HomeಚಳವಳಿFree Palestine | ಹೆಜ್ಬುಲ್ಲಾ - ಇಸ್ರೇಲ್ ಸಂಘರ್ಷ ಉಲ್ಬಣ

Free Palestine | ಹೆಜ್ಬುಲ್ಲಾ – ಇಸ್ರೇಲ್ ಸಂಘರ್ಷ ಉಲ್ಬಣ

- Advertisement -
- Advertisement -

ಪ್ಯಾಲೆಸ್ತೀನ್ ಪರವಾಗಿ ಇಸ್ರೇಲ್ ವಿರುದ್ಧ ಕಾದಾಡುತ್ತಿರುವ ಹೆಜ್ಬುಲ್ಲಾ ಬಂಡುಕೋರರು ಗಡಿಯಾಚೆಗಿನ ದಾಳಿಯನ್ನು ತೀವ್ರಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಇಸ್ರೇಲ್ ನಮ್ಮನ್ನು ಬೆದರಿಸುವ ಯಾರಿಗಾದರೂ ‘ಹೊಡೆದುರುಳಿಸುತ್ತೇವೆ’ ಎಂದು ಹೇಳಿದೆ. ಸಂಭಾವ್ಯ ಯುದ್ಧದಿಂದ ಸಂಪೂರ್ಣವಾಗಿ ಹಿಂದೆ ಸರಿಯಲು ಅಂತರಾಷ್ಟ್ರೀಯ ಸಮುದಾಯದಗಳು ಕರೆ ನೀಡುತ್ತಿದ್ದರೂ ಇತ್ತಂಡಗಳು ಅದನ್ನು ಕಡೆಗಣಿಸಿವೆ. Free Palestine 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಸ್ರೇಲ್‌ನೊಂದಿಗಿನ ಸಂಘರ್ಷದಲ್ಲಿ ನಾವು “ಹೊಸ ಹಂತ”ವನ್ನು ಪ್ರವೇಶಿಸಿದ್ದೇವೆ ಎಂದು ಹಿಜ್ಬುಲ್ಲಾದ ಉಪ ಮುಖ್ಯಸ್ಥ ನಯಿಮ್ ಕಾಸ್ಸೆಮ್ ಪ್ರತಿಭಟನಾ ಸಂದೇಶವನ್ನು ನೀಡಿದ್ದಾರೆ. ಉತ್ತರ ಲೆಬನಾನ್‌ನ ಹಿಜ್ಬುಲ್ಲಾ ಭದ್ರಕೋಟೆಗಳನ್ನು ಗುರಿಯಾಗಿಟ್ಟುಕೊಂಡು ಇಸ್ರೇಲ್ ನಡೆಸಿದ ವ್ಯಾಪಕ ಹಾನಿ ಮತ್ತು ಹಲವಾರು ಸಾವುನೋವುಗಳಿಗೆ ಪ್ರತಿಭಟನೆಯಾಗಿ ಕಾಸ್ಸೆಮ್ ಈ ಸಂದೇಶ ನೀಡಿದ್ದಾರೆ.

ಇದನ್ನೂಓದಿ: ಗುಜರಾತ್‌: ಲೈಂಗಿಕ ದೌರ್ಜನ್ಯ ವಿರೋಧಿಸಿದ ಶಾಲಾ ವಿದ್ಯಾರ್ಥಿನಿ ಹತ್ಯೆ, ಪ್ರಾಂಶುಪಾಲನ ಬಂಧನ

ಇದಕ್ಕೆ ಪ್ರತಿಕ್ರಿಯಿಸಿರುವ ಇಸ್ರೇಲಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಅವರು ತಮ್ಮ ಉತ್ತರದ ನಿವಾಸಿಗಳ ಭದ್ರತೆಯನ್ನು ಖಾತ್ರಿಪಡಿಸುವ ಇಸ್ರೇಲ್‌ನ ಬದ್ಧತೆಯನ್ನು ಪುನರುಚ್ಚರಿಸಿದದ್ದಾರೆ. “ಇಸ್ರೇಲ್‌ನ ಉತ್ತರದ ಸಮುದಾಯಗಳು ಅವರ ಮನೆಗಳಿಗೆ ಸುರಕ್ಷಿತವಾಗಿ ಹಿಂದಿರುಗಿಸುವ ಹಂತವನ್ನು ತಲುಪುವವರೆಗೆ ನಾವು ಮಿಲಿಟರಿ ಕ್ರಮಗಳು ಮುಂದುವರೆಯುತ್ತವೆ” ಎಂದು ಹೇಳಿದ್ದಾರೆ.

