿ ಉಚಿತ ಕೊರೊನ ಲಸಿಕೆ ನೀಡುವುದಾಗಿ ಘೋಷಿಸಿದೆ.

ಪ್ರತಿಪಕ್ಷ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಇಡೀ ರಾಜ್ಯಕ್ಕೆ 52 ಅಂಶಗಳ ಅಭಿವೃದ್ಧಿ ಯೋಜನೆಯ ಭರವಸೆ ನೀಡಿದೆ.

ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ ವಿವಾದ: ಬಿಹಾರೇತರ ರಾಜ್ಯದವರು ಬಾಂಗ್ಲಾದೇಶದವರೇ- ಶಿವಸೇನೆ ಪ್ರಶ್ನೆ

ಆಡಳಿತಾರೂಢ ಬಿಜೆಪಿಯೂ ಸಹ ಉಪ-ಚುನಾವಣಾ ಪ್ರಣಾಳಿಕೆಯ ಭಾಗವಾಗಿ, ರಾಜ್ಯದಲ್ಲಿ ಉಚಿತ ಕೋವಿಡ್ ಲಸಿಕೆ ಸೇರಿದಂತೆ ಇಡೀ ರಾಜ್ಯಕ್ಕೆ ಕೆಲವು ಸಾಮಾನ್ಯ ಭರವಸೆಗಳನ್ನು ನೀಡಿದೆ.

ಕಾಂಗ್ರೆಸ್ ಪಕ್ಷವು ಸಾಲಮನ್ನಾ ಭರವಸೆಗೆ ಕೌಂಟರ್‌ ಆಗಿ ಬಿಜೆಪಿಯು ಉಚಿತ ಲಸಿಕೆಯ ಪ್ರಸ್ತಾವವನ್ನು ಮುಂದಿಟ್ಟಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ನಮ್ಮ ಜನತೆಗೆ ಉಚಿತ ಕೊರೊನಾ ಲಸಿಕೆ ಕೊಡಿಸುವ ಧಮ್ ಇದೆಯೇ ನಳಿನ್ ಕುಮಾರ್?- ಸಿದ್ದು ಗರಂ

ಬಿಜೆಪಿಯ ಭರವಸೆಯನ್ನು ಪ್ರಶ್ನಿಸಿದ ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ಭೂಪೇಂದ್ರ ಗುಪ್ತಾ, “ಇಡೀ ಜಗತ್ತು ಇನ್ನೂ ಕೊರೊನಾ ವೈರಸ್ ವಿರುದ್ಧ ಪ್ರಬಲವಾದ ಲಸಿಕೆಯನ್ನು ಅಭಿವೃದ್ಧಿಪಡಿಸುವಲ್ಲಿ ಕೆಲಸ ಮಾಡುತ್ತಿರುವಾಗ, ಬಿಜೆಪಿಯು ರಾಜ್ಯದ ಪ್ರತಿಯೊಬ್ಬ ವ್ಯಕ್ತಿಗೂ ಉಚಿತ ಲಸಿಕೆ ನೀಡುವ ಭರವಸೆ ಹೇಗೆ ನೀಡುತ್ತಿದೆ? ಸಿಎಂ ಚೌಹಾನ್ ತಮ್ಮ ಜೂ಼ತ್‌ಕಿ ಸರ್ಕಾರ್ (ಸುಳ್ಳಿನ ಸರ್ಕಾರ) ನಡೆಸುವುದನ್ನು ನಿಲ್ಲಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯ ಪ್ರಣಾಳಿಕೆಯನ್ನು ಅನುಪ್ಪೂರು ಜಿಲ್ಲೆಯಲ್ಲಿ ಸಿಎಂ ಶಿವರಾಜ್ ಸಿಂಗ್ ಚೌಹಾನ್ ಮತ್ತು ಮಾಜಿ ಸಿಎಂ ಉಮಾ ಭಾರತಿ ರೈಸನ್ ಜಿಲ್ಲೆಯ ಸಾಂಚಿ ಕ್ಷೇತ್ರದಲ್ಲಿ ಬಿಡುಗಡೆ ಮಾಡಿದರು.

ಇದನ್ನೂ ಓದಿ: ಇನ್ನೂ ಆವಿಷ್ಕಾರವಾಗದ ಕೊರೊನಾ ಲಸಿಕೆಯನ್ನು ಉಚಿತ ನೀಡುತ್ತೇವೆಂದ BJP!

