Homeಮುಖಪುಟಗೋವಾ ಗೆದ್ದರೆ ಅಯೋಧ್ಯೆ ಸೇರಿದಂತೆ ಧಾರ್ಮಿಕ ಕೇಂದ್ರಗಳಿಗೆ ಉಚಿತ ತೀರ್ಥ ಯಾತ್ರೆ: ಕೇಜ್ರಿವಾಲ್

ಗೋವಾ ಗೆದ್ದರೆ ಅಯೋಧ್ಯೆ ಸೇರಿದಂತೆ ಧಾರ್ಮಿಕ ಕೇಂದ್ರಗಳಿಗೆ ಉಚಿತ ತೀರ್ಥ ಯಾತ್ರೆ: ಕೇಜ್ರಿವಾಲ್

- Advertisement -
- Advertisement -

2022 ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಅಧಿಕಾರಕ್ಕೆ ಬಂದರೆ ಅಯೋಧ್ಯೆ ಮತ್ತು ಇತರ ಧಾರ್ಮಿಕ ಕೇಂದ್ರಗಳಿಗೆ ಉಚಿತ ತೀರ್ಥಯಾತ್ರೆಯನ್ನು ಏರ್ಪಡಿಸಲಾಗುವುದು ಎಂದು ಆಮ್‌ ಆದ್ಮಿ ಪಕ್ಷ(ಎಎಪಿ)ದ ರಾಷ್ಟ್ರೀಯ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಭರವಸೆ ನೀಡಿದ್ದಾರೆ.

“ಗೋವಾದಲ್ಲಿ ನಾವು ಸರ್ಕಾರ ರಚಿಸಿದರೆ ಹಿಂದೂಗಳಿಗೆ ಅಯೋಧ್ಯೆಗೆ, ಕ್ರಿಶ್ಚಿಯನ್ನರಿಗೆ ವೆಲಂಕಣಿಗೆ ಉಚಿತ ಯಾತ್ರೆಯನ್ನು ಏರ್ಪಡಿಸುತ್ತೇವೆ. ಮುಸ್ಲಿಮರಿಗೆ ನಾವು ಅಜ್ಮೀರ್ ಷರೀಫ್ ಮತ್ತು ಸಾಯಿಬಾಬಾರನ್ನು ಗೌರವಿಸುವವರಿಗೆ ಶಿರಡಿ ದೇವಸ್ಥಾನಕ್ಕೆ ಉಚಿತ ಪ್ರವಾಸವನ್ನು ಒದಗಿಸುತ್ತೇವೆ” ಎಂದು ಕೇಜ್ರಿವಾಲ್ ಗೋವಾದಲ್ಲಿ ಹೇಳಿದ್ದಾರೆ.

ಇದು ಗೋವಾ ರಾಜ್ಯದ ಜನತೆಗೆ ಎಎಪಿ ನೀಡುತ್ತಿರುವ ಮೂರನೇ ಗ್ಯಾರಂಟಿ ಎಂದು ಕೇಜ್ರಿವಾಲ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಗೋವಾ ಚುನಾವಣೆ: ಉಚಿತ ವಿದ್ಯುತ್, ಉದ್ಯೋಗ ಖಾತ್ರಿ ಭರವಸೆ ನೀಡಿದ ಅರವಿಂದ್ ಕೇಜ್ರಿವಾಲ್

ಈ ಹಿಂದೆ ಎಎಪಿ, ಪ್ರತಿ ಕುಟುಂಬದ ಕನಿಷ್ಠ ಒಬ್ಬ ಸದಸ್ಯರಿಗೆ ಉದ್ಯೋಗ ಮತ್ತು ಅಲ್ಲಿಯವರೆಗೆ ತಿಂಗಳಿಗೆ 5,000 ರೂಪಾಯಿ ನಿರುದ್ಯೋಗ ಭತ್ಯೆ ನೀಡುವುದಾಗಿ ಭರವಸೆ ನೀಡಿತ್ತು.

ಈ ಹಿಂದೆ ಗೋವಾಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕೇಜ್ರಿವಾಲ್ ಅವರು ಗೋವಾದಲ್ಲಿ ಪ್ರತಿ ಕುಟುಂಬಕ್ಕೆ ತಿಂಗಳಿಗೆ 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಮತ್ತು ನಿರಂತರ ವಿದ್ಯುತ್ ಪೂರೈಕೆ ಮಾಡುವುದಾಗಿ ಭರವಸೆ ನೀಡಿದ್ದರು.

