Homeಮುಖಪುಟಮಹಿಳೆಯರಿಗೆ ಉಚಿತ ಪ್ರಯಾಣ ಬೇಡವೆಂದ ಶ್ರೀಧರನ್ ಗೆ ಪ್ರತಿ ಪತ್ರ ಬರೆದ ಮನೀಶ್ ಸಿಸೋಡಿಯ

ಮಹಿಳೆಯರಿಗೆ ಉಚಿತ ಪ್ರಯಾಣ ಬೇಡವೆಂದ ಶ್ರೀಧರನ್ ಗೆ ಪ್ರತಿ ಪತ್ರ ಬರೆದ ಮನೀಶ್ ಸಿಸೋಡಿಯ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಸಾರ್ವಜನಿಕ ವಾಹನಗಳನ್ನು ಬಳಸುವಂತೆ ಪ್ರೇರೆಪಿಸಲು ಮತ್ತು ಭದ್ರತೆಯ ದೃಷ್ಟಿಯಿಂದ ಇನ್ನು ಮುಂದೆ ದೆಹಲಿಯಲ್ಲಿ ಮಹಿಳೆಯರಿಗೆ ಸಂಪೂರ್ಣ ಉಚಿತವಾಗಿ ಮೆಟ್ರೊ ಮತ್ತು ಬಸ್ ಪ್ರಯಾಣ ಸೇವೆ ಒದಗಿಸಲು ಮುಂದಾಗಿದ್ದ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ನಡೆಗೆ ಆರಂಭದಲ್ಲೇ ವಿಘ್ನವುಂಟಾಗಿದೆ. ದೆಹಲಿ ಮೆಟ್ರೊದ ಮಾಜಿ ಅಧ್ಯಕ್ಷ ಇ.ಶ್ರೀಧರನ್ ರವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು ಯಾವ ಕಾರಣಕ್ಕೂ ಈ ಯೋಜನೆಗೆ ಒಪ್ಪಿಗೆ ನೀಡಬೇಡಿ ಎಂದು ಬಹಿರಂಗ ಪತ್ರ ಬರೆದಿದ್ದಾರೆ.

ಡೆಲ್ಲಿ ಟ್ರಾನ್ಸ್‍ಪೋರ್ಟ್ ಕಾರ್ಪೋರೇಷನ್ ಬಸ್‍ಗಳಲ್ಲಿ ಮತ್ತು ಡೆಲ್ಲಿ ಮೆಟ್ರೊದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೇವೆಯ ಕುರಿತು ಜೂನ್ 1 ರಂದು  ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದರು. ಈಗ ಅದರಿಂದ ದೆಹಲಿ ಮೆಟ್ರೊ ಆರ್ಥಿಕ ದಿವಾಳಿತನ ಎದುರಿಸಬೇಕಾಗುತ್ತದೆ, ಅಷ್ಟೇ ಅಲ್ಲದೇ ದೇಶದ ಇತರ ಮೆಟ್ರೊಗಳ ಮೇಲೂ ಇದು ಪರಿಣಾಮ ಬೀರುತ್ತದೆ ಎಂದು ಕಾರಣ ನೀಡಿ ಉಚಿತ ಮಾಡಬೇಡಿ ಎಂದು ಪತ್ರದಲ್ಲಿ ಇ.ಶ್ರೀಧರನ್ ಉಲ್ಲೇಖಿಸಿದ್ದಾರೆ.

ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾರವರು ಹಾಲಿ ದೆಹಲಿ ಮೆಟ್ರೊಗೆ ಮಾರ್ಗದರ್ಶಕರಾಗಿರುವ ಇ.ಶ್ರೀಧರನ್ ರವರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ” ನೀವು ಪ್ರಧಾನ ಮಂತ್ರಿಗಳಿಗೆ ಬರೆದ ಪತ್ರ ಓದಿ ಆಶ್ಚರ್ಯ ಮತ್ತು ನೋವುಂಟಾಯಿತು. ನೀವು ಪ್ರಸ್ತುತ ಯೋಜನೆಯ ಬಗ್ಗೆ ತಪ್ಪು ಮಾಹಿತಿ ಪಡೆದಿರುವ ಕಾರಣಕ್ಕೆ ಈಗಾಗಿದೆ. ದೆಹಲಿ ಮೆಟ್ರೊದ ಮೂರನೇ ಹಂತ ಪೂರ್ಣಗೊಂಡ ನಂತರ ನೀವು ಖಂಡಿತ ಶ್ಲಾಘಿಸುತ್ತೀರೆಂಬ ವಿಶ್ವಾಸವಿದೆ, ಆಗ ದೆಹಲಿ ಮೆಟ್ರೊದಲ್ಲಿ 40 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡಬಹುದಾದ ಸಾಮರ್ಥ್ಯವನ್ನು ನಾವು ಹೊಂದಲಿದ್ದೇವೆ” ಎಂದಿದ್ದಾರೆ.