ಆ ಪ್ರದೇಶಗಳ ಕುಡಿಯುವ ನೀರಿನ ಅಗತ್ಯಗಳನ್ನು ಪರಿಹರಿಸಲು ನರ್ಮದಾ, ಬೆಟ್ವಾ, ಚಂಬಲ್ ಮತ್ತು ಪಾರ್ವತಿಯಿಂದ ನೀರನ್ನು ಈ ನದಿಗಳಿಗೆ ಹತ್ತಿರವಿರುವ ಪ್ರದೇಶಗಳಿಗೆ ಕೊಂಡೊಯ್ಯುವಂತಹ ಮಹತ್ವಾಕಾಂಕ್ಷೆಯ ಯೋಜನೆಗಳಿಗೆ ಇದರಲ್ಲಿ ಭರವಸೆ ನೀಡಲಾಗಿದೆ.

ಬಿಹಾರದಲ್ಲಿ ಎನ್‌ಡಿಎ ಮೈತ್ರಿ ಕೂಟವು ಉಚಿತ ಲಸಿಕೆಯ ಭರವಸೆ ನೀಡಿದ ನಂತರ ತಮಿಳುನಾಡು ಸರ್ಕಾರವೂ ಕೂಡ ಇದೇ ಭರವಸೆಯನ್ನು ನೀಡಿದೆ. ಬಿಜೆಪಿಯ ಈ ಧೋರಣೆಯನ್ನು ಖಂಡಿಸಿ ವಿರೋಧ ಪಕ್ಷಗಳೂ ಸೇರಿದಂತೆ ಅನೇಕರು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ಬಿಜೆಪಿಯು ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ಗೂ ಒಳಗಾಗಿತ್ತು. ಬಿಹಾರೇತರ ರಾಜ್ಯದವರು ಬಾಂಗ್ಲಾದೇಶದವರೇ ಎಂದು ಶಿವಸೇನೆ ಪ್ರಶ್ನೆ ಮಾಡಿತ್ತು. ನಮ್ಮ ಜನತೆಗೆ ಉಚಿತ ಕೊರೊನಾ ಲಸಿಕೆ ಕೊಡಿಸುವ ಧಮ್ ಇದೆಯೇ ನಳಿನ್ ಕುಮಾರ್? ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದರು. ಇನ್ನೂ ಕೆಲವರು ತೀವ್ರವಾಗಿ ಪ್ರತಿಕ್ರಿಯಿಸಿದ್ದು, ಇದು ಬಿಜೆಪಿಯ ಕೊಳಕು ರಾಜಕೀಯ ಎಂದು ಖಂಡಿಸಿದ್ದಾರೆ.

ಇನ್ನೂ ಬಾರದ ಲಸಿಕೆಯನ್ನು ಉಚಿತವಾಗಿ ಕೊಡುತ್ತೇವೆ ಎಂದಿರುವ ಬಿಜೆಪಿ ಸರ್ಕಾರ ಕೊರೊನಾ ಸಾಂಕ್ರಾಮಿಕ ರೋಗವನ್ನು ತನ್ನ ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ. ಇದರಿಂದ ಬಿಜೆಪಿಯ ಸ್ಪಷ್ಟ ಧೋರಣೆ ವ್ಯಕ್ತವಾಗುತ್ತಿದೆ. ಬಿಜೆಪಿಯೇತರ ರಾಜ್ಯಗಳಲ್ಲಿ ಲಸಿಕೆ ಮರೀಚಿಕೆಯಾಗಬಹುದು. ಬೇಜವಾಬ್ದಾರಿಯುತ ಸರ್ಕಾರದ ಈ ನಿಲುವು ಭಾರತದ ಎಷ್ಟು ಸಾಮಾನ್ಯ ಜನರನ್ನು ಬಲಿತೆಗೆದುಕೊಳ್ಳಲಿದೆಯೋ ಎಂಬುದನ್ನು ಕಾದು ನೋಡಬೇಕಿದೆ.


ಇದನ್ನೂ ಓದಿ: ಕೊರೊನಾ ನೆಪ: 10ಸಾವಿರ ಕೋಟಿ ಹಗರಣ- ಎಎಪಿಯ ಪೃಥ್ವಿ ರೆಡ್ಡಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...