Homeಮುಖಪುಟಮಹಿಳೆಯರಿಗೆ ಉಚಿತ ಪ್ರಯಾಣ ಬೇಡವೆಂದ ಶ್ರೀಧರನ್ ಗೆ ಪ್ರತಿ ಪತ್ರ ಬರೆದ ಮನೀಶ್ ಸಿಸೋಡಿಯ

ಮಹಿಳೆಯರಿಗೆ ಉಚಿತ ಪ್ರಯಾಣ ಬೇಡವೆಂದ ಶ್ರೀಧರನ್ ಗೆ ಪ್ರತಿ ಪತ್ರ ಬರೆದ ಮನೀಶ್ ಸಿಸೋಡಿಯ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಸಾರ್ವಜನಿಕ ವಾಹನಗಳನ್ನು ಬಳಸುವಂತೆ ಪ್ರೇರೆಪಿಸಲು ಮತ್ತು ಭದ್ರತೆಯ ದೃಷ್ಟಿಯಿಂದ ಇನ್ನು ಮುಂದೆ ದೆಹಲಿಯಲ್ಲಿ ಮಹಿಳೆಯರಿಗೆ ಸಂಪೂರ್ಣ ಉಚಿತವಾಗಿ ಮೆಟ್ರೊ ಮತ್ತು ಬಸ್ ಪ್ರಯಾಣ ಸೇವೆ ಒದಗಿಸಲು ಮುಂದಾಗಿದ್ದ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ನಡೆಗೆ ಆರಂಭದಲ್ಲೇ ವಿಘ್ನವುಂಟಾಗಿದೆ. ದೆಹಲಿ ಮೆಟ್ರೊದ ಮಾಜಿ ಅಧ್ಯಕ್ಷ ಇ.ಶ್ರೀಧರನ್ ರವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು ಯಾವ ಕಾರಣಕ್ಕೂ ಈ ಯೋಜನೆಗೆ ಒಪ್ಪಿಗೆ ನೀಡಬೇಡಿ ಎಂದು ಬಹಿರಂಗ ಪತ್ರ ಬರೆದಿದ್ದಾರೆ.

ಡೆಲ್ಲಿ ಟ್ರಾನ್ಸ್‍ಪೋರ್ಟ್ ಕಾರ್ಪೋರೇಷನ್ ಬಸ್‍ಗಳಲ್ಲಿ ಮತ್ತು ಡೆಲ್ಲಿ ಮೆಟ್ರೊದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೇವೆಯ ಕುರಿತು ಜೂನ್ 1 ರಂದು  ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದರು. ಈಗ ಅದರಿಂದ ದೆಹಲಿ ಮೆಟ್ರೊ ಆರ್ಥಿಕ ದಿವಾಳಿತನ ಎದುರಿಸಬೇಕಾಗುತ್ತದೆ, ಅಷ್ಟೇ ಅಲ್ಲದೇ ದೇಶದ ಇತರ ಮೆಟ್ರೊಗಳ ಮೇಲೂ ಇದು ಪರಿಣಾಮ ಬೀರುತ್ತದೆ ಎಂದು ಕಾರಣ ನೀಡಿ ಉಚಿತ ಮಾಡಬೇಡಿ ಎಂದು ಪತ್ರದಲ್ಲಿ ಇ.ಶ್ರೀಧರನ್ ಉಲ್ಲೇಖಿಸಿದ್ದಾರೆ.

ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾರವರು ಹಾಲಿ ದೆಹಲಿ ಮೆಟ್ರೊಗೆ ಮಾರ್ಗದರ್ಶಕರಾಗಿರುವ ಇ.ಶ್ರೀಧರನ್ ರವರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ” ನೀವು ಪ್ರಧಾನ ಮಂತ್ರಿಗಳಿಗೆ ಬರೆದ ಪತ್ರ ಓದಿ ಆಶ್ಚರ್ಯ ಮತ್ತು ನೋವುಂಟಾಯಿತು. ನೀವು ಪ್ರಸ್ತುತ ಯೋಜನೆಯ ಬಗ್ಗೆ ತಪ್ಪು ಮಾಹಿತಿ ಪಡೆದಿರುವ ಕಾರಣಕ್ಕೆ ಈಗಾಗಿದೆ. ದೆಹಲಿ ಮೆಟ್ರೊದ ಮೂರನೇ ಹಂತ ಪೂರ್ಣಗೊಂಡ ನಂತರ ನೀವು ಖಂಡಿತ ಶ್ಲಾಘಿಸುತ್ತೀರೆಂಬ ವಿಶ್ವಾಸವಿದೆ, ಆಗ ದೆಹಲಿ ಮೆಟ್ರೊದಲ್ಲಿ 40 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡಬಹುದಾದ ಸಾಮರ್ಥ್ಯವನ್ನು ನಾವು ಹೊಂದಲಿದ್ದೇವೆ” ಎಂದಿದ್ದಾರೆ.