ಮುಂದುವರೆದು ಈಗ ಸದ್ಯಕ್ಕೆ ದೆಹಲಿ ಮೆಟ್ರೊದಲ್ಲಿ ದಿನವೊಂದಕ್ಕೆ ಕೇವಲ 25 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ. ಉಳಿದ ಸಾಮರ್ಥ್ಯ ವ್ಯರ್ಥವಾಗುತ್ತಿದೆ. ಹಾಗಾಗಿ ಮಹಿಳೆಯರಿಗೆ ಉಚಿತ ಸೇವೆ ನೀಡಿದ್ದಲ್ಲಿ ಶೇ.50% ಮಹಿಳೆಯರು ಪ್ರಯಾಣಿಸುವುದರಿಂದ ದೆಹಲಿ ಮೆಟ್ರೊ ಸಾಮರ್ಥ್ಯ ಸಂಪೂರ್ಣ ಸದ್ಬಳಕೆಯಾಗುತ್ತದೆ. ಹಾಗಾಗಿ ಇದನ್ನು ಪ್ರಶಂಸಿಸುವುದು ಬಿಟ್ಟು ವಿರೋಧಿಸುವುದು ಸರಿಯಲ್ಲ ಎಂದು ಬರೆದಿದ್ದಾರೆ.

ಮಹಿಳೆಯರಿಗೆ ಭದ್ರತೆ ಮತ್ತು ಸಾರ್ವಜನಿಕ ವಾಹನಗಳನ್ನು ಬಳಸುವಂತೆ ಪ್ರೇರೆಪಿಸಲು ನಾವು ಈ ಯೋಜನೆ ಘೋಷಿಸಿದ್ದೇವೆ. ಇದರಿಂದ ಖಾಸಗಿ ವಾಹನಗಳ ಬಳಕೆ ತಪ್ಪಿ ವಾಯುಮಾಲಿನ್ಯವನ್ನು ಕಡಿಮೆ ಮಾಡಬಹುದು. ಮಹಿಳೆಯರ ಸಬಲೀಕರಣಕ್ಕಾಗಿ ಇದೊಂದು ಕ್ರಾಂತಿಕಾರಕ ನಡೆಯಾಗಿದ್ದು ಇದು ಮಹಿಳೆಯರ ಪಾಲಿಗೆ ಹೊಸ ಅವಕಾಶಗಳನ್ನು ತೆರೆದಯುತ್ತದೆ. ನಾವು ದಿನಪ್ರತಿ ಮಿಲಿಯನ್ ಕೂಪನ್ ಗಳನ್ನು ಪಡೆದು ಮಹಿಳೆಯರಿಗೆ ಹಂಚಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡುತ್ತಿದ್ದೇವೆ. ಇದನ್ನು ವಿರೋಧಿಸುವುದರಲ್ಲಿ ಏನರ್ಥವಿದೆ? ಹಾಗಾಗಿ ಈ ಪ್ರಗತಿಪರ ಯೋಜನೆಗೆ ವಿರೋಧ ಮಾಡುವುದರ ಕುರಿತು ಯೋಚಿಸಿ ಎಂದು ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಪ್ರಗತಿಪರ ಲೇಖಕ ಬಿ.ಶ್ರೀಪಾದ್ ಭಟ್ “ಮಹಿಳೆಯರಿಗೆ ಉಚಿತ ಪ್ರಯಾಣವೆಂದರೆ ಅದು ಭಿಕ್ಷೆಯಲ್ಲ. ಬದಲಿಗೆ ದೇಶವನ್ನು ಮುನ್ನಡೆಸುವಲ್ಲಿ ಅರ್ಧ ಕೊಡುಗೆ ಕೊಡುವ ಮಹಿಳೆಯರ ಸಬಲೀಕರಣ ಎಂಬ ಪರಿಜ್ಞಾನ ಮೆಟ್ರೊ ಮಾಜಿ ಅಧ್ಯಕ್ಷ ಇ.ಶ್ರೀಧರನ್ ರವರಿಗೆ ಇದ್ದಂತಿಲ್ಲ. ಹಾಗಾಗಿ ಬಹುಮುಖ್ಯ ಯೋಜನೆಯೊಂದನ್ನು ವಿರೋಧಿಸಿ ಪತ್ರ ಬರೆದಿದ್ದಾರೆ. ಅವರಿಗೆ ತುರ್ತಾಗಿ ಸಬಲೀಕರಣದ ಕುರಿತು ಪಾಠ ಹೇಳಬೇಕಾಗಿದೆ” ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನು ಓದಿ:

ದೆಹಲಿಯಲ್ಲಿ ಮಹಿಳೆಯರಿಗೆ ಮೆಟ್ರೊ ಮತ್ತು ಬಸ್ ಪ್ರಯಾಣ ಫುಲ್ ಫ್ರಿ : ಕೇಜ್ರಿವಾಲ್

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...