Homeಕರ್ನಾಟಕಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು : ಇದು ಕನ್ನಡಿಗರ ಕೂಗು

ಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು : ಇದು ಕನ್ನಡಿಗರ ಕೂಗು

- Advertisement -
- Advertisement -

ಇಂದು ಭಾರತವು ಸ್ವಾತಂತ್ರ್ಯ ದಿನ ಆಚರಿಸುತ್ತಿರುವ ಸಂದರ್ಭದಲ್ಲಿ”ನಮಗೆ ಸ್ವಾತಂತ್ರ್ಯವೇನೋ ಸಿಕ್ಕಿತ್ತು, ಆದರೆ ನಮ್ಮ ಸ್ವಾಯುತ್ತತೆ ಕಳೆದುಹೋಯಿತು” ಎಂದು ಕನ್ನಡಿಗರು ಕೂಗು ಹಾಕಿದ್ದಾರೆ. ಸ್ಥಳೀಯ ಭಾಷೆಗಳಲ್ಲಿ ಮಾಹಿತಿ ಕೊಡದ, ಕಾಯ್ದೆ ಕಾನೂನುಗಳನ್ನು ಸ್ಥಳೀಯ ಭಾಷೆಯಲ್ಲಿ ಒದಗಿಸದ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಕನ್ನಡಿಗರು, ಹಿಂದಿ ಹೇರಿಕೆಯ ವಿರುದ್ಧ ಕಿಡಿಕಾರಿದ್ದಾರೆ.

ಈ ಹಿನ್ನೆಲೆಯಲ್ಲಿ ನಿನ್ನೆಯಿಂದಲೇ ಆರಂಭವಾಗಿರುವ ಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು ಅಭಿಯಾನವು ಇಂದು ಸ್ವಾತಂತ್ರ್ಯ ದಿನಾಚರಣೆಯಂದು ಬಿರುಸು ಪಡೆದುಕೊಂಡಿದೆ. ನೂರಾರು ಕನ್ನಡಿಗರು ಕೇಂದ್ರ ಸರ್ಕಾರದ ಸ್ಥಳೀಯ ಭಾಷೆಗಳ ನಿರ್ಲಕ್ಷ್ಯವನ್ನು ಎತ್ತಿತೋರಿಸಿದ್ದಾರೆ.

ಟ್ವಿಟ್ಟರ್‌ನಲ್ಲಿ ಕುವೆಂಪು ಮತ್ತು ಬೇಂದ್ರೆಯವರ ಹೇಳಿಕೆಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯ ವಿರುದ್ಧ ದನೆಯೆತ್ತಲಾಗಿದೆ.

ಭಾರತ ಸರಕಾರ ಕನ್ನಡದಲ್ಲಿ ಕಾನೂನು ರೂಪಿಸುವ/ತಿದ್ದುಪಡಿ ಮಾಡುವ ಅಂಶವನ್ನು ಕನ್ನಡದಲ್ಲಿ ನೀಡದಿರಲು ಸುಪ್ರಿಂ ಕೋರ್ಟಿಗೆ ಹೋಗಿದೆ. ಇದರಿಂದ ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕಾದ ಅಂಶವಿಷ್ಟೆ – ಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು ಎಂದು ಒಕ್ಕೂಟ ವ್ಯವಸ್ಥೆಯ ಬಲವರ್ಧನೆಯ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಅರುಣ್ ಜಾವಗಲ್ ಟ್ವೀಟ್ ಮಾಡಿದ್ದಾರೆ.

ಕನ್ನಡ ನಾಡಿನಲ್ಲಿರುವ ಕೇಂದ್ರ ಸರಕಾರದ ಇಲಾಖೆಗಳಲ್ಲಿ ನಮ್ಮ ಮಂದಿ ಮುಂಬಡ್ತಿ ಪಡೆಯಲು, ದಿನಕ್ಕೊಂದು ಹಿಂದಿ ಪದ ಕಲಿಯಬೇಕು, ಹಿಂದಿಯಲ್ಲಿ ಸಹಿ ಹಾಕುವುದನ್ನು ಕಲಿಯಬೇಕು, ಹಿಂದಿ ಸಪ್ತಾಹದಲ್ಲಿ ಭಾಗವಹಿಸಬೇಕು. ಇದು ವೈವಿದ್ಯತೆಯನ್ನು ಗೌರವಿಸುವ ಒಕ್ಕೂಟವೇ? ಇದು ನಮಗೆ ಸ್ವಾತಂತ್ರದಿಂದ ಸಿಕ್ಕ ಉಡುಗೊರೆಯೇ? ಎಂದು ಮಲ್ಲಿಕಾರ್ಜುನ್ ಎಂಬುವವರು ಪ್ರಶ್ನಿಸಿದ್ದಾರೆ.

