HomeಚಳವಳಿFree Palestine | ಹೆಜ್ಬುಲ್ಲಾ - ಇಸ್ರೇಲ್ ಸಂಘರ್ಷ ಉಲ್ಬಣ

Free Palestine | ಹೆಜ್ಬುಲ್ಲಾ – ಇಸ್ರೇಲ್ ಸಂಘರ್ಷ ಉಲ್ಬಣ

- Advertisement -
- Advertisement -

ಪ್ಯಾಲೆಸ್ತೀನ್ ಪರವಾಗಿ ಇಸ್ರೇಲ್ ವಿರುದ್ಧ ಕಾದಾಡುತ್ತಿರುವ ಹೆಜ್ಬುಲ್ಲಾ ಬಂಡುಕೋರರು ಗಡಿಯಾಚೆಗಿನ ದಾಳಿಯನ್ನು ತೀವ್ರಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಇಸ್ರೇಲ್ ನಮ್ಮನ್ನು ಬೆದರಿಸುವ ಯಾರಿಗಾದರೂ ‘ಹೊಡೆದುರುಳಿಸುತ್ತೇವೆ’ ಎಂದು ಹೇಳಿದೆ. ಸಂಭಾವ್ಯ ಯುದ್ಧದಿಂದ ಸಂಪೂರ್ಣವಾಗಿ ಹಿಂದೆ ಸರಿಯಲು ಅಂತರಾಷ್ಟ್ರೀಯ ಸಮುದಾಯದಗಳು ಕರೆ ನೀಡುತ್ತಿದ್ದರೂ ಇತ್ತಂಡಗಳು ಅದನ್ನು ಕಡೆಗಣಿಸಿವೆ. Free Palestine 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಸ್ರೇಲ್‌ನೊಂದಿಗಿನ ಸಂಘರ್ಷದಲ್ಲಿ ನಾವು “ಹೊಸ ಹಂತ”ವನ್ನು ಪ್ರವೇಶಿಸಿದ್ದೇವೆ ಎಂದು ಹಿಜ್ಬುಲ್ಲಾದ ಉಪ ಮುಖ್ಯಸ್ಥ ನಯಿಮ್ ಕಾಸ್ಸೆಮ್ ಪ್ರತಿಭಟನಾ ಸಂದೇಶವನ್ನು ನೀಡಿದ್ದಾರೆ. ಉತ್ತರ ಲೆಬನಾನ್‌ನ ಹಿಜ್ಬುಲ್ಲಾ ಭದ್ರಕೋಟೆಗಳನ್ನು ಗುರಿಯಾಗಿಟ್ಟುಕೊಂಡು ಇಸ್ರೇಲ್ ನಡೆಸಿದ ವ್ಯಾಪಕ ಹಾನಿ ಮತ್ತು ಹಲವಾರು ಸಾವುನೋವುಗಳಿಗೆ ಪ್ರತಿಭಟನೆಯಾಗಿ ಕಾಸ್ಸೆಮ್ ಈ ಸಂದೇಶ ನೀಡಿದ್ದಾರೆ.

ಇದನ್ನೂಓದಿ: ಗುಜರಾತ್‌: ಲೈಂಗಿಕ ದೌರ್ಜನ್ಯ ವಿರೋಧಿಸಿದ ಶಾಲಾ ವಿದ್ಯಾರ್ಥಿನಿ ಹತ್ಯೆ, ಪ್ರಾಂಶುಪಾಲನ ಬಂಧನ

ಇದಕ್ಕೆ ಪ್ರತಿಕ್ರಿಯಿಸಿರುವ ಇಸ್ರೇಲಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಅವರು ತಮ್ಮ ಉತ್ತರದ ನಿವಾಸಿಗಳ ಭದ್ರತೆಯನ್ನು ಖಾತ್ರಿಪಡಿಸುವ ಇಸ್ರೇಲ್‌ನ ಬದ್ಧತೆಯನ್ನು ಪುನರುಚ್ಚರಿಸಿದದ್ದಾರೆ. “ಇಸ್ರೇಲ್‌ನ ಉತ್ತರದ ಸಮುದಾಯಗಳು ಅವರ ಮನೆಗಳಿಗೆ ಸುರಕ್ಷಿತವಾಗಿ ಹಿಂದಿರುಗಿಸುವ ಹಂತವನ್ನು ತಲುಪುವವರೆಗೆ ನಾವು ಮಿಲಿಟರಿ ಕ್ರಮಗಳು ಮುಂದುವರೆಯುತ್ತವೆ” ಎಂದು ಹೇಳಿದ್ದಾರೆ.

