Homeಮುಖಪುಟ“free Kashmir” ಅದು ಹೇಗೆ ದೇಶದ್ರೋಹ? - ಬಿ.ಟಿ ವೆಂಕಟೇಶ್

“free Kashmir” ಅದು ಹೇಗೆ ದೇಶದ್ರೋಹ? – ಬಿ.ಟಿ ವೆಂಕಟೇಶ್

ಕಳ್ಳನೇ ಆಗಿರಲಿ, ಕೊಲೆಗಾರನೇ ಆಗಿರಲಿ, ಅತ್ಯಾಚಾರವೇ ಮಾಡಿರಲಿ, ದೌರ್ಜನ್ಯ ಮಾಡಿರಲಿ, ಮೋಸ ಮಾಡಿರಲಿ, ಭ್ರಷ್ಟನಾಗಿರಲಿ., ಪ್ರತಿಯೊಬ್ಬನಿಗೂ ತನ್ನ ಆಯ್ಕೆಯ ವಕೀಲನನ್ನು ನೇಮಿಸಿಕೊಳ್ಳುವ ಹಕ್ಕಿದೆ.

- Advertisement -
- Advertisement -

‘ಹೀಗೂ ಉಂಟೇ’ ಅನ್ನುವ ಕಾರ್ಯಕ್ರಮ ಟೀವಿಲಿ ನೀವು ನೋಡಿರುತ್ತೀರಿ. ನೋಡಿಲ್ಲವಾದಲ್ಲಿ ಅಟ್ಲೀಸ್ಟ್ ಕೇಳಿರುತ್ತೀರಿ. ಇಂದು ದೇಶಾದ್ಯಂತ ರಾಜಕೀಯ ದಿವಾಳಿಕೋರತನ ಒಂದು ಕಡೆಯಾದರೆ, ಇನ್ನೊಂದೆಡೆ ಜನರ ಭುಗಿಲೆದ್ದ ಆಕ್ರೋಶ. ಈ ದೇಶವನ್ನೆಂದೂ ಒಡೆಯಲು ಬಿಡೆವೆಂಬ ಹಠ. ಇಂದು ದೇಶದ ಮೂಲೆಮೂಲೆಯಲ್ಲಿಯೂ ಕಿವಿಗೆ ಅಪ್ಪಳಿಸುತ್ತಿದೆ. ಮಾರಿಕೊಂಡುಹೋದ ಮೀಡಿಯಾ, ಮಾರಿಕೊಳ್ಳಲೆಂದೇ ಇರುವ ಜನಪ್ರತಿನಿಧಿಗಳು, ಜನರ ಹೋರಾಟ ಮುಗಿಲಿಗೇರಿದೆ. ಈ ಸುನಾಮಿಯನ್ನು ಹಿಡಿದಿಡಲು ದೇಶದ ಆಡಳಿತ ಪೊಲೀಸರನ್ನು ಛೂಬಿಟ್ಟಿದೆ. ಅವರಿಗಿಷ್ಟಬಂದಂತೆ ಕೊಲೆ, ಸುಲಿಗೆ, ಮಾರಣಹೋಮ ಉತ್ತರ ಪ್ರದೇಶದಲ್ಲಾದರೆ, ಸಾಕಷ್ಟು ಕಡೆ ಜನರ ಮೇಲೆ ಇಲ್ಲದ ಕೇಸುಗಳನ್ನು ಜಡಿಯಲಾಗುತ್ತಿದೆ. ಬೆಂಗಳೂರಲ್ಲೂ ಈಗಾಗಲೇ ಸಾಕಷ್ಟು ಯುವಕ-ಯುವತಿಯರ ಮೇಲೆ ಮೊಕದ್ದಮೆಗಳನ್ನು ಹೂಡಲಾಗಿದೆ. ಇಂದು ಜನಪರ ವಕೀಲರಿಗೆ ಕೊರತೆಯಿಲ್ಲ, ಎಲ್ಲರಿಗೂ ಬೇಲ್ ಪಡೆಯಲಾಗಿದೆ.

