Homeಮುಖಪುಟಕೇರಳದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ: ಸಿಎಂ ಪಿಣರಾಯಿ ವಿಜಯನ್ ಘೋಷಣೆ

ಕೇರಳದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ: ಸಿಎಂ ಪಿಣರಾಯಿ ವಿಜಯನ್ ಘೋಷಣೆ

- Advertisement -
- Advertisement -

ಕೇರಳದ ಜನರಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬುಧವಾರ ಸಂಜೆ ತಿರುವನಂತಪುರಂನಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಮಧ್ಯಪ್ರದೇಶ ಮತ್ತು ಬಿಹಾರ ಸರ್ಕಾರಗಳು ಕೂಡ ಜನರಿಗೆ ಉಚಿತವಾಗಿ ಲಸಿಕೆ ನೀಡುವುದಾಗಿ ಈ ಮೊದಲು ಘೋಷಿಸಿವೆ.

ಬುಧವಾರ ಮುಂಜಾನೆ ಪ್ರಧಾನಿಗೆ ಪತ್ರ ಬರೆದಿದ್ದ ಪಿಣರಾಯಿ ವಿಜಯನ್, ‘ಲಸಿಕೆಗಳು ಸಾರ್ವಜನಿಕರ ಸ್ವತ್ತು. ಅವನ್ನು ಉಚಿತವಾಗಿ ಒದಗಿಸಿ’ ಎಂದು ಆಗ್ರಹಿಸಿದ್ದರು. ಸಂಜೆವೆರೆಗೆ ಪ್ರಧಾನಿ ಅಥವಾ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ಬರದೇ ಇದ್ದಾಗ, ಕೇರಳ ಸರ್ಕಾರವೇ ಉಚಿತ ಲಸಿಕೆ ನೀಡುವ ನಿರ್ಧಾರ ಮಾಡಿತು.

“ಇದು (ಕೋವಿಡ್ ಲಸಿಕೆ) ಒಂದು ಪ್ರಮುಖ ವಿಷಯವಾಗಿದೆ. ಇದು ಬಹುಸಂಖ್ಯಾತ ಜನರು ಈಗ ಯೋಚಿಸುತ್ತಿರುವ ಒಂದು ವಿಷಯವಾಗಿದ್ದು ಇದರಲ್ಲಿ ಯಾವುದೇ ಸಂದೇಹವಿಲ್ಲ, ಕೇರಳದ ಜನರಿಗೆ ಲಸಿಕೆ ಲಭ್ಯತೆಯ ವ್ಯಾಪ್ತಿಯು ಒಂದು ವಿಷಯವಾಗಿದೆ. ಅದನ್ನು ಪರಿಶೀಲನೆ ಮಾಡಬೇಕಾಗಿದೆ. ಆದರೆ ಲಭ್ಯವಿರುವ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು. ಅದಕ್ಕಾಗಿ ಯಾರಿಂದಲೂ ಹಣವನ್ನು ತೆಗೆದುಕೊಳ್ಳುವ ಉದ್ದೇಶವನ್ನು ಸರ್ಕಾರ ಹೊಂದಿಲ್ಲ. ಉಚಿತ ವಿತರಣೆಗೆ ನಾವು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ “ಎಂದು ವಿಜಯನ್ ಸುದ್ದಿಗಾರರಿಗೆ ತಿಳಿಸಿದರು.

“ಸತ್ಯವೆಂದರೆ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ, ಇದು ಸಮಾಧಾನಕರ ಸಂಗತಿಯಾಗಿದೆ. ಈಗಾಗಲೇ ಎರಡು ಹಂತ ಮುಗಿಸಿರುವ ಸ್ಥಳೀಯ ಸಂಸ್ಥೆಯ ಚುನಾವಣೆಗಳು ಪ್ರಕರಣಗಳು ಹೆಚ್ಚಾಗಲು ಕಾರಣವಾಗುತ್ತವೆಯೇ ಎಂದು ನೋಡಬೇಕಾಗಿದೆ. ಮುಂದಿನ ದಿನಗಳಲ್ಲಿ ಮಾತ್ರ ಇದು ತಿಳಿಯುತ್ತದೆ” ಎಂದು ವಿಜಯನ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ವಿಶ್ವದ ಅತಿ ದೊಡ್ಡ ಲಸಿಕೆ ತಯಾರಕರಾದ ಸೀರಮ್ ಇನ್‌ಸ್ಟಿಟ್ಯೂಟ್ ಅಸ್ಟ್ರಾಜೆನೆಕಾದ ಕೋವಿಶೀಲ್ಡ್ ಶಾಟ್ ಅನ್ನು ಬೃಹತ್ ಪ್ರಮಾಣದಲ್ಲಿ ಉತ್ಪಾದಿಸುತ್ತಿದೆ ಮತ್ತು ಸಂಗ್ರಹಿಸುತ್ತಿದೆ. ಇತರ ಭಾರತೀಯ ಬಯೋಟೆಕ್ ಕಂಪನಿಗಳಾದ ಭಾರತ್ ಬಯೋಟೆಕ್ ಮತ್ತು ಝೈಡಸ್ ಕ್ಯಾಡಿಲಾ ತಮ್ಮದೇ ಆದ ಲಸಿಕೆಗಳನ್ನು ಅಭಿವೃದ್ಧಿಪಡಿಸುತ್ತಿವೆ.

ಕೇರಳದಲ್ಲಿ ಇಂದು 5,949 ಹೊಸ ಕರೋನವೈರಸ್ ಪ್ರಕರಣಗಳು ಮತ್ತು 32 ಸಾವುಗಳು ವರದಿಯಾಗಿವೆ. ಕೇರಳದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ ಈಗ 6.64 ಲಕ್ಷ ದಾಟಿದ್ದು, ಇದುವರೆಗೆ 2,600 ಸಾವುಗಳು ಸಂಭವಿಸಿವೆ ಎಂದು ಪಿಟಿಐ ವರದಿ ಮಾಡಿದೆ.


ಇದನ್ನೂ ಓದಿ: ಲಸಿಕೆಯ ಬೆಲೆ ಘೋಷಿಸಿದ ಸೀರಮ್‌-ಕೇಂದ್ರಕ್ಕಿಂತ ರಾಜ್ಯಕ್ಕೆ ಹೆಚ್ಚು ಬೆಲೆ ನಿಗದಿ; ಕಾಂಗ್ರೆಸ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...