Homeಮುಖಪುಟಉಚಿತ ಸೇವೆಗಳು: ಬಿಜೆಪಿ ಮತ್ತು ಅಮಿತ್‌ ಶಾರನ್ನು ನಯವಾಗಿ ಹಿಮ್ಮೆಟ್ಟಿಸಿದ ಅರವಿಂದ್‌ ಕೇಜ್ರಿವಾಲ್‌

ಉಚಿತ ಸೇವೆಗಳು: ಬಿಜೆಪಿ ಮತ್ತು ಅಮಿತ್‌ ಶಾರನ್ನು ನಯವಾಗಿ ಹಿಮ್ಮೆಟ್ಟಿಸಿದ ಅರವಿಂದ್‌ ಕೇಜ್ರಿವಾಲ್‌

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜ್ಯದ ಜನರಿಗೆ ಉಚಿತ ಸವಲತ್ತುಗಳನ್ನು ನೀಡುವ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

“ಉಚಿತವಾಗಿ ಸೀಮಿತ ಪ್ರಮಾಣದಲ್ಲಿ ಸಬ್ಸಿಡಿ ನೀಡುವುದು ಆರ್ಥಿಕತೆಗೆ ಒಳ್ಳೆಯದು. ಇದು ಬಡವರಿಗೆ ಹೆಚ್ಚಿನ ಹಣವನ್ನು ಲಭ್ಯವಾಗುವಂತೆ ಮಾಡುತ್ತದೆ. ಆದ್ದರಿಂದ ಬೇಡಿಕೆಯನ್ನು ಹೆಚ್ಚಿಸುತ್ತದೆ. ಆದರೂ, ಹೆಚ್ಚುವರಿ ತೆರಿಗೆಗಳನ್ನು ವಿಧಿಸಬೇಕಾಗಿಲ್ಲ ಮತ್ತು ಇದು ಬಜೆಟ್ ಕೊರತೆಗೆ ಕಾರಣವಾಗುವುದಿಲ್ಲ. ಬಜೆಟ್‌ ಮಿತಿಗಳಲ್ಲಿಯೇ ಇದನ್ನು ಮಾಡಲಾಗುವುದು” ಎಂದು ಕೇಜ್ರಿವಾಲ್ ಶುಕ್ರವಾರ ಬೆಳಿಗ್ಗೆ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

ಕೇಜ್ರಿವಾಲ್ ಸರ್ಕಾರದ ಉಚಿತ ನೀರು ಮತ್ತು ವಿದ್ಯುತ್ ಸವಲತ್ತುಗಳಿಂದ ಮತದಾರರು ಹತೋಟಿಯಲ್ಲಿಲ್ಲ ಎಂದು ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ ಹೇಳಿದ ನಂತರ ಕೇಜ್ರಿವಾಲ್‌ ಮೇಲಿನ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ. ಎಎಪಿ ಸರ್ಕಾರದ “ಉಚಿತ” ಗಳ ಬದಲು “ಸುರಕ್ಷತೆ ಮತ್ತು ಅಭಿವೃದ್ಧಿ”ಯ ಮೇಲೆ ಈ ಚುನಾವಣೆ ನಡೆಯಲಿದೆ ಎಂದು ದೆಹಲಿ ಬಿಜೆಪಿ ಮುಖ್ಯಸ್ಥರು ಹೇಳಿದ್ದಾರೆ.

“ಉಚಿತ ನೀರು ಮತ್ತು ವಿದ್ಯುತ್ ಸರಬರಾಜು ಕೇಜ್ರಿವಾಲ್ ಸರ್ಕಾರದ ಭ್ರಮೆ. ಫಲಾನುಭವಿಗಳ ಸಂಖ್ಯೆ ಮತ್ತು ಗುಣಮಟ್ಟವನ್ನು ಗಮನಿಸಿದರೆ ದೆಹಲಿಯಲ್ಲಿ ನೀರು ಸರಬರಾಜು ಉಚಿತವಾಗಿಲ್ಲ. ಯಾವುದೇ ಯೋಜನೆ ಇಲ್ಲ, ಉಚಿತ ವಿದ್ಯುತ್ ಸರಬರಾಜಿಗೆ ಯಾವುದೇ ಅಧಿಸೂಚನೆ ಇಲ್ಲ ಮತ್ತು ಮತದಾರರನ್ನು ಆಮಿಷವೊಡ್ಡುವ ಆತುರದಲ್ಲಿ ಮತದಾನಕ್ಕೆ ಮೊದಲು ಇದನ್ನು ಉಚಿತ ಎಂದು ಘೋಷಿಸಲಾಯಿತು” ಎಂದು ಬಿಜೆಪಿ ಆರೋಪಿಸಿದೆ.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿಯ ಮತ್ತೊಂದು ಎದುರಾಳಿಯಾದ ಕಾಂಗ್ರೆಸ್ ಕೂಡ “ದೆಹಲಿ ಮುಖ್ಯಮಂತ್ರಿಯು ಉಚಿತ ಸೇವೆಗಳನ್ನು ನೀಡುವ ಬದಲು ಉದ್ಯೋಗ ಮತ್ತು ಮನೆಗಳನ್ನು ಒದಗಿಸುವತ್ತ ಗಮನ ಹರಿಸಬೇಕು” ಎಂದು ಹೇಳಿದೆ.

