Homeಕರ್ನಾಟಕಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು : ಇದು ಕನ್ನಡಿಗರ ಕೂಗು

ಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು : ಇದು ಕನ್ನಡಿಗರ ಕೂಗು

- Advertisement -
- Advertisement -

ಇಂದು ಭಾರತವು ಸ್ವಾತಂತ್ರ್ಯ ದಿನ ಆಚರಿಸುತ್ತಿರುವ ಸಂದರ್ಭದಲ್ಲಿ”ನಮಗೆ ಸ್ವಾತಂತ್ರ್ಯವೇನೋ ಸಿಕ್ಕಿತ್ತು, ಆದರೆ ನಮ್ಮ ಸ್ವಾಯುತ್ತತೆ ಕಳೆದುಹೋಯಿತು” ಎಂದು ಕನ್ನಡಿಗರು ಕೂಗು ಹಾಕಿದ್ದಾರೆ. ಸ್ಥಳೀಯ ಭಾಷೆಗಳಲ್ಲಿ ಮಾಹಿತಿ ಕೊಡದ, ಕಾಯ್ದೆ ಕಾನೂನುಗಳನ್ನು ಸ್ಥಳೀಯ ಭಾಷೆಯಲ್ಲಿ ಒದಗಿಸದ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಕನ್ನಡಿಗರು, ಹಿಂದಿ ಹೇರಿಕೆಯ ವಿರುದ್ಧ ಕಿಡಿಕಾರಿದ್ದಾರೆ.

ಈ ಹಿನ್ನೆಲೆಯಲ್ಲಿ ನಿನ್ನೆಯಿಂದಲೇ ಆರಂಭವಾಗಿರುವ ಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು ಅಭಿಯಾನವು ಇಂದು ಸ್ವಾತಂತ್ರ್ಯ ದಿನಾಚರಣೆಯಂದು ಬಿರುಸು ಪಡೆದುಕೊಂಡಿದೆ. ನೂರಾರು ಕನ್ನಡಿಗರು ಕೇಂದ್ರ ಸರ್ಕಾರದ ಸ್ಥಳೀಯ ಭಾಷೆಗಳ ನಿರ್ಲಕ್ಷ್ಯವನ್ನು ಎತ್ತಿತೋರಿಸಿದ್ದಾರೆ.

ಟ್ವಿಟ್ಟರ್‌ನಲ್ಲಿ ಕುವೆಂಪು ಮತ್ತು ಬೇಂದ್ರೆಯವರ ಹೇಳಿಕೆಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯ ವಿರುದ್ಧ ದನೆಯೆತ್ತಲಾಗಿದೆ.

ಭಾರತ ಸರಕಾರ ಕನ್ನಡದಲ್ಲಿ ಕಾನೂನು ರೂಪಿಸುವ/ತಿದ್ದುಪಡಿ ಮಾಡುವ ಅಂಶವನ್ನು ಕನ್ನಡದಲ್ಲಿ ನೀಡದಿರಲು ಸುಪ್ರಿಂ ಕೋರ್ಟಿಗೆ ಹೋಗಿದೆ. ಇದರಿಂದ ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕಾದ ಅಂಶವಿಷ್ಟೆ – ಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು ಎಂದು ಒಕ್ಕೂಟ ವ್ಯವಸ್ಥೆಯ ಬಲವರ್ಧನೆಯ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಅರುಣ್ ಜಾವಗಲ್ ಟ್ವೀಟ್ ಮಾಡಿದ್ದಾರೆ.

ಕನ್ನಡ ನಾಡಿನಲ್ಲಿರುವ ಕೇಂದ್ರ ಸರಕಾರದ ಇಲಾಖೆಗಳಲ್ಲಿ ನಮ್ಮ ಮಂದಿ ಮುಂಬಡ್ತಿ ಪಡೆಯಲು, ದಿನಕ್ಕೊಂದು ಹಿಂದಿ ಪದ ಕಲಿಯಬೇಕು, ಹಿಂದಿಯಲ್ಲಿ ಸಹಿ ಹಾಕುವುದನ್ನು ಕಲಿಯಬೇಕು, ಹಿಂದಿ ಸಪ್ತಾಹದಲ್ಲಿ ಭಾಗವಹಿಸಬೇಕು. ಇದು ವೈವಿದ್ಯತೆಯನ್ನು ಗೌರವಿಸುವ ಒಕ್ಕೂಟವೇ? ಇದು ನಮಗೆ ಸ್ವಾತಂತ್ರದಿಂದ ಸಿಕ್ಕ ಉಡುಗೊರೆಯೇ? ಎಂದು ಮಲ್ಲಿಕಾರ್ಜುನ್ ಎಂಬುವವರು ಪ್ರಶ್ನಿಸಿದ್ದಾರೆ.

