Homeಚಳವಳಿಸೆಪ್ಟಂಬರ್ ಒಳಗೆ ಎಲ್ಲರಿಗೂ ಉಚಿತ ಲಸಿಕೆ ನೀಡಿ: ರಾಜ್ಯಾದ್ಯಂತ ಸಾವಿರಾರು ಪ್ರತಿಭಟನೆಗಳನ್ನು ದಾಖಲಿಸಿದ ಕರವೇ..

ಸೆಪ್ಟಂಬರ್ ಒಳಗೆ ಎಲ್ಲರಿಗೂ ಉಚಿತ ಲಸಿಕೆ ನೀಡಿ: ರಾಜ್ಯಾದ್ಯಂತ ಸಾವಿರಾರು ಪ್ರತಿಭಟನೆಗಳನ್ನು ದಾಖಲಿಸಿದ ಕರವೇ..

ಮಾತು ತಪ್ಪದೆ ಲಸಿಕೆ ಕೊಡಿ, ಇಲ್ಲವೆ ಅಧಿಕಾರ ಬಿಡಿ ಮತ್ತು #vaccinatekarnataka ಎಂಬ ಹ್ಯಾಷ್‌ಟ್ಯಾಗ್‌ಗಳನ್ನು ಬಳಸಿ ಸಾಮಾಜಿಕ ಜಾಲತಾಣದಲ್ಲಿಯೂ ಟ್ರೆಂಡ್ ಮಾಡಲು ಕರವೇ ಕಾರ್ಯಕರ್ತರು ಮುಂದಾಗಿದ್ದಾರೆ.

- Advertisement -
- Advertisement -

ಕೋವಿಡ್ ಮೂರನೇ ಅಲೆ ಅಕ್ಟೋಬರ್‌ನಲ್ಲಿ ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದು, ಅದಕ್ಕೂ ಮುನ್ನವೇ ಸೆಪ್ಟಂಬರ್ ಅಂತ್ಯದ ಒಳಗೆ ರಾಜ್ಯದ ಪ್ರತಿಯೊಬ್ಬರಿಗೂ ಎರಡು ಡೋಸ್ ಉಚಿತ ಲಸಿಕೆ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ರಾಜ್ಯದ ಸಾವಿರಾರು ಕಡೆ ಪ್ರತಿಭಟನೆ ನಡೆಸಲಾಯಿತು.

ಕೋವಿಡ್ ಲಸಿಕೆ ಪ್ರತಿಯೊಬ್ಬ ನಾಗರಿಕನ ಹಕ್ಕು. ಸರ್ಕಾರ ಅದನ್ನು ಮಾರಾಟಕ್ಕೆ ಇಡಕೂಡದು. ಖಾಸಗಿ ಆಸ್ಪತ್ರೆಗಳ ದುಬಾರಿ ಬೆಲೆಯ ಲಸಿಕೆ ದಂಧೆ ನಿಲ್ಲಿಸಬೇಕು. ಕರ್ನಾಟಕದ ಪ್ರತಿಯೊಬ್ಬರಿಗೂ ಜೂನ್ ತಿಂಗಳ ಅಂತ್ಯದೊಳಗೆ ಮೊದಲನೇ ಡೋಸ್ ಕೋವಿಡ್ ಲಸಿಕೆ ಮತ್ತು ಸೆಪ್ಟೆಂಬರ್ ತಿಂಗಳ ಅಂತ್ಯದೊಳಗೆ ಎರಡನೇ ಡೋಸ್ ಉಚಿತವಾಗಿ ನೀಡಬೇಕು. ಚುನಾವಣಾ ಬೂತ್ ಗಳು, ಪೊಲೀಯೋ ವ್ಯಾಕ್ಸಿನ್ ಬೂತ್ ರಚನೆ ಮಾಡುವ ಹಾಗೆ ನಾಗರಿಕರು ನಡೆದುಹೋಗುವಷ್ಟು ಹತ್ತಿರದಲ್ಲೇ ಲಸಿಕೆ ಬೂತ್ ಸ್ಥಾಪಿಸಿ, ಜನರನ್ನು ಕಾಯಿಸದೆ, ಸತಾಯಿಸದೆ ಲಸಿಕೆಗಳನ್ನು ನೀಡಬೇಕು ಎಂದು ಆಗ್ರಹಿಸಲಾಯಿತು.