“ಅರವಿಂದ್ ಕೇಜ್ರಿವಾಲ್ ಅವರು ಉಚಿತ ಎಂದು ಹೇಳುತ್ತಾರೆ. ಆದರೆ, ನೀವು ಇದರ ಬಗ್ಗೆ ಜನರನ್ನು ಕೇಳಿದರೆ, ಅವರು ಉಚಿತಗಳನ್ನು ಬಯಸುವುದಿಲ್ಲ. ಅವರು ಮನೆಗಳು, ಉದ್ಯೋಗಗಳು ಮತ್ತು ಹಣದುಬ್ಬರದಿಂದ ಪರಿಹಾರವನ್ನು ಬಯಸುತ್ತಾರೆ. ಸರ್ಕಾರ ಈ ಮೂರು ವಿಷಯಗಳನ್ನು ಒದಗಿಸಬಹುದಾದರೆ, ಜನರು ತಮ್ಮ ವಿದ್ಯುತ್ ಮತ್ತು ನೀರಿನ ಬಿಲ್‌ಗಳನ್ನು ನೋಡಿಕೊಳ್ಳುತ್ತಾರೆ ಎಂದು ಅಲ್ಕಾ ಲಾಂಬಾ ಹೇಳಿದ್ದಾರೆ.

ಎಎಪಿ ಸರ್ಕಾರವು 2019ರಲ್ಲಿ ಬಾಕಿ ಉಳಿದಿರುವ ಚುನಾವಣಾ ಭರವಸೆಗಳನ್ನು ಈಡೇರಿಸಲು ಪ್ರಯತ್ನಿಸಿತು. ಮಹಿಳೆಯರಿಗೆ ಉಚಿತ ಬಸ್ ಸವಾರಿ, 200 ಘಟಕಗಳವರೆಗೆ ವಿದ್ಯುತ್ ಉಚಿತ, ಉಚಿತ ವೈಫೈ, ಹಿರಿಯ ನಾಗರಿಕರಿಗೆ ಉಚಿತ ತೀರ್ಥಯಾತ್ರೆ, ಶಾಲಾ ಅಭಿವೃದ್ಧಿ ಶುಲ್ಕ ಮನ್ನಾ ರೀತಿಯ ಹಲವು ಭರವಸೆಗಳನ್ನು ಈಡೇರಿಸಿದೆ ಎಂದು ಹೇಳಿಕೊಂಡಿದೆ.

ಅಲ್ಲದೇ ದೆಹಲಿ ಸರ್ಕಾರದ ಕನಸಿನ ಕೂಸಾದ ಸರ್ಕಾರಿ ಶಾಲೆಗಳು ಮತ್ತು ಮೊಹಲ್ಲಾ ಕ್ಲಿನಿಕ್‌ಗಳು ವಿಶ್ವಮಟ್ಟದಲ್ಲಿ ಪ್ರಶಂಸೆಗೆ ಒಳಗಾಗಿವೆ. ಇಷ್ಟೆಲ್ಲವನ್ನು ತೆರಿಗೆಗಳನ್ನು ಹೆಚ್ಚಿಸದೆ ಇದನ್ನು ಮಾಡಿದೆ ಮತ್ತು ಇನ್ನೂ ಬಜೆಟ್ ಹೆಚ್ಚುವರಿವನ್ನು ಉಳಿಸಿಕೊಂಡಿದೆ ಎಂದು ಕೇಜ್ರಿವಾಲ್ ಈ ಹಿಂದೆ ಸಮರ್ಥಿಸಿಕೊಂಡಿದ್ದರು.

