HomeಚಳವಳಿFree Palestine | ಹೆಜ್ಬುಲ್ಲಾ - ಇಸ್ರೇಲ್ ಸಂಘರ್ಷ ಉಲ್ಬಣ

Free Palestine | ಹೆಜ್ಬುಲ್ಲಾ – ಇಸ್ರೇಲ್ ಸಂಘರ್ಷ ಉಲ್ಬಣ

- Advertisement -
- Advertisement -

ಪ್ಯಾಲೆಸ್ತೀನ್ ಪರವಾಗಿ ಇಸ್ರೇಲ್ ವಿರುದ್ಧ ಕಾದಾಡುತ್ತಿರುವ ಹೆಜ್ಬುಲ್ಲಾ ಬಂಡುಕೋರರು ಗಡಿಯಾಚೆಗಿನ ದಾಳಿಯನ್ನು ತೀವ್ರಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಇಸ್ರೇಲ್ ನಮ್ಮನ್ನು ಬೆದರಿಸುವ ಯಾರಿಗಾದರೂ ‘ಹೊಡೆದುರುಳಿಸುತ್ತೇವೆ’ ಎಂದು ಹೇಳಿದೆ. ಸಂಭಾವ್ಯ ಯುದ್ಧದಿಂದ ಸಂಪೂರ್ಣವಾಗಿ ಹಿಂದೆ ಸರಿಯಲು ಅಂತರಾಷ್ಟ್ರೀಯ ಸಮುದಾಯದಗಳು ಕರೆ ನೀಡುತ್ತಿದ್ದರೂ ಇತ್ತಂಡಗಳು ಅದನ್ನು ಕಡೆಗಣಿಸಿವೆ. Free Palestine 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಸ್ರೇಲ್‌ನೊಂದಿಗಿನ ಸಂಘರ್ಷದಲ್ಲಿ ನಾವು “ಹೊಸ ಹಂತ”ವನ್ನು ಪ್ರವೇಶಿಸಿದ್ದೇವೆ ಎಂದು ಹಿಜ್ಬುಲ್ಲಾದ ಉಪ ಮುಖ್ಯಸ್ಥ ನಯಿಮ್ ಕಾಸ್ಸೆಮ್ ಪ್ರತಿಭಟನಾ ಸಂದೇಶವನ್ನು ನೀಡಿದ್ದಾರೆ. ಉತ್ತರ ಲೆಬನಾನ್‌ನ ಹಿಜ್ಬುಲ್ಲಾ ಭದ್ರಕೋಟೆಗಳನ್ನು ಗುರಿಯಾಗಿಟ್ಟುಕೊಂಡು ಇಸ್ರೇಲ್ ನಡೆಸಿದ ವ್ಯಾಪಕ ಹಾನಿ ಮತ್ತು ಹಲವಾರು ಸಾವುನೋವುಗಳಿಗೆ ಪ್ರತಿಭಟನೆಯಾಗಿ ಕಾಸ್ಸೆಮ್ ಈ ಸಂದೇಶ ನೀಡಿದ್ದಾರೆ.

ಇದನ್ನೂಓದಿ: ಗುಜರಾತ್‌: ಲೈಂಗಿಕ ದೌರ್ಜನ್ಯ ವಿರೋಧಿಸಿದ ಶಾಲಾ ವಿದ್ಯಾರ್ಥಿನಿ ಹತ್ಯೆ, ಪ್ರಾಂಶುಪಾಲನ ಬಂಧನ

ಇದಕ್ಕೆ ಪ್ರತಿಕ್ರಿಯಿಸಿರುವ ಇಸ್ರೇಲಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಅವರು ತಮ್ಮ ಉತ್ತರದ ನಿವಾಸಿಗಳ ಭದ್ರತೆಯನ್ನು ಖಾತ್ರಿಪಡಿಸುವ ಇಸ್ರೇಲ್‌ನ ಬದ್ಧತೆಯನ್ನು ಪುನರುಚ್ಚರಿಸಿದದ್ದಾರೆ. “ಇಸ್ರೇಲ್‌ನ ಉತ್ತರದ ಸಮುದಾಯಗಳು ಅವರ ಮನೆಗಳಿಗೆ ಸುರಕ್ಷಿತವಾಗಿ ಹಿಂದಿರುಗಿಸುವ ಹಂತವನ್ನು ತಲುಪುವವರೆಗೆ ನಾವು ಮಿಲಿಟರಿ ಕ್ರಮಗಳು ಮುಂದುವರೆಯುತ್ತವೆ” ಎಂದು ಹೇಳಿದ್ದಾರೆ.

