Homeಕರ್ನಾಟಕ‘ಬ್ಲಾಕ್‌ ಫಂಗಸ್‌‌’ಗೆ ಉಚಿತ ಚಿಕಿತ್ಸೆ ನೀಡಿ: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

‘ಬ್ಲಾಕ್‌ ಫಂಗಸ್‌‌’ಗೆ ಉಚಿತ ಚಿಕಿತ್ಸೆ ನೀಡಿ: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

ಬ್ಲಾಕ್‌ ಫಂಗಸ್‌‌ ಕಾಯಿಲೆಯನ್ನು ಅಧಿಕೃತ ರೋಗಗಳ ಪಟ್ಟಿಯಲಿ ಸೇರಿಸಿ ಸೂಕ್ತ ಅಧಿಸೂಚನೆ ಹೊರಡಿಸಿ ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸೋಮವಾರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ಬ್ಲಾಕ್ ಫಂಗಸ್, ಕಪ್ಪು ಶಿಲೀಂದ್ರದ ಸಮಸ್ಯೆ ಅಥವಾ ವೈದ್ಯಕೀಯ ಪರಿಭಾಷೆಯಲ್ಲಿ ಮ್ಯೂಕರ್ ಮೈಕೋಸಿಸ್ ಎಂದು ಕರೆಯಲಾಗುವ ಈ ಕಾಯಿಲೆಯು ಕೋವಿಡ್ ರೋಗಕ್ಕೆ ತುತ್ತಾಗಿ  ರೋಗ ನಿರೋಧಕ ಶಕ್ತಿ ಕಡಿಮೆಯಾಗಿರುವವರಲ್ಲಿ ಮಾರಣಾಂತಿಕವಾಗಿ ಪರಿಣಮಿಸುತ್ತಿದೆ. ಕೋವಿಡ್‌ನಿಂದಾಗಿ ಸಾವು ಬದುಕಿನ ನಡುವೆ ಹೋರಾಡಿ ಬದುಕಿ ಬಂದವರನ್ನು ಗುರಿ ಮಾಡಿಕೊಂಡು ದಾಳಿ ಮಾಡುತ್ತಿರುವ ಈ ಕಾಯಿಲೆಯನ್ನು ಬಡವರಿರಲಿ, ಮಧ್ಯಮ ವರ್ಗದವರಿಗೂ ಕೂಡ ಸೂಕ್ತ ಚಿಕಿತ್ಸೆ ಪಡೆಯಲಾಗದಷ್ಟು ದುಬಾರಿಯಾಗಿದೆ. ಈ ರೋಗ ಬಂದವರಿಗೆ ದಿನಕ್ಕೆ ಮೂರರಂತೆ 30 ದಿನಗಳವರೆಗೂ ಆಂಫೊಟೆರೆಸಿನ್ ಎಂಬ ಇಂಜೆಕ್ಷನ್‍ಗಳನ್ನು ನೀಡಬೇಕಾಗುತ್ತದೆ ಎಂದು ವೈದ್ಯರು ಹೇಳುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಬ್ಲಾಕ್ ಫಂಗಸ್‌ಗೆ ಇಬ್ಬರು ಬಲಿ- ಪ್ರಕರಣಗಳ ನಿಖರ ಮಾಹಿತಿಯಿಲ್ಲ ಎಂದ ಆರೋಗ್ಯ ಸಚಿವರು!

“ಮಾರುಕಟ್ಟೆಯಲಿ ಈ ಔಷಧಗಳು ಸಿಗುತ್ತಿಲ್ಲ. ಒಂದೊಂದು ಇಂಜೆಕ್ಷನ್ನಿನ ಬೆಲೆ ಕಾಳಸಂತೆಯಲ್ಲಿ ಈಗಾಗಲೇ  5 ರಿಂದ 7 ಸಾವಿರ ರೂಗಳವರೆಗೆ ಮಾರಾಟವಾಗುತ್ತಿವೆ ಎಂಬ ದೂರುಗಳು ಬರುತ್ತಿವೆ. ಕೋವಿಡ್ ಸಾಂಕ್ರಾಮಿಕವನ್ನು ಅತ್ಯಂತ ಅರಾಜಕವಾಗಿ ನಿರ್ವಹಿಸುತ್ತಿರುವ, ಸತ್ತವರು ಸಾಯಲಿ ಎಂಬಂತೆ ನಡದುಕೊಳ್ಳುತ್ತಿರುವ ಸರ್ಕಾರ ಬ್ಲಾಕ್ ಫಂಗಸ್ ರೋಗದ ಕುರಿತು ಇನ್ನೂ ಕೂಡ ಸಮರ್ಪಕ ನಿರ್ಧಾರ ತೆಗೆದುಕೊಂಡಿಲ್” ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

