HomeಚಳವಳಿFree Palestine | ಹೆಜ್ಬುಲ್ಲಾ - ಇಸ್ರೇಲ್ ಸಂಘರ್ಷ ಉಲ್ಬಣ

Free Palestine | ಹೆಜ್ಬುಲ್ಲಾ – ಇಸ್ರೇಲ್ ಸಂಘರ್ಷ ಉಲ್ಬಣ

- Advertisement -
- Advertisement -

ಪ್ಯಾಲೆಸ್ತೀನ್ ಪರವಾಗಿ ಇಸ್ರೇಲ್ ವಿರುದ್ಧ ಕಾದಾಡುತ್ತಿರುವ ಹೆಜ್ಬುಲ್ಲಾ ಬಂಡುಕೋರರು ಗಡಿಯಾಚೆಗಿನ ದಾಳಿಯನ್ನು ತೀವ್ರಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಇಸ್ರೇಲ್ ನಮ್ಮನ್ನು ಬೆದರಿಸುವ ಯಾರಿಗಾದರೂ ‘ಹೊಡೆದುರುಳಿಸುತ್ತೇವೆ’ ಎಂದು ಹೇಳಿದೆ. ಸಂಭಾವ್ಯ ಯುದ್ಧದಿಂದ ಸಂಪೂರ್ಣವಾಗಿ ಹಿಂದೆ ಸರಿಯಲು ಅಂತರಾಷ್ಟ್ರೀಯ ಸಮುದಾಯದಗಳು ಕರೆ ನೀಡುತ್ತಿದ್ದರೂ ಇತ್ತಂಡಗಳು ಅದನ್ನು ಕಡೆಗಣಿಸಿವೆ. Free Palestine 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಸ್ರೇಲ್‌ನೊಂದಿಗಿನ ಸಂಘರ್ಷದಲ್ಲಿ ನಾವು “ಹೊಸ ಹಂತ”ವನ್ನು ಪ್ರವೇಶಿಸಿದ್ದೇವೆ ಎಂದು ಹಿಜ್ಬುಲ್ಲಾದ ಉಪ ಮುಖ್ಯಸ್ಥ ನಯಿಮ್ ಕಾಸ್ಸೆಮ್ ಪ್ರತಿಭಟನಾ ಸಂದೇಶವನ್ನು ನೀಡಿದ್ದಾರೆ. ಉತ್ತರ ಲೆಬನಾನ್‌ನ ಹಿಜ್ಬುಲ್ಲಾ ಭದ್ರಕೋಟೆಗಳನ್ನು ಗುರಿಯಾಗಿಟ್ಟುಕೊಂಡು ಇಸ್ರೇಲ್ ನಡೆಸಿದ ವ್ಯಾಪಕ ಹಾನಿ ಮತ್ತು ಹಲವಾರು ಸಾವುನೋವುಗಳಿಗೆ ಪ್ರತಿಭಟನೆಯಾಗಿ ಕಾಸ್ಸೆಮ್ ಈ ಸಂದೇಶ ನೀಡಿದ್ದಾರೆ.

ಇದನ್ನೂಓದಿ: ಗುಜರಾತ್‌: ಲೈಂಗಿಕ ದೌರ್ಜನ್ಯ ವಿರೋಧಿಸಿದ ಶಾಲಾ ವಿದ್ಯಾರ್ಥಿನಿ ಹತ್ಯೆ, ಪ್ರಾಂಶುಪಾಲನ ಬಂಧನ

ಇದಕ್ಕೆ ಪ್ರತಿಕ್ರಿಯಿಸಿರುವ ಇಸ್ರೇಲಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಅವರು ತಮ್ಮ ಉತ್ತರದ ನಿವಾಸಿಗಳ ಭದ್ರತೆಯನ್ನು ಖಾತ್ರಿಪಡಿಸುವ ಇಸ್ರೇಲ್‌ನ ಬದ್ಧತೆಯನ್ನು ಪುನರುಚ್ಚರಿಸಿದದ್ದಾರೆ. “ಇಸ್ರೇಲ್‌ನ ಉತ್ತರದ ಸಮುದಾಯಗಳು ಅವರ ಮನೆಗಳಿಗೆ ಸುರಕ್ಷಿತವಾಗಿ ಹಿಂದಿರುಗಿಸುವ ಹಂತವನ್ನು ತಲುಪುವವರೆಗೆ ನಾವು ಮಿಲಿಟರಿ ಕ್ರಮಗಳು ಮುಂದುವರೆಯುತ್ತವೆ” ಎಂದು ಹೇಳಿದ್ದಾರೆ.