ಆರ್ಮಿ ಚೀಫ್ ಲೆಫ್ಟಿನೆಂಟ್ ಜನರಲ್ ಹರ್ಜಿ ಹಲೆವಿ ಮನಾತನಾಡಿ, ತನ್ನ ನಾಗರಿಕರನ್ನು ಬೆದರಿಸುವ ಯಾರಿಗಾದರೂ ಇಸ್ರೇಲ್ ಹೊಡೆದುರುಳಿಸುತ್ತದೆ ಎಂದು ಹೇಳಿದ್ದಾರೆ. ಈ ನಡುವೆ ಇಸ್ರೇಲ್‌ನ ಅತಿದೊಡ್ಡ ಮಿತ್ರರಾಷ್ಟ್ರವಾದ ಅಮೆರಿಕ ಸಂಯಮ ಪಾಲಿಸುವಂತೆ ಒತ್ತಾಯಿಸಿದೆ. ಮಿಲಿಟರಿ ಸಂಘರ್ಷವು ಇಸ್ರೇಲ್‌ನ ಹಿತಾಸಕ್ತಿಗೆ ಉತ್ತಮವಲ್ಲ ಮತ್ತು ಈ ಸಂಘರ್ಷವನ್ನು ತಡೆಯಲು ಅಮೆರಿಕ ದಣಿವರಿಯಿಲ್ಲದೆ ಕೆಲಸ ಮಾಡುತ್ತಿದೆ ಎಂದು ಅಧ್ಯಕ್ಷ ಜೋ ಬಿಡೆನ್ ಒತ್ತಿ ಹೇಳಿದ್ದಾರೆ. Free Palestine 

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಕೂಡಾ ತೀವ್ರ ಕಳವಳಗಳ ವ್ಯಕ್ತಪಡಿಸಿದ್ದು, ನಡೆಯುತ್ತಿರುವ ಗಾಜಾ ಸಂಘರ್ಷದ ಮಧ್ಯೆ ಲೆಬನಾನ್ ಕೂಡಾ “ಮತ್ತೊಂದು ಗಾಜಾ” ಆಗುವ ಅಪಾಯದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂಓದಿ: FACT CHECK : ಟೋಲ್‌ ಪ್ಲಾಝಾದಲ್ಲಿ ಗಲಾಟೆ ನಡೆಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಕಳೆದ ವಾರ ಹೆಜ್ಬೊಲ್ಲಾಹ್ ರಾಕೆಟ್‌ಗಳ ಸುರಿಮಳೆಯನ್ನು ಉಡಾಯಿಸಿದ್ದು, ಅದು ಇಸ್ರೇಲ್‌ನ ಅತಿದೊಡ್ಡ ಉತ್ತರದ ನಗರವಾದ ಹೈಫಾ ಬಳಿಯ ಕಿರ್ಯಾತ್ ಬಿಯಾಲಿಕ್ ಅನ್ನು ತಲುಪಿ ಅಲ್ಲಿನ ಮೂಲಸೌಕರ್ಯವನ್ನು ಹಾನಿಗೊಳಿಸಿತು ಎಂದು ವರದಿಯಾಗಿದೆ. ಅಲ್ಲದೆ ದಾಳಿಯು ಮತ್ತಷ್ಟು ಉಲ್ಬಣಗೊಳ್ಳುವ ಭಯವನ್ನು ಹುಟ್ಟುಹಾಕಿದೆ.

