Homeಕರ್ನಾಟಕಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು : ಇದು ಕನ್ನಡಿಗರ ಕೂಗು

ಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು : ಇದು ಕನ್ನಡಿಗರ ಕೂಗು

- Advertisement -
- Advertisement -

ಇಂದು ಭಾರತವು ಸ್ವಾತಂತ್ರ್ಯ ದಿನ ಆಚರಿಸುತ್ತಿರುವ ಸಂದರ್ಭದಲ್ಲಿ”ನಮಗೆ ಸ್ವಾತಂತ್ರ್ಯವೇನೋ ಸಿಕ್ಕಿತ್ತು, ಆದರೆ ನಮ್ಮ ಸ್ವಾಯುತ್ತತೆ ಕಳೆದುಹೋಯಿತು” ಎಂದು ಕನ್ನಡಿಗರು ಕೂಗು ಹಾಕಿದ್ದಾರೆ. ಸ್ಥಳೀಯ ಭಾಷೆಗಳಲ್ಲಿ ಮಾಹಿತಿ ಕೊಡದ, ಕಾಯ್ದೆ ಕಾನೂನುಗಳನ್ನು ಸ್ಥಳೀಯ ಭಾಷೆಯಲ್ಲಿ ಒದಗಿಸದ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಕನ್ನಡಿಗರು, ಹಿಂದಿ ಹೇರಿಕೆಯ ವಿರುದ್ಧ ಕಿಡಿಕಾರಿದ್ದಾರೆ.

ಈ ಹಿನ್ನೆಲೆಯಲ್ಲಿ ನಿನ್ನೆಯಿಂದಲೇ ಆರಂಭವಾಗಿರುವ ಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು ಅಭಿಯಾನವು ಇಂದು ಸ್ವಾತಂತ್ರ್ಯ ದಿನಾಚರಣೆಯಂದು ಬಿರುಸು ಪಡೆದುಕೊಂಡಿದೆ. ನೂರಾರು ಕನ್ನಡಿಗರು ಕೇಂದ್ರ ಸರ್ಕಾರದ ಸ್ಥಳೀಯ ಭಾಷೆಗಳ ನಿರ್ಲಕ್ಷ್ಯವನ್ನು ಎತ್ತಿತೋರಿಸಿದ್ದಾರೆ.

ಟ್ವಿಟ್ಟರ್‌ನಲ್ಲಿ ಕುವೆಂಪು ಮತ್ತು ಬೇಂದ್ರೆಯವರ ಹೇಳಿಕೆಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯ ವಿರುದ್ಧ ದನೆಯೆತ್ತಲಾಗಿದೆ.

ಭಾರತ ಸರಕಾರ ಕನ್ನಡದಲ್ಲಿ ಕಾನೂನು ರೂಪಿಸುವ/ತಿದ್ದುಪಡಿ ಮಾಡುವ ಅಂಶವನ್ನು ಕನ್ನಡದಲ್ಲಿ ನೀಡದಿರಲು ಸುಪ್ರಿಂ ಕೋರ್ಟಿಗೆ ಹೋಗಿದೆ. ಇದರಿಂದ ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕಾದ ಅಂಶವಿಷ್ಟೆ – ಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು ಎಂದು ಒಕ್ಕೂಟ ವ್ಯವಸ್ಥೆಯ ಬಲವರ್ಧನೆಯ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಅರುಣ್ ಜಾವಗಲ್ ಟ್ವೀಟ್ ಮಾಡಿದ್ದಾರೆ.

ಕನ್ನಡ ನಾಡಿನಲ್ಲಿರುವ ಕೇಂದ್ರ ಸರಕಾರದ ಇಲಾಖೆಗಳಲ್ಲಿ ನಮ್ಮ ಮಂದಿ ಮುಂಬಡ್ತಿ ಪಡೆಯಲು, ದಿನಕ್ಕೊಂದು ಹಿಂದಿ ಪದ ಕಲಿಯಬೇಕು, ಹಿಂದಿಯಲ್ಲಿ ಸಹಿ ಹಾಕುವುದನ್ನು ಕಲಿಯಬೇಕು, ಹಿಂದಿ ಸಪ್ತಾಹದಲ್ಲಿ ಭಾಗವಹಿಸಬೇಕು. ಇದು ವೈವಿದ್ಯತೆಯನ್ನು ಗೌರವಿಸುವ ಒಕ್ಕೂಟವೇ? ಇದು ನಮಗೆ ಸ್ವಾತಂತ್ರದಿಂದ ಸಿಕ್ಕ ಉಡುಗೊರೆಯೇ? ಎಂದು ಮಲ್ಲಿಕಾರ್ಜುನ್ ಎಂಬುವವರು ಪ್ರಶ್ನಿಸಿದ್ದಾರೆ.

