Homeಕರ್ನಾಟಕ‘ಬ್ಲಾಕ್‌ ಫಂಗಸ್‌‌’ಗೆ ಉಚಿತ ಚಿಕಿತ್ಸೆ ನೀಡಿ: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

‘ಬ್ಲಾಕ್‌ ಫಂಗಸ್‌‌’ಗೆ ಉಚಿತ ಚಿಕಿತ್ಸೆ ನೀಡಿ: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

ಬ್ಲಾಕ್‌ ಫಂಗಸ್‌‌ ಕಾಯಿಲೆಯನ್ನು ಅಧಿಕೃತ ರೋಗಗಳ ಪಟ್ಟಿಯಲಿ ಸೇರಿಸಿ ಸೂಕ್ತ ಅಧಿಸೂಚನೆ ಹೊರಡಿಸಿ ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸೋಮವಾರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ಬ್ಲಾಕ್ ಫಂಗಸ್, ಕಪ್ಪು ಶಿಲೀಂದ್ರದ ಸಮಸ್ಯೆ ಅಥವಾ ವೈದ್ಯಕೀಯ ಪರಿಭಾಷೆಯಲ್ಲಿ ಮ್ಯೂಕರ್ ಮೈಕೋಸಿಸ್ ಎಂದು ಕರೆಯಲಾಗುವ ಈ ಕಾಯಿಲೆಯು ಕೋವಿಡ್ ರೋಗಕ್ಕೆ ತುತ್ತಾಗಿ  ರೋಗ ನಿರೋಧಕ ಶಕ್ತಿ ಕಡಿಮೆಯಾಗಿರುವವರಲ್ಲಿ ಮಾರಣಾಂತಿಕವಾಗಿ ಪರಿಣಮಿಸುತ್ತಿದೆ. ಕೋವಿಡ್‌ನಿಂದಾಗಿ ಸಾವು ಬದುಕಿನ ನಡುವೆ ಹೋರಾಡಿ ಬದುಕಿ ಬಂದವರನ್ನು ಗುರಿ ಮಾಡಿಕೊಂಡು ದಾಳಿ ಮಾಡುತ್ತಿರುವ ಈ ಕಾಯಿಲೆಯನ್ನು ಬಡವರಿರಲಿ, ಮಧ್ಯಮ ವರ್ಗದವರಿಗೂ ಕೂಡ ಸೂಕ್ತ ಚಿಕಿತ್ಸೆ ಪಡೆಯಲಾಗದಷ್ಟು ದುಬಾರಿಯಾಗಿದೆ. ಈ ರೋಗ ಬಂದವರಿಗೆ ದಿನಕ್ಕೆ ಮೂರರಂತೆ 30 ದಿನಗಳವರೆಗೂ ಆಂಫೊಟೆರೆಸಿನ್ ಎಂಬ ಇಂಜೆಕ್ಷನ್‍ಗಳನ್ನು ನೀಡಬೇಕಾಗುತ್ತದೆ ಎಂದು ವೈದ್ಯರು ಹೇಳುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಬ್ಲಾಕ್ ಫಂಗಸ್‌ಗೆ ಇಬ್ಬರು ಬಲಿ- ಪ್ರಕರಣಗಳ ನಿಖರ ಮಾಹಿತಿಯಿಲ್ಲ ಎಂದ ಆರೋಗ್ಯ ಸಚಿವರು!

“ಮಾರುಕಟ್ಟೆಯಲಿ ಈ ಔಷಧಗಳು ಸಿಗುತ್ತಿಲ್ಲ. ಒಂದೊಂದು ಇಂಜೆಕ್ಷನ್ನಿನ ಬೆಲೆ ಕಾಳಸಂತೆಯಲ್ಲಿ ಈಗಾಗಲೇ  5 ರಿಂದ 7 ಸಾವಿರ ರೂಗಳವರೆಗೆ ಮಾರಾಟವಾಗುತ್ತಿವೆ ಎಂಬ ದೂರುಗಳು ಬರುತ್ತಿವೆ. ಕೋವಿಡ್ ಸಾಂಕ್ರಾಮಿಕವನ್ನು ಅತ್ಯಂತ ಅರಾಜಕವಾಗಿ ನಿರ್ವಹಿಸುತ್ತಿರುವ, ಸತ್ತವರು ಸಾಯಲಿ ಎಂಬಂತೆ ನಡದುಕೊಳ್ಳುತ್ತಿರುವ ಸರ್ಕಾರ ಬ್ಲಾಕ್ ಫಂಗಸ್ ರೋಗದ ಕುರಿತು ಇನ್ನೂ ಕೂಡ ಸಮರ್ಪಕ ನಿರ್ಧಾರ ತೆಗೆದುಕೊಂಡಿಲ್” ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

