Homeಕರ್ನಾಟಕ‘ಬ್ಲಾಕ್‌ ಫಂಗಸ್‌‌’ಗೆ ಉಚಿತ ಚಿಕಿತ್ಸೆ ನೀಡಿ: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

‘ಬ್ಲಾಕ್‌ ಫಂಗಸ್‌‌’ಗೆ ಉಚಿತ ಚಿಕಿತ್ಸೆ ನೀಡಿ: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

ಬ್ಲಾಕ್‌ ಫಂಗಸ್‌‌ ಕಾಯಿಲೆಯನ್ನು ಅಧಿಕೃತ ರೋಗಗಳ ಪಟ್ಟಿಯಲಿ ಸೇರಿಸಿ ಸೂಕ್ತ ಅಧಿಸೂಚನೆ ಹೊರಡಿಸಿ ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸೋಮವಾರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ಬ್ಲಾಕ್ ಫಂಗಸ್, ಕಪ್ಪು ಶಿಲೀಂದ್ರದ ಸಮಸ್ಯೆ ಅಥವಾ ವೈದ್ಯಕೀಯ ಪರಿಭಾಷೆಯಲ್ಲಿ ಮ್ಯೂಕರ್ ಮೈಕೋಸಿಸ್ ಎಂದು ಕರೆಯಲಾಗುವ ಈ ಕಾಯಿಲೆಯು ಕೋವಿಡ್ ರೋಗಕ್ಕೆ ತುತ್ತಾಗಿ  ರೋಗ ನಿರೋಧಕ ಶಕ್ತಿ ಕಡಿಮೆಯಾಗಿರುವವರಲ್ಲಿ ಮಾರಣಾಂತಿಕವಾಗಿ ಪರಿಣಮಿಸುತ್ತಿದೆ. ಕೋವಿಡ್‌ನಿಂದಾಗಿ ಸಾವು ಬದುಕಿನ ನಡುವೆ ಹೋರಾಡಿ ಬದುಕಿ ಬಂದವರನ್ನು ಗುರಿ ಮಾಡಿಕೊಂಡು ದಾಳಿ ಮಾಡುತ್ತಿರುವ ಈ ಕಾಯಿಲೆಯನ್ನು ಬಡವರಿರಲಿ, ಮಧ್ಯಮ ವರ್ಗದವರಿಗೂ ಕೂಡ ಸೂಕ್ತ ಚಿಕಿತ್ಸೆ ಪಡೆಯಲಾಗದಷ್ಟು ದುಬಾರಿಯಾಗಿದೆ. ಈ ರೋಗ ಬಂದವರಿಗೆ ದಿನಕ್ಕೆ ಮೂರರಂತೆ 30 ದಿನಗಳವರೆಗೂ ಆಂಫೊಟೆರೆಸಿನ್ ಎಂಬ ಇಂಜೆಕ್ಷನ್‍ಗಳನ್ನು ನೀಡಬೇಕಾಗುತ್ತದೆ ಎಂದು ವೈದ್ಯರು ಹೇಳುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಬ್ಲಾಕ್ ಫಂಗಸ್‌ಗೆ ಇಬ್ಬರು ಬಲಿ- ಪ್ರಕರಣಗಳ ನಿಖರ ಮಾಹಿತಿಯಿಲ್ಲ ಎಂದ ಆರೋಗ್ಯ ಸಚಿವರು!

“ಮಾರುಕಟ್ಟೆಯಲಿ ಈ ಔಷಧಗಳು ಸಿಗುತ್ತಿಲ್ಲ. ಒಂದೊಂದು ಇಂಜೆಕ್ಷನ್ನಿನ ಬೆಲೆ ಕಾಳಸಂತೆಯಲ್ಲಿ ಈಗಾಗಲೇ  5 ರಿಂದ 7 ಸಾವಿರ ರೂಗಳವರೆಗೆ ಮಾರಾಟವಾಗುತ್ತಿವೆ ಎಂಬ ದೂರುಗಳು ಬರುತ್ತಿವೆ. ಕೋವಿಡ್ ಸಾಂಕ್ರಾಮಿಕವನ್ನು ಅತ್ಯಂತ ಅರಾಜಕವಾಗಿ ನಿರ್ವಹಿಸುತ್ತಿರುವ, ಸತ್ತವರು ಸಾಯಲಿ ಎಂಬಂತೆ ನಡದುಕೊಳ್ಳುತ್ತಿರುವ ಸರ್ಕಾರ ಬ್ಲಾಕ್ ಫಂಗಸ್ ರೋಗದ ಕುರಿತು ಇನ್ನೂ ಕೂಡ ಸಮರ್ಪಕ ನಿರ್ಧಾರ ತೆಗೆದುಕೊಂಡಿಲ್” ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