ಮುಂದುವರೆದು ಈಗ ಸದ್ಯಕ್ಕೆ ದೆಹಲಿ ಮೆಟ್ರೊದಲ್ಲಿ ದಿನವೊಂದಕ್ಕೆ ಕೇವಲ 25 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ. ಉಳಿದ ಸಾಮರ್ಥ್ಯ ವ್ಯರ್ಥವಾಗುತ್ತಿದೆ. ಹಾಗಾಗಿ ಮಹಿಳೆಯರಿಗೆ ಉಚಿತ ಸೇವೆ ನೀಡಿದ್ದಲ್ಲಿ ಶೇ.50% ಮಹಿಳೆಯರು ಪ್ರಯಾಣಿಸುವುದರಿಂದ ದೆಹಲಿ ಮೆಟ್ರೊ ಸಾಮರ್ಥ್ಯ ಸಂಪೂರ್ಣ ಸದ್ಬಳಕೆಯಾಗುತ್ತದೆ. ಹಾಗಾಗಿ ಇದನ್ನು ಪ್ರಶಂಸಿಸುವುದು ಬಿಟ್ಟು ವಿರೋಧಿಸುವುದು ಸರಿಯಲ್ಲ ಎಂದು ಬರೆದಿದ್ದಾರೆ.

ಮಹಿಳೆಯರಿಗೆ ಭದ್ರತೆ ಮತ್ತು ಸಾರ್ವಜನಿಕ ವಾಹನಗಳನ್ನು ಬಳಸುವಂತೆ ಪ್ರೇರೆಪಿಸಲು ನಾವು ಈ ಯೋಜನೆ ಘೋಷಿಸಿದ್ದೇವೆ. ಇದರಿಂದ ಖಾಸಗಿ ವಾಹನಗಳ ಬಳಕೆ ತಪ್ಪಿ ವಾಯುಮಾಲಿನ್ಯವನ್ನು ಕಡಿಮೆ ಮಾಡಬಹುದು. ಮಹಿಳೆಯರ ಸಬಲೀಕರಣಕ್ಕಾಗಿ ಇದೊಂದು ಕ್ರಾಂತಿಕಾರಕ ನಡೆಯಾಗಿದ್ದು ಇದು ಮಹಿಳೆಯರ ಪಾಲಿಗೆ ಹೊಸ ಅವಕಾಶಗಳನ್ನು ತೆರೆದಯುತ್ತದೆ. ನಾವು ದಿನಪ್ರತಿ ಮಿಲಿಯನ್ ಕೂಪನ್ ಗಳನ್ನು ಪಡೆದು ಮಹಿಳೆಯರಿಗೆ ಹಂಚಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡುತ್ತಿದ್ದೇವೆ. ಇದನ್ನು ವಿರೋಧಿಸುವುದರಲ್ಲಿ ಏನರ್ಥವಿದೆ? ಹಾಗಾಗಿ ಈ ಪ್ರಗತಿಪರ ಯೋಜನೆಗೆ ವಿರೋಧ ಮಾಡುವುದರ ಕುರಿತು ಯೋಚಿಸಿ ಎಂದು ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಪ್ರಗತಿಪರ ಲೇಖಕ ಬಿ.ಶ್ರೀಪಾದ್ ಭಟ್ “ಮಹಿಳೆಯರಿಗೆ ಉಚಿತ ಪ್ರಯಾಣವೆಂದರೆ ಅದು ಭಿಕ್ಷೆಯಲ್ಲ. ಬದಲಿಗೆ ದೇಶವನ್ನು ಮುನ್ನಡೆಸುವಲ್ಲಿ ಅರ್ಧ ಕೊಡುಗೆ ಕೊಡುವ ಮಹಿಳೆಯರ ಸಬಲೀಕರಣ ಎಂಬ ಪರಿಜ್ಞಾನ ಮೆಟ್ರೊ ಮಾಜಿ ಅಧ್ಯಕ್ಷ ಇ.ಶ್ರೀಧರನ್ ರವರಿಗೆ ಇದ್ದಂತಿಲ್ಲ. ಹಾಗಾಗಿ ಬಹುಮುಖ್ಯ ಯೋಜನೆಯೊಂದನ್ನು ವಿರೋಧಿಸಿ ಪತ್ರ ಬರೆದಿದ್ದಾರೆ. ಅವರಿಗೆ ತುರ್ತಾಗಿ ಸಬಲೀಕರಣದ ಕುರಿತು ಪಾಠ ಹೇಳಬೇಕಾಗಿದೆ” ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನು ಓದಿ:

ದೆಹಲಿಯಲ್ಲಿ ಮಹಿಳೆಯರಿಗೆ ಮೆಟ್ರೊ ಮತ್ತು ಬಸ್ ಪ್ರಯಾಣ ಫುಲ್ ಫ್ರಿ : ಕೇಜ್ರಿವಾಲ್

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...