Homeಮುಖಪುಟಮಹಿಳೆಯರಿಗೆ ಉಚಿತ ಪ್ರಯಾಣ ಬೇಡವೆಂದ ಶ್ರೀಧರನ್ ಗೆ ಪ್ರತಿ ಪತ್ರ ಬರೆದ ಮನೀಶ್ ಸಿಸೋಡಿಯ

ಮಹಿಳೆಯರಿಗೆ ಉಚಿತ ಪ್ರಯಾಣ ಬೇಡವೆಂದ ಶ್ರೀಧರನ್ ಗೆ ಪ್ರತಿ ಪತ್ರ ಬರೆದ ಮನೀಶ್ ಸಿಸೋಡಿಯ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಸಾರ್ವಜನಿಕ ವಾಹನಗಳನ್ನು ಬಳಸುವಂತೆ ಪ್ರೇರೆಪಿಸಲು ಮತ್ತು ಭದ್ರತೆಯ ದೃಷ್ಟಿಯಿಂದ ಇನ್ನು ಮುಂದೆ ದೆಹಲಿಯಲ್ಲಿ ಮಹಿಳೆಯರಿಗೆ ಸಂಪೂರ್ಣ ಉಚಿತವಾಗಿ ಮೆಟ್ರೊ ಮತ್ತು ಬಸ್ ಪ್ರಯಾಣ ಸೇವೆ ಒದಗಿಸಲು ಮುಂದಾಗಿದ್ದ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ನಡೆಗೆ ಆರಂಭದಲ್ಲೇ ವಿಘ್ನವುಂಟಾಗಿದೆ. ದೆಹಲಿ ಮೆಟ್ರೊದ ಮಾಜಿ ಅಧ್ಯಕ್ಷ ಇ.ಶ್ರೀಧರನ್ ರವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು ಯಾವ ಕಾರಣಕ್ಕೂ ಈ ಯೋಜನೆಗೆ ಒಪ್ಪಿಗೆ ನೀಡಬೇಡಿ ಎಂದು ಬಹಿರಂಗ ಪತ್ರ ಬರೆದಿದ್ದಾರೆ.

ಡೆಲ್ಲಿ ಟ್ರಾನ್ಸ್‍ಪೋರ್ಟ್ ಕಾರ್ಪೋರೇಷನ್ ಬಸ್‍ಗಳಲ್ಲಿ ಮತ್ತು ಡೆಲ್ಲಿ ಮೆಟ್ರೊದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೇವೆಯ ಕುರಿತು ಜೂನ್ 1 ರಂದು  ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದರು. ಈಗ ಅದರಿಂದ ದೆಹಲಿ ಮೆಟ್ರೊ ಆರ್ಥಿಕ ದಿವಾಳಿತನ ಎದುರಿಸಬೇಕಾಗುತ್ತದೆ, ಅಷ್ಟೇ ಅಲ್ಲದೇ ದೇಶದ ಇತರ ಮೆಟ್ರೊಗಳ ಮೇಲೂ ಇದು ಪರಿಣಾಮ ಬೀರುತ್ತದೆ ಎಂದು ಕಾರಣ ನೀಡಿ ಉಚಿತ ಮಾಡಬೇಡಿ ಎಂದು ಪತ್ರದಲ್ಲಿ ಇ.ಶ್ರೀಧರನ್ ಉಲ್ಲೇಖಿಸಿದ್ದಾರೆ.

ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾರವರು ಹಾಲಿ ದೆಹಲಿ ಮೆಟ್ರೊಗೆ ಮಾರ್ಗದರ್ಶಕರಾಗಿರುವ ಇ.ಶ್ರೀಧರನ್ ರವರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ” ನೀವು ಪ್ರಧಾನ ಮಂತ್ರಿಗಳಿಗೆ ಬರೆದ ಪತ್ರ ಓದಿ ಆಶ್ಚರ್ಯ ಮತ್ತು ನೋವುಂಟಾಯಿತು. ನೀವು ಪ್ರಸ್ತುತ ಯೋಜನೆಯ ಬಗ್ಗೆ ತಪ್ಪು ಮಾಹಿತಿ ಪಡೆದಿರುವ ಕಾರಣಕ್ಕೆ ಈಗಾಗಿದೆ. ದೆಹಲಿ ಮೆಟ್ರೊದ ಮೂರನೇ ಹಂತ ಪೂರ್ಣಗೊಂಡ ನಂತರ ನೀವು ಖಂಡಿತ ಶ್ಲಾಘಿಸುತ್ತೀರೆಂಬ ವಿಶ್ವಾಸವಿದೆ, ಆಗ ದೆಹಲಿ ಮೆಟ್ರೊದಲ್ಲಿ 40 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡಬಹುದಾದ ಸಾಮರ್ಥ್ಯವನ್ನು ನಾವು ಹೊಂದಲಿದ್ದೇವೆ” ಎಂದಿದ್ದಾರೆ.