ಇದಕ್ಕೆ ಪ್ರತೀಕಾರವಾಗಿ, ಇಸ್ರೇಲ್ ದಕ್ಷಿಣ ಲೆಬನಾನ್‌ನ ವಾಯುನೆಲೆ ಮತ್ತು ಮಿಲಿಟರಿ ಉತ್ಪಾದನಾ ಸೌಲಭ್ಯಗಳನ್ನು ಒಳಗೊಂಡಂತೆ ಹೆಜ್ಬೊಲ್ಲಾ ಗುರಿಗಳನ್ನು ಹೊಡೆದುರುಳಿಸಿದೆ. ಸ್ಪೋಟದ ಹಿನ್ನಲೆ ಇಸ್ರೇಲ್‌ನ ನಾಗರಿಕ ರಕ್ಷಣಾ ಸಂಸ್ಥೆಯು ಉತ್ತರದ ಶಾಲೆಗಳನ್ನು ಮುಚ್ಚುವಂತೆ ಆದೇಶಿಸಿದೆ.

ಲೆಬನಾನ್‌ನ ಆರೋಗ್ಯ ಸಚಿವಾಲಯವು ದಕ್ಷಿಣ ಪ್ರದೇಶಗಳಲ್ಲಿ ಇಸ್ರೇಲಿ ದಾಳಿಯಲ್ಲಿ ಮೂರು ಜನರು ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಿದೆ. ಆದರೆ ಹಿಜ್ಬುಲ್ಲಾ ತನ್ನ ಇಬ್ಬರು ಹೋರಾಟಗಾರರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ್ದಾರೆ. ಲೆಬನಾನ್‌ನಿಂದ ರಾತ್ರಿಯಿಡೀ 150 ರಾಕೆಟ್‌ಗಳು, ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ತನ್ನ ಭೂಪ್ರದೇಶಕ್ಕೆ ಹಾರಿಸಲಾಗಿದೆ ಎಂದು ಇಸ್ರೇಲಿ ಸೇನೆಯು ವರದಿ ಮಾಡಿದೆ.

ಇದನ್ನೂಓದಿ: ಮಕ್ಕಳ ಅಶ್ಲೀಲ ಚಿತ್ರ ಡೌನ್‌ಲೋಡ್, ನೋಡುವುದು ಅಪರಾಧ; ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಇಸ್ರೇಲ್‌ ಇತ್ತೀಚೆಗೆ ವೈಮಾನಿಕ ದಾಳಿ ನಡೆಸಿ ಬೈರುತ್‌ನ ಜನನಿಬಿಡ ಪ್ರದೇಶವಾದ ದಹಿಯೆ ಅಕ್ಕಪಕ್ಕದ ಮೇಲೆ ದಾಳಿ ನಡೆಸಿ ಹಿಜ್ಬುಲ್ಲಾದ ರಾದ್ವಾನ್ ಫೋರ್ಸ್‌ನ ಮುಖ್ಯಸ್ಥ ಇಬ್ರಾಹಿಂ ಅಕಿಲ್‌ನನ್ನು ಕೊಂದು ಹಾಕಿತ್ತು. ಇದರ ನಂತರ ಹೆಜ್ಬುಲ್ಲಾಹ್ ಇಸ್ರೇಲ್ ಮೇಲೆ ದಾಳಿ ಮಾಡಿದೆ.

ಈ ನಡುವೆ ಕತಾರ್, ಈಜಿಪ್ಟ್ ಮತ್ತು ಅಮೆರಿಕ ನೇತೃತ್ವದ ಮಧ್ಯಸ್ಥಿಕೆ ಪ್ರಯತ್ನಗಳ ಹೊರತಾಗಿಯೂ, ಸಂಘರ್ಷವು ಕಡಿಮೆಯಾಗುವ ಯಾವುದೇ ಲಕ್ಷಣವನ್ನು ಕಾಣುತ್ತಿಲ್ಲ. ಕದನ ವಿರಾಮಕ್ಕಾಗಿ ಮತ್ತು ಒತ್ತೆಯಾಳುಗಳ ಬಿಡುಗಡೆಯನ್ನು ಸುಗಮಗೊಳಿಸುವ ಪ್ರಯತ್ನಗಳು ಸ್ಥಗಿತಗೊಂಡಿವೆ.

ವಿಡಿಯೊ ನೋಡಿ: ಓ ನನ್ನ ಚೇತನ, ಆಗು ನೀ ಅನಿಕೇತನ.. ಕುವೆಂಪು ಹಾಡಿಗೆ ಭಾವತುಂಬಿದ ಜೀವಪರರು O nanna chethana

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...