ಜೆಎನ್‍ಯುನಲ್ಲಿ ಪೊಲೀಸರ ಸುಪರ್ದಿಯಲ್ಲಿ ನಡೆದ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರದ ವಿರುದ್ಧದ ಹೋರಾಟ ದೇಶದ ಮೂಲೆಮೂಲೆ ತಲುಪಿದೆ. ಶಹೀನ್‍ಬಾಗ್ ದೆಹಲಿಯಲ್ಲಿ ಮಾತ್ರವಲ್ಲದೇ ದೇಶದೆಲ್ಲೆಡೆ ತಲೆ ಎತ್ತುತ್ತಿವೆ. ಮೈಸೂರಿನಲ್ಲಿಯೂ ಅತ್ಯಂತ ಶಾಂತಿಯುತವಾದ ಪ್ರತಿಭಟನೆ ಎಲ್ಲರ ಗಮನ ಸೆಳೆದಿತ್ತು. ಯಾವುದಾದರೊಂದು ಕಾರಣಕ್ಕಾಗಿ ಕಾಯುತ್ತಿದ್ದ ಮಾರಿಕೊಂಡುಹೋದ ಮೀಡಿಯಾ ನಳಿನಿ ಬಾಲಕುಮಾರ್ ಹಿಡಿದಿದ್ದ “free Kashmir”ಪೋಸ್ಟರನ್ನು ತೋರಿಸಿ ದೇಶವನ್ನೇ ಒಡೆದುಬಿಟ್ಟಳೆಂಬಂತೆ ತೋರಿಸಿದ್ದಾರೆ. ಆ ವಿಡಿಯೋ ಆಧಾರದಲ್ಲಿ ಹುಡುಗಿಯ ಮೇಲೆ ದೇಶದ್ರೋಹದ ಮೊಕದ್ದಮೆಯನ್ನು ಪೊಲೀಸರು ಹೂಡಿದ್ದು ಈ ದೇಶದ ಆಡಳಿತ ಹೇಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂಬ ವಿಷಯ ಎಲ್ಲರಿಗೂ ಕಾಣುತ್ತಿದೆ.

ಈ ದೇಶದಲ್ಲಿ ಅತ್ಯಂತ ಸುಲಭವಾಗಿ ಬಳಕೆಯಾಗುವ ಕಾನೂನು “ದೇಶದ್ರೋಹ”. ಯಾವುದೇ ವಿಷಯಕ್ಕಾಗಲಿ ಆಡಳಿತ ವರ್ಗವನ್ನು ವಿಮರ್ಶಿಸಿದರೆ ಅದು ಯಾರೇ ಆಗಲೀ ‘ದೇಶದ್ರೋಹ’ ಎಂಬ ಪಟ್ಟ ಕಟ್ಟಲಾಗುತ್ತದೆ. ಯು.ಆರ್ ಅನಂತಮೂರ್ತಿಯಾಗಲೀ, ಗೌರಿಯಾಗಲೀ, ಈ ಕೆಲದಿನಗಳ ಹಿಂದೆಯಷ್ಟೇ ದೇಶದ ಇತಿಹಾಸತಜ್ಞ ರಾಮಚಂದ್ರ ಗುಹಾ ಆಗಲಿ… ಎಲ್ಲರ ಮೇಲೂ ಕೂರಿಸವ ಸುಲಭವಾದ ಗೂಬೆಯದು.
ಮೈಸೂರಿನ ಪೊಲೀಸರು ಹೀಗೆ ಮಾಡುತ್ತಿರುವುದು ಇದೇ ಮೊದಲಲ್ಲ. ಈ ಮುಂಚೆ ಮಾನವ ಹಕ್ಕು ಹೋರಾಟಗಾರ್ತಿ ಪ್ರೊ. ರತಿರಾವ್‍ರನ್ನು ಕಾಡಿದ್ದನ್ನು ನೋಡಿದ್ದೇವೆ.

ನಳಿನಿ ಬಾಲಕುಮಾರ್ ಹಿಡಿದ ಪೋಸ್ಟರ್‍ನಲ್ಲಿದ್ದ “free Kashmir”ಅದು ಹೇಗೆ ದೇಶದ್ರೋಹವಾಯಿತು? ಆ ವಿಷಯವನ್ನು ಸುಪ್ರೀಂಕೋರ್ಟಿನವರು ಹೇಳಿಲ್ಲವೇ? ಕಾಶ್ಮಿರ ಜನರ ಮೇಲೆ ಹೇರಿರುವ ನಿರ್ಬಂಧ, ನಡೆಯುತ್ತಿರುವ ಹಿಂಸೆಯ ಬಗ್ಗೆ ಇಡೀ ಪ್ರಪಂಚವೇ ಭಾರತದ ಸರ್ಕಾರವನ್ನು ಪ್ರಶ್ನಿಸುತ್ತಿದೆ. ಫೋನಿಲ್ಲದೇ, ಇಂಟರ್‍ನೆಟ್ ಇಲ್ಲದೇ, ಯಾವುದೇ ಸಂಪರ್ಕವಿಲ್ಲದೇ ಈ ದೇಶದ ಒಂದು ಇಡೀ ರಾಜ್ಯವನ್ನು ಬಂಧಿಸಿರುವ ವಿಷಯದ ಬಗ್ಗೆ ಈಗಾಗಲೇ ಸುಪ್ರೀಂಕೋರ್ಟ್‍ನಲ್ಲಿ ಪ್ರಕರಣದ ವಾದ ನಡೆಯುತ್ತಿದೆ.