ಕರ್ನಾಟಕದಲ್ಲಿ ಹಣ ತೆತ್ತರೂ ಸಿಗದ ಲಸಿಕೆ, ಗುಜರಾತಿನಲ್ಲಿ ಉಚಿತವಾಗಿ ಸಿಗುತ್ತಿರುವುದಾದರೂ ಹೇಗೆ? ಇನ್ನೆಷ್ಟು ಜೀವಗಳು ಬಲಿಯಾಗಬೇಕು? ಇನ್ನೆಷ್ಟು ಶ್ಮಶಾನಗಳು ನಿರ್ಮಾಣವಾಗಬೇಕು? ಬೇಗ ಲಸಿಕೆ ಕೊಡಿ, ನಾಡಜನರ ಪ್ರಾಣ ಕಾಪಾಡಿ ಎಂಬ ಭಿತ್ತಿಫಲಕಗಳನ್ನು ಹಿಡಿದು ಕರವೇ ಕಾರ್ಯಕರ್ತರು ಮತ್ತು ಜನಸಾಮಾನ್ಯರು ಕೋವಿಡ್‌ ಮಾರ್ಗಸೂಚಿಗಳನ್ನು ಪಾಲಿಸುತ್ತಲೇ ತಮ್ಮ ತಮ್ಮ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಉಚಿತ ಲಸಿಕೆ ಕೊಡಿ, ಇಲ್ಲವೇ ಅಧಿಕಾರ ಬಿಡಿ ಎಂಬ ಹೆಸರಿನಲ್ಲಿ ಇಂದು ಬೆಳಿಗ್ಗೆ 9.10 ಗಂಟೆಗೆ ಏಕಕಾಲದಲ್ಲಿ ಸಾವಿರ ಕಡೆ ಪ್ರತಿಭಟನೆ ನಡೆಸಲು ಕರೆ ನೀಡಲಾಗಿತ್ತು. ಆದರೆ ಬೆಳಿಗ್ಗೆ 6 ಗಂಟೆಯಿಂದಲೇ ಪ್ರತಿಭಟನೆಗಳು ಆರಂಭವಾಗಿವೆ. ಜಗಳೂರು ತಾಲ್ಲೂಕು ಬಸವನಕೋಟೆ ಗ್ರಾಮವೊಂದರಲ್ಲೇ 60 ಪ್ರತಿಭಟನೆಗಳು ನಡೆದಿವೆ. ನಾವು ಆರಂಭದಲ್ಲಿ ಒಂದು ಸಾವಿರ ಪ್ರತಿಭಟನೆಗಳ ಗುರಿಯಿಟ್ಟುಕೊಂಡಿದ್ದೆವು. ಆದರೆ ಪ್ರತಿಭಟನೆಗಳ ಪ್ರವಾಹವೇ ಹರಿದುಬರುತ್ತಿದೆ. ಕೆಲವೊಂದು ಜಿಲ್ಲೆಗಳು ಏಕಾಂಗಿಯಾಗಿಯೇ ಸಾವಿರ ಪ್ರತಿಭಟನೆಗಳನ್ನು ದಾಟುತ್ತಿವೆ ಎಂದು ಕರವೇ ಸಾಮಾಜಿಕ ಜಾಲತಾಣದ ಮುಖ್ಯಸ್ಥ ದಿನೇಶ್ ಕುಮಾರ್ ಎಸ್‌ಸಿ ತಿಳಿಸಿದ್ದಾರೆ.

ಮಾತು ತಪ್ಪದೆ ಲಸಿಕೆ ಕೊಡಿ, ಇಲ್ಲವೆ ಅಧಿಕಾರ ಬಿಡಿ ಮತ್ತು #vaccinatekarnataka ಎಂಬ ಹ್ಯಾಷ್‌ಟ್ಯಾಗ್‌ಗಳನ್ನು ಬಳಸಿ ಸಾಮಾಜಿಕ ಜಾಲತಾಣದಲ್ಲಿಯೂ ಟ್ರೆಂಡ್ ಮಾಡಲು ಕರವೇ ಕಾರ್ಯಕರ್ತರು ಮುಂದಾಗಿದ್ದಾರೆ. ಇಂದಿನ ಪ್ರತಿಭಟನೆಯ ಕೆಲ ಚಿತ್ರಗಳು ಈ ಕೆಳಗಿನಂತಿವೆ.


ಇದನ್ನೂ ಓದಿ; ಪ್ರಧಾನಿ ಭಾಷಣ ಪೂರ್ಣ ಪೊಳ್ಳು- ವೈರಲ್ ಆದ ಶಿವಸುಂದರ್ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...