Homeಮುಖಪುಟಮಹಿಳೆಯರಿಗೆ ಉಚಿತ ಪ್ರಯಾಣ ಬೇಡವೆಂದ ಶ್ರೀಧರನ್ ಗೆ ಪ್ರತಿ ಪತ್ರ ಬರೆದ ಮನೀಶ್ ಸಿಸೋಡಿಯ

ಮಹಿಳೆಯರಿಗೆ ಉಚಿತ ಪ್ರಯಾಣ ಬೇಡವೆಂದ ಶ್ರೀಧರನ್ ಗೆ ಪ್ರತಿ ಪತ್ರ ಬರೆದ ಮನೀಶ್ ಸಿಸೋಡಿಯ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಸಾರ್ವಜನಿಕ ವಾಹನಗಳನ್ನು ಬಳಸುವಂತೆ ಪ್ರೇರೆಪಿಸಲು ಮತ್ತು ಭದ್ರತೆಯ ದೃಷ್ಟಿಯಿಂದ ಇನ್ನು ಮುಂದೆ ದೆಹಲಿಯಲ್ಲಿ ಮಹಿಳೆಯರಿಗೆ ಸಂಪೂರ್ಣ ಉಚಿತವಾಗಿ ಮೆಟ್ರೊ ಮತ್ತು ಬಸ್ ಪ್ರಯಾಣ ಸೇವೆ ಒದಗಿಸಲು ಮುಂದಾಗಿದ್ದ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ನಡೆಗೆ ಆರಂಭದಲ್ಲೇ ವಿಘ್ನವುಂಟಾಗಿದೆ. ದೆಹಲಿ ಮೆಟ್ರೊದ ಮಾಜಿ ಅಧ್ಯಕ್ಷ ಇ.ಶ್ರೀಧರನ್ ರವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು ಯಾವ ಕಾರಣಕ್ಕೂ ಈ ಯೋಜನೆಗೆ ಒಪ್ಪಿಗೆ ನೀಡಬೇಡಿ ಎಂದು ಬಹಿರಂಗ ಪತ್ರ ಬರೆದಿದ್ದಾರೆ.

ಡೆಲ್ಲಿ ಟ್ರಾನ್ಸ್‍ಪೋರ್ಟ್ ಕಾರ್ಪೋರೇಷನ್ ಬಸ್‍ಗಳಲ್ಲಿ ಮತ್ತು ಡೆಲ್ಲಿ ಮೆಟ್ರೊದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೇವೆಯ ಕುರಿತು ಜೂನ್ 1 ರಂದು  ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದರು. ಈಗ ಅದರಿಂದ ದೆಹಲಿ ಮೆಟ್ರೊ ಆರ್ಥಿಕ ದಿವಾಳಿತನ ಎದುರಿಸಬೇಕಾಗುತ್ತದೆ, ಅಷ್ಟೇ ಅಲ್ಲದೇ ದೇಶದ ಇತರ ಮೆಟ್ರೊಗಳ ಮೇಲೂ ಇದು ಪರಿಣಾಮ ಬೀರುತ್ತದೆ ಎಂದು ಕಾರಣ ನೀಡಿ ಉಚಿತ ಮಾಡಬೇಡಿ ಎಂದು ಪತ್ರದಲ್ಲಿ ಇ.ಶ್ರೀಧರನ್ ಉಲ್ಲೇಖಿಸಿದ್ದಾರೆ.

ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾರವರು ಹಾಲಿ ದೆಹಲಿ ಮೆಟ್ರೊಗೆ ಮಾರ್ಗದರ್ಶಕರಾಗಿರುವ ಇ.ಶ್ರೀಧರನ್ ರವರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ” ನೀವು ಪ್ರಧಾನ ಮಂತ್ರಿಗಳಿಗೆ ಬರೆದ ಪತ್ರ ಓದಿ ಆಶ್ಚರ್ಯ ಮತ್ತು ನೋವುಂಟಾಯಿತು. ನೀವು ಪ್ರಸ್ತುತ ಯೋಜನೆಯ ಬಗ್ಗೆ ತಪ್ಪು ಮಾಹಿತಿ ಪಡೆದಿರುವ ಕಾರಣಕ್ಕೆ ಈಗಾಗಿದೆ. ದೆಹಲಿ ಮೆಟ್ರೊದ ಮೂರನೇ ಹಂತ ಪೂರ್ಣಗೊಂಡ ನಂತರ ನೀವು ಖಂಡಿತ ಶ್ಲಾಘಿಸುತ್ತೀರೆಂಬ ವಿಶ್ವಾಸವಿದೆ, ಆಗ ದೆಹಲಿ ಮೆಟ್ರೊದಲ್ಲಿ 40 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡಬಹುದಾದ ಸಾಮರ್ಥ್ಯವನ್ನು ನಾವು ಹೊಂದಲಿದ್ದೇವೆ” ಎಂದಿದ್ದಾರೆ.

