Homeಮುಖಪುಟಗೋವಾ ಗೆದ್ದರೆ ಅಯೋಧ್ಯೆ ಸೇರಿದಂತೆ ಧಾರ್ಮಿಕ ಕೇಂದ್ರಗಳಿಗೆ ಉಚಿತ ತೀರ್ಥ ಯಾತ್ರೆ: ಕೇಜ್ರಿವಾಲ್

ಗೋವಾ ಗೆದ್ದರೆ ಅಯೋಧ್ಯೆ ಸೇರಿದಂತೆ ಧಾರ್ಮಿಕ ಕೇಂದ್ರಗಳಿಗೆ ಉಚಿತ ತೀರ್ಥ ಯಾತ್ರೆ: ಕೇಜ್ರಿವಾಲ್

- Advertisement -
- Advertisement -

2022 ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಅಧಿಕಾರಕ್ಕೆ ಬಂದರೆ ಅಯೋಧ್ಯೆ ಮತ್ತು ಇತರ ಧಾರ್ಮಿಕ ಕೇಂದ್ರಗಳಿಗೆ ಉಚಿತ ತೀರ್ಥಯಾತ್ರೆಯನ್ನು ಏರ್ಪಡಿಸಲಾಗುವುದು ಎಂದು ಆಮ್‌ ಆದ್ಮಿ ಪಕ್ಷ(ಎಎಪಿ)ದ ರಾಷ್ಟ್ರೀಯ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಭರವಸೆ ನೀಡಿದ್ದಾರೆ.

“ಗೋವಾದಲ್ಲಿ ನಾವು ಸರ್ಕಾರ ರಚಿಸಿದರೆ ಹಿಂದೂಗಳಿಗೆ ಅಯೋಧ್ಯೆಗೆ, ಕ್ರಿಶ್ಚಿಯನ್ನರಿಗೆ ವೆಲಂಕಣಿಗೆ ಉಚಿತ ಯಾತ್ರೆಯನ್ನು ಏರ್ಪಡಿಸುತ್ತೇವೆ. ಮುಸ್ಲಿಮರಿಗೆ ನಾವು ಅಜ್ಮೀರ್ ಷರೀಫ್ ಮತ್ತು ಸಾಯಿಬಾಬಾರನ್ನು ಗೌರವಿಸುವವರಿಗೆ ಶಿರಡಿ ದೇವಸ್ಥಾನಕ್ಕೆ ಉಚಿತ ಪ್ರವಾಸವನ್ನು ಒದಗಿಸುತ್ತೇವೆ” ಎಂದು ಕೇಜ್ರಿವಾಲ್ ಗೋವಾದಲ್ಲಿ ಹೇಳಿದ್ದಾರೆ.

ಇದು ಗೋವಾ ರಾಜ್ಯದ ಜನತೆಗೆ ಎಎಪಿ ನೀಡುತ್ತಿರುವ ಮೂರನೇ ಗ್ಯಾರಂಟಿ ಎಂದು ಕೇಜ್ರಿವಾಲ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಗೋವಾ ಚುನಾವಣೆ: ಉಚಿತ ವಿದ್ಯುತ್, ಉದ್ಯೋಗ ಖಾತ್ರಿ ಭರವಸೆ ನೀಡಿದ ಅರವಿಂದ್ ಕೇಜ್ರಿವಾಲ್

ಈ ಹಿಂದೆ ಎಎಪಿ, ಪ್ರತಿ ಕುಟುಂಬದ ಕನಿಷ್ಠ ಒಬ್ಬ ಸದಸ್ಯರಿಗೆ ಉದ್ಯೋಗ ಮತ್ತು ಅಲ್ಲಿಯವರೆಗೆ ತಿಂಗಳಿಗೆ 5,000 ರೂಪಾಯಿ ನಿರುದ್ಯೋಗ ಭತ್ಯೆ ನೀಡುವುದಾಗಿ ಭರವಸೆ ನೀಡಿತ್ತು.

ಈ ಹಿಂದೆ ಗೋವಾಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕೇಜ್ರಿವಾಲ್ ಅವರು ಗೋವಾದಲ್ಲಿ ಪ್ರತಿ ಕುಟುಂಬಕ್ಕೆ ತಿಂಗಳಿಗೆ 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಮತ್ತು ನಿರಂತರ ವಿದ್ಯುತ್ ಪೂರೈಕೆ ಮಾಡುವುದಾಗಿ ಭರವಸೆ ನೀಡಿದ್ದರು.