“ಚಿಕಿತ್ಸೆ ನೀಡುವ ಕುರಿತಾದಂತೆ ಅಷ್ಟೆ ಅಲ್ಲ. ರೋಗ ಹರಡುತ್ತಿರುವ ಕುರಿತಂತೆ ಸರ್ಕಾರ ನಿರ್ಧಾರ ಕೈಗೊಳ್ಳಬೇಕಾಗಿದೆ. ರೋಗ ಯಾರಲ್ಲಿ ಹರಡುತ್ತಿದೆ? ಏಕೆ ಹರಡುತ್ತಿದೆ? ಯಾವಾಗ ಹರಡುತ್ತಿದೆ? ರೋಗ ಲಕ್ಷಣಗಳೇನು? ರೋಗ ಬಂದರೆ ಹೇಗೆ ಚಿಕಿತ್ಸೆ ಪಡೆಯಬೇಕು? ರೋಗ ಬರದಂತೆ ತಡೆಯಲು ಯಾವ ಕ್ರಮಗಳನ್ನು ಅನುಸರಿಸಬೇಕು? ಕೋವಿಡ್ ಚಿಕಿತ್ಸೆಯಿಂದ ಈ ಶಿಲೀಂದ್ರ ಸೋಂಕು ಬರುತ್ತದೆ ಅಂತಾದರೆ, ಕೋವಿಡ್ ಚಿಕಿತ್ಸೆಯಲ್ಲಿ ಮಾಡಿಕೊಳ್ಳಬೇಕಾದ ಮಾರ್ಪಾಟುಗಳೇನು? ಎಂಬೆಲ್ಲ ವಿಚಾರಗಳ ಕುರಿತು ಸಮರ್ಪಕ ಎಸ್‍ಓಪಿ ಯನ್ನು ಹೊರಡಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಕೋವಿಡ್ ಸೋಂಕಿನ ವಿಚಾರದಲ್ಲಿ ಅವೈಜ್ಞಾನಿಕವಾಗಿ ನಡೆದುಕೊಂಡಂತೆ ಬ್ಲಾಕ್ ಫಂಗಸ್ಸಿನ ವಿಚಾರದಲ್ಲಿ ನಡೆದುಕೊಳ್ಳಬಾರದು. ಉತ್ತರ ಭಾರತದ ಅನೇಕ ಕಡೆ ಸಗಣಿ ಬಳಸಿ ಚಿಕಿತ್ಸೆ ಪಡೆಯಲು ಹೊರಟವರಲ್ಲಿ ಈ ಸೋಂಕು ಹೆಚ್ಚಾಗಿ ಕಂಡುಬರುತ್ತಿದೆ ಎಂದು ಹೇಳಲಾಗುತ್ತಿದೆ. ಬಹುತೇಕ ವೈದ್ಯರು  ಕೋವಿಡ್ ಚಿಕಿತ್ಸೆಯಲ್ಲಿ ಅನಿಯಮಿತವಾಗಿ ಬಳಸುವ ಸ್ಟಿರಾಯ್ಡ್‍ಗಳಿಂದ ಹರಡುತ್ತಿದೆ ಎನ್ನುತ್ತಾರೆ. ಕೋವಿಡ್ ಬಂದವರಿಗೆ ಸಕ್ಕರೆ ಕಾಯಿಲೆ ಇದ್ದರೆ ಅವರಿಗೆ ಸುಲಭವಾಗಿ ಹರಡುತ್ತದೆ ಎನ್ನಲಾಗುತ್ತಿದೆ. ಆಕ್ಸಿಜನ್ ನೀಡುವಾಗ ಉಂಟಾಗುವ ಸೋಂಕುಗಳಿಂದ ಹರಡುತ್ತದೆ ಎಂಬ ಅಭಿಪ್ರಾಯವೂ ಇದೆ. ಆದ್ದರಿಂದ ಈ ಕುರಿತು ಸೂಕ್ತವಾಗಿ ಶೀಘ್ರವಾಗಿ ಅಧ್ಯಯನ ಮಾಡಿ ಚಿಕಿತ್ಸೆ ನೀಡಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವೆಂಟಿಲೇಟರ್ ಮತ್ತು ಪ್ರಧಾನಿ ಇಬ್ಬರೂ ವಿಫಲರಾಗಿದ್ದಾರೆ ಎಂದ ರಾಹುಲ್ ಗಾಂಧಿ

