Homeಮುಖಪುಟ“free Kashmir” ಅದು ಹೇಗೆ ದೇಶದ್ರೋಹ? - ಬಿ.ಟಿ ವೆಂಕಟೇಶ್

“free Kashmir” ಅದು ಹೇಗೆ ದೇಶದ್ರೋಹ? – ಬಿ.ಟಿ ವೆಂಕಟೇಶ್

ಕಳ್ಳನೇ ಆಗಿರಲಿ, ಕೊಲೆಗಾರನೇ ಆಗಿರಲಿ, ಅತ್ಯಾಚಾರವೇ ಮಾಡಿರಲಿ, ದೌರ್ಜನ್ಯ ಮಾಡಿರಲಿ, ಮೋಸ ಮಾಡಿರಲಿ, ಭ್ರಷ್ಟನಾಗಿರಲಿ., ಪ್ರತಿಯೊಬ್ಬನಿಗೂ ತನ್ನ ಆಯ್ಕೆಯ ವಕೀಲನನ್ನು ನೇಮಿಸಿಕೊಳ್ಳುವ ಹಕ್ಕಿದೆ.

- Advertisement -
- Advertisement -

‘ಹೀಗೂ ಉಂಟೇ’ ಅನ್ನುವ ಕಾರ್ಯಕ್ರಮ ಟೀವಿಲಿ ನೀವು ನೋಡಿರುತ್ತೀರಿ. ನೋಡಿಲ್ಲವಾದಲ್ಲಿ ಅಟ್ಲೀಸ್ಟ್ ಕೇಳಿರುತ್ತೀರಿ. ಇಂದು ದೇಶಾದ್ಯಂತ ರಾಜಕೀಯ ದಿವಾಳಿಕೋರತನ ಒಂದು ಕಡೆಯಾದರೆ, ಇನ್ನೊಂದೆಡೆ ಜನರ ಭುಗಿಲೆದ್ದ ಆಕ್ರೋಶ. ಈ ದೇಶವನ್ನೆಂದೂ ಒಡೆಯಲು ಬಿಡೆವೆಂಬ ಹಠ. ಇಂದು ದೇಶದ ಮೂಲೆಮೂಲೆಯಲ್ಲಿಯೂ ಕಿವಿಗೆ ಅಪ್ಪಳಿಸುತ್ತಿದೆ. ಮಾರಿಕೊಂಡುಹೋದ ಮೀಡಿಯಾ, ಮಾರಿಕೊಳ್ಳಲೆಂದೇ ಇರುವ ಜನಪ್ರತಿನಿಧಿಗಳು, ಜನರ ಹೋರಾಟ ಮುಗಿಲಿಗೇರಿದೆ. ಈ ಸುನಾಮಿಯನ್ನು ಹಿಡಿದಿಡಲು ದೇಶದ ಆಡಳಿತ ಪೊಲೀಸರನ್ನು ಛೂಬಿಟ್ಟಿದೆ. ಅವರಿಗಿಷ್ಟಬಂದಂತೆ ಕೊಲೆ, ಸುಲಿಗೆ, ಮಾರಣಹೋಮ ಉತ್ತರ ಪ್ರದೇಶದಲ್ಲಾದರೆ, ಸಾಕಷ್ಟು ಕಡೆ ಜನರ ಮೇಲೆ ಇಲ್ಲದ ಕೇಸುಗಳನ್ನು ಜಡಿಯಲಾಗುತ್ತಿದೆ. ಬೆಂಗಳೂರಲ್ಲೂ ಈಗಾಗಲೇ ಸಾಕಷ್ಟು ಯುವಕ-ಯುವತಿಯರ ಮೇಲೆ ಮೊಕದ್ದಮೆಗಳನ್ನು ಹೂಡಲಾಗಿದೆ. ಇಂದು ಜನಪರ ವಕೀಲರಿಗೆ ಕೊರತೆಯಿಲ್ಲ, ಎಲ್ಲರಿಗೂ ಬೇಲ್ ಪಡೆಯಲಾಗಿದೆ.