ಕಳೆದ ಐದು ವರ್ಷಗಳಲ್ಲಿ ನಾನು ಭ್ರಷ್ಟಾಚಾರವನ್ನು ಕೊನೆಗೊಳಿಸುವ ಮೂಲಕ ಹಣವನ್ನು ಉಳಿಸಿದ್ದನ್ನು, ನಿಮಗೆ ಉಚಿತ ರೂಪದಲ್ಲಿ ಹಿಂದಿರುಗಿಸುತ್ತಿದ್ದೇನೆ. ಇದರಲ್ಲಿ ತಪ್ಪೇನು? ಎಂದು ಕೇಜ್ರಿವಾಲ್ ಕಳೆದ ತಿಂಗಳು ನಡೆದ ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆಯಲ್ಲಿ ಹೇಳಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಬೆಳಿಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಕೇಜ್ರಿವಾಲ್‌ ಜೊತೆ ಘರ್ಷಣೆ ನಡೆಸಿದರು. ಗುರುವಾರ ರಾತ್ರಿ ಪೋಸ್ಟ್ ಮಾಡಿದ ಟ್ವೀಟ್‌ನಲ್ಲಿ ಗೃಹ ಸಚಿವರು ದೆಹಲಿ ’ಸರ್ಕಾರ ನೀಡಿರುವ ಉಚಿತ ವೈ-ಫೈ ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ, ನನ್ನ ಫೋನ್ ಬ್ಯಾಟರಿ ಖಾಲಿಯಾಯಿತು’ ಎಂದು ಟೀಕಿಸಿದ್ದರು.

ಕೆಲವೇ ಗಂಟೆಗಳ ನಂತರ “ಸರ್ … ನಾವು ಉಚಿತ ವೈ-ಫೈ ಜೊತೆಗೆ ಉಚಿತ ಬ್ಯಾಟರಿ ಚಾರ್ಜಿಂಗ್ ಅನ್ನು ಸಹ ವ್ಯವಸ್ಥೆ ಮಾಡಿದ್ದೇವೆ” ಎಂದು ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. ಅವರ ಸರ್ಕಾರವು ದೆಹಲಿ ನಾಗರಿಕರಿಗೆ 200 ಘಟಕಗಳವರೆಗೆ ಉಚಿತ ವಿದ್ಯುತ್ ನೀಡಿದ್ದರಿಂದ, ಗೃಹ ಸಚಿವರು ವಿದ್ಯುತ್‌ಗೆ ಹಣ ಪಾವತಿಸಬೇಕಾಗಿಲ್ಲ ಎಂದು ಅವರು ಸೂಚಿಸಿದ್ದರು.

ಕಳೆದ ಚುನಾವಣೆಯ ಪ್ರಮುಖ ಭರವಸೆಯಾದ 1,041 ಸರ್ಕಾರಿ ಶಾಲೆಗಳಲ್ಲಿ 1.2 ಲಕ್ಷ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದರ ಬಗ್ಗೆ ನಂತರ ಚರ್ಚೆ ನಡೆಯಿತು. ದೆಹಲಿಯಲ್ಲಿ ಎಎಪಿ ಕೆಲವೇ ಕ್ಯಾಮೆರಾಗಳನ್ನು ಸ್ಥಾಪಿಸುವ ಮೂಲಕ ಸಾರ್ವಜನಿಕರನ್ನು ಮರುಳು ಮಾಡುತ್ತಿದೆ ಎಂದು ಅಮಿತ್‌ ಶಾ ಹೇಳಿದರು.

ಆಗ ಕೇಜ್ರಿವಾಲ್‌ “ಕೆಲವು ಸಿಸಿಟಿವಿ ಕ್ಯಾಮೆರಾಗಳನ್ನು ಗಮನಿಸಿದ್ದಕ್ಕಾಗಿ ಶಾ ಮತ್ತು ಬಿಜೆಪಿಗೆ ಧನ್ಯವಾದ” ಎಂದು ಹೇಳಿದ್ದಾರೆ.  ನೀವು ಕೆಲವು ಸಿಸಿಟಿವಿ ಕ್ಯಾಮೆರಾಗಳನ್ನು ನೋಡಿದ್ದಕ್ಕೆ ನನಗೆ ಖುಷಿಯಾಗಿದೆ. ಕೆಲವು ದಿನಗಳ ಹಿಂದೆ ನೀವು ಒಂದೂ ಕ್ಯಾಮೆರಾವನ್ನು ಸ್ಥಾಪಿಸಬೇಡಿ ಎಂದು ಹೇಳಿದ್ದೀರಿ. ಈಗ ಶಾಲೆಗಳನ್ನು ಸಹ ನಿಮಗೆ ತೋರಿಸೋಣವೇ?” “ದೆಹಲಿಯ ಜನರು ರಾಜಕೀಯವನ್ನು ಬದಲಾಯಿಸಿದ್ದಕ್ಕೆ ನನಗೆ ಸಂತೋಷವಾಗಿದೆ … ಆದ್ದರಿಂದ ಸಿಸಿಟಿವಿ ಮತ್ತು ಶಾಲೆಗಳ ಹೆಸರನಲ್ಲಿ ಬಿಜೆಪಿ ಮತ ಕೇಳಬೇಕಾಗಿದೆ” ಎಂದು ಹಿಮ್ಮೆಟ್ಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...