ನಮ್ಮೂರಿನ ವಿಮಾನ ನಿಲ್ದಾಣಗಳಿಗೆ ನಮಗೆ ಬೇಕಾದ ಹೆಸರಿಡುವ ಸ್ವಾತಂತ್ರ ನಮಗಿಲ್ಲ. ಕನ್ನಡಿಗರನ್ನು ದೆಹಲಿಯಿಂದ ಹಿಂದಿ ಮಂದಿ ಆಳೋದನ್ನ ಸ್ವಾತಂತ್ರ ಎನ್ನಲಾದೀತೆ ? ಕನ್ನಡಿಗರೇ, ರಾಜಕೀಯ ಸ್ವಾಯತ್ತತೆ ಇಲ್ಲದ ಸ್ವಾತಂತ್ರಕ್ಕೆ ಯಾವುದೇ ಅರ್ಥವಿಲ್ಲ ಎಂದು ಎಂ ರಾಮಚಂದ್ರರವರು ಅಭಿಪ್ರಾಯಪಟ್ಟಿದ್ದಾರೆ.

ಜಿಎಸ್ಟಿ ಒಪ್ಪಿಕೊಂಡ ದಿನವೇ ನಮ್ಮ ಹಣಕಾಸಿನ ಸ್ವಾತಂತ್ರ್ಯವನ್ನು ಕಳೆದುಕೊಂಡೆವು. ನಮ್ಮ ತೆರಿಗೆ ಹಣವನ್ನ ಡೆಲ್ಲಿಯವರಿಗೆ ಒಪ್ಪಿಸದೆ ನಮ್ಮವರ ಏಳಿಗೆಗಾಗಿ, ನಾಡಿನ ಏಳಿಗೆಗಾಗಿ ಬಳಸುವ ದಿನ ಬಂದಾಗಲೆ, ಈ ಗುಲಾಮಗಿರಿಯ ಸಂಕೋಲೆಗಳಿಂದ ಬಿಡುಗಡೆ ಎಂದು ಶೃತಿ ಎಚ್.ಎಂ ತಿಳಿಸಿದ್ದಾರೆ.


ಇದನ್ನೂ ಓದಿ: ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, ‘ಬಹುಭಾಷೆಗಳಲ್ಲಿ ದ್ವಿಭಾಷೆ’: ಕುವೆಂಪು


ಪಠ್ಯದಲ್ಲಿ ಭಾಷಾ ಆಯ್ಕೆಯ ಸ್ವತಂತ್ರ ನಮಗೆ ಸಿಕ್ಕಿದೆಯೆ? ನಮ್ಮ ನೆಲದಲ್ಲಿ ನಮ್ಮ ನುಡಿಯಲ್ಲಿ ಸೇವೆ ದೊರೆಯುವ ಸ್ವತಂತ್ರ ಸಿಕ್ಕಿದೆಯೆ? ಅನಾವಶ್ಯಕ ಹಿಂದಿ ಹೇರಿಕೆಯಿಂದ ಸ್ವತಂತ್ರ ಸಿಕ್ಕಿದೆಯೆ? ಹಿಂದಿಗಿರುವ ಪ್ರಾಶಸ್ತ್ಯ ಕನ್ನಡಕ್ಕೆ ಸಿಕ್ಕಿದೆಯೆ? ಎಂದು ಚೈತ್ರರವರು ಅಭಿಪ್ರಾಯಪಟ್ಟಿದ್ದಾರೆ.

ಭಾರತ ಸರ್ಕಾರ ಒಕ್ಕೂಟ ಧರ್ಮಪಾಲಿಸುತ್ತಿಲ್ಲ. ಹಿಂದಿವಾಲಾಗಳಿಗೆ ಕೇಳದೆಯೇ ಎಲ್ಲಾ ಸೇವೆಗಳು ಅವರ ಭಾಷೆಯಲ್ಲಿ ಸಿಗುತ್ತೆ. ಹಿಂದಿಯೇತರರು ಬೇಡಿಕೊಂಡರು ಅವರ ನುಡಿಯಲ್ಲಿ ಸೇವೆ ಕೊಡಲ್ಲ. ಏಕೆ ಈ ತಾರತಮ್ಯ? ಭಾರತವೆಂದರೆ ಹಿಂದಿಯೆಂದು ಪ್ರತಿಹಂತದಲ್ಲೂ ಬಿಂಬಿಸಲು ಹೊರಟಿದೆ. ಇದು ಒಕ್ಕೂಟಕ್ಕೆ ಮಾಡುವ ದ್ರೋಹವೇ ಸರಿ ಎಂದು ಕನ್ನಡಿಗ ಸಾಗರ್ ರವಿನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಮ್ಮ ಸ್ವಾತಂತ್ರ್ಯ ನಮಗೆ ಕೊಡಿ.. ಸ್ವತಂತ್ರರಾಗಿದ್ದವರನ್ನ ಒಕ್ಕೂಟದಲ್ಲಿ ಕಟ್ಟಿಹಾಕಿ, ಬಂಧಿಮಾಡಿ, ಹಿಂದಿ ಹೇರಿಕೆ ಮಾಡಿ, ಎಲ್ಲವನ್ನ ಕಿತ್ತುಕೊಂಡು ಉತ್ತರದವರನ್ನು ಮಾತ್ರ ಬೆಳೆಸಿದರು. ಕನ್ನಡದೇಶದ ಜನರು ಸರ್ವಸ್ವತಂತ್ರರು. ನಮ್ಮ ಹಕ್ಕನ್ನ ನಮಗೆ ಕೊಡಿ ಎಂದು ಅಶೋಕ್ ಪೂಜಾರಿ ಮಡಿಕೇರಿ ಎಂಬುವವರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...