ಜೆಎನ್‍ಯುನಲ್ಲಿ ಪೊಲೀಸರ ಸುಪರ್ದಿಯಲ್ಲಿ ನಡೆದ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರದ ವಿರುದ್ಧದ ಹೋರಾಟ ದೇಶದ ಮೂಲೆಮೂಲೆ ತಲುಪಿದೆ. ಶಹೀನ್‍ಬಾಗ್ ದೆಹಲಿಯಲ್ಲಿ ಮಾತ್ರವಲ್ಲದೇ ದೇಶದೆಲ್ಲೆಡೆ ತಲೆ ಎತ್ತುತ್ತಿವೆ. ಮೈಸೂರಿನಲ್ಲಿಯೂ ಅತ್ಯಂತ ಶಾಂತಿಯುತವಾದ ಪ್ರತಿಭಟನೆ ಎಲ್ಲರ ಗಮನ ಸೆಳೆದಿತ್ತು. ಯಾವುದಾದರೊಂದು ಕಾರಣಕ್ಕಾಗಿ ಕಾಯುತ್ತಿದ್ದ ಮಾರಿಕೊಂಡುಹೋದ ಮೀಡಿಯಾ ನಳಿನಿ ಬಾಲಕುಮಾರ್ ಹಿಡಿದಿದ್ದ “free Kashmir”ಪೋಸ್ಟರನ್ನು ತೋರಿಸಿ ದೇಶವನ್ನೇ ಒಡೆದುಬಿಟ್ಟಳೆಂಬಂತೆ ತೋರಿಸಿದ್ದಾರೆ. ಆ ವಿಡಿಯೋ ಆಧಾರದಲ್ಲಿ ಹುಡುಗಿಯ ಮೇಲೆ ದೇಶದ್ರೋಹದ ಮೊಕದ್ದಮೆಯನ್ನು ಪೊಲೀಸರು ಹೂಡಿದ್ದು ಈ ದೇಶದ ಆಡಳಿತ ಹೇಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂಬ ವಿಷಯ ಎಲ್ಲರಿಗೂ ಕಾಣುತ್ತಿದೆ.

ಈ ದೇಶದಲ್ಲಿ ಅತ್ಯಂತ ಸುಲಭವಾಗಿ ಬಳಕೆಯಾಗುವ ಕಾನೂನು “ದೇಶದ್ರೋಹ”. ಯಾವುದೇ ವಿಷಯಕ್ಕಾಗಲಿ ಆಡಳಿತ ವರ್ಗವನ್ನು ವಿಮರ್ಶಿಸಿದರೆ ಅದು ಯಾರೇ ಆಗಲೀ ‘ದೇಶದ್ರೋಹ’ ಎಂಬ ಪಟ್ಟ ಕಟ್ಟಲಾಗುತ್ತದೆ. ಯು.ಆರ್ ಅನಂತಮೂರ್ತಿಯಾಗಲೀ, ಗೌರಿಯಾಗಲೀ, ಈ ಕೆಲದಿನಗಳ ಹಿಂದೆಯಷ್ಟೇ ದೇಶದ ಇತಿಹಾಸತಜ್ಞ ರಾಮಚಂದ್ರ ಗುಹಾ ಆಗಲಿ… ಎಲ್ಲರ ಮೇಲೂ ಕೂರಿಸವ ಸುಲಭವಾದ ಗೂಬೆಯದು.
ಮೈಸೂರಿನ ಪೊಲೀಸರು ಹೀಗೆ ಮಾಡುತ್ತಿರುವುದು ಇದೇ ಮೊದಲಲ್ಲ. ಈ ಮುಂಚೆ ಮಾನವ ಹಕ್ಕು ಹೋರಾಟಗಾರ್ತಿ ಪ್ರೊ. ರತಿರಾವ್‍ರನ್ನು ಕಾಡಿದ್ದನ್ನು ನೋಡಿದ್ದೇವೆ.

ನಳಿನಿ ಬಾಲಕುಮಾರ್ ಹಿಡಿದ ಪೋಸ್ಟರ್‍ನಲ್ಲಿದ್ದ “free Kashmir”ಅದು ಹೇಗೆ ದೇಶದ್ರೋಹವಾಯಿತು? ಆ ವಿಷಯವನ್ನು ಸುಪ್ರೀಂಕೋರ್ಟಿನವರು ಹೇಳಿಲ್ಲವೇ? ಕಾಶ್ಮಿರ ಜನರ ಮೇಲೆ ಹೇರಿರುವ ನಿರ್ಬಂಧ, ನಡೆಯುತ್ತಿರುವ ಹಿಂಸೆಯ ಬಗ್ಗೆ ಇಡೀ ಪ್ರಪಂಚವೇ ಭಾರತದ ಸರ್ಕಾರವನ್ನು ಪ್ರಶ್ನಿಸುತ್ತಿದೆ. ಫೋನಿಲ್ಲದೇ, ಇಂಟರ್‍ನೆಟ್ ಇಲ್ಲದೇ, ಯಾವುದೇ ಸಂಪರ್ಕವಿಲ್ಲದೇ ಈ ದೇಶದ ಒಂದು ಇಡೀ ರಾಜ್ಯವನ್ನು ಬಂಧಿಸಿರುವ ವಿಷಯದ ಬಗ್ಗೆ ಈಗಾಗಲೇ ಸುಪ್ರೀಂಕೋರ್ಟ್‍ನಲ್ಲಿ ಪ್ರಕರಣದ ವಾದ ನಡೆಯುತ್ತಿದೆ.