CAA, NRC ಹಾಗೂ NPRವಿರುದ್ಧದ ಯಾವುದೇ ಪ್ರತಿಭಟನೆಯನ್ನು ಸಹಿಸದ ಸ್ಥಿತಿಯನ್ನು ನಾವು ನೋಡುತ್ತಿದ್ದೇವೆ. ನಳಿನಿ ಬಾಲಕುಮಾರ್ ಮೇಲೆ ಹಾಕಿದ ಮೊಕದ್ದಮೆಯೂ ಅದೇ ರೀತಿಯದು. ಒಂದು ರೀತಿ ಮಿಕ್ಕ ಪ್ರತಿಭಟನಾಕಾರರಿಗೆ ಎಚ್ಚರಿಸುವ ಮಾರ್ಗ.

ದುರಂತವೆಂದರೆ ಮೊಕದ್ದಮೆ ದಾಖಲಿಸಿದ ಮೇಲೆ ಮೈಸೂರು ವಕೀಲರ ಸಂಘ ತೆಗೆದುಕೊಂಡ ನಿರ್ಣಯ. ನಳಿನಿಗೆ ಯಾರೂ ಮೈಸೂರಿನಲ್ಲಿ ವಕಾಲತ್ತು ಹಾಕುವುದಿಲ್ಲವೆಂಬ ತೀರ್ಮಾನ. ವಕೀಲರ ಸಂಘಗಳ ಇಂಥಾ ನಿಲುವು ಇದು ಹೊಸತೇನಲ್ಲ. ತಿಂಗಳ ಹಿಂದೆಯಷ್ಟೇ ಹೈದರಾಬಾದ್ ಅತ್ಯಾಚಾರ ಮತ್ತು ಕೊಲೆಯ ಪ್ರಕರಣದಲ್ಲಿ ಹೈದರಾಬಾದ್, ಮೆಹಬೂಬ್‍ನಗರ್ ಮತ್ತಿತರ ಜಿಲ್ಲೆಗಳ ವಕೀಲರ ಸಂಘಗಳು ಆರೋಪಿಗಳಿಗೆ ನಾವು ವಕಾಲತ್ತು ಹಾಕುವುದಿಲ್ಲವೆಂಬ ತೀರ್ಮಾನಗಳನ್ನು ತೆಗೆದುಕೊಂಡಿದ್ದವು. ಅದೆಷ್ಟು ಸರಿ? ಈ ದೇಶದ ಸಂವಿಧಾನ ಹೇಳುತ್ತದೆ “ಯಾವುದೇ ವ್ಯಕ್ತಿಯ ವಿರುದ್ಧ ಅಪರಾಧ ಸಾಬೀತಾಗದ ಹೊರತು ಶಿಕ್ಷಿಸಲಾಗದು ಹಾಗೂ ಯಾವುದೇ ಆರೋಪಿಗೆ ತನ್ನ ಆಯ್ಕೆಯ ವಕೀಲರನ್ನು ನೇಮಿಸಿಕೊಳ್ಳುವ ಹಕ್ಕನ್ನು ಕೊಡಲಾಗಿದೆ.”

ಈ ದೇಶದ ಪ್ರತಿಯೊಬ್ಬ ವಕೀಲ ‘ಯಾವುದೇ ಭೇದ-ಭಾವ ಮಾಡದೇ, ತಾರತಮ್ಯ ತೋರದೇ ವೃತ್ತಿ ನಡೆಸುವುದಾಗಿ’ ಪ್ರಮಾಣವಚನ ಮಾಡಿರುತ್ತಾರೆ. ಇವು ಪ್ರಜಾಸತ್ತೆಯನ್ನು ನಿರ್ಧರಿಸುವ ಬುನಾದಿಗಳು. ಕಳ್ಳನೇ ಆಗಿರಲಿ, ಕೊಲೆಗಾರನೇ ಆಗಿರಲಿ, ಅತ್ಯಾಚಾರವೇ ಮಾಡಿರಲಿ, ದೌರ್ಜನ್ಯ ಮಾಡಿರಲಿ, ಮೋಸ ಮಾಡಿರಲಿ, ಭ್ರಷ್ಟನಾಗಿರಲಿ., ಪ್ರತಿಯೊಬ್ಬನಿಗೂ ತನ್ನ ಆಯ್ಕೆಯ ವಕೀಲನನ್ನು ನೇಮಿಸಿಕೊಳ್ಳುವ ಹಕ್ಕಿದೆ.