“ಪ್ರತಿವಾರ ಸುಮಾರು 400 ಜನಕ್ಕೆ ಈ ಸೋಂಕು ಬರಬಹುದು ಎಂದು ಅಂದಾಜಿಸಲಾಗುತ್ತಿದೆ. ಆದರೆ ಚಿಕಿತ್ಸೆ ನೀಡಲು ಬೇಕಾದ ತಯಾರಿಯನ್ನು ಇನ್ನೂ ಮಾಡಿಕೊಂಡಂತೆ ಕಾಣುತ್ತಿಲ್ಲ. ಮಧುಮೇಹ ಮುಂತಾದ ಸಮಸ್ಯೆ ಇದ್ದು ಕೋವಿಡ್ ಬಂದವರನ್ನು ಕನಿಷ್ಟ ಮೂರು ತಿಂಗಳ ಕಾಲ ಗಮನಿಸುತ್ತಿರಬೇಕು. ಜೊತೆಗೆ ಕೋವಿಡ್ ರೋಗಿಗಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರ ವಿವರಗಳನ್ನು ಮತ್ತು ಹೆಚ್ಚು ಸ್ಟಿರಾಯ್ಡ್ ನೀಡಲಾಗಿರುವವರ ಪಟ್ಟಿಯನ್ನು ತಾಲ್ಲೂಕುವಾರು, ವಾರ್ಡ್‍ವಾರು ಸಿದ್ಧಪಡಿಸಿಕೊಂಡು ಅವರನ್ನೂ ಸಹ ಆಶಾ ಕಾರ್ಯಕರ್ತರು ಮತ್ತು ಆರೋಗ್ಯ ಕಾರ್ಯಕರ್ತರ ಮೂಲಕ ನಿಗಾವಹಿಸಬೇಕು” ಎಂದು ಸಿದ್ದರಾಮಯ್ಯ ಅವರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

“ಈ ನಿಗಾ ಅವಧಿಯಲ್ಲಿ ಯಾರಿಗಾದರೂ ಸೋಂಕು ಕಾಣಿಸಿಕೊಂಡರೆ ಕೂಡಲೇ ಆಸ್ಪತ್ರೆಗಳಿಗೆ ಕರೆದುಕೊಂಡು ಹೋಗಿ ಉಚಿತವಾಗಿ ಸಮರ್ಪಕ ಚಿಕಿತ್ಸೆಯನ್ನು ನೀಡಬೇಕು. ಅದಕ್ಕೂ ಮೊದಲು ಈ ಕೂಡಲೇ ಈ ರೋಗಕ್ಕೆ ಚಿಕಿತ್ಸೆ ನೀಡಲು ಜಿಲ್ಲಾವಾರು ಆಸ್ಪತ್ರೆಗಳ ಪಟ್ಟಿ ಸಿದ್ಧಪಡಿಸಿ, ಅಧಿಸೂಚನೆ ಹೊರಡಿಸಬೇಕು. ಚಿಕಿತ್ಸೆಗಾಗಿ ಅಗತ್ಯ ಇರುವಷ್ಟು ಆಂಫೊಟೆರೆಸಿನ್ ಮುಂತಾದ ಔಷಧಗಳನ್ನು ಕೂಡಲೇ ಅಂದಾಜು ಮಾಡಿ ತರಿಸಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

“ಈ ಹಿನ್ನೆಲೆಯಲ್ಲಿ ಸರ್ಕಾರ ತಡಮಾಡದೆ ಸೂಕ್ತ ಅಧಿ ಸೂಚನೆಗಳನ್ನು ಹೊರಡಿಸಿ ಉಚಿತ ಚಿಕಿತ್ಸೆ ನೀಡಲು ಪ್ರಾರಂಭಿಸಬೇಕು. ಈಗಾಗಾಲೇ ಬಹಳಷ್ಟು ಜನರು ಬ್ಲಾಕ್ ಫಂಗಸ್ಸಿಗೆ ತುತ್ತಾಗಿ ಜೀವ ಕಳೆದುಕೊಂಡಿದ್ದಾರೆ. ಕಣ್ಣುಗಳನ್ನು ಕಳೆದುಕೊಂಡಿದ್ದಾರೆ. ಅಂಥವರಿಗೆ, ಅಂಥವರ ಕುಟುಂಬ ಸೂಕ್ತ ಪರಿಹಾರ ನೀಡಬೇಕು. ಈ ರೋಗವು ಇನ್ನಷ್ಟು ಅಮೂಲ್ಯ ಜೀವಗಳನ್ನು ಹೊತ್ತೊಯ್ಯುವ ಮೊದಲು ಕೂಡಲೇ ಉಚಿತ ಚಿಕಿತ್ಸೆ ನೀಡಲು  ಆರಂಭಿಸಬೇಕು” ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಒಳ್ಳೆಯ ಕೆಲಸ ಮಾಡುತ್ತಿದ್ದಾರೆ: ಬಿ.ವಿ ಶ್ರೀನಿವಾಸ್‌ ಸೇರಿ ಇತರರಿಗೆ ಕ್ಲೀನ್ ಚಿಟ್ ನೀಡಿದ ದೆಹಲಿ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...