“ಚಿಕಿತ್ಸೆ ನೀಡುವ ಕುರಿತಾದಂತೆ ಅಷ್ಟೆ ಅಲ್ಲ. ರೋಗ ಹರಡುತ್ತಿರುವ ಕುರಿತಂತೆ ಸರ್ಕಾರ ನಿರ್ಧಾರ ಕೈಗೊಳ್ಳಬೇಕಾಗಿದೆ. ರೋಗ ಯಾರಲ್ಲಿ ಹರಡುತ್ತಿದೆ? ಏಕೆ ಹರಡುತ್ತಿದೆ? ಯಾವಾಗ ಹರಡುತ್ತಿದೆ? ರೋಗ ಲಕ್ಷಣಗಳೇನು? ರೋಗ ಬಂದರೆ ಹೇಗೆ ಚಿಕಿತ್ಸೆ ಪಡೆಯಬೇಕು? ರೋಗ ಬರದಂತೆ ತಡೆಯಲು ಯಾವ ಕ್ರಮಗಳನ್ನು ಅನುಸರಿಸಬೇಕು? ಕೋವಿಡ್ ಚಿಕಿತ್ಸೆಯಿಂದ ಈ ಶಿಲೀಂದ್ರ ಸೋಂಕು ಬರುತ್ತದೆ ಅಂತಾದರೆ, ಕೋವಿಡ್ ಚಿಕಿತ್ಸೆಯಲ್ಲಿ ಮಾಡಿಕೊಳ್ಳಬೇಕಾದ ಮಾರ್ಪಾಟುಗಳೇನು? ಎಂಬೆಲ್ಲ ವಿಚಾರಗಳ ಕುರಿತು ಸಮರ್ಪಕ ಎಸ್‍ಓಪಿ ಯನ್ನು ಹೊರಡಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಕೋವಿಡ್ ಸೋಂಕಿನ ವಿಚಾರದಲ್ಲಿ ಅವೈಜ್ಞಾನಿಕವಾಗಿ ನಡೆದುಕೊಂಡಂತೆ ಬ್ಲಾಕ್ ಫಂಗಸ್ಸಿನ ವಿಚಾರದಲ್ಲಿ ನಡೆದುಕೊಳ್ಳಬಾರದು. ಉತ್ತರ ಭಾರತದ ಅನೇಕ ಕಡೆ ಸಗಣಿ ಬಳಸಿ ಚಿಕಿತ್ಸೆ ಪಡೆಯಲು ಹೊರಟವರಲ್ಲಿ ಈ ಸೋಂಕು ಹೆಚ್ಚಾಗಿ ಕಂಡುಬರುತ್ತಿದೆ ಎಂದು ಹೇಳಲಾಗುತ್ತಿದೆ. ಬಹುತೇಕ ವೈದ್ಯರು  ಕೋವಿಡ್ ಚಿಕಿತ್ಸೆಯಲ್ಲಿ ಅನಿಯಮಿತವಾಗಿ ಬಳಸುವ ಸ್ಟಿರಾಯ್ಡ್‍ಗಳಿಂದ ಹರಡುತ್ತಿದೆ ಎನ್ನುತ್ತಾರೆ. ಕೋವಿಡ್ ಬಂದವರಿಗೆ ಸಕ್ಕರೆ ಕಾಯಿಲೆ ಇದ್ದರೆ ಅವರಿಗೆ ಸುಲಭವಾಗಿ ಹರಡುತ್ತದೆ ಎನ್ನಲಾಗುತ್ತಿದೆ. ಆಕ್ಸಿಜನ್ ನೀಡುವಾಗ ಉಂಟಾಗುವ ಸೋಂಕುಗಳಿಂದ ಹರಡುತ್ತದೆ ಎಂಬ ಅಭಿಪ್ರಾಯವೂ ಇದೆ. ಆದ್ದರಿಂದ ಈ ಕುರಿತು ಸೂಕ್ತವಾಗಿ ಶೀಘ್ರವಾಗಿ ಅಧ್ಯಯನ ಮಾಡಿ ಚಿಕಿತ್ಸೆ ನೀಡಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವೆಂಟಿಲೇಟರ್ ಮತ್ತು ಪ್ರಧಾನಿ ಇಬ್ಬರೂ ವಿಫಲರಾಗಿದ್ದಾರೆ ಎಂದ ರಾಹುಲ್ ಗಾಂಧಿ