ಆರ್ಮಿ ಚೀಫ್ ಲೆಫ್ಟಿನೆಂಟ್ ಜನರಲ್ ಹರ್ಜಿ ಹಲೆವಿ ಮನಾತನಾಡಿ, ತನ್ನ ನಾಗರಿಕರನ್ನು ಬೆದರಿಸುವ ಯಾರಿಗಾದರೂ ಇಸ್ರೇಲ್ ಹೊಡೆದುರುಳಿಸುತ್ತದೆ ಎಂದು ಹೇಳಿದ್ದಾರೆ. ಈ ನಡುವೆ ಇಸ್ರೇಲ್‌ನ ಅತಿದೊಡ್ಡ ಮಿತ್ರರಾಷ್ಟ್ರವಾದ ಅಮೆರಿಕ ಸಂಯಮ ಪಾಲಿಸುವಂತೆ ಒತ್ತಾಯಿಸಿದೆ. ಮಿಲಿಟರಿ ಸಂಘರ್ಷವು ಇಸ್ರೇಲ್‌ನ ಹಿತಾಸಕ್ತಿಗೆ ಉತ್ತಮವಲ್ಲ ಮತ್ತು ಈ ಸಂಘರ್ಷವನ್ನು ತಡೆಯಲು ಅಮೆರಿಕ ದಣಿವರಿಯಿಲ್ಲದೆ ಕೆಲಸ ಮಾಡುತ್ತಿದೆ ಎಂದು ಅಧ್ಯಕ್ಷ ಜೋ ಬಿಡೆನ್ ಒತ್ತಿ ಹೇಳಿದ್ದಾರೆ. Free Palestine 

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಕೂಡಾ ತೀವ್ರ ಕಳವಳಗಳ ವ್ಯಕ್ತಪಡಿಸಿದ್ದು, ನಡೆಯುತ್ತಿರುವ ಗಾಜಾ ಸಂಘರ್ಷದ ಮಧ್ಯೆ ಲೆಬನಾನ್ ಕೂಡಾ “ಮತ್ತೊಂದು ಗಾಜಾ” ಆಗುವ ಅಪಾಯದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂಓದಿ: FACT CHECK : ಟೋಲ್‌ ಪ್ಲಾಝಾದಲ್ಲಿ ಗಲಾಟೆ ನಡೆಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಕಳೆದ ವಾರ ಹೆಜ್ಬೊಲ್ಲಾಹ್ ರಾಕೆಟ್‌ಗಳ ಸುರಿಮಳೆಯನ್ನು ಉಡಾಯಿಸಿದ್ದು, ಅದು ಇಸ್ರೇಲ್‌ನ ಅತಿದೊಡ್ಡ ಉತ್ತರದ ನಗರವಾದ ಹೈಫಾ ಬಳಿಯ ಕಿರ್ಯಾತ್ ಬಿಯಾಲಿಕ್ ಅನ್ನು ತಲುಪಿ ಅಲ್ಲಿನ ಮೂಲಸೌಕರ್ಯವನ್ನು ಹಾನಿಗೊಳಿಸಿತು ಎಂದು ವರದಿಯಾಗಿದೆ. ಅಲ್ಲದೆ ದಾಳಿಯು ಮತ್ತಷ್ಟು ಉಲ್ಬಣಗೊಳ್ಳುವ ಭಯವನ್ನು ಹುಟ್ಟುಹಾಕಿದೆ.