ಆರ್ಮಿ ಚೀಫ್ ಲೆಫ್ಟಿನೆಂಟ್ ಜನರಲ್ ಹರ್ಜಿ ಹಲೆವಿ ಮನಾತನಾಡಿ, ತನ್ನ ನಾಗರಿಕರನ್ನು ಬೆದರಿಸುವ ಯಾರಿಗಾದರೂ ಇಸ್ರೇಲ್ ಹೊಡೆದುರುಳಿಸುತ್ತದೆ ಎಂದು ಹೇಳಿದ್ದಾರೆ. ಈ ನಡುವೆ ಇಸ್ರೇಲ್‌ನ ಅತಿದೊಡ್ಡ ಮಿತ್ರರಾಷ್ಟ್ರವಾದ ಅಮೆರಿಕ ಸಂಯಮ ಪಾಲಿಸುವಂತೆ ಒತ್ತಾಯಿಸಿದೆ. ಮಿಲಿಟರಿ ಸಂಘರ್ಷವು ಇಸ್ರೇಲ್‌ನ ಹಿತಾಸಕ್ತಿಗೆ ಉತ್ತಮವಲ್ಲ ಮತ್ತು ಈ ಸಂಘರ್ಷವನ್ನು ತಡೆಯಲು ಅಮೆರಿಕ ದಣಿವರಿಯಿಲ್ಲದೆ ಕೆಲಸ ಮಾಡುತ್ತಿದೆ ಎಂದು ಅಧ್ಯಕ್ಷ ಜೋ ಬಿಡೆನ್ ಒತ್ತಿ ಹೇಳಿದ್ದಾರೆ. Free Palestine 

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಕೂಡಾ ತೀವ್ರ ಕಳವಳಗಳ ವ್ಯಕ್ತಪಡಿಸಿದ್ದು, ನಡೆಯುತ್ತಿರುವ ಗಾಜಾ ಸಂಘರ್ಷದ ಮಧ್ಯೆ ಲೆಬನಾನ್ ಕೂಡಾ “ಮತ್ತೊಂದು ಗಾಜಾ” ಆಗುವ ಅಪಾಯದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂಓದಿ: FACT CHECK : ಟೋಲ್‌ ಪ್ಲಾಝಾದಲ್ಲಿ ಗಲಾಟೆ ನಡೆಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಕಳೆದ ವಾರ ಹೆಜ್ಬೊಲ್ಲಾಹ್ ರಾಕೆಟ್‌ಗಳ ಸುರಿಮಳೆಯನ್ನು ಉಡಾಯಿಸಿದ್ದು, ಅದು ಇಸ್ರೇಲ್‌ನ ಅತಿದೊಡ್ಡ ಉತ್ತರದ ನಗರವಾದ ಹೈಫಾ ಬಳಿಯ ಕಿರ್ಯಾತ್ ಬಿಯಾಲಿಕ್ ಅನ್ನು ತಲುಪಿ ಅಲ್ಲಿನ ಮೂಲಸೌಕರ್ಯವನ್ನು ಹಾನಿಗೊಳಿಸಿತು ಎಂದು ವರದಿಯಾಗಿದೆ. ಅಲ್ಲದೆ ದಾಳಿಯು ಮತ್ತಷ್ಟು ಉಲ್ಬಣಗೊಳ್ಳುವ ಭಯವನ್ನು ಹುಟ್ಟುಹಾಕಿದೆ.