ಅಜ್ಮಲ್ ಕಸಬ್‍ನಂಥಾ ಆತಂಕವಾದಿಗೂ ಆಯ್ಕೆಯ ವಕೀಲನನ್ನು ನೇಮಿಸಿ, ವಿಚಾರಣೆ ನಡೆಸಿ, ತೀರ್ಪನ್ನು ಕೊಟ್ಟು, ಮೇಲ್ಮನವಿಗೆ ಅವಕಾಶ ಮಾಡಿಕೊಟ್ಟು ಕೊನೆಯಲ್ಲಿ ಶಿಕ್ಷೆ ನೀಡಲಾಯಿತು. ವಕೀಲರ ಸಂಘಗಳು ಈ ರೀತಿ ತೀರ್ಮಾನ ತೆಗೆದುಕೊಳ್ಳುವುದು ಸಮಂಜಸವಲ್ಲವೆಂದು ಈ ದೇಶದ ನುರಿತ ನ್ಯಾಯಾಧೀಶರು, ನ್ಯಾಯವಾದಿಗಳು ಸಾಕಷ್ಟು ಸಲ ಹೇಳಿದ್ದಾರೆ.

ಇಂದು ನಳಿನಿಗೆ 170ಕ್ಕೂ ಹೆಚ್ಚು ವಕೀಲರು ಬೇರೆಬೇರೆ ಜಿಲ್ಲೆಗಳಿಂದ ಮೈಸೂರಿಗೆ ಬಂದು ಆಕೆಗೆ ಬೆಂಬಲವಾಗಿ ನಿಂತಿದ್ದು ಒಂದು ಆರೋಗ್ಯಪೂರ್ಣ ಬದಲಾವಣೆಯಾಗಿದೆ. ಈ ದೇಶದಲ್ಲಿ ಉನ್ನಾವ್ ರೇಪ್ ಪ್ರಕರಣದ ಆರೋಪಿಗೆ, ಕಥುವಾ ಹಸುಗೂಸಿನ ರೇಪ್ ಆರೋಪಿಗಳಿಗೆ, ಗಣಿ ಹಗರಣಗಳ ಆರೋಪಿಗಳಿಗೆ, ದೇಶ ಲೂಟಿಮಾಡಿ ರಕ್ತ ಹೀರಿಹೋದ ನೀರವ್ ಮೋದಿಗಳಿಗೆ, ವಿಜಯ್ ಮಲ್ಯರುಗಳಿಗೆ, ಮೆಹುಲ್ ಚೋಕ್ಸಿಗಳಿಗೆ, ನೂರಾರು ರಾಜಕಾರಣಿಗಳಿಗೆ ವಕಾಲತ್ತು ವಹಿಸಲು ಇಲ್ಲದ ತಕರಾರು ಒಂದು ಚಿಕ್ಕ ಪೋಸ್ಟರ್ ಇಡಿಗೆ ಹುಡುಗಿಗೆ ಅಂಥಾ ಸಹಾಯ ನೀಡುವುದಿರಲಿ ಹಿಂಜರಿಕೆ ತೋರಿದ್ದು ಎಷ್ಟು ಸಮಂಜಸ?

ಅಭಿವ್ಯಕ್ತಿ ಸ್ವಾತಂತ್ರ್ಯ ಎಲ್ಲರ ಮೂಲಭೂತ ಹಕ್ಕು. ಪ್ರಜಾಸತ್ತೆ ಮೂಲಸ್ತಂಭವದು. ಅದರಿಂದಲೇ ನಮ್ಮ ಎಲೆಕ್ಷನ್ ಸಾಧ್ಯ. ಅದರಿಂದಲೇ ನನ್ನ ನೀತಿಗಳು, ನಮ್ಮ ಪತ್ರಿಕೋದ್ಯಮ, ನಮ್ಮ ವೃತ್ತಿಯ ಆಯ್ಕೆಯ ಸ್ವಾತಂತ್ರ್ಯ, ನಮ್ಮ ಧರ್ಮಶ್ರದ್ಧೆಯ ಸ್ವಾತಂತ್ರ್ಯ, ನಮ್ಮ ಸಂಘಜೀವನದ ಸ್ವಾತಂತ್ರ್ಯ ಸಾಧ್ಯವಾಗಿರುವುದು. ಅದಕ್ಕಾಗಿಯೇ ಇಂದು ಹೋರಾಟ ನಡೆಯುತ್ತಿರುವುದು. ಅದು ಕೇವಲ CAA, NRC ಹಾಗೂ NPR ವಿರುದ್ಧ ಮಾತ್ರವೆಂದು ತಿಳಿದುಕೊಂಡರೇ ಅದು ಅಪ್ಪಟ ಮೂರ್ಖತನ.

(ಲೇಖಕರು ಪ್ರಗತಿಪರ ಚಿಂತಕರು ಮತ್ತು ಬೆಂಗಳೂರು ಹೈಕೋರ್ಟ್ ವಕೀಲರು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...