ಮುಂದುವರೆದು ಈಗ ಸದ್ಯಕ್ಕೆ ದೆಹಲಿ ಮೆಟ್ರೊದಲ್ಲಿ ದಿನವೊಂದಕ್ಕೆ ಕೇವಲ 25 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ. ಉಳಿದ ಸಾಮರ್ಥ್ಯ ವ್ಯರ್ಥವಾಗುತ್ತಿದೆ. ಹಾಗಾಗಿ ಮಹಿಳೆಯರಿಗೆ ಉಚಿತ ಸೇವೆ ನೀಡಿದ್ದಲ್ಲಿ ಶೇ.50% ಮಹಿಳೆಯರು ಪ್ರಯಾಣಿಸುವುದರಿಂದ ದೆಹಲಿ ಮೆಟ್ರೊ ಸಾಮರ್ಥ್ಯ ಸಂಪೂರ್ಣ ಸದ್ಬಳಕೆಯಾಗುತ್ತದೆ. ಹಾಗಾಗಿ ಇದನ್ನು ಪ್ರಶಂಸಿಸುವುದು ಬಿಟ್ಟು ವಿರೋಧಿಸುವುದು ಸರಿಯಲ್ಲ ಎಂದು ಬರೆದಿದ್ದಾರೆ.

ಮಹಿಳೆಯರಿಗೆ ಭದ್ರತೆ ಮತ್ತು ಸಾರ್ವಜನಿಕ ವಾಹನಗಳನ್ನು ಬಳಸುವಂತೆ ಪ್ರೇರೆಪಿಸಲು ನಾವು ಈ ಯೋಜನೆ ಘೋಷಿಸಿದ್ದೇವೆ. ಇದರಿಂದ ಖಾಸಗಿ ವಾಹನಗಳ ಬಳಕೆ ತಪ್ಪಿ ವಾಯುಮಾಲಿನ್ಯವನ್ನು ಕಡಿಮೆ ಮಾಡಬಹುದು. ಮಹಿಳೆಯರ ಸಬಲೀಕರಣಕ್ಕಾಗಿ ಇದೊಂದು ಕ್ರಾಂತಿಕಾರಕ ನಡೆಯಾಗಿದ್ದು ಇದು ಮಹಿಳೆಯರ ಪಾಲಿಗೆ ಹೊಸ ಅವಕಾಶಗಳನ್ನು ತೆರೆದಯುತ್ತದೆ. ನಾವು ದಿನಪ್ರತಿ ಮಿಲಿಯನ್ ಕೂಪನ್ ಗಳನ್ನು ಪಡೆದು ಮಹಿಳೆಯರಿಗೆ ಹಂಚಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡುತ್ತಿದ್ದೇವೆ. ಇದನ್ನು ವಿರೋಧಿಸುವುದರಲ್ಲಿ ಏನರ್ಥವಿದೆ? ಹಾಗಾಗಿ ಈ ಪ್ರಗತಿಪರ ಯೋಜನೆಗೆ ವಿರೋಧ ಮಾಡುವುದರ ಕುರಿತು ಯೋಚಿಸಿ ಎಂದು ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಪ್ರಗತಿಪರ ಲೇಖಕ ಬಿ.ಶ್ರೀಪಾದ್ ಭಟ್ “ಮಹಿಳೆಯರಿಗೆ ಉಚಿತ ಪ್ರಯಾಣವೆಂದರೆ ಅದು ಭಿಕ್ಷೆಯಲ್ಲ. ಬದಲಿಗೆ ದೇಶವನ್ನು ಮುನ್ನಡೆಸುವಲ್ಲಿ ಅರ್ಧ ಕೊಡುಗೆ ಕೊಡುವ ಮಹಿಳೆಯರ ಸಬಲೀಕರಣ ಎಂಬ ಪರಿಜ್ಞಾನ ಮೆಟ್ರೊ ಮಾಜಿ ಅಧ್ಯಕ್ಷ ಇ.ಶ್ರೀಧರನ್ ರವರಿಗೆ ಇದ್ದಂತಿಲ್ಲ. ಹಾಗಾಗಿ ಬಹುಮುಖ್ಯ ಯೋಜನೆಯೊಂದನ್ನು ವಿರೋಧಿಸಿ ಪತ್ರ ಬರೆದಿದ್ದಾರೆ. ಅವರಿಗೆ ತುರ್ತಾಗಿ ಸಬಲೀಕರಣದ ಕುರಿತು ಪಾಠ ಹೇಳಬೇಕಾಗಿದೆ” ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನು ಓದಿ:

ದೆಹಲಿಯಲ್ಲಿ ಮಹಿಳೆಯರಿಗೆ ಮೆಟ್ರೊ ಮತ್ತು ಬಸ್ ಪ್ರಯಾಣ ಫುಲ್ ಫ್ರಿ : ಕೇಜ್ರಿವಾಲ್

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...