“ಚಿಕಿತ್ಸೆ ನೀಡುವ ಕುರಿತಾದಂತೆ ಅಷ್ಟೆ ಅಲ್ಲ. ರೋಗ ಹರಡುತ್ತಿರುವ ಕುರಿತಂತೆ ಸರ್ಕಾರ ನಿರ್ಧಾರ ಕೈಗೊಳ್ಳಬೇಕಾಗಿದೆ. ರೋಗ ಯಾರಲ್ಲಿ ಹರಡುತ್ತಿದೆ? ಏಕೆ ಹರಡುತ್ತಿದೆ? ಯಾವಾಗ ಹರಡುತ್ತಿದೆ? ರೋಗ ಲಕ್ಷಣಗಳೇನು? ರೋಗ ಬಂದರೆ ಹೇಗೆ ಚಿಕಿತ್ಸೆ ಪಡೆಯಬೇಕು? ರೋಗ ಬರದಂತೆ ತಡೆಯಲು ಯಾವ ಕ್ರಮಗಳನ್ನು ಅನುಸರಿಸಬೇಕು? ಕೋವಿಡ್ ಚಿಕಿತ್ಸೆಯಿಂದ ಈ ಶಿಲೀಂದ್ರ ಸೋಂಕು ಬರುತ್ತದೆ ಅಂತಾದರೆ, ಕೋವಿಡ್ ಚಿಕಿತ್ಸೆಯಲ್ಲಿ ಮಾಡಿಕೊಳ್ಳಬೇಕಾದ ಮಾರ್ಪಾಟುಗಳೇನು? ಎಂಬೆಲ್ಲ ವಿಚಾರಗಳ ಕುರಿತು ಸಮರ್ಪಕ ಎಸ್‍ಓಪಿ ಯನ್ನು ಹೊರಡಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಕೋವಿಡ್ ಸೋಂಕಿನ ವಿಚಾರದಲ್ಲಿ ಅವೈಜ್ಞಾನಿಕವಾಗಿ ನಡೆದುಕೊಂಡಂತೆ ಬ್ಲಾಕ್ ಫಂಗಸ್ಸಿನ ವಿಚಾರದಲ್ಲಿ ನಡೆದುಕೊಳ್ಳಬಾರದು. ಉತ್ತರ ಭಾರತದ ಅನೇಕ ಕಡೆ ಸಗಣಿ ಬಳಸಿ ಚಿಕಿತ್ಸೆ ಪಡೆಯಲು ಹೊರಟವರಲ್ಲಿ ಈ ಸೋಂಕು ಹೆಚ್ಚಾಗಿ ಕಂಡುಬರುತ್ತಿದೆ ಎಂದು ಹೇಳಲಾಗುತ್ತಿದೆ. ಬಹುತೇಕ ವೈದ್ಯರು  ಕೋವಿಡ್ ಚಿಕಿತ್ಸೆಯಲ್ಲಿ ಅನಿಯಮಿತವಾಗಿ ಬಳಸುವ ಸ್ಟಿರಾಯ್ಡ್‍ಗಳಿಂದ ಹರಡುತ್ತಿದೆ ಎನ್ನುತ್ತಾರೆ. ಕೋವಿಡ್ ಬಂದವರಿಗೆ ಸಕ್ಕರೆ ಕಾಯಿಲೆ ಇದ್ದರೆ ಅವರಿಗೆ ಸುಲಭವಾಗಿ ಹರಡುತ್ತದೆ ಎನ್ನಲಾಗುತ್ತಿದೆ. ಆಕ್ಸಿಜನ್ ನೀಡುವಾಗ ಉಂಟಾಗುವ ಸೋಂಕುಗಳಿಂದ ಹರಡುತ್ತದೆ ಎಂಬ ಅಭಿಪ್ರಾಯವೂ ಇದೆ. ಆದ್ದರಿಂದ ಈ ಕುರಿತು ಸೂಕ್ತವಾಗಿ ಶೀಘ್ರವಾಗಿ ಅಧ್ಯಯನ ಮಾಡಿ ಚಿಕಿತ್ಸೆ ನೀಡಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವೆಂಟಿಲೇಟರ್ ಮತ್ತು ಪ್ರಧಾನಿ ಇಬ್ಬರೂ ವಿಫಲರಾಗಿದ್ದಾರೆ ಎಂದ ರಾಹುಲ್ ಗಾಂಧಿ