“ಪ್ರತಿವಾರ ಸುಮಾರು 400 ಜನಕ್ಕೆ ಈ ಸೋಂಕು ಬರಬಹುದು ಎಂದು ಅಂದಾಜಿಸಲಾಗುತ್ತಿದೆ. ಆದರೆ ಚಿಕಿತ್ಸೆ ನೀಡಲು ಬೇಕಾದ ತಯಾರಿಯನ್ನು ಇನ್ನೂ ಮಾಡಿಕೊಂಡಂತೆ ಕಾಣುತ್ತಿಲ್ಲ. ಮಧುಮೇಹ ಮುಂತಾದ ಸಮಸ್ಯೆ ಇದ್ದು ಕೋವಿಡ್ ಬಂದವರನ್ನು ಕನಿಷ್ಟ ಮೂರು ತಿಂಗಳ ಕಾಲ ಗಮನಿಸುತ್ತಿರಬೇಕು. ಜೊತೆಗೆ ಕೋವಿಡ್ ರೋಗಿಗಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರ ವಿವರಗಳನ್ನು ಮತ್ತು ಹೆಚ್ಚು ಸ್ಟಿರಾಯ್ಡ್ ನೀಡಲಾಗಿರುವವರ ಪಟ್ಟಿಯನ್ನು ತಾಲ್ಲೂಕುವಾರು, ವಾರ್ಡ್‍ವಾರು ಸಿದ್ಧಪಡಿಸಿಕೊಂಡು ಅವರನ್ನೂ ಸಹ ಆಶಾ ಕಾರ್ಯಕರ್ತರು ಮತ್ತು ಆರೋಗ್ಯ ಕಾರ್ಯಕರ್ತರ ಮೂಲಕ ನಿಗಾವಹಿಸಬೇಕು” ಎಂದು ಸಿದ್ದರಾಮಯ್ಯ ಅವರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

“ಈ ನಿಗಾ ಅವಧಿಯಲ್ಲಿ ಯಾರಿಗಾದರೂ ಸೋಂಕು ಕಾಣಿಸಿಕೊಂಡರೆ ಕೂಡಲೇ ಆಸ್ಪತ್ರೆಗಳಿಗೆ ಕರೆದುಕೊಂಡು ಹೋಗಿ ಉಚಿತವಾಗಿ ಸಮರ್ಪಕ ಚಿಕಿತ್ಸೆಯನ್ನು ನೀಡಬೇಕು. ಅದಕ್ಕೂ ಮೊದಲು ಈ ಕೂಡಲೇ ಈ ರೋಗಕ್ಕೆ ಚಿಕಿತ್ಸೆ ನೀಡಲು ಜಿಲ್ಲಾವಾರು ಆಸ್ಪತ್ರೆಗಳ ಪಟ್ಟಿ ಸಿದ್ಧಪಡಿಸಿ, ಅಧಿಸೂಚನೆ ಹೊರಡಿಸಬೇಕು. ಚಿಕಿತ್ಸೆಗಾಗಿ ಅಗತ್ಯ ಇರುವಷ್ಟು ಆಂಫೊಟೆರೆಸಿನ್ ಮುಂತಾದ ಔಷಧಗಳನ್ನು ಕೂಡಲೇ ಅಂದಾಜು ಮಾಡಿ ತರಿಸಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

“ಈ ಹಿನ್ನೆಲೆಯಲ್ಲಿ ಸರ್ಕಾರ ತಡಮಾಡದೆ ಸೂಕ್ತ ಅಧಿ ಸೂಚನೆಗಳನ್ನು ಹೊರಡಿಸಿ ಉಚಿತ ಚಿಕಿತ್ಸೆ ನೀಡಲು ಪ್ರಾರಂಭಿಸಬೇಕು. ಈಗಾಗಾಲೇ ಬಹಳಷ್ಟು ಜನರು ಬ್ಲಾಕ್ ಫಂಗಸ್ಸಿಗೆ ತುತ್ತಾಗಿ ಜೀವ ಕಳೆದುಕೊಂಡಿದ್ದಾರೆ. ಕಣ್ಣುಗಳನ್ನು ಕಳೆದುಕೊಂಡಿದ್ದಾರೆ. ಅಂಥವರಿಗೆ, ಅಂಥವರ ಕುಟುಂಬ ಸೂಕ್ತ ಪರಿಹಾರ ನೀಡಬೇಕು. ಈ ರೋಗವು ಇನ್ನಷ್ಟು ಅಮೂಲ್ಯ ಜೀವಗಳನ್ನು ಹೊತ್ತೊಯ್ಯುವ ಮೊದಲು ಕೂಡಲೇ ಉಚಿತ ಚಿಕಿತ್ಸೆ ನೀಡಲು  ಆರಂಭಿಸಬೇಕು” ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಒಳ್ಳೆಯ ಕೆಲಸ ಮಾಡುತ್ತಿದ್ದಾರೆ: ಬಿ.ವಿ ಶ್ರೀನಿವಾಸ್‌ ಸೇರಿ ಇತರರಿಗೆ ಕ್ಲೀನ್ ಚಿಟ್ ನೀಡಿದ ದೆಹಲಿ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...