ಆರ್ಮಿ ಚೀಫ್ ಲೆಫ್ಟಿನೆಂಟ್ ಜನರಲ್ ಹರ್ಜಿ ಹಲೆವಿ ಮನಾತನಾಡಿ, ತನ್ನ ನಾಗರಿಕರನ್ನು ಬೆದರಿಸುವ ಯಾರಿಗಾದರೂ ಇಸ್ರೇಲ್ ಹೊಡೆದುರುಳಿಸುತ್ತದೆ ಎಂದು ಹೇಳಿದ್ದಾರೆ. ಈ ನಡುವೆ ಇಸ್ರೇಲ್‌ನ ಅತಿದೊಡ್ಡ ಮಿತ್ರರಾಷ್ಟ್ರವಾದ ಅಮೆರಿಕ ಸಂಯಮ ಪಾಲಿಸುವಂತೆ ಒತ್ತಾಯಿಸಿದೆ. ಮಿಲಿಟರಿ ಸಂಘರ್ಷವು ಇಸ್ರೇಲ್‌ನ ಹಿತಾಸಕ್ತಿಗೆ ಉತ್ತಮವಲ್ಲ ಮತ್ತು ಈ ಸಂಘರ್ಷವನ್ನು ತಡೆಯಲು ಅಮೆರಿಕ ದಣಿವರಿಯಿಲ್ಲದೆ ಕೆಲಸ ಮಾಡುತ್ತಿದೆ ಎಂದು ಅಧ್ಯಕ್ಷ ಜೋ ಬಿಡೆನ್ ಒತ್ತಿ ಹೇಳಿದ್ದಾರೆ. Free Palestine 

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಕೂಡಾ ತೀವ್ರ ಕಳವಳಗಳ ವ್ಯಕ್ತಪಡಿಸಿದ್ದು, ನಡೆಯುತ್ತಿರುವ ಗಾಜಾ ಸಂಘರ್ಷದ ಮಧ್ಯೆ ಲೆಬನಾನ್ ಕೂಡಾ “ಮತ್ತೊಂದು ಗಾಜಾ” ಆಗುವ ಅಪಾಯದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂಓದಿ: FACT CHECK : ಟೋಲ್‌ ಪ್ಲಾಝಾದಲ್ಲಿ ಗಲಾಟೆ ನಡೆಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಕಳೆದ ವಾರ ಹೆಜ್ಬೊಲ್ಲಾಹ್ ರಾಕೆಟ್‌ಗಳ ಸುರಿಮಳೆಯನ್ನು ಉಡಾಯಿಸಿದ್ದು, ಅದು ಇಸ್ರೇಲ್‌ನ ಅತಿದೊಡ್ಡ ಉತ್ತರದ ನಗರವಾದ ಹೈಫಾ ಬಳಿಯ ಕಿರ್ಯಾತ್ ಬಿಯಾಲಿಕ್ ಅನ್ನು ತಲುಪಿ ಅಲ್ಲಿನ ಮೂಲಸೌಕರ್ಯವನ್ನು ಹಾನಿಗೊಳಿಸಿತು ಎಂದು ವರದಿಯಾಗಿದೆ. ಅಲ್ಲದೆ ದಾಳಿಯು ಮತ್ತಷ್ಟು ಉಲ್ಬಣಗೊಳ್ಳುವ ಭಯವನ್ನು ಹುಟ್ಟುಹಾಕಿದೆ.