“ಪ್ರತಿವಾರ ಸುಮಾರು 400 ಜನಕ್ಕೆ ಈ ಸೋಂಕು ಬರಬಹುದು ಎಂದು ಅಂದಾಜಿಸಲಾಗುತ್ತಿದೆ. ಆದರೆ ಚಿಕಿತ್ಸೆ ನೀಡಲು ಬೇಕಾದ ತಯಾರಿಯನ್ನು ಇನ್ನೂ ಮಾಡಿಕೊಂಡಂತೆ ಕಾಣುತ್ತಿಲ್ಲ. ಮಧುಮೇಹ ಮುಂತಾದ ಸಮಸ್ಯೆ ಇದ್ದು ಕೋವಿಡ್ ಬಂದವರನ್ನು ಕನಿಷ್ಟ ಮೂರು ತಿಂಗಳ ಕಾಲ ಗಮನಿಸುತ್ತಿರಬೇಕು. ಜೊತೆಗೆ ಕೋವಿಡ್ ರೋಗಿಗಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರ ವಿವರಗಳನ್ನು ಮತ್ತು ಹೆಚ್ಚು ಸ್ಟಿರಾಯ್ಡ್ ನೀಡಲಾಗಿರುವವರ ಪಟ್ಟಿಯನ್ನು ತಾಲ್ಲೂಕುವಾರು, ವಾರ್ಡ್‍ವಾರು ಸಿದ್ಧಪಡಿಸಿಕೊಂಡು ಅವರನ್ನೂ ಸಹ ಆಶಾ ಕಾರ್ಯಕರ್ತರು ಮತ್ತು ಆರೋಗ್ಯ ಕಾರ್ಯಕರ್ತರ ಮೂಲಕ ನಿಗಾವಹಿಸಬೇಕು” ಎಂದು ಸಿದ್ದರಾಮಯ್ಯ ಅವರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

“ಈ ನಿಗಾ ಅವಧಿಯಲ್ಲಿ ಯಾರಿಗಾದರೂ ಸೋಂಕು ಕಾಣಿಸಿಕೊಂಡರೆ ಕೂಡಲೇ ಆಸ್ಪತ್ರೆಗಳಿಗೆ ಕರೆದುಕೊಂಡು ಹೋಗಿ ಉಚಿತವಾಗಿ ಸಮರ್ಪಕ ಚಿಕಿತ್ಸೆಯನ್ನು ನೀಡಬೇಕು. ಅದಕ್ಕೂ ಮೊದಲು ಈ ಕೂಡಲೇ ಈ ರೋಗಕ್ಕೆ ಚಿಕಿತ್ಸೆ ನೀಡಲು ಜಿಲ್ಲಾವಾರು ಆಸ್ಪತ್ರೆಗಳ ಪಟ್ಟಿ ಸಿದ್ಧಪಡಿಸಿ, ಅಧಿಸೂಚನೆ ಹೊರಡಿಸಬೇಕು. ಚಿಕಿತ್ಸೆಗಾಗಿ ಅಗತ್ಯ ಇರುವಷ್ಟು ಆಂಫೊಟೆರೆಸಿನ್ ಮುಂತಾದ ಔಷಧಗಳನ್ನು ಕೂಡಲೇ ಅಂದಾಜು ಮಾಡಿ ತರಿಸಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

“ಈ ಹಿನ್ನೆಲೆಯಲ್ಲಿ ಸರ್ಕಾರ ತಡಮಾಡದೆ ಸೂಕ್ತ ಅಧಿ ಸೂಚನೆಗಳನ್ನು ಹೊರಡಿಸಿ ಉಚಿತ ಚಿಕಿತ್ಸೆ ನೀಡಲು ಪ್ರಾರಂಭಿಸಬೇಕು. ಈಗಾಗಾಲೇ ಬಹಳಷ್ಟು ಜನರು ಬ್ಲಾಕ್ ಫಂಗಸ್ಸಿಗೆ ತುತ್ತಾಗಿ ಜೀವ ಕಳೆದುಕೊಂಡಿದ್ದಾರೆ. ಕಣ್ಣುಗಳನ್ನು ಕಳೆದುಕೊಂಡಿದ್ದಾರೆ. ಅಂಥವರಿಗೆ, ಅಂಥವರ ಕುಟುಂಬ ಸೂಕ್ತ ಪರಿಹಾರ ನೀಡಬೇಕು. ಈ ರೋಗವು ಇನ್ನಷ್ಟು ಅಮೂಲ್ಯ ಜೀವಗಳನ್ನು ಹೊತ್ತೊಯ್ಯುವ ಮೊದಲು ಕೂಡಲೇ ಉಚಿತ ಚಿಕಿತ್ಸೆ ನೀಡಲು  ಆರಂಭಿಸಬೇಕು” ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಒಳ್ಳೆಯ ಕೆಲಸ ಮಾಡುತ್ತಿದ್ದಾರೆ: ಬಿ.ವಿ ಶ್ರೀನಿವಾಸ್‌ ಸೇರಿ ಇತರರಿಗೆ ಕ್ಲೀನ್ ಚಿಟ್ ನೀಡಿದ ದೆಹಲಿ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...