Homeಮುಖಪುಟಗೋವಾ : ಅರವಿಂದ್ ಕೇಜ್ರಿವಾಲ್‌ರಿಂದ ಮತ್ತೆ ಉಚಿತ ವಿದ್ಯುತ್ ಯೋಜನೆ ಘೋಷಣೆ

ಗೋವಾ : ಅರವಿಂದ್ ಕೇಜ್ರಿವಾಲ್‌ರಿಂದ ಮತ್ತೆ ಉಚಿತ ವಿದ್ಯುತ್ ಯೋಜನೆ ಘೋಷಣೆ

- Advertisement -
- Advertisement -

300 ಯುನಿಟ್ ಉಚಿತ ವಿದ್ಯುತ್ ಯೋಜನೆಯನ್ನು ಅರವಿಂದ್ ಕೇಜ್ರಿವಾಲ್ ಇತ್ತಿಚೆಗೆ ಉತ್ತರಾಖಂಡ ಚುನಾವಣೆಗೆ ಮುಂಚಿತವಾಗಿ ತಮ್ಮ ಪ್ರಣಾಳಿಕೆ ಎಂಬಂತೆ ಘೋಷಿಸಿದ್ದರು. ಇದೇ ಮಂತ್ರವನ್ನು ಮತ್ತೆ ಗೋವಾ ಚುನಾವಣೆಗೂ ಬಳಸಲು ಎಎಪಿ ಯೋಜಿಸಿದೆ.

ಫೆಬ್ರವರಿಯಲ್ಲಿ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ ಜಯಗಳಿಸಿದರೇ, ಗೋವಾದಲ್ಲಿನ ಪ್ರತಿ ಕುಟುಂಬಕ್ಕೆ ತಿಂಗಳಿಗೆ 300 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತದೆ ಎಂದುದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ.

40 ಸದಸ್ಯರ ಗೋವಾ ವಿಧಾನಸಭೆಗೆ ಮುಂದಿನ ವರ್ಷ ಫೆಬ್ರವರಿಯಲ್ಲಿ ಚುನಾವಣೆ ನಡೆಯಲಿದೆ. “ದೆಹಲಿಯ ಜನರು ಉಚಿತ ವಿದ್ಯುತ್ ಪಡೆಯಲು ಸಾಧ್ಯವಾದರೆ, ಗೋವಾದ ಜನರಿಗೆ ಏಕೆ ಉಚಿತ ವಿದ್ಯುತ್ ನೀಡಬಾರದು” ಎಂದು ಪ್ರಶ್ನಿಸಿದ್ದಾರೆ. ಗೋವಾ ವಿದ್ಯುತ್ ಉತ್ಪಾದಿಸುವ ರಾಜ್ಯವಾಗಿದ್ದರೂ, ಗೋವಾದಲ್ಲಿ ಆಗಾಗ್ಗೆ ವಿದ್ಯುತ್ ಕಡಿತ ಆಗುತ್ತಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿದ್ಯುತ್ ದೀಪ ಅಳವಡಿಸಲು ಕೋರಿದ ಗ್ರಾಮಸ್ಥ: ಬಿಜೆಪಿಗೆ ಮತ ನೀಡಿದ್ದೆ ಎಂದು ಪ್ರಮಾಣ ಮಾಡಲು ಹೇಳಿದ ಶಾಸಕ!

ಕಳೆದ ವರ್ಷ ಗೋವಾದಲ್ಲಿ ನಡೆದ ವಿಧಾನಸಭಾ ಚುನಾವಣೆಯ ನಂತರ ಕಾಂಗ್ರೆಸ್ ಮತ್ತು ಇತರ ಪಕ್ಷಗಳ ನಾಯಕರು ಪಕ್ಷಗಳನ್ನು ತೊರೆದು ಬಿಜೆಪಿಗೆ ಸೇರಿರುವುದಕ್ಕೆ ಕೇಜ್ರಿವಾಲ್ ವಾಗ್ದಾಳಿ ನಡೆಸಿದದ್ದಾರೆ. ಜೊತೆಗೆ ಪ್ರತಿಪಕ್ಷದಲ್ಲಿ ಇರಬೇಕಾದವರು ಈಗ ರಾಜ್ಯವನ್ನು ಆಳುತ್ತಿದ್ದಾರೆ. ಅಧಿಕಾರದಲ್ಲಿರಬೇಕಾದವರು ಈಗ ಪ್ರತಿಪಕ್ಷದಲ್ಲಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

’ಪಕ್ಷ ಬದಲಿಸಿದ ಈ ಶಾಸಕರು ತಾವು ಜನರ ಕೆಲಸಗಳನ್ನು ಮಾಡಲು ಬಿಜೆಪಿಗೆ ಸೇರುತ್ತಿದ್ದೇವೆ ಎಂದು ಹೇಳಿಕೊಂಡಿದ್ದರು. ಅದರೆ, ಅವರು ಹೇಳಿಕೊಂಡಂತೆ ಜನರ ಕೆಲಸವನ್ನು ಮಾಡಿದ್ದಾರೆಯೇ..? ಇವರೆಲ್ಲಾ ಹಣದ ಆಮಿಷಕ್ಕೆ ಪಕ್ಷಾಂತರ ಮಾಡಿದ್ದಾರೆ ಎಂದುಈಗ ಜನರೇ ಹೇಳುತ್ತಿದ್ದಾರೆ ’ ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ಗೋವಾ ಬದಲಾವಣೆಯನ್ನು ಬಯಸಿದೆ, ಜನರು ಶುದ್ಧ ರಾಜಕೀಯವನ್ನು ಬಯಸುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಥವಾ ಕಾಂಗ್ರೆಸ್ ಪರ ಮತ ಚಲಾಯಿಸುವುದಿಲ್ಲ ಎಂದು ಸಾವಿರಾರು ಗೋವಾ ನಿವಾಸಿಗಳು ಹೇಳಿಕೊಳ್ಳುತ್ತಿದ್ದಾರೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಉತ್ತರಾಖಂಡದಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿರುವ ಎಎಪಿ, ಅಲ್ಲಿಯೂ ಕೂಡ ಉಚಿತ ವಿದ್ಯುತ್ ಮಂತ್ರ ಪಠಿಸಿದೆ. ದಿನವಿಡೀ ವಿದ್ಯುತ್ ಕಡಿತವಿಲ್ಲದಿರುವುದು. ಪ್ರತಿ ಮನೆಗೆ 300 ಯುನಿಟ್ ಉಚಿತವಾಗಿ ವಿದ್ಯುತ್, ಹಿಂದಿನ ಬಿಲ್‌ಗಳನ್ನು ಮನ್ನಾ ಮಾಡುವುದು ಮತ್ತು ರೈತರಿಗೆ ಉಚಿತ ವಿದ್ಯುತ್ ಪೂರೈಕೆ ಮಾಡುವುದು ಉತ್ತರಾಖಂಡದಲ್ಲಿ ಮಾಡಿರುವ ಪ್ರಮುಖ ಘೋಷಣೆಗಳಾಗಿವೆ.


ಇದನ್ನೂ ಓದಿ:  ವಿದ್ಯುತ್ ಕಡಿತವಿಲ್ಲ, 300 ಯುನಿಟ್ ಉಚಿತ ವಿದ್ಯುತ್- ಉತ್ತರಾಖಂಡ ಚುನಾವಣೆಗೆ ಕೇಜ್ರಿವಾಲ್ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....