ಇದಕ್ಕೆ ಪ್ರತೀಕಾರವಾಗಿ, ಇಸ್ರೇಲ್ ದಕ್ಷಿಣ ಲೆಬನಾನ್‌ನ ವಾಯುನೆಲೆ ಮತ್ತು ಮಿಲಿಟರಿ ಉತ್ಪಾದನಾ ಸೌಲಭ್ಯಗಳನ್ನು ಒಳಗೊಂಡಂತೆ ಹೆಜ್ಬೊಲ್ಲಾ ಗುರಿಗಳನ್ನು ಹೊಡೆದುರುಳಿಸಿದೆ. ಸ್ಪೋಟದ ಹಿನ್ನಲೆ ಇಸ್ರೇಲ್‌ನ ನಾಗರಿಕ ರಕ್ಷಣಾ ಸಂಸ್ಥೆಯು ಉತ್ತರದ ಶಾಲೆಗಳನ್ನು ಮುಚ್ಚುವಂತೆ ಆದೇಶಿಸಿದೆ.

ಲೆಬನಾನ್‌ನ ಆರೋಗ್ಯ ಸಚಿವಾಲಯವು ದಕ್ಷಿಣ ಪ್ರದೇಶಗಳಲ್ಲಿ ಇಸ್ರೇಲಿ ದಾಳಿಯಲ್ಲಿ ಮೂರು ಜನರು ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಿದೆ. ಆದರೆ ಹಿಜ್ಬುಲ್ಲಾ ತನ್ನ ಇಬ್ಬರು ಹೋರಾಟಗಾರರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ್ದಾರೆ. ಲೆಬನಾನ್‌ನಿಂದ ರಾತ್ರಿಯಿಡೀ 150 ರಾಕೆಟ್‌ಗಳು, ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ತನ್ನ ಭೂಪ್ರದೇಶಕ್ಕೆ ಹಾರಿಸಲಾಗಿದೆ ಎಂದು ಇಸ್ರೇಲಿ ಸೇನೆಯು ವರದಿ ಮಾಡಿದೆ.

ಇದನ್ನೂಓದಿ: ಮಕ್ಕಳ ಅಶ್ಲೀಲ ಚಿತ್ರ ಡೌನ್‌ಲೋಡ್, ನೋಡುವುದು ಅಪರಾಧ; ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಇಸ್ರೇಲ್‌ ಇತ್ತೀಚೆಗೆ ವೈಮಾನಿಕ ದಾಳಿ ನಡೆಸಿ ಬೈರುತ್‌ನ ಜನನಿಬಿಡ ಪ್ರದೇಶವಾದ ದಹಿಯೆ ಅಕ್ಕಪಕ್ಕದ ಮೇಲೆ ದಾಳಿ ನಡೆಸಿ ಹಿಜ್ಬುಲ್ಲಾದ ರಾದ್ವಾನ್ ಫೋರ್ಸ್‌ನ ಮುಖ್ಯಸ್ಥ ಇಬ್ರಾಹಿಂ ಅಕಿಲ್‌ನನ್ನು ಕೊಂದು ಹಾಕಿತ್ತು. ಇದರ ನಂತರ ಹೆಜ್ಬುಲ್ಲಾಹ್ ಇಸ್ರೇಲ್ ಮೇಲೆ ದಾಳಿ ಮಾಡಿದೆ.

ಈ ನಡುವೆ ಕತಾರ್, ಈಜಿಪ್ಟ್ ಮತ್ತು ಅಮೆರಿಕ ನೇತೃತ್ವದ ಮಧ್ಯಸ್ಥಿಕೆ ಪ್ರಯತ್ನಗಳ ಹೊರತಾಗಿಯೂ, ಸಂಘರ್ಷವು ಕಡಿಮೆಯಾಗುವ ಯಾವುದೇ ಲಕ್ಷಣವನ್ನು ಕಾಣುತ್ತಿಲ್ಲ. ಕದನ ವಿರಾಮಕ್ಕಾಗಿ ಮತ್ತು ಒತ್ತೆಯಾಳುಗಳ ಬಿಡುಗಡೆಯನ್ನು ಸುಗಮಗೊಳಿಸುವ ಪ್ರಯತ್ನಗಳು ಸ್ಥಗಿತಗೊಂಡಿವೆ.

ವಿಡಿಯೊ ನೋಡಿ: ಓ ನನ್ನ ಚೇತನ, ಆಗು ನೀ ಅನಿಕೇತನ.. ಕುವೆಂಪು ಹಾಡಿಗೆ ಭಾವತುಂಬಿದ ಜೀವಪರರು O nanna chethana

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...