ಉಚಿತ ತೀರ್ಥಯಾತ್ರೆ ಹೊಸ ವಿಷಯವೇನಲ್ಲ ಎಂದು ಹೇಳಿರುವ ಕೇಜ್ರಿವಾಲ್‌, “ತಮ್ಮ ಸರ್ಕಾರವು ದೆಹಲಿಯಲ್ಲಿ ಸಿಎಂ ತೀರ್ಥಯಾತ್ರೆ ಯೋಜನೆಯನ್ನು ಪರಿಚಯಿಸಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭ್ರಷ್ಟ, ಕೋಮುವಾದಿ ಬಿಜೆಪಿ ಸೋಲಿಸೋಣ: ಮಮತಾ ಬ್ಯಾನರ್ಜಿ ಜೊತೆ ಮೈತ್ರಿಗೆ ಮುಂದಾದ ಗೋವಾ ಫಾರ್ವಾಡ್ ಪಾರ್ಟಿ

“ಮೊದಲ ಎರಡು ವರ್ಷಗಳಲ್ಲಿ, 35,000 ಕ್ಕೂ ಹೆಚ್ಚು ಜನರು ಈ ಯೋಜನೆಯಿಂದ ಪ್ರಯೋಜನ ಪಡೆದಿದ್ದಾರೆ. ನಾವು ಹವಾನಿಯಂತ್ರಿತ ರೈಲುಗಳಲ್ಲಿ ಜನರನ್ನು ಯಾತ್ರಾ ಸ್ಥಳಗಳಿಗೆ ಕರೆದೊಯ್ಯುತ್ತೇವೆ. ಊಟ ಸೇರಿದಂತೆ ಅವರ ಎಲ್ಲ ಅಗತ್ಯಗಳನ್ನು ನಾವು ನೋಡಿಕೊಳ್ಳುತ್ತೇವೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ಗೋವಾದಲ್ಲಿ ಮೊದಲ ಬಾರಿಗೆ ಪ್ರಾಮಾಣಿಕ ಸರ್ಕಾರವನ್ನು ಪಕ್ಷವೂ ನೀಡಲಿದೆ. ಆದಾಯಕ್ಕೆ ಯಾವುದೇ ಕೊರತೆ ಇರುವುದಿಲ್ಲ. ನೀಡಿದ ಎಲ್ಲಾ ಭರವಸೆಗಳನ್ನು ನಾವು ಈಡೇರಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿರುದ್ಧ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಿದ್ದರೂ ಅವರನ್ನು ರಕ್ಷಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಪ್ರತಿದಿನ ಕರ್ನಾಟಕದಿಂದ ಕಳುಹಿಸಲ್ಪಟ್ಟ 2,100 ಕೆಜಿ ಗೋಮಾಂಸವನ್ನು ಗೋವಾದಲ್ಲಿ ಸೇವಿಸುತ್ತಾರೆ: ಸಿಎಂ

“ನಾವು ಚುನಾವಣಾ ಖಾತರಿಗಳನ್ನು ಘೋಷಿಸಿದಾಗ, ನಾನು ಎಲ್ಲಿಂದ ಹಣವನ್ನು ಪಡೆಯುತ್ತೇನೆ ಎಂದು ಜನರು ನನ್ನನ್ನು ಕೇಳುತ್ತಾರೆ. ಇದಕ್ಕೆ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಉತ್ತರ ನೀಡಿದ್ದಾರೆ” ಎಂದು ದೆಹಲಿ ಮುಖ್ಯಮಂತ್ರಿ ಹೇಳಿದ್ದಾರೆ.

ಅಕ್ಟೋಬರ್ 2019 ರಿಂದ ಆಗಸ್ಟ್ 2020 ರವರೆಗೆ ಗೋವಾದ ರಾಜ್ಯಪಾಲ ಆಗಿದ್ದ ಸತ್ಯಪಾಲ್ ಮಲಿಕ್ ಅವರು ದೂರದರ್ಶನ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, ಗೋವಾ ಸರ್ಕಾರದಲ್ಲಿ ಭ್ರಷ್ಟಾಚಾರವಿದೆ ಎಂದು ಹೇಳಿದ್ದು, ಮುಖ್ಯಮಂತ್ರಿ ವಿರುದ್ದ ಆರೋಪ ಮಾಡಿದ್ದರು.

ಕಳೆದ 75 ವರ್ಷಗಳ ಸ್ವಾತಂತ್ರ ಭಾರತದಲ್ಲಿ ಯಾವುದೇ ರಾಜ್ಯಪಾಲರು ತಮ್ಮದೇ ಸರ್ಕಾರದ ವಿರುದ್ಧ ಇಂತಹ ಆರೋಪ ಮಾಡಿರುವುದು ಇದುವೆ ಮೊದಲು. ಗೋವಾದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗಲು ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳ ತಪ್ಪು ನೀತಿಗಳೇ ಕಾರಣ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಯಾರು ಗೋವಾವನ್ನು ಗೆಲ್ಲುತ್ತಾರೊ, ಅವರು ಮುಂದೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಾರೆ: ಪಿ. ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಯೋಧ್ಯೆ ರಾಮ ಮಂದಿರ ನಿರ್ಮಾಣ ವಿರೋಧ ಮಾಡಿದವರು ಈಗ ಉಚಿತ ತೀರ್ಥ ಯಾತ್ರೆಗೆ ಕಳಿಸಿ ಕೊಡೋದು ಅಂದರೆ ಈ ಕೇಜ್ರಿವಾಲ್ ಎಂಥ ಅವಕಾಶ ವಾದಿ ಎನ್ನುವ ವಿಚಾರ ತಿಳಿಯಬಹುದು

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...