ನಮ್ಮೂರಿನ ವಿಮಾನ ನಿಲ್ದಾಣಗಳಿಗೆ ನಮಗೆ ಬೇಕಾದ ಹೆಸರಿಡುವ ಸ್ವಾತಂತ್ರ ನಮಗಿಲ್ಲ. ಕನ್ನಡಿಗರನ್ನು ದೆಹಲಿಯಿಂದ ಹಿಂದಿ ಮಂದಿ ಆಳೋದನ್ನ ಸ್ವಾತಂತ್ರ ಎನ್ನಲಾದೀತೆ ? ಕನ್ನಡಿಗರೇ, ರಾಜಕೀಯ ಸ್ವಾಯತ್ತತೆ ಇಲ್ಲದ ಸ್ವಾತಂತ್ರಕ್ಕೆ ಯಾವುದೇ ಅರ್ಥವಿಲ್ಲ ಎಂದು ಎಂ ರಾಮಚಂದ್ರರವರು ಅಭಿಪ್ರಾಯಪಟ್ಟಿದ್ದಾರೆ.

ಜಿಎಸ್ಟಿ ಒಪ್ಪಿಕೊಂಡ ದಿನವೇ ನಮ್ಮ ಹಣಕಾಸಿನ ಸ್ವಾತಂತ್ರ್ಯವನ್ನು ಕಳೆದುಕೊಂಡೆವು. ನಮ್ಮ ತೆರಿಗೆ ಹಣವನ್ನ ಡೆಲ್ಲಿಯವರಿಗೆ ಒಪ್ಪಿಸದೆ ನಮ್ಮವರ ಏಳಿಗೆಗಾಗಿ, ನಾಡಿನ ಏಳಿಗೆಗಾಗಿ ಬಳಸುವ ದಿನ ಬಂದಾಗಲೆ, ಈ ಗುಲಾಮಗಿರಿಯ ಸಂಕೋಲೆಗಳಿಂದ ಬಿಡುಗಡೆ ಎಂದು ಶೃತಿ ಎಚ್.ಎಂ ತಿಳಿಸಿದ್ದಾರೆ.


ಇದನ್ನೂ ಓದಿ: ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, ‘ಬಹುಭಾಷೆಗಳಲ್ಲಿ ದ್ವಿಭಾಷೆ’: ಕುವೆಂಪು


ಪಠ್ಯದಲ್ಲಿ ಭಾಷಾ ಆಯ್ಕೆಯ ಸ್ವತಂತ್ರ ನಮಗೆ ಸಿಕ್ಕಿದೆಯೆ? ನಮ್ಮ ನೆಲದಲ್ಲಿ ನಮ್ಮ ನುಡಿಯಲ್ಲಿ ಸೇವೆ ದೊರೆಯುವ ಸ್ವತಂತ್ರ ಸಿಕ್ಕಿದೆಯೆ? ಅನಾವಶ್ಯಕ ಹಿಂದಿ ಹೇರಿಕೆಯಿಂದ ಸ್ವತಂತ್ರ ಸಿಕ್ಕಿದೆಯೆ? ಹಿಂದಿಗಿರುವ ಪ್ರಾಶಸ್ತ್ಯ ಕನ್ನಡಕ್ಕೆ ಸಿಕ್ಕಿದೆಯೆ? ಎಂದು ಚೈತ್ರರವರು ಅಭಿಪ್ರಾಯಪಟ್ಟಿದ್ದಾರೆ.

ಭಾರತ ಸರ್ಕಾರ ಒಕ್ಕೂಟ ಧರ್ಮಪಾಲಿಸುತ್ತಿಲ್ಲ. ಹಿಂದಿವಾಲಾಗಳಿಗೆ ಕೇಳದೆಯೇ ಎಲ್ಲಾ ಸೇವೆಗಳು ಅವರ ಭಾಷೆಯಲ್ಲಿ ಸಿಗುತ್ತೆ. ಹಿಂದಿಯೇತರರು ಬೇಡಿಕೊಂಡರು ಅವರ ನುಡಿಯಲ್ಲಿ ಸೇವೆ ಕೊಡಲ್ಲ. ಏಕೆ ಈ ತಾರತಮ್ಯ? ಭಾರತವೆಂದರೆ ಹಿಂದಿಯೆಂದು ಪ್ರತಿಹಂತದಲ್ಲೂ ಬಿಂಬಿಸಲು ಹೊರಟಿದೆ. ಇದು ಒಕ್ಕೂಟಕ್ಕೆ ಮಾಡುವ ದ್ರೋಹವೇ ಸರಿ ಎಂದು ಕನ್ನಡಿಗ ಸಾಗರ್ ರವಿನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಮ್ಮ ಸ್ವಾತಂತ್ರ್ಯ ನಮಗೆ ಕೊಡಿ.. ಸ್ವತಂತ್ರರಾಗಿದ್ದವರನ್ನ ಒಕ್ಕೂಟದಲ್ಲಿ ಕಟ್ಟಿಹಾಕಿ, ಬಂಧಿಮಾಡಿ, ಹಿಂದಿ ಹೇರಿಕೆ ಮಾಡಿ, ಎಲ್ಲವನ್ನ ಕಿತ್ತುಕೊಂಡು ಉತ್ತರದವರನ್ನು ಮಾತ್ರ ಬೆಳೆಸಿದರು. ಕನ್ನಡದೇಶದ ಜನರು ಸರ್ವಸ್ವತಂತ್ರರು. ನಮ್ಮ ಹಕ್ಕನ್ನ ನಮಗೆ ಕೊಡಿ ಎಂದು ಅಶೋಕ್ ಪೂಜಾರಿ ಮಡಿಕೇರಿ ಎಂಬುವವರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...