Homeಮುಖಪುಟಗೋವಾ ಗೆದ್ದರೆ ಅಯೋಧ್ಯೆ ಸೇರಿದಂತೆ ಧಾರ್ಮಿಕ ಕೇಂದ್ರಗಳಿಗೆ ಉಚಿತ ತೀರ್ಥ ಯಾತ್ರೆ: ಕೇಜ್ರಿವಾಲ್

ಗೋವಾ ಗೆದ್ದರೆ ಅಯೋಧ್ಯೆ ಸೇರಿದಂತೆ ಧಾರ್ಮಿಕ ಕೇಂದ್ರಗಳಿಗೆ ಉಚಿತ ತೀರ್ಥ ಯಾತ್ರೆ: ಕೇಜ್ರಿವಾಲ್

- Advertisement -
- Advertisement -

2022 ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಅಧಿಕಾರಕ್ಕೆ ಬಂದರೆ ಅಯೋಧ್ಯೆ ಮತ್ತು ಇತರ ಧಾರ್ಮಿಕ ಕೇಂದ್ರಗಳಿಗೆ ಉಚಿತ ತೀರ್ಥಯಾತ್ರೆಯನ್ನು ಏರ್ಪಡಿಸಲಾಗುವುದು ಎಂದು ಆಮ್‌ ಆದ್ಮಿ ಪಕ್ಷ(ಎಎಪಿ)ದ ರಾಷ್ಟ್ರೀಯ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಭರವಸೆ ನೀಡಿದ್ದಾರೆ.

“ಗೋವಾದಲ್ಲಿ ನಾವು ಸರ್ಕಾರ ರಚಿಸಿದರೆ ಹಿಂದೂಗಳಿಗೆ ಅಯೋಧ್ಯೆಗೆ, ಕ್ರಿಶ್ಚಿಯನ್ನರಿಗೆ ವೆಲಂಕಣಿಗೆ ಉಚಿತ ಯಾತ್ರೆಯನ್ನು ಏರ್ಪಡಿಸುತ್ತೇವೆ. ಮುಸ್ಲಿಮರಿಗೆ ನಾವು ಅಜ್ಮೀರ್ ಷರೀಫ್ ಮತ್ತು ಸಾಯಿಬಾಬಾರನ್ನು ಗೌರವಿಸುವವರಿಗೆ ಶಿರಡಿ ದೇವಸ್ಥಾನಕ್ಕೆ ಉಚಿತ ಪ್ರವಾಸವನ್ನು ಒದಗಿಸುತ್ತೇವೆ” ಎಂದು ಕೇಜ್ರಿವಾಲ್ ಗೋವಾದಲ್ಲಿ ಹೇಳಿದ್ದಾರೆ.

ಇದು ಗೋವಾ ರಾಜ್ಯದ ಜನತೆಗೆ ಎಎಪಿ ನೀಡುತ್ತಿರುವ ಮೂರನೇ ಗ್ಯಾರಂಟಿ ಎಂದು ಕೇಜ್ರಿವಾಲ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಗೋವಾ ಚುನಾವಣೆ: ಉಚಿತ ವಿದ್ಯುತ್, ಉದ್ಯೋಗ ಖಾತ್ರಿ ಭರವಸೆ ನೀಡಿದ ಅರವಿಂದ್ ಕೇಜ್ರಿವಾಲ್

ಈ ಹಿಂದೆ ಎಎಪಿ, ಪ್ರತಿ ಕುಟುಂಬದ ಕನಿಷ್ಠ ಒಬ್ಬ ಸದಸ್ಯರಿಗೆ ಉದ್ಯೋಗ ಮತ್ತು ಅಲ್ಲಿಯವರೆಗೆ ತಿಂಗಳಿಗೆ 5,000 ರೂಪಾಯಿ ನಿರುದ್ಯೋಗ ಭತ್ಯೆ ನೀಡುವುದಾಗಿ ಭರವಸೆ ನೀಡಿತ್ತು.

ಈ ಹಿಂದೆ ಗೋವಾಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕೇಜ್ರಿವಾಲ್ ಅವರು ಗೋವಾದಲ್ಲಿ ಪ್ರತಿ ಕುಟುಂಬಕ್ಕೆ ತಿಂಗಳಿಗೆ 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಮತ್ತು ನಿರಂತರ ವಿದ್ಯುತ್ ಪೂರೈಕೆ ಮಾಡುವುದಾಗಿ ಭರವಸೆ ನೀಡಿದ್ದರು.