ಮುಂದುವರೆದು ಈಗ ಸದ್ಯಕ್ಕೆ ದೆಹಲಿ ಮೆಟ್ರೊದಲ್ಲಿ ದಿನವೊಂದಕ್ಕೆ ಕೇವಲ 25 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ. ಉಳಿದ ಸಾಮರ್ಥ್ಯ ವ್ಯರ್ಥವಾಗುತ್ತಿದೆ. ಹಾಗಾಗಿ ಮಹಿಳೆಯರಿಗೆ ಉಚಿತ ಸೇವೆ ನೀಡಿದ್ದಲ್ಲಿ ಶೇ.50% ಮಹಿಳೆಯರು ಪ್ರಯಾಣಿಸುವುದರಿಂದ ದೆಹಲಿ ಮೆಟ್ರೊ ಸಾಮರ್ಥ್ಯ ಸಂಪೂರ್ಣ ಸದ್ಬಳಕೆಯಾಗುತ್ತದೆ. ಹಾಗಾಗಿ ಇದನ್ನು ಪ್ರಶಂಸಿಸುವುದು ಬಿಟ್ಟು ವಿರೋಧಿಸುವುದು ಸರಿಯಲ್ಲ ಎಂದು ಬರೆದಿದ್ದಾರೆ.

ಮಹಿಳೆಯರಿಗೆ ಭದ್ರತೆ ಮತ್ತು ಸಾರ್ವಜನಿಕ ವಾಹನಗಳನ್ನು ಬಳಸುವಂತೆ ಪ್ರೇರೆಪಿಸಲು ನಾವು ಈ ಯೋಜನೆ ಘೋಷಿಸಿದ್ದೇವೆ. ಇದರಿಂದ ಖಾಸಗಿ ವಾಹನಗಳ ಬಳಕೆ ತಪ್ಪಿ ವಾಯುಮಾಲಿನ್ಯವನ್ನು ಕಡಿಮೆ ಮಾಡಬಹುದು. ಮಹಿಳೆಯರ ಸಬಲೀಕರಣಕ್ಕಾಗಿ ಇದೊಂದು ಕ್ರಾಂತಿಕಾರಕ ನಡೆಯಾಗಿದ್ದು ಇದು ಮಹಿಳೆಯರ ಪಾಲಿಗೆ ಹೊಸ ಅವಕಾಶಗಳನ್ನು ತೆರೆದಯುತ್ತದೆ. ನಾವು ದಿನಪ್ರತಿ ಮಿಲಿಯನ್ ಕೂಪನ್ ಗಳನ್ನು ಪಡೆದು ಮಹಿಳೆಯರಿಗೆ ಹಂಚಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡುತ್ತಿದ್ದೇವೆ. ಇದನ್ನು ವಿರೋಧಿಸುವುದರಲ್ಲಿ ಏನರ್ಥವಿದೆ? ಹಾಗಾಗಿ ಈ ಪ್ರಗತಿಪರ ಯೋಜನೆಗೆ ವಿರೋಧ ಮಾಡುವುದರ ಕುರಿತು ಯೋಚಿಸಿ ಎಂದು ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಪ್ರಗತಿಪರ ಲೇಖಕ ಬಿ.ಶ್ರೀಪಾದ್ ಭಟ್ “ಮಹಿಳೆಯರಿಗೆ ಉಚಿತ ಪ್ರಯಾಣವೆಂದರೆ ಅದು ಭಿಕ್ಷೆಯಲ್ಲ. ಬದಲಿಗೆ ದೇಶವನ್ನು ಮುನ್ನಡೆಸುವಲ್ಲಿ ಅರ್ಧ ಕೊಡುಗೆ ಕೊಡುವ ಮಹಿಳೆಯರ ಸಬಲೀಕರಣ ಎಂಬ ಪರಿಜ್ಞಾನ ಮೆಟ್ರೊ ಮಾಜಿ ಅಧ್ಯಕ್ಷ ಇ.ಶ್ರೀಧರನ್ ರವರಿಗೆ ಇದ್ದಂತಿಲ್ಲ. ಹಾಗಾಗಿ ಬಹುಮುಖ್ಯ ಯೋಜನೆಯೊಂದನ್ನು ವಿರೋಧಿಸಿ ಪತ್ರ ಬರೆದಿದ್ದಾರೆ. ಅವರಿಗೆ ತುರ್ತಾಗಿ ಸಬಲೀಕರಣದ ಕುರಿತು ಪಾಠ ಹೇಳಬೇಕಾಗಿದೆ” ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನು ಓದಿ:

ದೆಹಲಿಯಲ್ಲಿ ಮಹಿಳೆಯರಿಗೆ ಮೆಟ್ರೊ ಮತ್ತು ಬಸ್ ಪ್ರಯಾಣ ಫುಲ್ ಫ್ರಿ : ಕೇಜ್ರಿವಾಲ್

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...