Homeಮುಖಪುಟಗೋವಾ ಗೆದ್ದರೆ ಅಯೋಧ್ಯೆ ಸೇರಿದಂತೆ ಧಾರ್ಮಿಕ ಕೇಂದ್ರಗಳಿಗೆ ಉಚಿತ ತೀರ್ಥ ಯಾತ್ರೆ: ಕೇಜ್ರಿವಾಲ್

ಗೋವಾ ಗೆದ್ದರೆ ಅಯೋಧ್ಯೆ ಸೇರಿದಂತೆ ಧಾರ್ಮಿಕ ಕೇಂದ್ರಗಳಿಗೆ ಉಚಿತ ತೀರ್ಥ ಯಾತ್ರೆ: ಕೇಜ್ರಿವಾಲ್

- Advertisement -
- Advertisement -

2022 ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಅಧಿಕಾರಕ್ಕೆ ಬಂದರೆ ಅಯೋಧ್ಯೆ ಮತ್ತು ಇತರ ಧಾರ್ಮಿಕ ಕೇಂದ್ರಗಳಿಗೆ ಉಚಿತ ತೀರ್ಥಯಾತ್ರೆಯನ್ನು ಏರ್ಪಡಿಸಲಾಗುವುದು ಎಂದು ಆಮ್‌ ಆದ್ಮಿ ಪಕ್ಷ(ಎಎಪಿ)ದ ರಾಷ್ಟ್ರೀಯ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಭರವಸೆ ನೀಡಿದ್ದಾರೆ.

“ಗೋವಾದಲ್ಲಿ ನಾವು ಸರ್ಕಾರ ರಚಿಸಿದರೆ ಹಿಂದೂಗಳಿಗೆ ಅಯೋಧ್ಯೆಗೆ, ಕ್ರಿಶ್ಚಿಯನ್ನರಿಗೆ ವೆಲಂಕಣಿಗೆ ಉಚಿತ ಯಾತ್ರೆಯನ್ನು ಏರ್ಪಡಿಸುತ್ತೇವೆ. ಮುಸ್ಲಿಮರಿಗೆ ನಾವು ಅಜ್ಮೀರ್ ಷರೀಫ್ ಮತ್ತು ಸಾಯಿಬಾಬಾರನ್ನು ಗೌರವಿಸುವವರಿಗೆ ಶಿರಡಿ ದೇವಸ್ಥಾನಕ್ಕೆ ಉಚಿತ ಪ್ರವಾಸವನ್ನು ಒದಗಿಸುತ್ತೇವೆ” ಎಂದು ಕೇಜ್ರಿವಾಲ್ ಗೋವಾದಲ್ಲಿ ಹೇಳಿದ್ದಾರೆ.

ಇದು ಗೋವಾ ರಾಜ್ಯದ ಜನತೆಗೆ ಎಎಪಿ ನೀಡುತ್ತಿರುವ ಮೂರನೇ ಗ್ಯಾರಂಟಿ ಎಂದು ಕೇಜ್ರಿವಾಲ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಗೋವಾ ಚುನಾವಣೆ: ಉಚಿತ ವಿದ್ಯುತ್, ಉದ್ಯೋಗ ಖಾತ್ರಿ ಭರವಸೆ ನೀಡಿದ ಅರವಿಂದ್ ಕೇಜ್ರಿವಾಲ್

ಈ ಹಿಂದೆ ಎಎಪಿ, ಪ್ರತಿ ಕುಟುಂಬದ ಕನಿಷ್ಠ ಒಬ್ಬ ಸದಸ್ಯರಿಗೆ ಉದ್ಯೋಗ ಮತ್ತು ಅಲ್ಲಿಯವರೆಗೆ ತಿಂಗಳಿಗೆ 5,000 ರೂಪಾಯಿ ನಿರುದ್ಯೋಗ ಭತ್ಯೆ ನೀಡುವುದಾಗಿ ಭರವಸೆ ನೀಡಿತ್ತು.

ಈ ಹಿಂದೆ ಗೋವಾಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕೇಜ್ರಿವಾಲ್ ಅವರು ಗೋವಾದಲ್ಲಿ ಪ್ರತಿ ಕುಟುಂಬಕ್ಕೆ ತಿಂಗಳಿಗೆ 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಮತ್ತು ನಿರಂತರ ವಿದ್ಯುತ್ ಪೂರೈಕೆ ಮಾಡುವುದಾಗಿ ಭರವಸೆ ನೀಡಿದ್ದರು.