CAA, NRC ಹಾಗೂ NPRವಿರುದ್ಧದ ಯಾವುದೇ ಪ್ರತಿಭಟನೆಯನ್ನು ಸಹಿಸದ ಸ್ಥಿತಿಯನ್ನು ನಾವು ನೋಡುತ್ತಿದ್ದೇವೆ. ನಳಿನಿ ಬಾಲಕುಮಾರ್ ಮೇಲೆ ಹಾಕಿದ ಮೊಕದ್ದಮೆಯೂ ಅದೇ ರೀತಿಯದು. ಒಂದು ರೀತಿ ಮಿಕ್ಕ ಪ್ರತಿಭಟನಾಕಾರರಿಗೆ ಎಚ್ಚರಿಸುವ ಮಾರ್ಗ.

ದುರಂತವೆಂದರೆ ಮೊಕದ್ದಮೆ ದಾಖಲಿಸಿದ ಮೇಲೆ ಮೈಸೂರು ವಕೀಲರ ಸಂಘ ತೆಗೆದುಕೊಂಡ ನಿರ್ಣಯ. ನಳಿನಿಗೆ ಯಾರೂ ಮೈಸೂರಿನಲ್ಲಿ ವಕಾಲತ್ತು ಹಾಕುವುದಿಲ್ಲವೆಂಬ ತೀರ್ಮಾನ. ವಕೀಲರ ಸಂಘಗಳ ಇಂಥಾ ನಿಲುವು ಇದು ಹೊಸತೇನಲ್ಲ. ತಿಂಗಳ ಹಿಂದೆಯಷ್ಟೇ ಹೈದರಾಬಾದ್ ಅತ್ಯಾಚಾರ ಮತ್ತು ಕೊಲೆಯ ಪ್ರಕರಣದಲ್ಲಿ ಹೈದರಾಬಾದ್, ಮೆಹಬೂಬ್‍ನಗರ್ ಮತ್ತಿತರ ಜಿಲ್ಲೆಗಳ ವಕೀಲರ ಸಂಘಗಳು ಆರೋಪಿಗಳಿಗೆ ನಾವು ವಕಾಲತ್ತು ಹಾಕುವುದಿಲ್ಲವೆಂಬ ತೀರ್ಮಾನಗಳನ್ನು ತೆಗೆದುಕೊಂಡಿದ್ದವು. ಅದೆಷ್ಟು ಸರಿ? ಈ ದೇಶದ ಸಂವಿಧಾನ ಹೇಳುತ್ತದೆ “ಯಾವುದೇ ವ್ಯಕ್ತಿಯ ವಿರುದ್ಧ ಅಪರಾಧ ಸಾಬೀತಾಗದ ಹೊರತು ಶಿಕ್ಷಿಸಲಾಗದು ಹಾಗೂ ಯಾವುದೇ ಆರೋಪಿಗೆ ತನ್ನ ಆಯ್ಕೆಯ ವಕೀಲರನ್ನು ನೇಮಿಸಿಕೊಳ್ಳುವ ಹಕ್ಕನ್ನು ಕೊಡಲಾಗಿದೆ.”

ಈ ದೇಶದ ಪ್ರತಿಯೊಬ್ಬ ವಕೀಲ ‘ಯಾವುದೇ ಭೇದ-ಭಾವ ಮಾಡದೇ, ತಾರತಮ್ಯ ತೋರದೇ ವೃತ್ತಿ ನಡೆಸುವುದಾಗಿ’ ಪ್ರಮಾಣವಚನ ಮಾಡಿರುತ್ತಾರೆ. ಇವು ಪ್ರಜಾಸತ್ತೆಯನ್ನು ನಿರ್ಧರಿಸುವ ಬುನಾದಿಗಳು. ಕಳ್ಳನೇ ಆಗಿರಲಿ, ಕೊಲೆಗಾರನೇ ಆಗಿರಲಿ, ಅತ್ಯಾಚಾರವೇ ಮಾಡಿರಲಿ, ದೌರ್ಜನ್ಯ ಮಾಡಿರಲಿ, ಮೋಸ ಮಾಡಿರಲಿ, ಭ್ರಷ್ಟನಾಗಿರಲಿ., ಪ್ರತಿಯೊಬ್ಬನಿಗೂ ತನ್ನ ಆಯ್ಕೆಯ ವಕೀಲನನ್ನು ನೇಮಿಸಿಕೊಳ್ಳುವ ಹಕ್ಕಿದೆ.