ಇದಕ್ಕೆ ಪ್ರತೀಕಾರವಾಗಿ, ಇಸ್ರೇಲ್ ದಕ್ಷಿಣ ಲೆಬನಾನ್‌ನ ವಾಯುನೆಲೆ ಮತ್ತು ಮಿಲಿಟರಿ ಉತ್ಪಾದನಾ ಸೌಲಭ್ಯಗಳನ್ನು ಒಳಗೊಂಡಂತೆ ಹೆಜ್ಬೊಲ್ಲಾ ಗುರಿಗಳನ್ನು ಹೊಡೆದುರುಳಿಸಿದೆ. ಸ್ಪೋಟದ ಹಿನ್ನಲೆ ಇಸ್ರೇಲ್‌ನ ನಾಗರಿಕ ರಕ್ಷಣಾ ಸಂಸ್ಥೆಯು ಉತ್ತರದ ಶಾಲೆಗಳನ್ನು ಮುಚ್ಚುವಂತೆ ಆದೇಶಿಸಿದೆ.

ಲೆಬನಾನ್‌ನ ಆರೋಗ್ಯ ಸಚಿವಾಲಯವು ದಕ್ಷಿಣ ಪ್ರದೇಶಗಳಲ್ಲಿ ಇಸ್ರೇಲಿ ದಾಳಿಯಲ್ಲಿ ಮೂರು ಜನರು ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಿದೆ. ಆದರೆ ಹಿಜ್ಬುಲ್ಲಾ ತನ್ನ ಇಬ್ಬರು ಹೋರಾಟಗಾರರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ್ದಾರೆ. ಲೆಬನಾನ್‌ನಿಂದ ರಾತ್ರಿಯಿಡೀ 150 ರಾಕೆಟ್‌ಗಳು, ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ತನ್ನ ಭೂಪ್ರದೇಶಕ್ಕೆ ಹಾರಿಸಲಾಗಿದೆ ಎಂದು ಇಸ್ರೇಲಿ ಸೇನೆಯು ವರದಿ ಮಾಡಿದೆ.

ಇದನ್ನೂಓದಿ: ಮಕ್ಕಳ ಅಶ್ಲೀಲ ಚಿತ್ರ ಡೌನ್‌ಲೋಡ್, ನೋಡುವುದು ಅಪರಾಧ; ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಇಸ್ರೇಲ್‌ ಇತ್ತೀಚೆಗೆ ವೈಮಾನಿಕ ದಾಳಿ ನಡೆಸಿ ಬೈರುತ್‌ನ ಜನನಿಬಿಡ ಪ್ರದೇಶವಾದ ದಹಿಯೆ ಅಕ್ಕಪಕ್ಕದ ಮೇಲೆ ದಾಳಿ ನಡೆಸಿ ಹಿಜ್ಬುಲ್ಲಾದ ರಾದ್ವಾನ್ ಫೋರ್ಸ್‌ನ ಮುಖ್ಯಸ್ಥ ಇಬ್ರಾಹಿಂ ಅಕಿಲ್‌ನನ್ನು ಕೊಂದು ಹಾಕಿತ್ತು. ಇದರ ನಂತರ ಹೆಜ್ಬುಲ್ಲಾಹ್ ಇಸ್ರೇಲ್ ಮೇಲೆ ದಾಳಿ ಮಾಡಿದೆ.

ಈ ನಡುವೆ ಕತಾರ್, ಈಜಿಪ್ಟ್ ಮತ್ತು ಅಮೆರಿಕ ನೇತೃತ್ವದ ಮಧ್ಯಸ್ಥಿಕೆ ಪ್ರಯತ್ನಗಳ ಹೊರತಾಗಿಯೂ, ಸಂಘರ್ಷವು ಕಡಿಮೆಯಾಗುವ ಯಾವುದೇ ಲಕ್ಷಣವನ್ನು ಕಾಣುತ್ತಿಲ್ಲ. ಕದನ ವಿರಾಮಕ್ಕಾಗಿ ಮತ್ತು ಒತ್ತೆಯಾಳುಗಳ ಬಿಡುಗಡೆಯನ್ನು ಸುಗಮಗೊಳಿಸುವ ಪ್ರಯತ್ನಗಳು ಸ್ಥಗಿತಗೊಂಡಿವೆ.

ವಿಡಿಯೊ ನೋಡಿ: ಓ ನನ್ನ ಚೇತನ, ಆಗು ನೀ ಅನಿಕೇತನ.. ಕುವೆಂಪು ಹಾಡಿಗೆ ಭಾವತುಂಬಿದ ಜೀವಪರರು O nanna chethana

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...