ಉಚಿತ ತೀರ್ಥಯಾತ್ರೆ ಹೊಸ ವಿಷಯವೇನಲ್ಲ ಎಂದು ಹೇಳಿರುವ ಕೇಜ್ರಿವಾಲ್‌, “ತಮ್ಮ ಸರ್ಕಾರವು ದೆಹಲಿಯಲ್ಲಿ ಸಿಎಂ ತೀರ್ಥಯಾತ್ರೆ ಯೋಜನೆಯನ್ನು ಪರಿಚಯಿಸಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭ್ರಷ್ಟ, ಕೋಮುವಾದಿ ಬಿಜೆಪಿ ಸೋಲಿಸೋಣ: ಮಮತಾ ಬ್ಯಾನರ್ಜಿ ಜೊತೆ ಮೈತ್ರಿಗೆ ಮುಂದಾದ ಗೋವಾ ಫಾರ್ವಾಡ್ ಪಾರ್ಟಿ

“ಮೊದಲ ಎರಡು ವರ್ಷಗಳಲ್ಲಿ, 35,000 ಕ್ಕೂ ಹೆಚ್ಚು ಜನರು ಈ ಯೋಜನೆಯಿಂದ ಪ್ರಯೋಜನ ಪಡೆದಿದ್ದಾರೆ. ನಾವು ಹವಾನಿಯಂತ್ರಿತ ರೈಲುಗಳಲ್ಲಿ ಜನರನ್ನು ಯಾತ್ರಾ ಸ್ಥಳಗಳಿಗೆ ಕರೆದೊಯ್ಯುತ್ತೇವೆ. ಊಟ ಸೇರಿದಂತೆ ಅವರ ಎಲ್ಲ ಅಗತ್ಯಗಳನ್ನು ನಾವು ನೋಡಿಕೊಳ್ಳುತ್ತೇವೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ಗೋವಾದಲ್ಲಿ ಮೊದಲ ಬಾರಿಗೆ ಪ್ರಾಮಾಣಿಕ ಸರ್ಕಾರವನ್ನು ಪಕ್ಷವೂ ನೀಡಲಿದೆ. ಆದಾಯಕ್ಕೆ ಯಾವುದೇ ಕೊರತೆ ಇರುವುದಿಲ್ಲ. ನೀಡಿದ ಎಲ್ಲಾ ಭರವಸೆಗಳನ್ನು ನಾವು ಈಡೇರಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿರುದ್ಧ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಿದ್ದರೂ ಅವರನ್ನು ರಕ್ಷಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಪ್ರತಿದಿನ ಕರ್ನಾಟಕದಿಂದ ಕಳುಹಿಸಲ್ಪಟ್ಟ 2,100 ಕೆಜಿ ಗೋಮಾಂಸವನ್ನು ಗೋವಾದಲ್ಲಿ ಸೇವಿಸುತ್ತಾರೆ: ಸಿಎಂ

“ನಾವು ಚುನಾವಣಾ ಖಾತರಿಗಳನ್ನು ಘೋಷಿಸಿದಾಗ, ನಾನು ಎಲ್ಲಿಂದ ಹಣವನ್ನು ಪಡೆಯುತ್ತೇನೆ ಎಂದು ಜನರು ನನ್ನನ್ನು ಕೇಳುತ್ತಾರೆ. ಇದಕ್ಕೆ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಉತ್ತರ ನೀಡಿದ್ದಾರೆ” ಎಂದು ದೆಹಲಿ ಮುಖ್ಯಮಂತ್ರಿ ಹೇಳಿದ್ದಾರೆ.

ಅಕ್ಟೋಬರ್ 2019 ರಿಂದ ಆಗಸ್ಟ್ 2020 ರವರೆಗೆ ಗೋವಾದ ರಾಜ್ಯಪಾಲ ಆಗಿದ್ದ ಸತ್ಯಪಾಲ್ ಮಲಿಕ್ ಅವರು ದೂರದರ್ಶನ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, ಗೋವಾ ಸರ್ಕಾರದಲ್ಲಿ ಭ್ರಷ್ಟಾಚಾರವಿದೆ ಎಂದು ಹೇಳಿದ್ದು, ಮುಖ್ಯಮಂತ್ರಿ ವಿರುದ್ದ ಆರೋಪ ಮಾಡಿದ್ದರು.

ಕಳೆದ 75 ವರ್ಷಗಳ ಸ್ವಾತಂತ್ರ ಭಾರತದಲ್ಲಿ ಯಾವುದೇ ರಾಜ್ಯಪಾಲರು ತಮ್ಮದೇ ಸರ್ಕಾರದ ವಿರುದ್ಧ ಇಂತಹ ಆರೋಪ ಮಾಡಿರುವುದು ಇದುವೆ ಮೊದಲು. ಗೋವಾದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗಲು ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳ ತಪ್ಪು ನೀತಿಗಳೇ ಕಾರಣ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಯಾರು ಗೋವಾವನ್ನು ಗೆಲ್ಲುತ್ತಾರೊ, ಅವರು ಮುಂದೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಾರೆ: ಪಿ. ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಯೋಧ್ಯೆ ರಾಮ ಮಂದಿರ ನಿರ್ಮಾಣ ವಿರೋಧ ಮಾಡಿದವರು ಈಗ ಉಚಿತ ತೀರ್ಥ ಯಾತ್ರೆಗೆ ಕಳಿಸಿ ಕೊಡೋದು ಅಂದರೆ ಈ ಕೇಜ್ರಿವಾಲ್ ಎಂಥ ಅವಕಾಶ ವಾದಿ ಎನ್ನುವ ವಿಚಾರ ತಿಳಿಯಬಹುದು

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...