ನಮ್ಮೂರಿನ ವಿಮಾನ ನಿಲ್ದಾಣಗಳಿಗೆ ನಮಗೆ ಬೇಕಾದ ಹೆಸರಿಡುವ ಸ್ವಾತಂತ್ರ ನಮಗಿಲ್ಲ. ಕನ್ನಡಿಗರನ್ನು ದೆಹಲಿಯಿಂದ ಹಿಂದಿ ಮಂದಿ ಆಳೋದನ್ನ ಸ್ವಾತಂತ್ರ ಎನ್ನಲಾದೀತೆ ? ಕನ್ನಡಿಗರೇ, ರಾಜಕೀಯ ಸ್ವಾಯತ್ತತೆ ಇಲ್ಲದ ಸ್ವಾತಂತ್ರಕ್ಕೆ ಯಾವುದೇ ಅರ್ಥವಿಲ್ಲ ಎಂದು ಎಂ ರಾಮಚಂದ್ರರವರು ಅಭಿಪ್ರಾಯಪಟ್ಟಿದ್ದಾರೆ.

ಜಿಎಸ್ಟಿ ಒಪ್ಪಿಕೊಂಡ ದಿನವೇ ನಮ್ಮ ಹಣಕಾಸಿನ ಸ್ವಾತಂತ್ರ್ಯವನ್ನು ಕಳೆದುಕೊಂಡೆವು. ನಮ್ಮ ತೆರಿಗೆ ಹಣವನ್ನ ಡೆಲ್ಲಿಯವರಿಗೆ ಒಪ್ಪಿಸದೆ ನಮ್ಮವರ ಏಳಿಗೆಗಾಗಿ, ನಾಡಿನ ಏಳಿಗೆಗಾಗಿ ಬಳಸುವ ದಿನ ಬಂದಾಗಲೆ, ಈ ಗುಲಾಮಗಿರಿಯ ಸಂಕೋಲೆಗಳಿಂದ ಬಿಡುಗಡೆ ಎಂದು ಶೃತಿ ಎಚ್.ಎಂ ತಿಳಿಸಿದ್ದಾರೆ.


ಇದನ್ನೂ ಓದಿ: ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, ‘ಬಹುಭಾಷೆಗಳಲ್ಲಿ ದ್ವಿಭಾಷೆ’: ಕುವೆಂಪು


ಪಠ್ಯದಲ್ಲಿ ಭಾಷಾ ಆಯ್ಕೆಯ ಸ್ವತಂತ್ರ ನಮಗೆ ಸಿಕ್ಕಿದೆಯೆ? ನಮ್ಮ ನೆಲದಲ್ಲಿ ನಮ್ಮ ನುಡಿಯಲ್ಲಿ ಸೇವೆ ದೊರೆಯುವ ಸ್ವತಂತ್ರ ಸಿಕ್ಕಿದೆಯೆ? ಅನಾವಶ್ಯಕ ಹಿಂದಿ ಹೇರಿಕೆಯಿಂದ ಸ್ವತಂತ್ರ ಸಿಕ್ಕಿದೆಯೆ? ಹಿಂದಿಗಿರುವ ಪ್ರಾಶಸ್ತ್ಯ ಕನ್ನಡಕ್ಕೆ ಸಿಕ್ಕಿದೆಯೆ? ಎಂದು ಚೈತ್ರರವರು ಅಭಿಪ್ರಾಯಪಟ್ಟಿದ್ದಾರೆ.

ಭಾರತ ಸರ್ಕಾರ ಒಕ್ಕೂಟ ಧರ್ಮಪಾಲಿಸುತ್ತಿಲ್ಲ. ಹಿಂದಿವಾಲಾಗಳಿಗೆ ಕೇಳದೆಯೇ ಎಲ್ಲಾ ಸೇವೆಗಳು ಅವರ ಭಾಷೆಯಲ್ಲಿ ಸಿಗುತ್ತೆ. ಹಿಂದಿಯೇತರರು ಬೇಡಿಕೊಂಡರು ಅವರ ನುಡಿಯಲ್ಲಿ ಸೇವೆ ಕೊಡಲ್ಲ. ಏಕೆ ಈ ತಾರತಮ್ಯ? ಭಾರತವೆಂದರೆ ಹಿಂದಿಯೆಂದು ಪ್ರತಿಹಂತದಲ್ಲೂ ಬಿಂಬಿಸಲು ಹೊರಟಿದೆ. ಇದು ಒಕ್ಕೂಟಕ್ಕೆ ಮಾಡುವ ದ್ರೋಹವೇ ಸರಿ ಎಂದು ಕನ್ನಡಿಗ ಸಾಗರ್ ರವಿನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಮ್ಮ ಸ್ವಾತಂತ್ರ್ಯ ನಮಗೆ ಕೊಡಿ.. ಸ್ವತಂತ್ರರಾಗಿದ್ದವರನ್ನ ಒಕ್ಕೂಟದಲ್ಲಿ ಕಟ್ಟಿಹಾಕಿ, ಬಂಧಿಮಾಡಿ, ಹಿಂದಿ ಹೇರಿಕೆ ಮಾಡಿ, ಎಲ್ಲವನ್ನ ಕಿತ್ತುಕೊಂಡು ಉತ್ತರದವರನ್ನು ಮಾತ್ರ ಬೆಳೆಸಿದರು. ಕನ್ನಡದೇಶದ ಜನರು ಸರ್ವಸ್ವತಂತ್ರರು. ನಮ್ಮ ಹಕ್ಕನ್ನ ನಮಗೆ ಕೊಡಿ ಎಂದು ಅಶೋಕ್ ಪೂಜಾರಿ ಮಡಿಕೇರಿ ಎಂಬುವವರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...