ಉಚಿತ ತೀರ್ಥಯಾತ್ರೆ ಹೊಸ ವಿಷಯವೇನಲ್ಲ ಎಂದು ಹೇಳಿರುವ ಕೇಜ್ರಿವಾಲ್‌, “ತಮ್ಮ ಸರ್ಕಾರವು ದೆಹಲಿಯಲ್ಲಿ ಸಿಎಂ ತೀರ್ಥಯಾತ್ರೆ ಯೋಜನೆಯನ್ನು ಪರಿಚಯಿಸಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭ್ರಷ್ಟ, ಕೋಮುವಾದಿ ಬಿಜೆಪಿ ಸೋಲಿಸೋಣ: ಮಮತಾ ಬ್ಯಾನರ್ಜಿ ಜೊತೆ ಮೈತ್ರಿಗೆ ಮುಂದಾದ ಗೋವಾ ಫಾರ್ವಾಡ್ ಪಾರ್ಟಿ

“ಮೊದಲ ಎರಡು ವರ್ಷಗಳಲ್ಲಿ, 35,000 ಕ್ಕೂ ಹೆಚ್ಚು ಜನರು ಈ ಯೋಜನೆಯಿಂದ ಪ್ರಯೋಜನ ಪಡೆದಿದ್ದಾರೆ. ನಾವು ಹವಾನಿಯಂತ್ರಿತ ರೈಲುಗಳಲ್ಲಿ ಜನರನ್ನು ಯಾತ್ರಾ ಸ್ಥಳಗಳಿಗೆ ಕರೆದೊಯ್ಯುತ್ತೇವೆ. ಊಟ ಸೇರಿದಂತೆ ಅವರ ಎಲ್ಲ ಅಗತ್ಯಗಳನ್ನು ನಾವು ನೋಡಿಕೊಳ್ಳುತ್ತೇವೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ಗೋವಾದಲ್ಲಿ ಮೊದಲ ಬಾರಿಗೆ ಪ್ರಾಮಾಣಿಕ ಸರ್ಕಾರವನ್ನು ಪಕ್ಷವೂ ನೀಡಲಿದೆ. ಆದಾಯಕ್ಕೆ ಯಾವುದೇ ಕೊರತೆ ಇರುವುದಿಲ್ಲ. ನೀಡಿದ ಎಲ್ಲಾ ಭರವಸೆಗಳನ್ನು ನಾವು ಈಡೇರಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿರುದ್ಧ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಿದ್ದರೂ ಅವರನ್ನು ರಕ್ಷಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಪ್ರತಿದಿನ ಕರ್ನಾಟಕದಿಂದ ಕಳುಹಿಸಲ್ಪಟ್ಟ 2,100 ಕೆಜಿ ಗೋಮಾಂಸವನ್ನು ಗೋವಾದಲ್ಲಿ ಸೇವಿಸುತ್ತಾರೆ: ಸಿಎಂ

“ನಾವು ಚುನಾವಣಾ ಖಾತರಿಗಳನ್ನು ಘೋಷಿಸಿದಾಗ, ನಾನು ಎಲ್ಲಿಂದ ಹಣವನ್ನು ಪಡೆಯುತ್ತೇನೆ ಎಂದು ಜನರು ನನ್ನನ್ನು ಕೇಳುತ್ತಾರೆ. ಇದಕ್ಕೆ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಉತ್ತರ ನೀಡಿದ್ದಾರೆ” ಎಂದು ದೆಹಲಿ ಮುಖ್ಯಮಂತ್ರಿ ಹೇಳಿದ್ದಾರೆ.

ಅಕ್ಟೋಬರ್ 2019 ರಿಂದ ಆಗಸ್ಟ್ 2020 ರವರೆಗೆ ಗೋವಾದ ರಾಜ್ಯಪಾಲ ಆಗಿದ್ದ ಸತ್ಯಪಾಲ್ ಮಲಿಕ್ ಅವರು ದೂರದರ್ಶನ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, ಗೋವಾ ಸರ್ಕಾರದಲ್ಲಿ ಭ್ರಷ್ಟಾಚಾರವಿದೆ ಎಂದು ಹೇಳಿದ್ದು, ಮುಖ್ಯಮಂತ್ರಿ ವಿರುದ್ದ ಆರೋಪ ಮಾಡಿದ್ದರು.

ಕಳೆದ 75 ವರ್ಷಗಳ ಸ್ವಾತಂತ್ರ ಭಾರತದಲ್ಲಿ ಯಾವುದೇ ರಾಜ್ಯಪಾಲರು ತಮ್ಮದೇ ಸರ್ಕಾರದ ವಿರುದ್ಧ ಇಂತಹ ಆರೋಪ ಮಾಡಿರುವುದು ಇದುವೆ ಮೊದಲು. ಗೋವಾದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗಲು ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳ ತಪ್ಪು ನೀತಿಗಳೇ ಕಾರಣ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಯಾರು ಗೋವಾವನ್ನು ಗೆಲ್ಲುತ್ತಾರೊ, ಅವರು ಮುಂದೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಾರೆ: ಪಿ. ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಯೋಧ್ಯೆ ರಾಮ ಮಂದಿರ ನಿರ್ಮಾಣ ವಿರೋಧ ಮಾಡಿದವರು ಈಗ ಉಚಿತ ತೀರ್ಥ ಯಾತ್ರೆಗೆ ಕಳಿಸಿ ಕೊಡೋದು ಅಂದರೆ ಈ ಕೇಜ್ರಿವಾಲ್ ಎಂಥ ಅವಕಾಶ ವಾದಿ ಎನ್ನುವ ವಿಚಾರ ತಿಳಿಯಬಹುದು

LEAVE A REPLY

Please enter your comment!
Please enter your name here

- Advertisment -

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...