ಅಜ್ಮಲ್ ಕಸಬ್‍ನಂಥಾ ಆತಂಕವಾದಿಗೂ ಆಯ್ಕೆಯ ವಕೀಲನನ್ನು ನೇಮಿಸಿ, ವಿಚಾರಣೆ ನಡೆಸಿ, ತೀರ್ಪನ್ನು ಕೊಟ್ಟು, ಮೇಲ್ಮನವಿಗೆ ಅವಕಾಶ ಮಾಡಿಕೊಟ್ಟು ಕೊನೆಯಲ್ಲಿ ಶಿಕ್ಷೆ ನೀಡಲಾಯಿತು. ವಕೀಲರ ಸಂಘಗಳು ಈ ರೀತಿ ತೀರ್ಮಾನ ತೆಗೆದುಕೊಳ್ಳುವುದು ಸಮಂಜಸವಲ್ಲವೆಂದು ಈ ದೇಶದ ನುರಿತ ನ್ಯಾಯಾಧೀಶರು, ನ್ಯಾಯವಾದಿಗಳು ಸಾಕಷ್ಟು ಸಲ ಹೇಳಿದ್ದಾರೆ.

ಇಂದು ನಳಿನಿಗೆ 170ಕ್ಕೂ ಹೆಚ್ಚು ವಕೀಲರು ಬೇರೆಬೇರೆ ಜಿಲ್ಲೆಗಳಿಂದ ಮೈಸೂರಿಗೆ ಬಂದು ಆಕೆಗೆ ಬೆಂಬಲವಾಗಿ ನಿಂತಿದ್ದು ಒಂದು ಆರೋಗ್ಯಪೂರ್ಣ ಬದಲಾವಣೆಯಾಗಿದೆ. ಈ ದೇಶದಲ್ಲಿ ಉನ್ನಾವ್ ರೇಪ್ ಪ್ರಕರಣದ ಆರೋಪಿಗೆ, ಕಥುವಾ ಹಸುಗೂಸಿನ ರೇಪ್ ಆರೋಪಿಗಳಿಗೆ, ಗಣಿ ಹಗರಣಗಳ ಆರೋಪಿಗಳಿಗೆ, ದೇಶ ಲೂಟಿಮಾಡಿ ರಕ್ತ ಹೀರಿಹೋದ ನೀರವ್ ಮೋದಿಗಳಿಗೆ, ವಿಜಯ್ ಮಲ್ಯರುಗಳಿಗೆ, ಮೆಹುಲ್ ಚೋಕ್ಸಿಗಳಿಗೆ, ನೂರಾರು ರಾಜಕಾರಣಿಗಳಿಗೆ ವಕಾಲತ್ತು ವಹಿಸಲು ಇಲ್ಲದ ತಕರಾರು ಒಂದು ಚಿಕ್ಕ ಪೋಸ್ಟರ್ ಇಡಿಗೆ ಹುಡುಗಿಗೆ ಅಂಥಾ ಸಹಾಯ ನೀಡುವುದಿರಲಿ ಹಿಂಜರಿಕೆ ತೋರಿದ್ದು ಎಷ್ಟು ಸಮಂಜಸ?

ಅಭಿವ್ಯಕ್ತಿ ಸ್ವಾತಂತ್ರ್ಯ ಎಲ್ಲರ ಮೂಲಭೂತ ಹಕ್ಕು. ಪ್ರಜಾಸತ್ತೆ ಮೂಲಸ್ತಂಭವದು. ಅದರಿಂದಲೇ ನಮ್ಮ ಎಲೆಕ್ಷನ್ ಸಾಧ್ಯ. ಅದರಿಂದಲೇ ನನ್ನ ನೀತಿಗಳು, ನಮ್ಮ ಪತ್ರಿಕೋದ್ಯಮ, ನಮ್ಮ ವೃತ್ತಿಯ ಆಯ್ಕೆಯ ಸ್ವಾತಂತ್ರ್ಯ, ನಮ್ಮ ಧರ್ಮಶ್ರದ್ಧೆಯ ಸ್ವಾತಂತ್ರ್ಯ, ನಮ್ಮ ಸಂಘಜೀವನದ ಸ್ವಾತಂತ್ರ್ಯ ಸಾಧ್ಯವಾಗಿರುವುದು. ಅದಕ್ಕಾಗಿಯೇ ಇಂದು ಹೋರಾಟ ನಡೆಯುತ್ತಿರುವುದು. ಅದು ಕೇವಲ CAA, NRC ಹಾಗೂ NPR ವಿರುದ್ಧ ಮಾತ್ರವೆಂದು ತಿಳಿದುಕೊಂಡರೇ ಅದು ಅಪ್ಪಟ ಮೂರ್ಖತನ.

(ಲೇಖಕರು ಪ್ರಗತಿಪರ ಚಿಂತಕರು ಮತ್ತು ಬೆಂಗಳೂರು ಹೈಕೋರ್ಟ್ ವಕೀಲರು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...