ಇದಕ್ಕೆ ಪ್ರತೀಕಾರವಾಗಿ, ಇಸ್ರೇಲ್ ದಕ್ಷಿಣ ಲೆಬನಾನ್‌ನ ವಾಯುನೆಲೆ ಮತ್ತು ಮಿಲಿಟರಿ ಉತ್ಪಾದನಾ ಸೌಲಭ್ಯಗಳನ್ನು ಒಳಗೊಂಡಂತೆ ಹೆಜ್ಬೊಲ್ಲಾ ಗುರಿಗಳನ್ನು ಹೊಡೆದುರುಳಿಸಿದೆ. ಸ್ಪೋಟದ ಹಿನ್ನಲೆ ಇಸ್ರೇಲ್‌ನ ನಾಗರಿಕ ರಕ್ಷಣಾ ಸಂಸ್ಥೆಯು ಉತ್ತರದ ಶಾಲೆಗಳನ್ನು ಮುಚ್ಚುವಂತೆ ಆದೇಶಿಸಿದೆ.

ಲೆಬನಾನ್‌ನ ಆರೋಗ್ಯ ಸಚಿವಾಲಯವು ದಕ್ಷಿಣ ಪ್ರದೇಶಗಳಲ್ಲಿ ಇಸ್ರೇಲಿ ದಾಳಿಯಲ್ಲಿ ಮೂರು ಜನರು ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಿದೆ. ಆದರೆ ಹಿಜ್ಬುಲ್ಲಾ ತನ್ನ ಇಬ್ಬರು ಹೋರಾಟಗಾರರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ್ದಾರೆ. ಲೆಬನಾನ್‌ನಿಂದ ರಾತ್ರಿಯಿಡೀ 150 ರಾಕೆಟ್‌ಗಳು, ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ತನ್ನ ಭೂಪ್ರದೇಶಕ್ಕೆ ಹಾರಿಸಲಾಗಿದೆ ಎಂದು ಇಸ್ರೇಲಿ ಸೇನೆಯು ವರದಿ ಮಾಡಿದೆ.

ಇದನ್ನೂಓದಿ: ಮಕ್ಕಳ ಅಶ್ಲೀಲ ಚಿತ್ರ ಡೌನ್‌ಲೋಡ್, ನೋಡುವುದು ಅಪರಾಧ; ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಇಸ್ರೇಲ್‌ ಇತ್ತೀಚೆಗೆ ವೈಮಾನಿಕ ದಾಳಿ ನಡೆಸಿ ಬೈರುತ್‌ನ ಜನನಿಬಿಡ ಪ್ರದೇಶವಾದ ದಹಿಯೆ ಅಕ್ಕಪಕ್ಕದ ಮೇಲೆ ದಾಳಿ ನಡೆಸಿ ಹಿಜ್ಬುಲ್ಲಾದ ರಾದ್ವಾನ್ ಫೋರ್ಸ್‌ನ ಮುಖ್ಯಸ್ಥ ಇಬ್ರಾಹಿಂ ಅಕಿಲ್‌ನನ್ನು ಕೊಂದು ಹಾಕಿತ್ತು. ಇದರ ನಂತರ ಹೆಜ್ಬುಲ್ಲಾಹ್ ಇಸ್ರೇಲ್ ಮೇಲೆ ದಾಳಿ ಮಾಡಿದೆ.

ಈ ನಡುವೆ ಕತಾರ್, ಈಜಿಪ್ಟ್ ಮತ್ತು ಅಮೆರಿಕ ನೇತೃತ್ವದ ಮಧ್ಯಸ್ಥಿಕೆ ಪ್ರಯತ್ನಗಳ ಹೊರತಾಗಿಯೂ, ಸಂಘರ್ಷವು ಕಡಿಮೆಯಾಗುವ ಯಾವುದೇ ಲಕ್ಷಣವನ್ನು ಕಾಣುತ್ತಿಲ್ಲ. ಕದನ ವಿರಾಮಕ್ಕಾಗಿ ಮತ್ತು ಒತ್ತೆಯಾಳುಗಳ ಬಿಡುಗಡೆಯನ್ನು ಸುಗಮಗೊಳಿಸುವ ಪ್ರಯತ್ನಗಳು ಸ್ಥಗಿತಗೊಂಡಿವೆ.

ವಿಡಿಯೊ ನೋಡಿ: ಓ ನನ್ನ ಚೇತನ, ಆಗು ನೀ ಅನಿಕೇತನ.. ಕುವೆಂಪು ಹಾಡಿಗೆ ಭಾವತುಂಬಿದ ಜೀವಪರರು O nanna chethana

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...