ಉಚಿತ ತೀರ್ಥಯಾತ್ರೆ ಹೊಸ ವಿಷಯವೇನಲ್ಲ ಎಂದು ಹೇಳಿರುವ ಕೇಜ್ರಿವಾಲ್‌, “ತಮ್ಮ ಸರ್ಕಾರವು ದೆಹಲಿಯಲ್ಲಿ ಸಿಎಂ ತೀರ್ಥಯಾತ್ರೆ ಯೋಜನೆಯನ್ನು ಪರಿಚಯಿಸಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭ್ರಷ್ಟ, ಕೋಮುವಾದಿ ಬಿಜೆಪಿ ಸೋಲಿಸೋಣ: ಮಮತಾ ಬ್ಯಾನರ್ಜಿ ಜೊತೆ ಮೈತ್ರಿಗೆ ಮುಂದಾದ ಗೋವಾ ಫಾರ್ವಾಡ್ ಪಾರ್ಟಿ

“ಮೊದಲ ಎರಡು ವರ್ಷಗಳಲ್ಲಿ, 35,000 ಕ್ಕೂ ಹೆಚ್ಚು ಜನರು ಈ ಯೋಜನೆಯಿಂದ ಪ್ರಯೋಜನ ಪಡೆದಿದ್ದಾರೆ. ನಾವು ಹವಾನಿಯಂತ್ರಿತ ರೈಲುಗಳಲ್ಲಿ ಜನರನ್ನು ಯಾತ್ರಾ ಸ್ಥಳಗಳಿಗೆ ಕರೆದೊಯ್ಯುತ್ತೇವೆ. ಊಟ ಸೇರಿದಂತೆ ಅವರ ಎಲ್ಲ ಅಗತ್ಯಗಳನ್ನು ನಾವು ನೋಡಿಕೊಳ್ಳುತ್ತೇವೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ಗೋವಾದಲ್ಲಿ ಮೊದಲ ಬಾರಿಗೆ ಪ್ರಾಮಾಣಿಕ ಸರ್ಕಾರವನ್ನು ಪಕ್ಷವೂ ನೀಡಲಿದೆ. ಆದಾಯಕ್ಕೆ ಯಾವುದೇ ಕೊರತೆ ಇರುವುದಿಲ್ಲ. ನೀಡಿದ ಎಲ್ಲಾ ಭರವಸೆಗಳನ್ನು ನಾವು ಈಡೇರಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿರುದ್ಧ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಿದ್ದರೂ ಅವರನ್ನು ರಕ್ಷಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಪ್ರತಿದಿನ ಕರ್ನಾಟಕದಿಂದ ಕಳುಹಿಸಲ್ಪಟ್ಟ 2,100 ಕೆಜಿ ಗೋಮಾಂಸವನ್ನು ಗೋವಾದಲ್ಲಿ ಸೇವಿಸುತ್ತಾರೆ: ಸಿಎಂ

“ನಾವು ಚುನಾವಣಾ ಖಾತರಿಗಳನ್ನು ಘೋಷಿಸಿದಾಗ, ನಾನು ಎಲ್ಲಿಂದ ಹಣವನ್ನು ಪಡೆಯುತ್ತೇನೆ ಎಂದು ಜನರು ನನ್ನನ್ನು ಕೇಳುತ್ತಾರೆ. ಇದಕ್ಕೆ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಉತ್ತರ ನೀಡಿದ್ದಾರೆ” ಎಂದು ದೆಹಲಿ ಮುಖ್ಯಮಂತ್ರಿ ಹೇಳಿದ್ದಾರೆ.

ಅಕ್ಟೋಬರ್ 2019 ರಿಂದ ಆಗಸ್ಟ್ 2020 ರವರೆಗೆ ಗೋವಾದ ರಾಜ್ಯಪಾಲ ಆಗಿದ್ದ ಸತ್ಯಪಾಲ್ ಮಲಿಕ್ ಅವರು ದೂರದರ್ಶನ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, ಗೋವಾ ಸರ್ಕಾರದಲ್ಲಿ ಭ್ರಷ್ಟಾಚಾರವಿದೆ ಎಂದು ಹೇಳಿದ್ದು, ಮುಖ್ಯಮಂತ್ರಿ ವಿರುದ್ದ ಆರೋಪ ಮಾಡಿದ್ದರು.

ಕಳೆದ 75 ವರ್ಷಗಳ ಸ್ವಾತಂತ್ರ ಭಾರತದಲ್ಲಿ ಯಾವುದೇ ರಾಜ್ಯಪಾಲರು ತಮ್ಮದೇ ಸರ್ಕಾರದ ವಿರುದ್ಧ ಇಂತಹ ಆರೋಪ ಮಾಡಿರುವುದು ಇದುವೆ ಮೊದಲು. ಗೋವಾದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗಲು ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳ ತಪ್ಪು ನೀತಿಗಳೇ ಕಾರಣ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಯಾರು ಗೋವಾವನ್ನು ಗೆಲ್ಲುತ್ತಾರೊ, ಅವರು ಮುಂದೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಾರೆ: ಪಿ. ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಯೋಧ್ಯೆ ರಾಮ ಮಂದಿರ ನಿರ್ಮಾಣ ವಿರೋಧ ಮಾಡಿದವರು ಈಗ ಉಚಿತ ತೀರ್ಥ ಯಾತ್ರೆಗೆ ಕಳಿಸಿ ಕೊಡೋದು ಅಂದರೆ ಈ ಕೇಜ್ರಿವಾಲ್ ಎಂಥ ಅವಕಾಶ ವಾದಿ ಎನ್ನುವ ವಿಚಾರ ತಿಳಿಯಬಹುದು

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...